Homeನಿಜವೋ ಸುಳ್ಳೋಫೇಕ್‌ನ್ಯೂಸ್‌ ಜಾಲ: ಅಮಿತ್‌ ಶಾ ಹೇಳಿದ್ದು ಒಂದು ಸುಳ್ಳು, ಅಮಿತ್‌ ಶಾ ಬಗ್ಗೆನೇ ಬಂತು ಮತ್ತೊಂದು...

ಫೇಕ್‌ನ್ಯೂಸ್‌ ಜಾಲ: ಅಮಿತ್‌ ಶಾ ಹೇಳಿದ್ದು ಒಂದು ಸುಳ್ಳು, ಅಮಿತ್‌ ಶಾ ಬಗ್ಗೆನೇ ಬಂತು ಮತ್ತೊಂದು ಸುಳ್ಳು..

- Advertisement -
- Advertisement -

ತಮ್ಮ ವಿರೋಧಿಗಳ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಲು ಅಥವಾ ತಮ್ಮ ಕೆಟ್ಟ ಕೆಲಸಗಳನ್ನು ಮುಚ್ಚಿಹಾಕಲು ಫೇಕ್‌ ನ್ಯೂಸ್‌ಗಳನ್ನು ಹಲವಾರು ಜನ ಹರಡುತ್ತಿದ್ದಾರೆ. ಆದರೆ ಅದೇ ಫೇಕ್‌ನ್ಯೂಸ್‌ಗಳು ಒಂದು ದಿನ ತಮ್ಮ ವಿರುದ್ಧವೇ ತಿರುಗಿಬೀಳಬಹುದೆಂಬುದಕ್ಕೆ ಇಲ್ಲಿದೆ ಒಂದು ಉದಾಹರಣೆ.. ಅದು ಈ ದೇಶದ ಗೃಹಮಂತ್ರಿ, ಅತಿ ದೊಡ್ಡ ಪಕ್ಷದ ಅಧ್ಯಕ್ಷ ಅಮಿತ್‌ ಶಾರವರೆ ಅದಕ್ಕೆ ಬಲಿಯಾಗಿದ್ದಾರೆ.

ಅಂದು ಕಾಂಗ್ರೆಸ್ ಧರ್ಮಾಧಾರಿತವಾಗಿ ದೇಶವನ್ನು ವಿಭಜನೆ ಮಾಡಿತು: ಅಮಿತ್ ಶಾ

ಪೌರತ್ವ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸುವ ವೇಳೆ ಬಿಜೆಪಿ ಅಧ್ಯಕ್ಷ ಮತ್ತು ಗೃಹ ಸಚಿವ ಅಮಿತ್ ಶಾ ಅಂದು 1947ರಲ್ಲಿ ಕಾಂಗ್ರೆಸ್ ಭಾರತವನ್ನು ಧರ್ಮಾಧಾರಿತವಾಗಿ ದೇಶವನ್ನು ವಿಭಜನೆ ಮಾಡದಿದ್ದರೆ ಇಂದು ಈ ಮಸೂದೆಯ ಅಗತ್ಯವಿರಲಿಲ್ಲ ಎಂದು ಹೇಳಿದ್ದಾರೆ.

ಇವರ ಈ ಹೇಳಿಕೆ ನಿಜವೇ? ಭಾರತ ಪಾಕಿಸ್ತಾನ ವಿಭಜನೆಗೆ ಕಾಂಗ್ರೆಸ್‌ ಕಾರಣವೇ ಎಂದು ಹುಡುಕಹೊರಟರೆ ಮೇಲ್ನೋಟಕ್ಕೆ ಅದು ಸುಳ್ಳು ಎಂಬುದು ಸ್ಪಷ್ಟವಾಗಿ ಗೊತ್ತಾಗುತ್ತದೆ.

