Homeಮುಖಪುಟ$1=₹80 ಕಾರಣವೇನು ಮತ್ತು ಪರಿಣಾಮವೇನು?

$1=₹80 ಕಾರಣವೇನು ಮತ್ತು ಪರಿಣಾಮವೇನು?

- Advertisement -
- Advertisement -

ಈ ವರ್ಷದ ಜನವರಿಯಲ್ಲಿ (2022) ಒಂದು ಡಾಲರಿಗೆ, ರೂಪಾಯಿ ಮೌಲ್ಯ 74.50 ಇದ್ದದ್ದು ಆರು ತಿಂಗಳಲ್ಲಿ ನಿರಂತರ ಕುಸಿತ ಕಂಡು ಈಗ ಕೆಲವು ದಿನಗಳ ಹಿಂದೆ ಒಂದು ಡಾಲರಿಗೆ 80 ರೂಪಾಯಿ ದಾಟಿದೆ.

ನಮ್ಮ ದೇಶ ಹೊರದೇಶಗಳೊಂದಿಗೆ ಮಾಡುವ ಒಟ್ಟು ಆಮದು ರಫ್ತಿನಲ್ಲಿ ಶೇ.85.6ರಷ್ಟು ವ್ಯವಹಾರವನ್ನು ಡಾಲರಿನಲ್ಲಿ ಮಾಡುತ್ತದೆ. ಹಾಗಾಗಿ, ಜಾಗತಿಕ ಮಾರುಕಟ್ಟೆಯಲ್ಲಿ ಡಾಲರಿಗೆ ಬೇಡಿಕೆ ಜಾಸ್ತಿಯಾದಷ್ಟೂ ರೂಪಾಯಿಯ ಬೆಲೆ ಕುಸಿಯತೊಡಗುತ್ತದೆ. ಹಾಗೆಯೇ ಭಾರತ ತಾನು ಮಾಡುವ ರಫ್ತಿಗಿಂತ ಆಮದು ಜಾಸ್ತಿಯಾಗುತ್ತಾ ಹೋದಂತೆ ವ್ಯಾಪಾರದ ಕೊರತೆ ಜಾಸ್ತಿಯಾಗುವ ಜೊತೆಗೆ ಡಾಲರಿನ ಮುಂದೆ ರೂಪಾಯಿ ಬೆಲೆಯೂ ಕುಸಿಯುತ್ತಾ ಹೋಗುತ್ತದೆ.

2021ರ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್‌ನಿಂದ ಜೂನ್) 31 ಬಿಲಿಯನ್ ಡಾಲರುಗಳಷ್ಟಿದ್ದ ವ್ಯಾಪಾರದ ಕೊರತೆಯು (Trade deficit) ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ 71 ಬಿಲಿಯನ್ ಡಾಲರುಗಳಷ್ಟಾಗಿದೆ. (ರಪ್ತು $119 ಬಿಲಿಯನ್ ಮತ್ತು ಆಮದು $190 ಬಿಲಿಯನ್). ಇದು ದಾಖಲೆ ಮಟ್ಟದ ವ್ಯಾಪಾರದ ಕೊರತೆಯಾಗಿದ್ದು ಡಾಲರಿನ ಮುಂದೆ ರೂಪಾಯಿ ಕುಸಿಯಲು ಒಂದು ಮುಖ್ಯ ಕಾರಣವಾದಂತಿದೆ.

ಹಾಗೆಯೇ ಕಡೆಯ ಎಂಟು ತಿಂಗಳುಗಳಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು (Foreign Institutional Investors, FII) ಭಾರತದ ಮಾರುಕಟ್ಟೆಯಿಂದ 2.65 ಲಕ್ಷ ಕೋಟಿಯಷ್ಟು ಭಾರೀ ಮೊತ್ತದ ಹಣವನ್ನು ಹಿಂತೆಗೆದುಕೊಂಡಿದ್ದಾರೆ. ಅವರುಗಳು ಈ ಹಿಂತೆಗೆದಿರುವ ಹಣವನ್ನು ಡಾಲರಿಗೆ ಬದಲಾಯಿಸಿಕೊಳ್ಳುತ್ತಿರುವುದರಿಂದ ಡಾಲರಿಗೆ ಬೇಡಿಕೆ ಹೆಚ್ಚಾಗಿ, ಇದರಿಂದಲೂ ರೂಪಾಯಿ ಬೆಲೆ ಕುಸಿಯುತ್ತಾ ಬಂದಿದೆ.

