Homeನಿಜವೋ ಸುಳ್ಳೋಫೇಕ್‌ನ್ಯೂಸ್‌ ಜಾಲ: ಅಮಿತ್‌ ಶಾ ಹೇಳಿದ್ದು ಒಂದು ಸುಳ್ಳು, ಅಮಿತ್‌ ಶಾ ಬಗ್ಗೆನೇ ಬಂತು ಮತ್ತೊಂದು...

ಫೇಕ್‌ನ್ಯೂಸ್‌ ಜಾಲ: ಅಮಿತ್‌ ಶಾ ಹೇಳಿದ್ದು ಒಂದು ಸುಳ್ಳು, ಅಮಿತ್‌ ಶಾ ಬಗ್ಗೆನೇ ಬಂತು ಮತ್ತೊಂದು ಸುಳ್ಳು..

- Advertisement -
- Advertisement -

ತಮ್ಮ ವಿರೋಧಿಗಳ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಲು ಅಥವಾ ತಮ್ಮ ಕೆಟ್ಟ ಕೆಲಸಗಳನ್ನು ಮುಚ್ಚಿಹಾಕಲು ಫೇಕ್‌ ನ್ಯೂಸ್‌ಗಳನ್ನು ಹಲವಾರು ಜನ ಹರಡುತ್ತಿದ್ದಾರೆ. ಆದರೆ ಅದೇ ಫೇಕ್‌ನ್ಯೂಸ್‌ಗಳು ಒಂದು ದಿನ ತಮ್ಮ ವಿರುದ್ಧವೇ ತಿರುಗಿಬೀಳಬಹುದೆಂಬುದಕ್ಕೆ ಇಲ್ಲಿದೆ ಒಂದು ಉದಾಹರಣೆ.. ಅದು ಈ ದೇಶದ ಗೃಹಮಂತ್ರಿ, ಅತಿ ದೊಡ್ಡ ಪಕ್ಷದ ಅಧ್ಯಕ್ಷ ಅಮಿತ್‌ ಶಾರವರೆ ಅದಕ್ಕೆ ಬಲಿಯಾಗಿದ್ದಾರೆ.

ಅಂದು ಕಾಂಗ್ರೆಸ್ ಧರ್ಮಾಧಾರಿತವಾಗಿ ದೇಶವನ್ನು ವಿಭಜನೆ ಮಾಡಿತು: ಅಮಿತ್ ಶಾ

ಪೌರತ್ವ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸುವ ವೇಳೆ ಬಿಜೆಪಿ ಅಧ್ಯಕ್ಷ ಮತ್ತು ಗೃಹ ಸಚಿವ ಅಮಿತ್ ಶಾ ಅಂದು 1947ರಲ್ಲಿ ಕಾಂಗ್ರೆಸ್ ಭಾರತವನ್ನು ಧರ್ಮಾಧಾರಿತವಾಗಿ ದೇಶವನ್ನು ವಿಭಜನೆ ಮಾಡದಿದ್ದರೆ ಇಂದು ಈ ಮಸೂದೆಯ ಅಗತ್ಯವಿರಲಿಲ್ಲ ಎಂದು ಹೇಳಿದ್ದಾರೆ.

ಇವರ ಈ ಹೇಳಿಕೆ ನಿಜವೇ? ಭಾರತ ಪಾಕಿಸ್ತಾನ ವಿಭಜನೆಗೆ ಕಾಂಗ್ರೆಸ್‌ ಕಾರಣವೇ ಎಂದು ಹುಡುಕಹೊರಟರೆ ಮೇಲ್ನೋಟಕ್ಕೆ ಅದು ಸುಳ್ಳು ಎಂಬುದು ಸ್ಪಷ್ಟವಾಗಿ ಗೊತ್ತಾಗುತ್ತದೆ.

