Homeನಿಜವೋ ಸುಳ್ಳೋಫೇಕ್‌ನ್ಯೂಸ್‌ ಜಾಲ: ಅಮಿತ್‌ ಶಾ ಹೇಳಿದ್ದು ಒಂದು ಸುಳ್ಳು, ಅಮಿತ್‌ ಶಾ ಬಗ್ಗೆನೇ ಬಂತು ಮತ್ತೊಂದು...

ಫೇಕ್‌ನ್ಯೂಸ್‌ ಜಾಲ: ಅಮಿತ್‌ ಶಾ ಹೇಳಿದ್ದು ಒಂದು ಸುಳ್ಳು, ಅಮಿತ್‌ ಶಾ ಬಗ್ಗೆನೇ ಬಂತು ಮತ್ತೊಂದು ಸುಳ್ಳು..

- Advertisement -
- Advertisement -

ತಮ್ಮ ವಿರೋಧಿಗಳ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಲು ಅಥವಾ ತಮ್ಮ ಕೆಟ್ಟ ಕೆಲಸಗಳನ್ನು ಮುಚ್ಚಿಹಾಕಲು ಫೇಕ್‌ ನ್ಯೂಸ್‌ಗಳನ್ನು ಹಲವಾರು ಜನ ಹರಡುತ್ತಿದ್ದಾರೆ. ಆದರೆ ಅದೇ ಫೇಕ್‌ನ್ಯೂಸ್‌ಗಳು ಒಂದು ದಿನ ತಮ್ಮ ವಿರುದ್ಧವೇ ತಿರುಗಿಬೀಳಬಹುದೆಂಬುದಕ್ಕೆ ಇಲ್ಲಿದೆ ಒಂದು ಉದಾಹರಣೆ.. ಅದು ಈ ದೇಶದ ಗೃಹಮಂತ್ರಿ, ಅತಿ ದೊಡ್ಡ ಪಕ್ಷದ ಅಧ್ಯಕ್ಷ ಅಮಿತ್‌ ಶಾರವರೆ ಅದಕ್ಕೆ ಬಲಿಯಾಗಿದ್ದಾರೆ.

ಅಂದು ಕಾಂಗ್ರೆಸ್ ಧರ್ಮಾಧಾರಿತವಾಗಿ ದೇಶವನ್ನು ವಿಭಜನೆ ಮಾಡಿತು: ಅಮಿತ್ ಶಾ

ಪೌರತ್ವ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸುವ ವೇಳೆ ಬಿಜೆಪಿ ಅಧ್ಯಕ್ಷ ಮತ್ತು ಗೃಹ ಸಚಿವ ಅಮಿತ್ ಶಾ ಅಂದು 1947ರಲ್ಲಿ ಕಾಂಗ್ರೆಸ್ ಭಾರತವನ್ನು ಧರ್ಮಾಧಾರಿತವಾಗಿ ದೇಶವನ್ನು ವಿಭಜನೆ ಮಾಡದಿದ್ದರೆ ಇಂದು ಈ ಮಸೂದೆಯ ಅಗತ್ಯವಿರಲಿಲ್ಲ ಎಂದು ಹೇಳಿದ್ದಾರೆ.

ಇವರ ಈ ಹೇಳಿಕೆ ನಿಜವೇ? ಭಾರತ ಪಾಕಿಸ್ತಾನ ವಿಭಜನೆಗೆ ಕಾಂಗ್ರೆಸ್‌ ಕಾರಣವೇ ಎಂದು ಹುಡುಕಹೊರಟರೆ ಮೇಲ್ನೋಟಕ್ಕೆ ಅದು ಸುಳ್ಳು ಎಂಬುದು ಸ್ಪಷ್ಟವಾಗಿ ಗೊತ್ತಾಗುತ್ತದೆ.

