Homeನಿಜವೋ ಸುಳ್ಳೋಫೇಕ್‌ನ್ಯೂಸ್‌ ಜಾಲ: ಅಮಿತ್‌ ಶಾ ಹೇಳಿದ್ದು ಒಂದು ಸುಳ್ಳು, ಅಮಿತ್‌ ಶಾ ಬಗ್ಗೆನೇ ಬಂತು ಮತ್ತೊಂದು...

ಫೇಕ್‌ನ್ಯೂಸ್‌ ಜಾಲ: ಅಮಿತ್‌ ಶಾ ಹೇಳಿದ್ದು ಒಂದು ಸುಳ್ಳು, ಅಮಿತ್‌ ಶಾ ಬಗ್ಗೆನೇ ಬಂತು ಮತ್ತೊಂದು ಸುಳ್ಳು..

- Advertisement -
- Advertisement -

ತಮ್ಮ ವಿರೋಧಿಗಳ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಲು ಅಥವಾ ತಮ್ಮ ಕೆಟ್ಟ ಕೆಲಸಗಳನ್ನು ಮುಚ್ಚಿಹಾಕಲು ಫೇಕ್‌ ನ್ಯೂಸ್‌ಗಳನ್ನು ಹಲವಾರು ಜನ ಹರಡುತ್ತಿದ್ದಾರೆ. ಆದರೆ ಅದೇ ಫೇಕ್‌ನ್ಯೂಸ್‌ಗಳು ಒಂದು ದಿನ ತಮ್ಮ ವಿರುದ್ಧವೇ ತಿರುಗಿಬೀಳಬಹುದೆಂಬುದಕ್ಕೆ ಇಲ್ಲಿದೆ ಒಂದು ಉದಾಹರಣೆ.. ಅದು ಈ ದೇಶದ ಗೃಹಮಂತ್ರಿ, ಅತಿ ದೊಡ್ಡ ಪಕ್ಷದ ಅಧ್ಯಕ್ಷ ಅಮಿತ್‌ ಶಾರವರೆ ಅದಕ್ಕೆ ಬಲಿಯಾಗಿದ್ದಾರೆ.

ಅಂದು ಕಾಂಗ್ರೆಸ್ ಧರ್ಮಾಧಾರಿತವಾಗಿ ದೇಶವನ್ನು ವಿಭಜನೆ ಮಾಡಿತು: ಅಮಿತ್ ಶಾ

ಪೌರತ್ವ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸುವ ವೇಳೆ ಬಿಜೆಪಿ ಅಧ್ಯಕ್ಷ ಮತ್ತು ಗೃಹ ಸಚಿವ ಅಮಿತ್ ಶಾ ಅಂದು 1947ರಲ್ಲಿ ಕಾಂಗ್ರೆಸ್ ಭಾರತವನ್ನು ಧರ್ಮಾಧಾರಿತವಾಗಿ ದೇಶವನ್ನು ವಿಭಜನೆ ಮಾಡದಿದ್ದರೆ ಇಂದು ಈ ಮಸೂದೆಯ ಅಗತ್ಯವಿರಲಿಲ್ಲ ಎಂದು ಹೇಳಿದ್ದಾರೆ.

ಇವರ ಈ ಹೇಳಿಕೆ ನಿಜವೇ? ಭಾರತ ಪಾಕಿಸ್ತಾನ ವಿಭಜನೆಗೆ ಕಾಂಗ್ರೆಸ್‌ ಕಾರಣವೇ ಎಂದು ಹುಡುಕಹೊರಟರೆ ಮೇಲ್ನೋಟಕ್ಕೆ ಅದು ಸುಳ್ಳು ಎಂಬುದು ಸ್ಪಷ್ಟವಾಗಿ ಗೊತ್ತಾಗುತ್ತದೆ.

