Homeಮುಖಪುಟ$1=₹80 ಕಾರಣವೇನು ಮತ್ತು ಪರಿಣಾಮವೇನು?

$1=₹80 ಕಾರಣವೇನು ಮತ್ತು ಪರಿಣಾಮವೇನು?

- Advertisement -
- Advertisement -

ಈ ವರ್ಷದ ಜನವರಿಯಲ್ಲಿ (2022) ಒಂದು ಡಾಲರಿಗೆ, ರೂಪಾಯಿ ಮೌಲ್ಯ 74.50 ಇದ್ದದ್ದು ಆರು ತಿಂಗಳಲ್ಲಿ ನಿರಂತರ ಕುಸಿತ ಕಂಡು ಈಗ ಕೆಲವು ದಿನಗಳ ಹಿಂದೆ ಒಂದು ಡಾಲರಿಗೆ 80 ರೂಪಾಯಿ ದಾಟಿದೆ.

ನಮ್ಮ ದೇಶ ಹೊರದೇಶಗಳೊಂದಿಗೆ ಮಾಡುವ ಒಟ್ಟು ಆಮದು ರಫ್ತಿನಲ್ಲಿ ಶೇ.85.6ರಷ್ಟು ವ್ಯವಹಾರವನ್ನು ಡಾಲರಿನಲ್ಲಿ ಮಾಡುತ್ತದೆ. ಹಾಗಾಗಿ, ಜಾಗತಿಕ ಮಾರುಕಟ್ಟೆಯಲ್ಲಿ ಡಾಲರಿಗೆ ಬೇಡಿಕೆ ಜಾಸ್ತಿಯಾದಷ್ಟೂ ರೂಪಾಯಿಯ ಬೆಲೆ ಕುಸಿಯತೊಡಗುತ್ತದೆ. ಹಾಗೆಯೇ ಭಾರತ ತಾನು ಮಾಡುವ ರಫ್ತಿಗಿಂತ ಆಮದು ಜಾಸ್ತಿಯಾಗುತ್ತಾ ಹೋದಂತೆ ವ್ಯಾಪಾರದ ಕೊರತೆ ಜಾಸ್ತಿಯಾಗುವ ಜೊತೆಗೆ ಡಾಲರಿನ ಮುಂದೆ ರೂಪಾಯಿ ಬೆಲೆಯೂ ಕುಸಿಯುತ್ತಾ ಹೋಗುತ್ತದೆ.

2021ರ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್‌ನಿಂದ ಜೂನ್) 31 ಬಿಲಿಯನ್ ಡಾಲರುಗಳಷ್ಟಿದ್ದ ವ್ಯಾಪಾರದ ಕೊರತೆಯು (Trade deficit) ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ 71 ಬಿಲಿಯನ್ ಡಾಲರುಗಳಷ್ಟಾಗಿದೆ. (ರಪ್ತು $119 ಬಿಲಿಯನ್ ಮತ್ತು ಆಮದು $190 ಬಿಲಿಯನ್). ಇದು ದಾಖಲೆ ಮಟ್ಟದ ವ್ಯಾಪಾರದ ಕೊರತೆಯಾಗಿದ್ದು ಡಾಲರಿನ ಮುಂದೆ ರೂಪಾಯಿ ಕುಸಿಯಲು ಒಂದು ಮುಖ್ಯ ಕಾರಣವಾದಂತಿದೆ.

ಹಾಗೆಯೇ ಕಡೆಯ ಎಂಟು ತಿಂಗಳುಗಳಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು (Foreign Institutional Investors, FII) ಭಾರತದ ಮಾರುಕಟ್ಟೆಯಿಂದ 2.65 ಲಕ್ಷ ಕೋಟಿಯಷ್ಟು ಭಾರೀ ಮೊತ್ತದ ಹಣವನ್ನು ಹಿಂತೆಗೆದುಕೊಂಡಿದ್ದಾರೆ. ಅವರುಗಳು ಈ ಹಿಂತೆಗೆದಿರುವ ಹಣವನ್ನು ಡಾಲರಿಗೆ ಬದಲಾಯಿಸಿಕೊಳ್ಳುತ್ತಿರುವುದರಿಂದ ಡಾಲರಿಗೆ ಬೇಡಿಕೆ ಹೆಚ್ಚಾಗಿ, ಇದರಿಂದಲೂ ರೂಪಾಯಿ ಬೆಲೆ ಕುಸಿಯುತ್ತಾ ಬಂದಿದೆ.

