Homeನಿಜವೋ ಸುಳ್ಳೋಫೇಕ್‌ನ್ಯೂಸ್‌ ಜಾಲ: ಅಮಿತ್‌ ಶಾ ಹೇಳಿದ್ದು ಒಂದು ಸುಳ್ಳು, ಅಮಿತ್‌ ಶಾ ಬಗ್ಗೆನೇ ಬಂತು ಮತ್ತೊಂದು...

ಫೇಕ್‌ನ್ಯೂಸ್‌ ಜಾಲ: ಅಮಿತ್‌ ಶಾ ಹೇಳಿದ್ದು ಒಂದು ಸುಳ್ಳು, ಅಮಿತ್‌ ಶಾ ಬಗ್ಗೆನೇ ಬಂತು ಮತ್ತೊಂದು ಸುಳ್ಳು..

- Advertisement -
- Advertisement -

ತಮ್ಮ ವಿರೋಧಿಗಳ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಲು ಅಥವಾ ತಮ್ಮ ಕೆಟ್ಟ ಕೆಲಸಗಳನ್ನು ಮುಚ್ಚಿಹಾಕಲು ಫೇಕ್‌ ನ್ಯೂಸ್‌ಗಳನ್ನು ಹಲವಾರು ಜನ ಹರಡುತ್ತಿದ್ದಾರೆ. ಆದರೆ ಅದೇ ಫೇಕ್‌ನ್ಯೂಸ್‌ಗಳು ಒಂದು ದಿನ ತಮ್ಮ ವಿರುದ್ಧವೇ ತಿರುಗಿಬೀಳಬಹುದೆಂಬುದಕ್ಕೆ ಇಲ್ಲಿದೆ ಒಂದು ಉದಾಹರಣೆ.. ಅದು ಈ ದೇಶದ ಗೃಹಮಂತ್ರಿ, ಅತಿ ದೊಡ್ಡ ಪಕ್ಷದ ಅಧ್ಯಕ್ಷ ಅಮಿತ್‌ ಶಾರವರೆ ಅದಕ್ಕೆ ಬಲಿಯಾಗಿದ್ದಾರೆ.

ಅಂದು ಕಾಂಗ್ರೆಸ್ ಧರ್ಮಾಧಾರಿತವಾಗಿ ದೇಶವನ್ನು ವಿಭಜನೆ ಮಾಡಿತು: ಅಮಿತ್ ಶಾ

ಪೌರತ್ವ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸುವ ವೇಳೆ ಬಿಜೆಪಿ ಅಧ್ಯಕ್ಷ ಮತ್ತು ಗೃಹ ಸಚಿವ ಅಮಿತ್ ಶಾ ಅಂದು 1947ರಲ್ಲಿ ಕಾಂಗ್ರೆಸ್ ಭಾರತವನ್ನು ಧರ್ಮಾಧಾರಿತವಾಗಿ ದೇಶವನ್ನು ವಿಭಜನೆ ಮಾಡದಿದ್ದರೆ ಇಂದು ಈ ಮಸೂದೆಯ ಅಗತ್ಯವಿರಲಿಲ್ಲ ಎಂದು ಹೇಳಿದ್ದಾರೆ.

ಇವರ ಈ ಹೇಳಿಕೆ ನಿಜವೇ? ಭಾರತ ಪಾಕಿಸ್ತಾನ ವಿಭಜನೆಗೆ ಕಾಂಗ್ರೆಸ್‌ ಕಾರಣವೇ ಎಂದು ಹುಡುಕಹೊರಟರೆ ಮೇಲ್ನೋಟಕ್ಕೆ ಅದು ಸುಳ್ಳು ಎಂಬುದು ಸ್ಪಷ್ಟವಾಗಿ ಗೊತ್ತಾಗುತ್ತದೆ.