1947ರಲ್ಲಿ ಜೆ.ಬಿ ಕೃಪಲಾನಿಯವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷರಾಗಿದ್ದರು. ಅದಕ್ಕೂ ಒಂದು ವರ್ಷದ ಮೊದಲು ಜವಹಾರಲಾಲ್‌ ನೆಹರು ಅಧ್ಯಕ್ಷರಾಗಿದ್ದರು. ಇವರೆಲ್ಲರೂ ಭಾರತದ ವಿಭಜನೆಗೆ ವಿರುದ್ಧವಾಗಿದ್ದರು. ಎಲ್ಲಕ್ಕಿಂತ ಹೆಚ್ಚು ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಭಾರತ ವಿಭಜನೆಯ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.

ವಾಸ್ತವವೆಂದರೆ ಹಾಲಿ ಬಿಜೆಪಿಯನ್ನು ಬೆಂಬಲಿಸುವ ಹಿಂದೂ ಮಹಾಸಭಾ ಮತ್ತು ಮುಸ್ಲಿಂ ಲೀಗ್‌ನ ಮೊಹಮ್ಮದ್ ಆಲಿ ಜಿನ್ನಾ ಧಾರ್ಮಿಕ ಆಧಾರದ ಮೇಲೆ ಭಾರತ ಪಾಕಿಸ್ತಾನ ವಿಭಜನೆಯನ್ನು ಬೆಂಬಲಿಸಿದವರು. ಆದರೆ ಕಾಂಗ್ರೆಸ್ ವಿಭಜನೆಗೆ ವಿರುದ್ಧವಾಗಿತ್ತು ಎಂದು ಅಮಿತ್‌ ಶಾ ಸುಳ್ಳು ಹೇಳಿದ್ದಾರೆ. ಆ ಮೂಲಕ ಜನರಲ್ಲಿ ಕಾಂಗ್ರೆಸ್‌ ವಿರೋಧಿ ಮನೋಭಾವವನ್ನು ಬಿತ್ತುವುದು ಮತ್ತು ಪೌರತ್ವ ತಿದ್ದುಪಡಿ ಮಸೂದೆಗೆ ಬೆಂಬಲ ಪಡೆಯುವುದು ಅವರ ಉದ್ದೇಶವಾಗಿದೆ.

ಸತ್ಯ ಏನೆಂದರೆ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಭಾರತ ವಿಭಜನೆಯನ್ನು ತಡೆಯಲು ಅತ್ಯುತ್ತಮ ಪ್ರಯತ್ನ ಮಾಡಿದ್ದರು..

ಈ ಸುಳ್ಳನ್ನು ಅಮಿತ್‌ ಶಾರವರು ಪಾರ್ಲಿಮೆಂಟ್‌ನಲ್ಲಿ ಹೇಳುತ್ತಿರುವಾಗಲೇ ಅವರ ಕುರಿತೇ ಇನ್ನೊಂದು ಸುಳ್ಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಅದೆನೆಂದು ಓದಿಬಿಡಿ

ಅತ್ಯಾಚಾರ ಆರೋಪಿ ನಿತ್ಯಾನಂದ ಸ್ವಾಮಿಯ ಕಾಲಿಗೆ ಬಿದ್ದ ಗೃಹ ಸಚಿವ  ಅಮಿತ್ ಶಾ..

ಅತ್ಯಾಚಾರ ಸೇರಿದಂತೆ ಹಲವು ಆರೋಪಗಳಲ್ಲಿ ಭಾಗಿಯಾಗಿರುವ ನಿತ್ಯಾನಂದ ಸ್ವಾಮಿ ದೇಶಬಿಟ್ಟು ಓಡಿ ಹೋಗಿದ್ದಾರೆ. ಆದರೆ ಅವರನ್ನು ಟ್ರೋಲ್ ಮಾಡುವ ಪೋಸ್ಟ್‌ಗಳು ಮಾತ್ರ ಹೆಚ್ಚು ಹೆಚ್ಚು ಓಡಾಡುತ್ತಿವೆ. ಅದರಲ್ಲಿ ಹೆಚ್ಚು ಟ್ರೋಲ್ ಆಗಿರುವುದು ಗೃಹ ಸಚಿವ ಅಮಿತ್ ಶಾರವರು ನಿತ್ಯಾನಂದ ಸ್ವಾಮಿಯ ಕಾಲಿಗೆ ಬೀಳುತ್ತಿರುವ ಪೋಸ್ಟ್ ವೈರಲ್ ಆಗಿದೆ.