ಒಂದು ಪಕ್ಷದಲ್ಲಿ ಇದೇ ಪರಿಸ್ಥಿತಿ ಉಲ್ಟಾ ಆಗಿದ್ದು, ಹೆಚ್ಚು ಡಾಲರು ಭಾರತದ ಮಾರುಕಟ್ಟಯಲ್ಲಿ ಹೂಡಿಕೆಯಾಗಿದ್ದರೆ ಆಗ ರೂಪಾಯಿಗೆ ಬೇಡಿಕೆ ಜಾಸ್ತಿಯಾಗಿರುತ್ತಿತ್ತು.

ಹೀಗೆ ಡಾಲರಿನ ಮುಂದೆ ರೂಪಾಯಿ ಬೆಲೆ ಕುಸಿಯುತ್ತಿರುವುದರಿಂದ ನಮ್ಮ ಮೇಲೆ ಏನು ಪರಿಣಾಮ ಬೀರುತ್ತಿದೆ?

2021-22ರಲ್ಲಿ ನಮಗೆ ಬೇಕಾದ ಒಟ್ಟು ಕಚ್ಚಾತೈಲದಲ್ಲಿ ಶೇ.85.6ರಷ್ಟನ್ನು ಆಮದು ಮಾಡಿಕೊಂಡಿದ್ದೇವೆ. ಈ ಕಚ್ಚಾತೈಲಕ್ಕೆ ನಾವು ಡಾಲರಿನಲ್ಲಿಯೆ ಪಾವತಿಸುತ್ತಿದ್ದೇವೆ. (ರಷ್ಯಾದಿಂದ ಶೇ.10ರಷ್ಟು ತೈಲ ಮಾತ್ರ ಖರೀದಿಸುತ್ತಿದ್ದೇವೆ, ಅದೂ ಕೇವಲ ಶೇ.6ರಷ್ಟು ಮಾತ್ರ ಕಡಿಮೆ ಬೆಲೆಗೆ).

ಡಾಲರಿನ ಎದುರು ರೂಪಾಯಿ ಕುಸಿದಷ್ಟೂ ಕಚ್ಚಾತೈಲಕ್ಕೆ ನಾವು ಕೊಡಬೇಕಾಗಿರುವ ಬೆಲೆ ಜಾಸ್ತಿಯಾಗುತ್ತಲೇ ಹೋಗುತ್ತದೆ. ಇದರಿಂದಾಗಿ ದೇಶದೊಳಗೆ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಗ್ಯಾಸ್‌ನ ಬೆಲೆ ಜಾಸ್ತಿಯಾಗುತ್ತಲೇ ಹೋಗುತ್ತದೆ (ಎಕ್ಸೈಸ್ ಡ್ಯೂಟಿ ಕಡಿಮೆ ಮಾಡಿದಾಗ್ಯೂ ಕೂಡ).

ಈ ಕಾರಣಕ್ಕೇ ಕಳೆದ ಏಪ್ರಿಲ್-ಜೂನ್ ಅವಧಿಯಲ್ಲಿ ಪೆಟ್ರೋಲ್ ಬೆಲೆ ಶೇ.14ರಷ್ಟು ಮತ್ತು ಡೀಸೆಲ್ ಬೆಲೆ ಶೇ.9.3ರಷ್ಟು ಜಾಸ್ತಿಯಾಗಿದೆ. ನಮಗೆಲ್ಲಾ ತಿಳಿದಿರುವಂತೆ ಇದು ಎಲ್ಲಾ ದೈನಂದಿನ ಅಗತ್ಯ ವಸ್ತುಗಳ ಬೆಲೆಯೇರಿಕೆಗೂ ಕಾರಣವಾಗುತ್ತದೆ.