1947ರಲ್ಲಿ ಜೆ.ಬಿ ಕೃಪಲಾನಿಯವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷರಾಗಿದ್ದರು. ಅದಕ್ಕೂ ಒಂದು ವರ್ಷದ ಮೊದಲು ಜವಹಾರಲಾಲ್‌ ನೆಹರು ಅಧ್ಯಕ್ಷರಾಗಿದ್ದರು. ಇವರೆಲ್ಲರೂ ಭಾರತದ ವಿಭಜನೆಗೆ ವಿರುದ್ಧವಾಗಿದ್ದರು. ಎಲ್ಲಕ್ಕಿಂತ ಹೆಚ್ಚು ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಭಾರತ ವಿಭಜನೆಯ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.

ವಾಸ್ತವವೆಂದರೆ ಹಾಲಿ ಬಿಜೆಪಿಯನ್ನು ಬೆಂಬಲಿಸುವ ಹಿಂದೂ ಮಹಾಸಭಾ ಮತ್ತು ಮುಸ್ಲಿಂ ಲೀಗ್‌ನ ಮೊಹಮ್ಮದ್ ಆಲಿ ಜಿನ್ನಾ ಧಾರ್ಮಿಕ ಆಧಾರದ ಮೇಲೆ ಭಾರತ ಪಾಕಿಸ್ತಾನ ವಿಭಜನೆಯನ್ನು ಬೆಂಬಲಿಸಿದವರು. ಆದರೆ ಕಾಂಗ್ರೆಸ್ ವಿಭಜನೆಗೆ ವಿರುದ್ಧವಾಗಿತ್ತು ಎಂದು ಅಮಿತ್‌ ಶಾ ಸುಳ್ಳು ಹೇಳಿದ್ದಾರೆ. ಆ ಮೂಲಕ ಜನರಲ್ಲಿ ಕಾಂಗ್ರೆಸ್‌ ವಿರೋಧಿ ಮನೋಭಾವವನ್ನು ಬಿತ್ತುವುದು ಮತ್ತು ಪೌರತ್ವ ತಿದ್ದುಪಡಿ ಮಸೂದೆಗೆ ಬೆಂಬಲ ಪಡೆಯುವುದು ಅವರ ಉದ್ದೇಶವಾಗಿದೆ.

ಸತ್ಯ ಏನೆಂದರೆ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಭಾರತ ವಿಭಜನೆಯನ್ನು ತಡೆಯಲು ಅತ್ಯುತ್ತಮ ಪ್ರಯತ್ನ ಮಾಡಿದ್ದರು..

ಈ ಸುಳ್ಳನ್ನು ಅಮಿತ್‌ ಶಾರವರು ಪಾರ್ಲಿಮೆಂಟ್‌ನಲ್ಲಿ ಹೇಳುತ್ತಿರುವಾಗಲೇ ಅವರ ಕುರಿತೇ ಇನ್ನೊಂದು ಸುಳ್ಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಅದೆನೆಂದು ಓದಿಬಿಡಿ

ಅತ್ಯಾಚಾರ ಆರೋಪಿ ನಿತ್ಯಾನಂದ ಸ್ವಾಮಿಯ ಕಾಲಿಗೆ ಬಿದ್ದ ಗೃಹ ಸಚಿವ  ಅಮಿತ್ ಶಾ..

ಅತ್ಯಾಚಾರ ಸೇರಿದಂತೆ ಹಲವು ಆರೋಪಗಳಲ್ಲಿ ಭಾಗಿಯಾಗಿರುವ ನಿತ್ಯಾನಂದ ಸ್ವಾಮಿ ದೇಶಬಿಟ್ಟು ಓಡಿ ಹೋಗಿದ್ದಾರೆ. ಆದರೆ ಅವರನ್ನು ಟ್ರೋಲ್ ಮಾಡುವ ಪೋಸ್ಟ್‌ಗಳು ಮಾತ್ರ ಹೆಚ್ಚು ಹೆಚ್ಚು ಓಡಾಡುತ್ತಿವೆ. ಅದರಲ್ಲಿ ಹೆಚ್ಚು ಟ್ರೋಲ್ ಆಗಿರುವುದು ಗೃಹ ಸಚಿವ ಅಮಿತ್ ಶಾರವರು ನಿತ್ಯಾನಂದ ಸ್ವಾಮಿಯ ಕಾಲಿಗೆ ಬೀಳುತ್ತಿರುವ ಪೋಸ್ಟ್ ವೈರಲ್ ಆಗಿದೆ.

