Homeನಿಜವೋ ಸುಳ್ಳೋಫೇಕ್‌ನ್ಯೂಸ್‌ ಜಾಲ: ಅಮಿತ್‌ ಶಾ ಹೇಳಿದ್ದು ಒಂದು ಸುಳ್ಳು, ಅಮಿತ್‌ ಶಾ ಬಗ್ಗೆನೇ ಬಂತು ಮತ್ತೊಂದು...

ಫೇಕ್‌ನ್ಯೂಸ್‌ ಜಾಲ: ಅಮಿತ್‌ ಶಾ ಹೇಳಿದ್ದು ಒಂದು ಸುಳ್ಳು, ಅಮಿತ್‌ ಶಾ ಬಗ್ಗೆನೇ ಬಂತು ಮತ್ತೊಂದು ಸುಳ್ಳು..

- Advertisement -
- Advertisement -

ತಮ್ಮ ವಿರೋಧಿಗಳ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಲು ಅಥವಾ ತಮ್ಮ ಕೆಟ್ಟ ಕೆಲಸಗಳನ್ನು ಮುಚ್ಚಿಹಾಕಲು ಫೇಕ್‌ ನ್ಯೂಸ್‌ಗಳನ್ನು ಹಲವಾರು ಜನ ಹರಡುತ್ತಿದ್ದಾರೆ. ಆದರೆ ಅದೇ ಫೇಕ್‌ನ್ಯೂಸ್‌ಗಳು ಒಂದು ದಿನ ತಮ್ಮ ವಿರುದ್ಧವೇ ತಿರುಗಿಬೀಳಬಹುದೆಂಬುದಕ್ಕೆ ಇಲ್ಲಿದೆ ಒಂದು ಉದಾಹರಣೆ.. ಅದು ಈ ದೇಶದ ಗೃಹಮಂತ್ರಿ, ಅತಿ ದೊಡ್ಡ ಪಕ್ಷದ ಅಧ್ಯಕ್ಷ ಅಮಿತ್‌ ಶಾರವರೆ ಅದಕ್ಕೆ ಬಲಿಯಾಗಿದ್ದಾರೆ.

ಅಂದು ಕಾಂಗ್ರೆಸ್ ಧರ್ಮಾಧಾರಿತವಾಗಿ ದೇಶವನ್ನು ವಿಭಜನೆ ಮಾಡಿತು: ಅಮಿತ್ ಶಾ

ಪೌರತ್ವ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸುವ ವೇಳೆ ಬಿಜೆಪಿ ಅಧ್ಯಕ್ಷ ಮತ್ತು ಗೃಹ ಸಚಿವ ಅಮಿತ್ ಶಾ ಅಂದು 1947ರಲ್ಲಿ ಕಾಂಗ್ರೆಸ್ ಭಾರತವನ್ನು ಧರ್ಮಾಧಾರಿತವಾಗಿ ದೇಶವನ್ನು ವಿಭಜನೆ ಮಾಡದಿದ್ದರೆ ಇಂದು ಈ ಮಸೂದೆಯ ಅಗತ್ಯವಿರಲಿಲ್ಲ ಎಂದು ಹೇಳಿದ್ದಾರೆ.

ಇವರ ಈ ಹೇಳಿಕೆ ನಿಜವೇ? ಭಾರತ ಪಾಕಿಸ್ತಾನ ವಿಭಜನೆಗೆ ಕಾಂಗ್ರೆಸ್‌ ಕಾರಣವೇ ಎಂದು ಹುಡುಕಹೊರಟರೆ ಮೇಲ್ನೋಟಕ್ಕೆ ಅದು ಸುಳ್ಳು ಎಂಬುದು ಸ್ಪಷ್ಟವಾಗಿ ಗೊತ್ತಾಗುತ್ತದೆ.