ದೇಶದ ಗೃಹಮಂತ್ರಿಗಳು ಆರೋಪಿಯನ್ನು ಜೈಲಿಗೆ ಕಳಿಸುವುದು ಬಿಟ್ಟು ಅವರ ಕಾಲಿಗೆ ಬೀಳುತ್ತಿದ್ದಾರೆ. ಈಗಾದರೆ ಭಾರತದ ಪರಿಸ್ಥಿತಿ ಉದ್ದಾರ ಎಂದು ಜನ ಟ್ರೋಲ್‌ ಮಾಡಿದ್ದಾರೆ. ನೂರಾರು ಜನ ಈ ಪೋಸ್ಟರ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಷೇರ್‌ ಮಾಡಿ ಅಮಿತ್‌ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದರ್‌ ಫ್ಯಾಕ್ಟ್‌ ಚೆಕ್‌ ಮಾಡಿದಾಗ ತಿಳಿದು ಬಂದ ಸತ್ಯ ಏನೆಂದರೆ ಆ ಫೋಟೊದಲ್ಲಿರುವ ವ್ಯಕ್ತಿ ಅಮಿತ್‌ ಶಾ ಅಲ್ಲ. ಅವರು ಅಮಿತ್ ಶಾರಂತೆ ಕಂಡರೂ ಸಹ ಅವರು ಮಾರಿಷಸ್‌ನ ಕಮಿಷನರ್ ಜಗದೀಶ್ವರ್‌ ಗೋಬುರ್ದನ್‌ ಆಗಿದ್ದಾರೆ. ಅವರು ನಿತ್ಯಾನಂದ ಸ್ವಾಮಿಯ ಆಶ್ರಮಕ್ಕೆ ಭೇಟಿ ನೀಡಿದ್ದಾಗ ಅವರು ಪಾದಕ್ಕೆರಗಿದ್ದರು. ಆ ಫೋಟೊವನ್ನು ತಪ್ಪಾಗಿ ಅಮಿತ್ ಶಾ ಎಂದು ಗುರುತಿಸಲಾಗಿದೆ.

ಅವರನ್ನು ಸ್ಪಷ್ಟವಾಗಿ ಗುರುತಿಸುವ ಒರಿಜಿನಲ್ ಫೋಟೊ ಇಲ್ಲಿದೆ ನೋಡಿ.

ಹಾಗಾಗಿ ಷೇರ್‌ ಮಾಡುವ ಮೊದಲು ಸತ್ಯವನ್ನು ಪರಿಶೀಲಿಸಬೇಕಾಗಿದೆ. ನಾವು ಯಾವುದೇ ಕಾರಣಕ್ಕೂ ಫೇಕ್‌ನ್ಯೂಸ್‌ಗಳನ್ನು ಷೇರ್ ಮಾಡಬಾರದು. ಎಲ್ಲಕ್ಕಿಂತ ಹೆಚ್ಚಾಗಿ ಅಮಿತ್‌ ಶಾ ರಂತವರು ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಸುಳ್ಳನ್ನು ಹೇಳಬಾರದು. ಸುಳ್ಳು ಹೇಳದಿದ್ದವರ ವಿರುದ್ಧವೂ ಫೇಕ್‌ನ್ಯೂಸ್‌ಗಳು ಬರುತ್ತಿರುವುದು ನಿಜ. ಆದರೆ ನಮ್ಮನ್ನು ನಾವು ಸುಳ್ಳು ಹೇಳದಂತೆ, ಫೇಕ್‌ನ್ಯೂಸ್‌ ಹಂಚದಂತೆ ನೋಡಿಕೊಂಡರೆ ಈ ಸಮಸ್ಯೆಗೆ ಸ್ವಲ್ಪ ಪರಿಹಾರ ಸಿಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...