ಹಾಗೆಯೇ ಭಾರತ ದೇಶವು ರಸಗೊಬ್ಬರವನ್ನೂ ಹೆಚ್ಚು ಆಮದು ಮಾಡಿಕೊಳ್ಳುತ್ತಿದ್ದು ರೂಪಾಯಿ ಕುಸಿತದಿಂದಾಗಿ ರಸಗೊಬ್ಬರಕ್ಕೆ ಹೆಚ್ಚಿನ ಬೆಲೆ ತೆರಬೇಕಾಗಿ ಬರುತ್ತಿದೆ. ಇದು ಸರ್ಕಾರದ ಒಟ್ಟಾರೆ ವೆಚ್ಚವನ್ನು ಜಾಸ್ತಿ ಮಾಡುತ್ತಿದ್ದು, ಸರ್ಕಾರ ಸಾರ್ವಜನಿಕ ಸೇವೆಗಳಿಗೆ (ಆರೋಗ್ಯ, ಶಿಕ್ಷಣ, ಮೂಲಭೂತ ಸೌಕರ್ಯ ಇತ್ಯಾದಿ) ಅಗತ್ಯವಾಗಿ ಮಾಡಬೇಕಾದ ವೆಚ್ಚಕ್ಕೆ ಕಡಿವಾಣ ಹಾಕಬೇಕಾದ ಪರಿಸ್ಥಿತಿ ಬರುತ್ತದೆ. ಇದು ಇಡೀ ಸಮಾಜದ ಅಭಿವೃದ್ದಿಯ ಮೇಲೆ ಕೆಟ್ಟ ಪರಿಣಾಮ ಬೀರುವುದಲ್ಲದೆ, ತಪ್ಪಿಸಿಕೊಳ್ಳಲು ಕಷ್ಟವಾಗುವಂತ ಆರ್ಥಿಕ ವಿಷವರ್ತುಲದಲ್ಲಿ ಇಡೀ ದೇಶವನ್ನು ಸಿಲುಕಿಸುತ್ತದೆ.

ರೂಪಾಯಿ ಕುಸಿತದಿಂದ ಲಾಭವೇನಾದರೂ ಇದೆಯೆ?

ಡಾಲರಿನ ಮುಂದೆ ರೂಪಾಯಿಯ ಬೆಲೆ ಕಡಿಮೆಯಾದಷ್ಟೂ ನಾವು ರಫ್ತು ಮಾಡುವ ಸರಕು ಸೇವೆಗಳ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಡಿಮೆಯಾಗುತ್ತದೆ. ಇದರಿಂದ ಸ್ಪರ್ಧಾತ್ಮಕ ಬೆಲೆಗೆ ನಮ್ಮಿಂದ ರಫ್ತಾಗುವ ಸರಕು ಸೇವೆಗಳು ಲಭ್ಯವಾಗಿ ಅದರಿಂದ ರಫ್ತು ಹೆಚ್ಚಾಗುತ್ತಾ ವ್ಯಾಪಾರದ ಕೊರತೆ ಕಡಿಮೆಯಾಗಿ ನಮ್ಮ
ಅರ್ಥವ್ಯವಸ್ಥೆಗೆ ಅನುಕೂಲವಾಗುತ್ತದೆ ಎಂಬ ವಾದವಿದೆ (ಈ ವಾದ ಚೈನಾ, ಜಪಾನುಗಳ ವಿಷಯದಲ್ಲಿ ನಿಜವೂ ಆಗಿದೆ).

ಆದರೆ, ಚೈನಾ ಅಥವಾ ಜಪಾನ್‌ಗಳ ಮಟ್ಟಕ್ಕೆ ರಫ್ತು ವ್ಯವಹಾರದಲ್ಲಿ ಭಾರತ ತಲುಪುವ ಲಕ್ಷಣಗಳು ಹತ್ತಿರದಲ್ಲೆಲ್ಲೂ ಕಾಣಿಸುತ್ತಿಲ್ಲ.

ಹಾಗಿದ್ದರೆ, ಸದ್ಯದಲ್ಲಿ ರೂಪಾಯಿ ಕುಸಿತ ತಡೆಯುವ ದಾರಿಗಳು ಇವೆಯೆ?

ಡಾಲರಿನ ಮುಂದೆ ರೂಪಾಯಿ ಶಕ್ತವಾಗಲು ಸದ್ಯ ಎರಡು ದಾರಿಗಳು ಕಾಣಿಸುತ್ತಿದ್ದರೂ ಅವು ಕ್ಷೀಣವಾದ ಸಾಧ್ಯತೆಗಳಾಗಿವೆ.

