Homeನಿಜವೋ ಸುಳ್ಳೋಫೇಕ್‌ನ್ಯೂಸ್‌ ಜಾಲ: ಅಮಿತ್‌ ಶಾ ಹೇಳಿದ್ದು ಒಂದು ಸುಳ್ಳು, ಅಮಿತ್‌ ಶಾ ಬಗ್ಗೆನೇ ಬಂತು ಮತ್ತೊಂದು...

ಫೇಕ್‌ನ್ಯೂಸ್‌ ಜಾಲ: ಅಮಿತ್‌ ಶಾ ಹೇಳಿದ್ದು ಒಂದು ಸುಳ್ಳು, ಅಮಿತ್‌ ಶಾ ಬಗ್ಗೆನೇ ಬಂತು ಮತ್ತೊಂದು ಸುಳ್ಳು..

- Advertisement -
- Advertisement -

ತಮ್ಮ ವಿರೋಧಿಗಳ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಲು ಅಥವಾ ತಮ್ಮ ಕೆಟ್ಟ ಕೆಲಸಗಳನ್ನು ಮುಚ್ಚಿಹಾಕಲು ಫೇಕ್‌ ನ್ಯೂಸ್‌ಗಳನ್ನು ಹಲವಾರು ಜನ ಹರಡುತ್ತಿದ್ದಾರೆ. ಆದರೆ ಅದೇ ಫೇಕ್‌ನ್ಯೂಸ್‌ಗಳು ಒಂದು ದಿನ ತಮ್ಮ ವಿರುದ್ಧವೇ ತಿರುಗಿಬೀಳಬಹುದೆಂಬುದಕ್ಕೆ ಇಲ್ಲಿದೆ ಒಂದು ಉದಾಹರಣೆ.. ಅದು ಈ ದೇಶದ ಗೃಹಮಂತ್ರಿ, ಅತಿ ದೊಡ್ಡ ಪಕ್ಷದ ಅಧ್ಯಕ್ಷ ಅಮಿತ್‌ ಶಾರವರೆ ಅದಕ್ಕೆ ಬಲಿಯಾಗಿದ್ದಾರೆ.

ಅಂದು ಕಾಂಗ್ರೆಸ್ ಧರ್ಮಾಧಾರಿತವಾಗಿ ದೇಶವನ್ನು ವಿಭಜನೆ ಮಾಡಿತು: ಅಮಿತ್ ಶಾ

ಪೌರತ್ವ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸುವ ವೇಳೆ ಬಿಜೆಪಿ ಅಧ್ಯಕ್ಷ ಮತ್ತು ಗೃಹ ಸಚಿವ ಅಮಿತ್ ಶಾ ಅಂದು 1947ರಲ್ಲಿ ಕಾಂಗ್ರೆಸ್ ಭಾರತವನ್ನು ಧರ್ಮಾಧಾರಿತವಾಗಿ ದೇಶವನ್ನು ವಿಭಜನೆ ಮಾಡದಿದ್ದರೆ ಇಂದು ಈ ಮಸೂದೆಯ ಅಗತ್ಯವಿರಲಿಲ್ಲ ಎಂದು ಹೇಳಿದ್ದಾರೆ.

ಇವರ ಈ ಹೇಳಿಕೆ ನಿಜವೇ? ಭಾರತ ಪಾಕಿಸ್ತಾನ ವಿಭಜನೆಗೆ ಕಾಂಗ್ರೆಸ್‌ ಕಾರಣವೇ ಎಂದು ಹುಡುಕಹೊರಟರೆ ಮೇಲ್ನೋಟಕ್ಕೆ ಅದು ಸುಳ್ಳು ಎಂಬುದು ಸ್ಪಷ್ಟವಾಗಿ ಗೊತ್ತಾಗುತ್ತದೆ.