1947ರಲ್ಲಿ ಜೆ.ಬಿ ಕೃಪಲಾನಿಯವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷರಾಗಿದ್ದರು. ಅದಕ್ಕೂ ಒಂದು ವರ್ಷದ ಮೊದಲು ಜವಹಾರಲಾಲ್‌ ನೆಹರು ಅಧ್ಯಕ್ಷರಾಗಿದ್ದರು. ಇವರೆಲ್ಲರೂ ಭಾರತದ ವಿಭಜನೆಗೆ ವಿರುದ್ಧವಾಗಿದ್ದರು. ಎಲ್ಲಕ್ಕಿಂತ ಹೆಚ್ಚು ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಭಾರತ ವಿಭಜನೆಯ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.

ವಾಸ್ತವವೆಂದರೆ ಹಾಲಿ ಬಿಜೆಪಿಯನ್ನು ಬೆಂಬಲಿಸುವ ಹಿಂದೂ ಮಹಾಸಭಾ ಮತ್ತು ಮುಸ್ಲಿಂ ಲೀಗ್‌ನ ಮೊಹಮ್ಮದ್ ಆಲಿ ಜಿನ್ನಾ ಧಾರ್ಮಿಕ ಆಧಾರದ ಮೇಲೆ ಭಾರತ ಪಾಕಿಸ್ತಾನ ವಿಭಜನೆಯನ್ನು ಬೆಂಬಲಿಸಿದವರು. ಆದರೆ ಕಾಂಗ್ರೆಸ್ ವಿಭಜನೆಗೆ ವಿರುದ್ಧವಾಗಿತ್ತು ಎಂದು ಅಮಿತ್‌ ಶಾ ಸುಳ್ಳು ಹೇಳಿದ್ದಾರೆ. ಆ ಮೂಲಕ ಜನರಲ್ಲಿ ಕಾಂಗ್ರೆಸ್‌ ವಿರೋಧಿ ಮನೋಭಾವವನ್ನು ಬಿತ್ತುವುದು ಮತ್ತು ಪೌರತ್ವ ತಿದ್ದುಪಡಿ ಮಸೂದೆಗೆ ಬೆಂಬಲ ಪಡೆಯುವುದು ಅವರ ಉದ್ದೇಶವಾಗಿದೆ.

ಸತ್ಯ ಏನೆಂದರೆ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಭಾರತ ವಿಭಜನೆಯನ್ನು ತಡೆಯಲು ಅತ್ಯುತ್ತಮ ಪ್ರಯತ್ನ ಮಾಡಿದ್ದರು..

ಈ ಸುಳ್ಳನ್ನು ಅಮಿತ್‌ ಶಾರವರು ಪಾರ್ಲಿಮೆಂಟ್‌ನಲ್ಲಿ ಹೇಳುತ್ತಿರುವಾಗಲೇ ಅವರ ಕುರಿತೇ ಇನ್ನೊಂದು ಸುಳ್ಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಅದೆನೆಂದು ಓದಿಬಿಡಿ

ಅತ್ಯಾಚಾರ ಆರೋಪಿ ನಿತ್ಯಾನಂದ ಸ್ವಾಮಿಯ ಕಾಲಿಗೆ ಬಿದ್ದ ಗೃಹ ಸಚಿವ  ಅಮಿತ್ ಶಾ..

ಅತ್ಯಾಚಾರ ಸೇರಿದಂತೆ ಹಲವು ಆರೋಪಗಳಲ್ಲಿ ಭಾಗಿಯಾಗಿರುವ ನಿತ್ಯಾನಂದ ಸ್ವಾಮಿ ದೇಶಬಿಟ್ಟು ಓಡಿ ಹೋಗಿದ್ದಾರೆ. ಆದರೆ ಅವರನ್ನು ಟ್ರೋಲ್ ಮಾಡುವ ಪೋಸ್ಟ್‌ಗಳು ಮಾತ್ರ ಹೆಚ್ಚು ಹೆಚ್ಚು ಓಡಾಡುತ್ತಿವೆ. ಅದರಲ್ಲಿ ಹೆಚ್ಚು ಟ್ರೋಲ್ ಆಗಿರುವುದು ಗೃಹ ಸಚಿವ ಅಮಿತ್ ಶಾರವರು ನಿತ್ಯಾನಂದ ಸ್ವಾಮಿಯ ಕಾಲಿಗೆ ಬೀಳುತ್ತಿರುವ ಪೋಸ್ಟ್ ವೈರಲ್ ಆಗಿದೆ.