ಒಂದು ಪಕ್ಷದಲ್ಲಿ ಇದೇ ಪರಿಸ್ಥಿತಿ ಉಲ್ಟಾ ಆಗಿದ್ದು, ಹೆಚ್ಚು ಡಾಲರು ಭಾರತದ ಮಾರುಕಟ್ಟಯಲ್ಲಿ ಹೂಡಿಕೆಯಾಗಿದ್ದರೆ ಆಗ ರೂಪಾಯಿಗೆ ಬೇಡಿಕೆ ಜಾಸ್ತಿಯಾಗಿರುತ್ತಿತ್ತು.

ಹೀಗೆ ಡಾಲರಿನ ಮುಂದೆ ರೂಪಾಯಿ ಬೆಲೆ ಕುಸಿಯುತ್ತಿರುವುದರಿಂದ ನಮ್ಮ ಮೇಲೆ ಏನು ಪರಿಣಾಮ ಬೀರುತ್ತಿದೆ?

2021-22ರಲ್ಲಿ ನಮಗೆ ಬೇಕಾದ ಒಟ್ಟು ಕಚ್ಚಾತೈಲದಲ್ಲಿ ಶೇ.85.6ರಷ್ಟನ್ನು ಆಮದು ಮಾಡಿಕೊಂಡಿದ್ದೇವೆ. ಈ ಕಚ್ಚಾತೈಲಕ್ಕೆ ನಾವು ಡಾಲರಿನಲ್ಲಿಯೆ ಪಾವತಿಸುತ್ತಿದ್ದೇವೆ. (ರಷ್ಯಾದಿಂದ ಶೇ.10ರಷ್ಟು ತೈಲ ಮಾತ್ರ ಖರೀದಿಸುತ್ತಿದ್ದೇವೆ, ಅದೂ ಕೇವಲ ಶೇ.6ರಷ್ಟು ಮಾತ್ರ ಕಡಿಮೆ ಬೆಲೆಗೆ).

ಡಾಲರಿನ ಎದುರು ರೂಪಾಯಿ ಕುಸಿದಷ್ಟೂ ಕಚ್ಚಾತೈಲಕ್ಕೆ ನಾವು ಕೊಡಬೇಕಾಗಿರುವ ಬೆಲೆ ಜಾಸ್ತಿಯಾಗುತ್ತಲೇ ಹೋಗುತ್ತದೆ. ಇದರಿಂದಾಗಿ ದೇಶದೊಳಗೆ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಗ್ಯಾಸ್‌ನ ಬೆಲೆ ಜಾಸ್ತಿಯಾಗುತ್ತಲೇ ಹೋಗುತ್ತದೆ (ಎಕ್ಸೈಸ್ ಡ್ಯೂಟಿ ಕಡಿಮೆ ಮಾಡಿದಾಗ್ಯೂ ಕೂಡ).

ಈ ಕಾರಣಕ್ಕೇ ಕಳೆದ ಏಪ್ರಿಲ್-ಜೂನ್ ಅವಧಿಯಲ್ಲಿ ಪೆಟ್ರೋಲ್ ಬೆಲೆ ಶೇ.14ರಷ್ಟು ಮತ್ತು ಡೀಸೆಲ್ ಬೆಲೆ ಶೇ.9.3ರಷ್ಟು ಜಾಸ್ತಿಯಾಗಿದೆ. ನಮಗೆಲ್ಲಾ ತಿಳಿದಿರುವಂತೆ ಇದು ಎಲ್ಲಾ ದೈನಂದಿನ ಅಗತ್ಯ ವಸ್ತುಗಳ ಬೆಲೆಯೇರಿಕೆಗೂ ಕಾರಣವಾಗುತ್ತದೆ.