1947ರಲ್ಲಿ ಜೆ.ಬಿ ಕೃಪಲಾನಿಯವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷರಾಗಿದ್ದರು. ಅದಕ್ಕೂ ಒಂದು ವರ್ಷದ ಮೊದಲು ಜವಹಾರಲಾಲ್‌ ನೆಹರು ಅಧ್ಯಕ್ಷರಾಗಿದ್ದರು. ಇವರೆಲ್ಲರೂ ಭಾರತದ ವಿಭಜನೆಗೆ ವಿರುದ್ಧವಾಗಿದ್ದರು. ಎಲ್ಲಕ್ಕಿಂತ ಹೆಚ್ಚು ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಭಾರತ ವಿಭಜನೆಯ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.

ವಾಸ್ತವವೆಂದರೆ ಹಾಲಿ ಬಿಜೆಪಿಯನ್ನು ಬೆಂಬಲಿಸುವ ಹಿಂದೂ ಮಹಾಸಭಾ ಮತ್ತು ಮುಸ್ಲಿಂ ಲೀಗ್‌ನ ಮೊಹಮ್ಮದ್ ಆಲಿ ಜಿನ್ನಾ ಧಾರ್ಮಿಕ ಆಧಾರದ ಮೇಲೆ ಭಾರತ ಪಾಕಿಸ್ತಾನ ವಿಭಜನೆಯನ್ನು ಬೆಂಬಲಿಸಿದವರು. ಆದರೆ ಕಾಂಗ್ರೆಸ್ ವಿಭಜನೆಗೆ ವಿರುದ್ಧವಾಗಿತ್ತು ಎಂದು ಅಮಿತ್‌ ಶಾ ಸುಳ್ಳು ಹೇಳಿದ್ದಾರೆ. ಆ ಮೂಲಕ ಜನರಲ್ಲಿ ಕಾಂಗ್ರೆಸ್‌ ವಿರೋಧಿ ಮನೋಭಾವವನ್ನು ಬಿತ್ತುವುದು ಮತ್ತು ಪೌರತ್ವ ತಿದ್ದುಪಡಿ ಮಸೂದೆಗೆ ಬೆಂಬಲ ಪಡೆಯುವುದು ಅವರ ಉದ್ದೇಶವಾಗಿದೆ.

ಸತ್ಯ ಏನೆಂದರೆ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಭಾರತ ವಿಭಜನೆಯನ್ನು ತಡೆಯಲು ಅತ್ಯುತ್ತಮ ಪ್ರಯತ್ನ ಮಾಡಿದ್ದರು..

ಈ ಸುಳ್ಳನ್ನು ಅಮಿತ್‌ ಶಾರವರು ಪಾರ್ಲಿಮೆಂಟ್‌ನಲ್ಲಿ ಹೇಳುತ್ತಿರುವಾಗಲೇ ಅವರ ಕುರಿತೇ ಇನ್ನೊಂದು ಸುಳ್ಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಅದೆನೆಂದು ಓದಿಬಿಡಿ

ಅತ್ಯಾಚಾರ ಆರೋಪಿ ನಿತ್ಯಾನಂದ ಸ್ವಾಮಿಯ ಕಾಲಿಗೆ ಬಿದ್ದ ಗೃಹ ಸಚಿವ  ಅಮಿತ್ ಶಾ..

ಅತ್ಯಾಚಾರ ಸೇರಿದಂತೆ ಹಲವು ಆರೋಪಗಳಲ್ಲಿ ಭಾಗಿಯಾಗಿರುವ ನಿತ್ಯಾನಂದ ಸ್ವಾಮಿ ದೇಶಬಿಟ್ಟು ಓಡಿ ಹೋಗಿದ್ದಾರೆ. ಆದರೆ ಅವರನ್ನು ಟ್ರೋಲ್ ಮಾಡುವ ಪೋಸ್ಟ್‌ಗಳು ಮಾತ್ರ ಹೆಚ್ಚು ಹೆಚ್ಚು ಓಡಾಡುತ್ತಿವೆ. ಅದರಲ್ಲಿ ಹೆಚ್ಚು ಟ್ರೋಲ್ ಆಗಿರುವುದು ಗೃಹ ಸಚಿವ ಅಮಿತ್ ಶಾರವರು ನಿತ್ಯಾನಂದ ಸ್ವಾಮಿಯ ಕಾಲಿಗೆ ಬೀಳುತ್ತಿರುವ ಪೋಸ್ಟ್ ವೈರಲ್ ಆಗಿದೆ.