1947ರಲ್ಲಿ ಜೆ.ಬಿ ಕೃಪಲಾನಿಯವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷರಾಗಿದ್ದರು. ಅದಕ್ಕೂ ಒಂದು ವರ್ಷದ ಮೊದಲು ಜವಹಾರಲಾಲ್‌ ನೆಹರು ಅಧ್ಯಕ್ಷರಾಗಿದ್ದರು. ಇವರೆಲ್ಲರೂ ಭಾರತದ ವಿಭಜನೆಗೆ ವಿರುದ್ಧವಾಗಿದ್ದರು. ಎಲ್ಲಕ್ಕಿಂತ ಹೆಚ್ಚು ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಭಾರತ ವಿಭಜನೆಯ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.

ವಾಸ್ತವವೆಂದರೆ ಹಾಲಿ ಬಿಜೆಪಿಯನ್ನು ಬೆಂಬಲಿಸುವ ಹಿಂದೂ ಮಹಾಸಭಾ ಮತ್ತು ಮುಸ್ಲಿಂ ಲೀಗ್‌ನ ಮೊಹಮ್ಮದ್ ಆಲಿ ಜಿನ್ನಾ ಧಾರ್ಮಿಕ ಆಧಾರದ ಮೇಲೆ ಭಾರತ ಪಾಕಿಸ್ತಾನ ವಿಭಜನೆಯನ್ನು ಬೆಂಬಲಿಸಿದವರು. ಆದರೆ ಕಾಂಗ್ರೆಸ್ ವಿಭಜನೆಗೆ ವಿರುದ್ಧವಾಗಿತ್ತು ಎಂದು ಅಮಿತ್‌ ಶಾ ಸುಳ್ಳು ಹೇಳಿದ್ದಾರೆ. ಆ ಮೂಲಕ ಜನರಲ್ಲಿ ಕಾಂಗ್ರೆಸ್‌ ವಿರೋಧಿ ಮನೋಭಾವವನ್ನು ಬಿತ್ತುವುದು ಮತ್ತು ಪೌರತ್ವ ತಿದ್ದುಪಡಿ ಮಸೂದೆಗೆ ಬೆಂಬಲ ಪಡೆಯುವುದು ಅವರ ಉದ್ದೇಶವಾಗಿದೆ.

ಸತ್ಯ ಏನೆಂದರೆ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಭಾರತ ವಿಭಜನೆಯನ್ನು ತಡೆಯಲು ಅತ್ಯುತ್ತಮ ಪ್ರಯತ್ನ ಮಾಡಿದ್ದರು..

ಈ ಸುಳ್ಳನ್ನು ಅಮಿತ್‌ ಶಾರವರು ಪಾರ್ಲಿಮೆಂಟ್‌ನಲ್ಲಿ ಹೇಳುತ್ತಿರುವಾಗಲೇ ಅವರ ಕುರಿತೇ ಇನ್ನೊಂದು ಸುಳ್ಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಅದೆನೆಂದು ಓದಿಬಿಡಿ

ಅತ್ಯಾಚಾರ ಆರೋಪಿ ನಿತ್ಯಾನಂದ ಸ್ವಾಮಿಯ ಕಾಲಿಗೆ ಬಿದ್ದ ಗೃಹ ಸಚಿವ  ಅಮಿತ್ ಶಾ..

ಅತ್ಯಾಚಾರ ಸೇರಿದಂತೆ ಹಲವು ಆರೋಪಗಳಲ್ಲಿ ಭಾಗಿಯಾಗಿರುವ ನಿತ್ಯಾನಂದ ಸ್ವಾಮಿ ದೇಶಬಿಟ್ಟು ಓಡಿ ಹೋಗಿದ್ದಾರೆ. ಆದರೆ ಅವರನ್ನು ಟ್ರೋಲ್ ಮಾಡುವ ಪೋಸ್ಟ್‌ಗಳು ಮಾತ್ರ ಹೆಚ್ಚು ಹೆಚ್ಚು ಓಡಾಡುತ್ತಿವೆ. ಅದರಲ್ಲಿ ಹೆಚ್ಚು ಟ್ರೋಲ್ ಆಗಿರುವುದು ಗೃಹ ಸಚಿವ ಅಮಿತ್ ಶಾರವರು ನಿತ್ಯಾನಂದ ಸ್ವಾಮಿಯ ಕಾಲಿಗೆ ಬೀಳುತ್ತಿರುವ ಪೋಸ್ಟ್ ವೈರಲ್ ಆಗಿದೆ.

