Homeಕರ್ನಾಟಕಬೀಳಗಿ: ಮುರಗೇಶ್ ನಿರಾಣಿಗೆ ಭಾರೀ ಹಿನ್ನಡೆ; ಜಯದತ್ತ ಕಾಂಗ್ರೆಸ್ ಅಭ್ಯರ್ಥಿ ಜೆಟಿ ಪಾಟೀಲ್ ಹೆಜ್ಜೆ

ಬೀಳಗಿ: ಮುರಗೇಶ್ ನಿರಾಣಿಗೆ ಭಾರೀ ಹಿನ್ನಡೆ; ಜಯದತ್ತ ಕಾಂಗ್ರೆಸ್ ಅಭ್ಯರ್ಥಿ ಜೆಟಿ ಪಾಟೀಲ್ ಹೆಜ್ಜೆ

- Advertisement -
- Advertisement -

ಬೀಳಗಿ ಮತಕ್ಷೇತ್ರದಿಂದ ಮುರಗೇಶ್ ನಿರಾಣಿ ಅವರು ಈಗಾಗಲೇ ನಾಲ್ಕು ಬಾರಿ ಸ್ಪರ್ಧೆ ಮಾಡಿ ಮೂರು ಬಾರಿ ಗೆಲುವು ಸಾಧಿಸಿದ್ದಾರೆ. ಮುಂದಿನ ಮುಖ್ಯಮಂತ್ರಿ ರೇಸ್‌ನಲ್ಲೂ ನಿರಾಣಿ ಹೆಸರು ಮುಂಚೂಣಿಯಲ್ಲಿದೆ. ಆದರೆ ಮುರಗೇಶ್ ನಿರಾಣಿ ಅವರು ಕಾಂಗ್ರೆಸ್ ಅಭ್ಯರ್ಥಿ ಜೆಟಿ ಪಾಟೀಲ್ ವಿರುದ್ಧ ಭಾರೀ ಹಿನ್ನಡೆ ಅನುಭವಿಸುತ್ತಿದ್ದಾರೆ.

ಗೆಲುವಿಗಾಗಿ ಕ್ಷೇತ್ರದಲ್ಲಿ ಹಣದ ಹೊಳೆ ಹರಿಸಿದ್ದ ಮುರಗೇಶ್ ನಿರಾಣಿ ಅವರಿಗೆ ಗೆಲುವಿನ ಹಾದಿ ಕಷ್ಟವಾಗಿದೆ. 30,000ಮತಗಳಷ್ಟು ಹಿನ್ನಡೆ ಅನುಭವಿಸಿದ್ದಾರೆ. ಇನ್ನು ಅವರ ಗೆಲುವು ಮರಿಚಿಕೆ ಎನ್ನುವುದು ಸ್ಪಷ್ಟವಾಗುತ್ತಿದೆ.

ಬೀಳಗಿ

ಕಾಂಗ್ರೆಸ್- ಜೆಟಿ ಪಾಟೀಲ್- ಮುನ್ನಡೆ

ಬಿಜೆಪಿ- ಮುರಗೇಶ್ ನಿರಾಣಿ- ಹಿನ್ನಡೆ

ಜೆಡಿಎಸ್-  ರುಕ್ಮುದ್ದೀನ್‌ ಸೌದಗಲ್‌- ಹಿನ್ನಡೆ

2004ರ ಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿದ ಮುರಗೇಶ ನಿರಾಣಿ, ಕಾಂಗ್ರೆಸ್ ಹುರಿಯಾಳು ಜೆಟಿ ಪಾಟೀಲ್ ಅವರ ಹ್ಯಾಟ್ರಿಕ್ ಗೆಲುವಿಗೆ ಬ್ರೇಕ್ ಹಾಕಿದರು. ಮೊದಲ ಬಾರಿಗೆ ಬಿಜೆಪಿ ಬಾವುಟ ಹಾರಿಸಿದ ನಿರಾಣಿ, ಜೆಟಿ ಪಾಟೀಲ್ ವಿರುದ್ಧ 17,325 ಮತಗಳ ಅಂತರಿಂದ ಗೆಲುವು ಕಂಡರು.

2008ರ ಚುನಾವಣೆಯಲ್ಲಿ ಮತ್ತೆ ಮುರುಗೇಶ ನಿರಾಣಿ ಬಿಜೆಪಿ ಪಕ್ಷದಿಂದ ಗೆಲುವು ಕಂಡರು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯಥಿಯಾಗಿದ್ದ ಅಜಯ್‌ ಕುಮಾರ್‌ ಸರನಾಯಕ ಅವರು ಪ್ರಬಲ ಪೈಪೋಟಿ ನೀಡಿ ಕೇವಲ 3,124 ಮತಗಳ ಅಂತರದಿಂದ ನಿರಾಣಿ ವಿರುದ್ಧ ಸೋಲುಣಬೇಕಾಯಿತು. ಗೆದ್ದ ನಿರಾಣಿ ಮಂತ್ರಿಯಾದರು. 2013ರ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಮತ್ತೆ ಜೆ.ಟಿ ಪಾಟೀಲ ಅವರನ್ನು ಕಣಕ್ಕಿಳಿಸಿದರು. ಈ ವೇಳೆ ನಿರಾಣಿಯ ಹ್ಯಾಟ್ರಿಕ್‌ ಗೆಲುವಿಗೆ ಜೆ.ಟಿ ಪಾಟೀಲ ಬ್ರೇಕ್ ಹಾಕಿದರು. ನಿರಾಣಿ ವಿರುದ್ಧ 11,238 ಮತಗಳ ಅಂತರದಿಂದ ಗೆದ್ದ ಜೆಟಿ ಪಾಟೀಲ್ ಅವರು ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು.

ಕಳೆದ ಬಾರಿಯ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮುರುಗೇಶ ನಿರಾಣಿ 85,135 ಮತ ಪಡೆಯುವ ಮೂಲಕ ಗೆಲುವಿನ ನಗೆ ಬೀರಿದರು. ಕಾಂಗ್ರೆಸ್‌ ಅಭ್ಯರ್ಥಿ ಜೆ.ಟಿ ಪಾಟೀಲ್ ತೀವ್ರ ಪೈಪೋಟಿ ನೀಡಿ ಕೇವಲ 4,811 ಮತಗಳ ಅಂತರದಿಂದ ಸೋಲುಂಡರು. ಬಿಜೆಪಿ ಸರ್ಕಾರದಲ್ಲಿ ನಿರಾಣಿ ಎರಡನೇ ಬಾರಿ ಮಂತ್ರಿಯಾದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...