ದೇಶದ ಗೃಹಮಂತ್ರಿಗಳು ಆರೋಪಿಯನ್ನು ಜೈಲಿಗೆ ಕಳಿಸುವುದು ಬಿಟ್ಟು ಅವರ ಕಾಲಿಗೆ ಬೀಳುತ್ತಿದ್ದಾರೆ. ಈಗಾದರೆ ಭಾರತದ ಪರಿಸ್ಥಿತಿ ಉದ್ದಾರ ಎಂದು ಜನ ಟ್ರೋಲ್‌ ಮಾಡಿದ್ದಾರೆ. ನೂರಾರು ಜನ ಈ ಪೋಸ್ಟರ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಷೇರ್‌ ಮಾಡಿ ಅಮಿತ್‌ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದರ್‌ ಫ್ಯಾಕ್ಟ್‌ ಚೆಕ್‌ ಮಾಡಿದಾಗ ತಿಳಿದು ಬಂದ ಸತ್ಯ ಏನೆಂದರೆ ಆ ಫೋಟೊದಲ್ಲಿರುವ ವ್ಯಕ್ತಿ ಅಮಿತ್‌ ಶಾ ಅಲ್ಲ. ಅವರು ಅಮಿತ್ ಶಾರಂತೆ ಕಂಡರೂ ಸಹ ಅವರು ಮಾರಿಷಸ್‌ನ ಕಮಿಷನರ್ ಜಗದೀಶ್ವರ್‌ ಗೋಬುರ್ದನ್‌ ಆಗಿದ್ದಾರೆ. ಅವರು ನಿತ್ಯಾನಂದ ಸ್ವಾಮಿಯ ಆಶ್ರಮಕ್ಕೆ ಭೇಟಿ ನೀಡಿದ್ದಾಗ ಅವರು ಪಾದಕ್ಕೆರಗಿದ್ದರು. ಆ ಫೋಟೊವನ್ನು ತಪ್ಪಾಗಿ ಅಮಿತ್ ಶಾ ಎಂದು ಗುರುತಿಸಲಾಗಿದೆ.

ಅವರನ್ನು ಸ್ಪಷ್ಟವಾಗಿ ಗುರುತಿಸುವ ಒರಿಜಿನಲ್ ಫೋಟೊ ಇಲ್ಲಿದೆ ನೋಡಿ.

ಹಾಗಾಗಿ ಷೇರ್‌ ಮಾಡುವ ಮೊದಲು ಸತ್ಯವನ್ನು ಪರಿಶೀಲಿಸಬೇಕಾಗಿದೆ. ನಾವು ಯಾವುದೇ ಕಾರಣಕ್ಕೂ ಫೇಕ್‌ನ್ಯೂಸ್‌ಗಳನ್ನು ಷೇರ್ ಮಾಡಬಾರದು. ಎಲ್ಲಕ್ಕಿಂತ ಹೆಚ್ಚಾಗಿ ಅಮಿತ್‌ ಶಾ ರಂತವರು ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಸುಳ್ಳನ್ನು ಹೇಳಬಾರದು. ಸುಳ್ಳು ಹೇಳದಿದ್ದವರ ವಿರುದ್ಧವೂ ಫೇಕ್‌ನ್ಯೂಸ್‌ಗಳು ಬರುತ್ತಿರುವುದು ನಿಜ. ಆದರೆ ನಮ್ಮನ್ನು ನಾವು ಸುಳ್ಳು ಹೇಳದಂತೆ, ಫೇಕ್‌ನ್ಯೂಸ್‌ ಹಂಚದಂತೆ ನೋಡಿಕೊಂಡರೆ ಈ ಸಮಸ್ಯೆಗೆ ಸ್ವಲ್ಪ ಪರಿಹಾರ ಸಿಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...