ದೇಶದ ಗೃಹಮಂತ್ರಿಗಳು ಆರೋಪಿಯನ್ನು ಜೈಲಿಗೆ ಕಳಿಸುವುದು ಬಿಟ್ಟು ಅವರ ಕಾಲಿಗೆ ಬೀಳುತ್ತಿದ್ದಾರೆ. ಈಗಾದರೆ ಭಾರತದ ಪರಿಸ್ಥಿತಿ ಉದ್ದಾರ ಎಂದು ಜನ ಟ್ರೋಲ್‌ ಮಾಡಿದ್ದಾರೆ. ನೂರಾರು ಜನ ಈ ಪೋಸ್ಟರ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಷೇರ್‌ ಮಾಡಿ ಅಮಿತ್‌ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದರ್‌ ಫ್ಯಾಕ್ಟ್‌ ಚೆಕ್‌ ಮಾಡಿದಾಗ ತಿಳಿದು ಬಂದ ಸತ್ಯ ಏನೆಂದರೆ ಆ ಫೋಟೊದಲ್ಲಿರುವ ವ್ಯಕ್ತಿ ಅಮಿತ್‌ ಶಾ ಅಲ್ಲ. ಅವರು ಅಮಿತ್ ಶಾರಂತೆ ಕಂಡರೂ ಸಹ ಅವರು ಮಾರಿಷಸ್‌ನ ಕಮಿಷನರ್ ಜಗದೀಶ್ವರ್‌ ಗೋಬುರ್ದನ್‌ ಆಗಿದ್ದಾರೆ. ಅವರು ನಿತ್ಯಾನಂದ ಸ್ವಾಮಿಯ ಆಶ್ರಮಕ್ಕೆ ಭೇಟಿ ನೀಡಿದ್ದಾಗ ಅವರು ಪಾದಕ್ಕೆರಗಿದ್ದರು. ಆ ಫೋಟೊವನ್ನು ತಪ್ಪಾಗಿ ಅಮಿತ್ ಶಾ ಎಂದು ಗುರುತಿಸಲಾಗಿದೆ.

ಅವರನ್ನು ಸ್ಪಷ್ಟವಾಗಿ ಗುರುತಿಸುವ ಒರಿಜಿನಲ್ ಫೋಟೊ ಇಲ್ಲಿದೆ ನೋಡಿ.

ಹಾಗಾಗಿ ಷೇರ್‌ ಮಾಡುವ ಮೊದಲು ಸತ್ಯವನ್ನು ಪರಿಶೀಲಿಸಬೇಕಾಗಿದೆ. ನಾವು ಯಾವುದೇ ಕಾರಣಕ್ಕೂ ಫೇಕ್‌ನ್ಯೂಸ್‌ಗಳನ್ನು ಷೇರ್ ಮಾಡಬಾರದು. ಎಲ್ಲಕ್ಕಿಂತ ಹೆಚ್ಚಾಗಿ ಅಮಿತ್‌ ಶಾ ರಂತವರು ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಸುಳ್ಳನ್ನು ಹೇಳಬಾರದು. ಸುಳ್ಳು ಹೇಳದಿದ್ದವರ ವಿರುದ್ಧವೂ ಫೇಕ್‌ನ್ಯೂಸ್‌ಗಳು ಬರುತ್ತಿರುವುದು ನಿಜ. ಆದರೆ ನಮ್ಮನ್ನು ನಾವು ಸುಳ್ಳು ಹೇಳದಂತೆ, ಫೇಕ್‌ನ್ಯೂಸ್‌ ಹಂಚದಂತೆ ನೋಡಿಕೊಂಡರೆ ಈ ಸಮಸ್ಯೆಗೆ ಸ್ವಲ್ಪ ಪರಿಹಾರ ಸಿಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...