1947ರಲ್ಲಿ ಜೆ.ಬಿ ಕೃಪಲಾನಿಯವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷರಾಗಿದ್ದರು. ಅದಕ್ಕೂ ಒಂದು ವರ್ಷದ ಮೊದಲು ಜವಹಾರಲಾಲ್‌ ನೆಹರು ಅಧ್ಯಕ್ಷರಾಗಿದ್ದರು. ಇವರೆಲ್ಲರೂ ಭಾರತದ ವಿಭಜನೆಗೆ ವಿರುದ್ಧವಾಗಿದ್ದರು. ಎಲ್ಲಕ್ಕಿಂತ ಹೆಚ್ಚು ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಭಾರತ ವಿಭಜನೆಯ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.

ವಾಸ್ತವವೆಂದರೆ ಹಾಲಿ ಬಿಜೆಪಿಯನ್ನು ಬೆಂಬಲಿಸುವ ಹಿಂದೂ ಮಹಾಸಭಾ ಮತ್ತು ಮುಸ್ಲಿಂ ಲೀಗ್‌ನ ಮೊಹಮ್ಮದ್ ಆಲಿ ಜಿನ್ನಾ ಧಾರ್ಮಿಕ ಆಧಾರದ ಮೇಲೆ ಭಾರತ ಪಾಕಿಸ್ತಾನ ವಿಭಜನೆಯನ್ನು ಬೆಂಬಲಿಸಿದವರು. ಆದರೆ ಕಾಂಗ್ರೆಸ್ ವಿಭಜನೆಗೆ ವಿರುದ್ಧವಾಗಿತ್ತು ಎಂದು ಅಮಿತ್‌ ಶಾ ಸುಳ್ಳು ಹೇಳಿದ್ದಾರೆ. ಆ ಮೂಲಕ ಜನರಲ್ಲಿ ಕಾಂಗ್ರೆಸ್‌ ವಿರೋಧಿ ಮನೋಭಾವವನ್ನು ಬಿತ್ತುವುದು ಮತ್ತು ಪೌರತ್ವ ತಿದ್ದುಪಡಿ ಮಸೂದೆಗೆ ಬೆಂಬಲ ಪಡೆಯುವುದು ಅವರ ಉದ್ದೇಶವಾಗಿದೆ.

ಸತ್ಯ ಏನೆಂದರೆ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಭಾರತ ವಿಭಜನೆಯನ್ನು ತಡೆಯಲು ಅತ್ಯುತ್ತಮ ಪ್ರಯತ್ನ ಮಾಡಿದ್ದರು..

ಈ ಸುಳ್ಳನ್ನು ಅಮಿತ್‌ ಶಾರವರು ಪಾರ್ಲಿಮೆಂಟ್‌ನಲ್ಲಿ ಹೇಳುತ್ತಿರುವಾಗಲೇ ಅವರ ಕುರಿತೇ ಇನ್ನೊಂದು ಸುಳ್ಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಅದೆನೆಂದು ಓದಿಬಿಡಿ

ಅತ್ಯಾಚಾರ ಆರೋಪಿ ನಿತ್ಯಾನಂದ ಸ್ವಾಮಿಯ ಕಾಲಿಗೆ ಬಿದ್ದ ಗೃಹ ಸಚಿವ  ಅಮಿತ್ ಶಾ..

ಅತ್ಯಾಚಾರ ಸೇರಿದಂತೆ ಹಲವು ಆರೋಪಗಳಲ್ಲಿ ಭಾಗಿಯಾಗಿರುವ ನಿತ್ಯಾನಂದ ಸ್ವಾಮಿ ದೇಶಬಿಟ್ಟು ಓಡಿ ಹೋಗಿದ್ದಾರೆ. ಆದರೆ ಅವರನ್ನು ಟ್ರೋಲ್ ಮಾಡುವ ಪೋಸ್ಟ್‌ಗಳು ಮಾತ್ರ ಹೆಚ್ಚು ಹೆಚ್ಚು ಓಡಾಡುತ್ತಿವೆ. ಅದರಲ್ಲಿ ಹೆಚ್ಚು ಟ್ರೋಲ್ ಆಗಿರುವುದು ಗೃಹ ಸಚಿವ ಅಮಿತ್ ಶಾರವರು ನಿತ್ಯಾನಂದ ಸ್ವಾಮಿಯ ಕಾಲಿಗೆ ಬೀಳುತ್ತಿರುವ ಪೋಸ್ಟ್ ವೈರಲ್ ಆಗಿದೆ.