ಒಂದು, ಭಾರತದಿಂದ ಹೆಚ್ಚಿನ ಮಟ್ಟದಲ್ಲಿ ರಫ್ತಾಗುತ್ತಿರುವ ಐ.ಟಿ ಸೇವೆಗಳಿಂದ ರೂಪಾಯಿ ಬೆಲೆ ಹೆಚ್ಚಿಸಲು ಸಾಧ್ಯವಿದೆ. ಆದರೆ, ಯೂರೋಪ್ ಮತ್ತು ಅಮೆರಿಕದಲ್ಲಿ ಆರ್ಥಿಕ ಕುಸಿತದ/ ಹಿಂಜರಿತದ ನಿರೀಕ್ಷೆಯಿರುವುದರಿಂದ ಭಾರತದ ಐ.ಟಿ ಸೇವೆಗಳು ನಿರೀಕ್ಷೆಯ ಮಟ್ಟಕ್ಕೆ ರಫ್ತಾಗುವ ಸಾಧ್ಯತೆ ಕ್ಷೀಣವಾಗಿದೆ.

ಹಾಗಾಗಿ, ಐ.ಟಿ ಸೇವೆಗಳ ಹೆಚ್ಚಿನ ರಫ್ತಿನಿಂದ ರೂಪಾಯಿ ಕುಸಿತ ತಡೆಯಬಹುದೆನ್ನುವ ಸಾಧ್ಯತೆಯೂ ಫಲ ಕೊಡದ ಪರಿಸ್ಥಿತಿ ನಿರ್ಮಾಣವಾಗಿದೆ.

ಮತ್ತೊಂದು, ಹೆಚ್ಚಿನ ವಿದೇಶಿ ನೇರ ಬಂಡವಾಳ ಹೂಡಿಕೆಯಿಂದ ಡಾಲರಿನ ಮುಂದೆ ರೂಪಾಯಿ ಬೇಡಿಕೆ ಹೆಚ್ಚಿಸಬಹುದು. ಅದರೆ, ಆರ್ಥಿಕ ಸದೃಢತೆಯ ಕೊರತೆಯಿಂದ ವಿದೇಶಿ ನೇರ ಬಂಡವಾಳವೂ ನಿರೀಕ್ಷಿತ ಮಟ್ಟಕ್ಕೆ ಬರುವುದು ಅಸಾಧ್ಯವಾಗಿದೆ.

ಜೊತೆಗೆ, ನಿರೀಕ್ಷಿತ ಜಾಗತಿಕ ಆರ್ಥಿಕ ಹಿಂಜರಿಕೆಯಿಂದಾಗಿ ಎನ್‌ಆರ್‌ಐಗಳಿಂದ (ವಿದೇಶದಲ್ಲಿ ನೆಲೆಸಿರುವ ಭಾರತೀಯರು) ಭಾರತಕ್ಕೆ ಬರುವ ಹಣವೂ ಕಡಿಮೆಯಾಗುವ ಸಾಧ್ಯತೆಯೇ ಹೆಚ್ಚಿದೆ.

ಹೀಗೆ ಈ ಎಲ್ಲ ವಾಸ್ತವದ ಹಿನ್ನೆಲೆಯಲ್ಲಿ ಸದ್ಯಕ್ಕೆ ರೂಪಾಯಿಯ ಕುಸಿತ ಮತ್ತಷ್ಟು ಜಾಸ್ತಿಯಾಗುವ ಸಾಧ್ಯತೆಗಳೇ ಕಾಣಿಸುತ್ತಿವೆ ಮತ್ತು ಇದರಿಂದ ಜನಸಾಮಾನ್ಯರ ಬದುಕು ಮತ್ತಷ್ಟು ದುಸ್ತರವಾಗುವ ಸಾಧ್ಯತೆಗಳೂ ನಿಚ್ಚಳವಾಗಿ ಗೋಚರಿಸುತ್ತಿವೆ.

ಡಾ. ಬಿ.ಸಿ. ಬಸವರಾಜು

ಡಾ. ಬಿ.ಸಿ. ಬಸವರಾಜು 
ಎಂಜಿನಿಯರಿಂಗ್ ವಿದ್ಯಾಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿರುವ ಬಸವರಾಜು ಹಾಡುಗಾರರೂ, ಪ್ರಚಲಿತ ವಿದ್ಯಮಾನಗಳಿಗೆ ಲೇಖನಗಳು ಮತ್ತು ವಿಡಿಯೋಗಳ ಮೂಲಕ ನಿರಂತರವಾಗಿ ಪ್ರತಿಕ್ರಿಯಿಸುತ್ತಾರೆ.


ಇದನ್ನೂ ಓದಿ: ಅಮೆರಿಕನ್ ಡಾಲರ್‌‌ ಮುಂದೆ 80ರೂ. ತಲುಪಲಿರುವ ಭಾರತೀಯ ರುಪಾಯಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...