1947ರಲ್ಲಿ ಜೆ.ಬಿ ಕೃಪಲಾನಿಯವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷರಾಗಿದ್ದರು. ಅದಕ್ಕೂ ಒಂದು ವರ್ಷದ ಮೊದಲು ಜವಹಾರಲಾಲ್‌ ನೆಹರು ಅಧ್ಯಕ್ಷರಾಗಿದ್ದರು. ಇವರೆಲ್ಲರೂ ಭಾರತದ ವಿಭಜನೆಗೆ ವಿರುದ್ಧವಾಗಿದ್ದರು. ಎಲ್ಲಕ್ಕಿಂತ ಹೆಚ್ಚು ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಭಾರತ ವಿಭಜನೆಯ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.

ವಾಸ್ತವವೆಂದರೆ ಹಾಲಿ ಬಿಜೆಪಿಯನ್ನು ಬೆಂಬಲಿಸುವ ಹಿಂದೂ ಮಹಾಸಭಾ ಮತ್ತು ಮುಸ್ಲಿಂ ಲೀಗ್‌ನ ಮೊಹಮ್ಮದ್ ಆಲಿ ಜಿನ್ನಾ ಧಾರ್ಮಿಕ ಆಧಾರದ ಮೇಲೆ ಭಾರತ ಪಾಕಿಸ್ತಾನ ವಿಭಜನೆಯನ್ನು ಬೆಂಬಲಿಸಿದವರು. ಆದರೆ ಕಾಂಗ್ರೆಸ್ ವಿಭಜನೆಗೆ ವಿರುದ್ಧವಾಗಿತ್ತು ಎಂದು ಅಮಿತ್‌ ಶಾ ಸುಳ್ಳು ಹೇಳಿದ್ದಾರೆ. ಆ ಮೂಲಕ ಜನರಲ್ಲಿ ಕಾಂಗ್ರೆಸ್‌ ವಿರೋಧಿ ಮನೋಭಾವವನ್ನು ಬಿತ್ತುವುದು ಮತ್ತು ಪೌರತ್ವ ತಿದ್ದುಪಡಿ ಮಸೂದೆಗೆ ಬೆಂಬಲ ಪಡೆಯುವುದು ಅವರ ಉದ್ದೇಶವಾಗಿದೆ.

ಸತ್ಯ ಏನೆಂದರೆ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಭಾರತ ವಿಭಜನೆಯನ್ನು ತಡೆಯಲು ಅತ್ಯುತ್ತಮ ಪ್ರಯತ್ನ ಮಾಡಿದ್ದರು..

ಈ ಸುಳ್ಳನ್ನು ಅಮಿತ್‌ ಶಾರವರು ಪಾರ್ಲಿಮೆಂಟ್‌ನಲ್ಲಿ ಹೇಳುತ್ತಿರುವಾಗಲೇ ಅವರ ಕುರಿತೇ ಇನ್ನೊಂದು ಸುಳ್ಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಅದೆನೆಂದು ಓದಿಬಿಡಿ

ಅತ್ಯಾಚಾರ ಆರೋಪಿ ನಿತ್ಯಾನಂದ ಸ್ವಾಮಿಯ ಕಾಲಿಗೆ ಬಿದ್ದ ಗೃಹ ಸಚಿವ  ಅಮಿತ್ ಶಾ..

ಅತ್ಯಾಚಾರ ಸೇರಿದಂತೆ ಹಲವು ಆರೋಪಗಳಲ್ಲಿ ಭಾಗಿಯಾಗಿರುವ ನಿತ್ಯಾನಂದ ಸ್ವಾಮಿ ದೇಶಬಿಟ್ಟು ಓಡಿ ಹೋಗಿದ್ದಾರೆ. ಆದರೆ ಅವರನ್ನು ಟ್ರೋಲ್ ಮಾಡುವ ಪೋಸ್ಟ್‌ಗಳು ಮಾತ್ರ ಹೆಚ್ಚು ಹೆಚ್ಚು ಓಡಾಡುತ್ತಿವೆ. ಅದರಲ್ಲಿ ಹೆಚ್ಚು ಟ್ರೋಲ್ ಆಗಿರುವುದು ಗೃಹ ಸಚಿವ ಅಮಿತ್ ಶಾರವರು ನಿತ್ಯಾನಂದ ಸ್ವಾಮಿಯ ಕಾಲಿಗೆ ಬೀಳುತ್ತಿರುವ ಪೋಸ್ಟ್ ವೈರಲ್ ಆಗಿದೆ.