ದೇಶದ ಗೃಹಮಂತ್ರಿಗಳು ಆರೋಪಿಯನ್ನು ಜೈಲಿಗೆ ಕಳಿಸುವುದು ಬಿಟ್ಟು ಅವರ ಕಾಲಿಗೆ ಬೀಳುತ್ತಿದ್ದಾರೆ. ಈಗಾದರೆ ಭಾರತದ ಪರಿಸ್ಥಿತಿ ಉದ್ದಾರ ಎಂದು ಜನ ಟ್ರೋಲ್‌ ಮಾಡಿದ್ದಾರೆ. ನೂರಾರು ಜನ ಈ ಪೋಸ್ಟರ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಷೇರ್‌ ಮಾಡಿ ಅಮಿತ್‌ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದರ್‌ ಫ್ಯಾಕ್ಟ್‌ ಚೆಕ್‌ ಮಾಡಿದಾಗ ತಿಳಿದು ಬಂದ ಸತ್ಯ ಏನೆಂದರೆ ಆ ಫೋಟೊದಲ್ಲಿರುವ ವ್ಯಕ್ತಿ ಅಮಿತ್‌ ಶಾ ಅಲ್ಲ. ಅವರು ಅಮಿತ್ ಶಾರಂತೆ ಕಂಡರೂ ಸಹ ಅವರು ಮಾರಿಷಸ್‌ನ ಕಮಿಷನರ್ ಜಗದೀಶ್ವರ್‌ ಗೋಬುರ್ದನ್‌ ಆಗಿದ್ದಾರೆ. ಅವರು ನಿತ್ಯಾನಂದ ಸ್ವಾಮಿಯ ಆಶ್ರಮಕ್ಕೆ ಭೇಟಿ ನೀಡಿದ್ದಾಗ ಅವರು ಪಾದಕ್ಕೆರಗಿದ್ದರು. ಆ ಫೋಟೊವನ್ನು ತಪ್ಪಾಗಿ ಅಮಿತ್ ಶಾ ಎಂದು ಗುರುತಿಸಲಾಗಿದೆ.

ಅವರನ್ನು ಸ್ಪಷ್ಟವಾಗಿ ಗುರುತಿಸುವ ಒರಿಜಿನಲ್ ಫೋಟೊ ಇಲ್ಲಿದೆ ನೋಡಿ.

ಹಾಗಾಗಿ ಷೇರ್‌ ಮಾಡುವ ಮೊದಲು ಸತ್ಯವನ್ನು ಪರಿಶೀಲಿಸಬೇಕಾಗಿದೆ. ನಾವು ಯಾವುದೇ ಕಾರಣಕ್ಕೂ ಫೇಕ್‌ನ್ಯೂಸ್‌ಗಳನ್ನು ಷೇರ್ ಮಾಡಬಾರದು. ಎಲ್ಲಕ್ಕಿಂತ ಹೆಚ್ಚಾಗಿ ಅಮಿತ್‌ ಶಾ ರಂತವರು ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಸುಳ್ಳನ್ನು ಹೇಳಬಾರದು. ಸುಳ್ಳು ಹೇಳದಿದ್ದವರ ವಿರುದ್ಧವೂ ಫೇಕ್‌ನ್ಯೂಸ್‌ಗಳು ಬರುತ್ತಿರುವುದು ನಿಜ. ಆದರೆ ನಮ್ಮನ್ನು ನಾವು ಸುಳ್ಳು ಹೇಳದಂತೆ, ಫೇಕ್‌ನ್ಯೂಸ್‌ ಹಂಚದಂತೆ ನೋಡಿಕೊಂಡರೆ ಈ ಸಮಸ್ಯೆಗೆ ಸ್ವಲ್ಪ ಪರಿಹಾರ ಸಿಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....