ದೇಶದ ಗೃಹಮಂತ್ರಿಗಳು ಆರೋಪಿಯನ್ನು ಜೈಲಿಗೆ ಕಳಿಸುವುದು ಬಿಟ್ಟು ಅವರ ಕಾಲಿಗೆ ಬೀಳುತ್ತಿದ್ದಾರೆ. ಈಗಾದರೆ ಭಾರತದ ಪರಿಸ್ಥಿತಿ ಉದ್ದಾರ ಎಂದು ಜನ ಟ್ರೋಲ್‌ ಮಾಡಿದ್ದಾರೆ. ನೂರಾರು ಜನ ಈ ಪೋಸ್ಟರ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಷೇರ್‌ ಮಾಡಿ ಅಮಿತ್‌ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದರ್‌ ಫ್ಯಾಕ್ಟ್‌ ಚೆಕ್‌ ಮಾಡಿದಾಗ ತಿಳಿದು ಬಂದ ಸತ್ಯ ಏನೆಂದರೆ ಆ ಫೋಟೊದಲ್ಲಿರುವ ವ್ಯಕ್ತಿ ಅಮಿತ್‌ ಶಾ ಅಲ್ಲ. ಅವರು ಅಮಿತ್ ಶಾರಂತೆ ಕಂಡರೂ ಸಹ ಅವರು ಮಾರಿಷಸ್‌ನ ಕಮಿಷನರ್ ಜಗದೀಶ್ವರ್‌ ಗೋಬುರ್ದನ್‌ ಆಗಿದ್ದಾರೆ. ಅವರು ನಿತ್ಯಾನಂದ ಸ್ವಾಮಿಯ ಆಶ್ರಮಕ್ಕೆ ಭೇಟಿ ನೀಡಿದ್ದಾಗ ಅವರು ಪಾದಕ್ಕೆರಗಿದ್ದರು. ಆ ಫೋಟೊವನ್ನು ತಪ್ಪಾಗಿ ಅಮಿತ್ ಶಾ ಎಂದು ಗುರುತಿಸಲಾಗಿದೆ.

ಅವರನ್ನು ಸ್ಪಷ್ಟವಾಗಿ ಗುರುತಿಸುವ ಒರಿಜಿನಲ್ ಫೋಟೊ ಇಲ್ಲಿದೆ ನೋಡಿ.

ಹಾಗಾಗಿ ಷೇರ್‌ ಮಾಡುವ ಮೊದಲು ಸತ್ಯವನ್ನು ಪರಿಶೀಲಿಸಬೇಕಾಗಿದೆ. ನಾವು ಯಾವುದೇ ಕಾರಣಕ್ಕೂ ಫೇಕ್‌ನ್ಯೂಸ್‌ಗಳನ್ನು ಷೇರ್ ಮಾಡಬಾರದು. ಎಲ್ಲಕ್ಕಿಂತ ಹೆಚ್ಚಾಗಿ ಅಮಿತ್‌ ಶಾ ರಂತವರು ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಸುಳ್ಳನ್ನು ಹೇಳಬಾರದು. ಸುಳ್ಳು ಹೇಳದಿದ್ದವರ ವಿರುದ್ಧವೂ ಫೇಕ್‌ನ್ಯೂಸ್‌ಗಳು ಬರುತ್ತಿರುವುದು ನಿಜ. ಆದರೆ ನಮ್ಮನ್ನು ನಾವು ಸುಳ್ಳು ಹೇಳದಂತೆ, ಫೇಕ್‌ನ್ಯೂಸ್‌ ಹಂಚದಂತೆ ನೋಡಿಕೊಂಡರೆ ಈ ಸಮಸ್ಯೆಗೆ ಸ್ವಲ್ಪ ಪರಿಹಾರ ಸಿಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...