ದೇಶದ ಗೃಹಮಂತ್ರಿಗಳು ಆರೋಪಿಯನ್ನು ಜೈಲಿಗೆ ಕಳಿಸುವುದು ಬಿಟ್ಟು ಅವರ ಕಾಲಿಗೆ ಬೀಳುತ್ತಿದ್ದಾರೆ. ಈಗಾದರೆ ಭಾರತದ ಪರಿಸ್ಥಿತಿ ಉದ್ದಾರ ಎಂದು ಜನ ಟ್ರೋಲ್‌ ಮಾಡಿದ್ದಾರೆ. ನೂರಾರು ಜನ ಈ ಪೋಸ್ಟರ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಷೇರ್‌ ಮಾಡಿ ಅಮಿತ್‌ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದರ್‌ ಫ್ಯಾಕ್ಟ್‌ ಚೆಕ್‌ ಮಾಡಿದಾಗ ತಿಳಿದು ಬಂದ ಸತ್ಯ ಏನೆಂದರೆ ಆ ಫೋಟೊದಲ್ಲಿರುವ ವ್ಯಕ್ತಿ ಅಮಿತ್‌ ಶಾ ಅಲ್ಲ. ಅವರು ಅಮಿತ್ ಶಾರಂತೆ ಕಂಡರೂ ಸಹ ಅವರು ಮಾರಿಷಸ್‌ನ ಕಮಿಷನರ್ ಜಗದೀಶ್ವರ್‌ ಗೋಬುರ್ದನ್‌ ಆಗಿದ್ದಾರೆ. ಅವರು ನಿತ್ಯಾನಂದ ಸ್ವಾಮಿಯ ಆಶ್ರಮಕ್ಕೆ ಭೇಟಿ ನೀಡಿದ್ದಾಗ ಅವರು ಪಾದಕ್ಕೆರಗಿದ್ದರು. ಆ ಫೋಟೊವನ್ನು ತಪ್ಪಾಗಿ ಅಮಿತ್ ಶಾ ಎಂದು ಗುರುತಿಸಲಾಗಿದೆ.

ಅವರನ್ನು ಸ್ಪಷ್ಟವಾಗಿ ಗುರುತಿಸುವ ಒರಿಜಿನಲ್ ಫೋಟೊ ಇಲ್ಲಿದೆ ನೋಡಿ.

ಹಾಗಾಗಿ ಷೇರ್‌ ಮಾಡುವ ಮೊದಲು ಸತ್ಯವನ್ನು ಪರಿಶೀಲಿಸಬೇಕಾಗಿದೆ. ನಾವು ಯಾವುದೇ ಕಾರಣಕ್ಕೂ ಫೇಕ್‌ನ್ಯೂಸ್‌ಗಳನ್ನು ಷೇರ್ ಮಾಡಬಾರದು. ಎಲ್ಲಕ್ಕಿಂತ ಹೆಚ್ಚಾಗಿ ಅಮಿತ್‌ ಶಾ ರಂತವರು ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಸುಳ್ಳನ್ನು ಹೇಳಬಾರದು. ಸುಳ್ಳು ಹೇಳದಿದ್ದವರ ವಿರುದ್ಧವೂ ಫೇಕ್‌ನ್ಯೂಸ್‌ಗಳು ಬರುತ್ತಿರುವುದು ನಿಜ. ಆದರೆ ನಮ್ಮನ್ನು ನಾವು ಸುಳ್ಳು ಹೇಳದಂತೆ, ಫೇಕ್‌ನ್ಯೂಸ್‌ ಹಂಚದಂತೆ ನೋಡಿಕೊಂಡರೆ ಈ ಸಮಸ್ಯೆಗೆ ಸ್ವಲ್ಪ ಪರಿಹಾರ ಸಿಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...