ದೇಶದ ಗೃಹಮಂತ್ರಿಗಳು ಆರೋಪಿಯನ್ನು ಜೈಲಿಗೆ ಕಳಿಸುವುದು ಬಿಟ್ಟು ಅವರ ಕಾಲಿಗೆ ಬೀಳುತ್ತಿದ್ದಾರೆ. ಈಗಾದರೆ ಭಾರತದ ಪರಿಸ್ಥಿತಿ ಉದ್ದಾರ ಎಂದು ಜನ ಟ್ರೋಲ್‌ ಮಾಡಿದ್ದಾರೆ. ನೂರಾರು ಜನ ಈ ಪೋಸ್ಟರ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಷೇರ್‌ ಮಾಡಿ ಅಮಿತ್‌ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದರ್‌ ಫ್ಯಾಕ್ಟ್‌ ಚೆಕ್‌ ಮಾಡಿದಾಗ ತಿಳಿದು ಬಂದ ಸತ್ಯ ಏನೆಂದರೆ ಆ ಫೋಟೊದಲ್ಲಿರುವ ವ್ಯಕ್ತಿ ಅಮಿತ್‌ ಶಾ ಅಲ್ಲ. ಅವರು ಅಮಿತ್ ಶಾರಂತೆ ಕಂಡರೂ ಸಹ ಅವರು ಮಾರಿಷಸ್‌ನ ಕಮಿಷನರ್ ಜಗದೀಶ್ವರ್‌ ಗೋಬುರ್ದನ್‌ ಆಗಿದ್ದಾರೆ. ಅವರು ನಿತ್ಯಾನಂದ ಸ್ವಾಮಿಯ ಆಶ್ರಮಕ್ಕೆ ಭೇಟಿ ನೀಡಿದ್ದಾಗ ಅವರು ಪಾದಕ್ಕೆರಗಿದ್ದರು. ಆ ಫೋಟೊವನ್ನು ತಪ್ಪಾಗಿ ಅಮಿತ್ ಶಾ ಎಂದು ಗುರುತಿಸಲಾಗಿದೆ.

ಅವರನ್ನು ಸ್ಪಷ್ಟವಾಗಿ ಗುರುತಿಸುವ ಒರಿಜಿನಲ್ ಫೋಟೊ ಇಲ್ಲಿದೆ ನೋಡಿ.

ಹಾಗಾಗಿ ಷೇರ್‌ ಮಾಡುವ ಮೊದಲು ಸತ್ಯವನ್ನು ಪರಿಶೀಲಿಸಬೇಕಾಗಿದೆ. ನಾವು ಯಾವುದೇ ಕಾರಣಕ್ಕೂ ಫೇಕ್‌ನ್ಯೂಸ್‌ಗಳನ್ನು ಷೇರ್ ಮಾಡಬಾರದು. ಎಲ್ಲಕ್ಕಿಂತ ಹೆಚ್ಚಾಗಿ ಅಮಿತ್‌ ಶಾ ರಂತವರು ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಸುಳ್ಳನ್ನು ಹೇಳಬಾರದು. ಸುಳ್ಳು ಹೇಳದಿದ್ದವರ ವಿರುದ್ಧವೂ ಫೇಕ್‌ನ್ಯೂಸ್‌ಗಳು ಬರುತ್ತಿರುವುದು ನಿಜ. ಆದರೆ ನಮ್ಮನ್ನು ನಾವು ಸುಳ್ಳು ಹೇಳದಂತೆ, ಫೇಕ್‌ನ್ಯೂಸ್‌ ಹಂಚದಂತೆ ನೋಡಿಕೊಂಡರೆ ಈ ಸಮಸ್ಯೆಗೆ ಸ್ವಲ್ಪ ಪರಿಹಾರ ಸಿಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...