Homeಕರ್ನಾಟಕಬೀಳಗಿ: ಮುರಗೇಶ್ ನಿರಾಣಿಗೆ ಭಾರೀ ಹಿನ್ನಡೆ; ಜಯದತ್ತ ಕಾಂಗ್ರೆಸ್ ಅಭ್ಯರ್ಥಿ ಜೆಟಿ ಪಾಟೀಲ್ ಹೆಜ್ಜೆ

ಬೀಳಗಿ: ಮುರಗೇಶ್ ನಿರಾಣಿಗೆ ಭಾರೀ ಹಿನ್ನಡೆ; ಜಯದತ್ತ ಕಾಂಗ್ರೆಸ್ ಅಭ್ಯರ್ಥಿ ಜೆಟಿ ಪಾಟೀಲ್ ಹೆಜ್ಜೆ

- Advertisement -
- Advertisement -

ಬೀಳಗಿ ಮತಕ್ಷೇತ್ರದಿಂದ ಮುರಗೇಶ್ ನಿರಾಣಿ ಅವರು ಈಗಾಗಲೇ ನಾಲ್ಕು ಬಾರಿ ಸ್ಪರ್ಧೆ ಮಾಡಿ ಮೂರು ಬಾರಿ ಗೆಲುವು ಸಾಧಿಸಿದ್ದಾರೆ. ಮುಂದಿನ ಮುಖ್ಯಮಂತ್ರಿ ರೇಸ್‌ನಲ್ಲೂ ನಿರಾಣಿ ಹೆಸರು ಮುಂಚೂಣಿಯಲ್ಲಿದೆ. ಆದರೆ ಮುರಗೇಶ್ ನಿರಾಣಿ ಅವರು ಕಾಂಗ್ರೆಸ್ ಅಭ್ಯರ್ಥಿ ಜೆಟಿ ಪಾಟೀಲ್ ವಿರುದ್ಧ ಭಾರೀ ಹಿನ್ನಡೆ ಅನುಭವಿಸುತ್ತಿದ್ದಾರೆ.

ಗೆಲುವಿಗಾಗಿ ಕ್ಷೇತ್ರದಲ್ಲಿ ಹಣದ ಹೊಳೆ ಹರಿಸಿದ್ದ ಮುರಗೇಶ್ ನಿರಾಣಿ ಅವರಿಗೆ ಗೆಲುವಿನ ಹಾದಿ ಕಷ್ಟವಾಗಿದೆ. 30,000ಮತಗಳಷ್ಟು ಹಿನ್ನಡೆ ಅನುಭವಿಸಿದ್ದಾರೆ. ಇನ್ನು ಅವರ ಗೆಲುವು ಮರಿಚಿಕೆ ಎನ್ನುವುದು ಸ್ಪಷ್ಟವಾಗುತ್ತಿದೆ.

ಬೀಳಗಿ

ಕಾಂಗ್ರೆಸ್- ಜೆಟಿ ಪಾಟೀಲ್- ಮುನ್ನಡೆ

ಬಿಜೆಪಿ- ಮುರಗೇಶ್ ನಿರಾಣಿ- ಹಿನ್ನಡೆ

ಜೆಡಿಎಸ್-  ರುಕ್ಮುದ್ದೀನ್‌ ಸೌದಗಲ್‌- ಹಿನ್ನಡೆ

2004ರ ಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿದ ಮುರಗೇಶ ನಿರಾಣಿ, ಕಾಂಗ್ರೆಸ್ ಹುರಿಯಾಳು ಜೆಟಿ ಪಾಟೀಲ್ ಅವರ ಹ್ಯಾಟ್ರಿಕ್ ಗೆಲುವಿಗೆ ಬ್ರೇಕ್ ಹಾಕಿದರು. ಮೊದಲ ಬಾರಿಗೆ ಬಿಜೆಪಿ ಬಾವುಟ ಹಾರಿಸಿದ ನಿರಾಣಿ, ಜೆಟಿ ಪಾಟೀಲ್ ವಿರುದ್ಧ 17,325 ಮತಗಳ ಅಂತರಿಂದ ಗೆಲುವು ಕಂಡರು.

2008ರ ಚುನಾವಣೆಯಲ್ಲಿ ಮತ್ತೆ ಮುರುಗೇಶ ನಿರಾಣಿ ಬಿಜೆಪಿ ಪಕ್ಷದಿಂದ ಗೆಲುವು ಕಂಡರು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯಥಿಯಾಗಿದ್ದ ಅಜಯ್‌ ಕುಮಾರ್‌ ಸರನಾಯಕ ಅವರು ಪ್ರಬಲ ಪೈಪೋಟಿ ನೀಡಿ ಕೇವಲ 3,124 ಮತಗಳ ಅಂತರದಿಂದ ನಿರಾಣಿ ವಿರುದ್ಧ ಸೋಲುಣಬೇಕಾಯಿತು. ಗೆದ್ದ ನಿರಾಣಿ ಮಂತ್ರಿಯಾದರು. 2013ರ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಮತ್ತೆ ಜೆ.ಟಿ ಪಾಟೀಲ ಅವರನ್ನು ಕಣಕ್ಕಿಳಿಸಿದರು. ಈ ವೇಳೆ ನಿರಾಣಿಯ ಹ್ಯಾಟ್ರಿಕ್‌ ಗೆಲುವಿಗೆ ಜೆ.ಟಿ ಪಾಟೀಲ ಬ್ರೇಕ್ ಹಾಕಿದರು. ನಿರಾಣಿ ವಿರುದ್ಧ 11,238 ಮತಗಳ ಅಂತರದಿಂದ ಗೆದ್ದ ಜೆಟಿ ಪಾಟೀಲ್ ಅವರು ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು.

ಕಳೆದ ಬಾರಿಯ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮುರುಗೇಶ ನಿರಾಣಿ 85,135 ಮತ ಪಡೆಯುವ ಮೂಲಕ ಗೆಲುವಿನ ನಗೆ ಬೀರಿದರು. ಕಾಂಗ್ರೆಸ್‌ ಅಭ್ಯರ್ಥಿ ಜೆ.ಟಿ ಪಾಟೀಲ್ ತೀವ್ರ ಪೈಪೋಟಿ ನೀಡಿ ಕೇವಲ 4,811 ಮತಗಳ ಅಂತರದಿಂದ ಸೋಲುಂಡರು. ಬಿಜೆಪಿ ಸರ್ಕಾರದಲ್ಲಿ ನಿರಾಣಿ ಎರಡನೇ ಬಾರಿ ಮಂತ್ರಿಯಾದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...