ಹಾಗೆಯೇ ಭಾರತ ದೇಶವು ರಸಗೊಬ್ಬರವನ್ನೂ ಹೆಚ್ಚು ಆಮದು ಮಾಡಿಕೊಳ್ಳುತ್ತಿದ್ದು ರೂಪಾಯಿ ಕುಸಿತದಿಂದಾಗಿ ರಸಗೊಬ್ಬರಕ್ಕೆ ಹೆಚ್ಚಿನ ಬೆಲೆ ತೆರಬೇಕಾಗಿ ಬರುತ್ತಿದೆ. ಇದು ಸರ್ಕಾರದ ಒಟ್ಟಾರೆ ವೆಚ್ಚವನ್ನು ಜಾಸ್ತಿ ಮಾಡುತ್ತಿದ್ದು, ಸರ್ಕಾರ ಸಾರ್ವಜನಿಕ ಸೇವೆಗಳಿಗೆ (ಆರೋಗ್ಯ, ಶಿಕ್ಷಣ, ಮೂಲಭೂತ ಸೌಕರ್ಯ ಇತ್ಯಾದಿ) ಅಗತ್ಯವಾಗಿ ಮಾಡಬೇಕಾದ ವೆಚ್ಚಕ್ಕೆ ಕಡಿವಾಣ ಹಾಕಬೇಕಾದ ಪರಿಸ್ಥಿತಿ ಬರುತ್ತದೆ. ಇದು ಇಡೀ ಸಮಾಜದ ಅಭಿವೃದ್ದಿಯ ಮೇಲೆ ಕೆಟ್ಟ ಪರಿಣಾಮ ಬೀರುವುದಲ್ಲದೆ, ತಪ್ಪಿಸಿಕೊಳ್ಳಲು ಕಷ್ಟವಾಗುವಂತ ಆರ್ಥಿಕ ವಿಷವರ್ತುಲದಲ್ಲಿ ಇಡೀ ದೇಶವನ್ನು ಸಿಲುಕಿಸುತ್ತದೆ.

ರೂಪಾಯಿ ಕುಸಿತದಿಂದ ಲಾಭವೇನಾದರೂ ಇದೆಯೆ?

ಡಾಲರಿನ ಮುಂದೆ ರೂಪಾಯಿಯ ಬೆಲೆ ಕಡಿಮೆಯಾದಷ್ಟೂ ನಾವು ರಫ್ತು ಮಾಡುವ ಸರಕು ಸೇವೆಗಳ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಡಿಮೆಯಾಗುತ್ತದೆ. ಇದರಿಂದ ಸ್ಪರ್ಧಾತ್ಮಕ ಬೆಲೆಗೆ ನಮ್ಮಿಂದ ರಫ್ತಾಗುವ ಸರಕು ಸೇವೆಗಳು ಲಭ್ಯವಾಗಿ ಅದರಿಂದ ರಫ್ತು ಹೆಚ್ಚಾಗುತ್ತಾ ವ್ಯಾಪಾರದ ಕೊರತೆ ಕಡಿಮೆಯಾಗಿ ನಮ್ಮ
ಅರ್ಥವ್ಯವಸ್ಥೆಗೆ ಅನುಕೂಲವಾಗುತ್ತದೆ ಎಂಬ ವಾದವಿದೆ (ಈ ವಾದ ಚೈನಾ, ಜಪಾನುಗಳ ವಿಷಯದಲ್ಲಿ ನಿಜವೂ ಆಗಿದೆ).

ಆದರೆ, ಚೈನಾ ಅಥವಾ ಜಪಾನ್‌ಗಳ ಮಟ್ಟಕ್ಕೆ ರಫ್ತು ವ್ಯವಹಾರದಲ್ಲಿ ಭಾರತ ತಲುಪುವ ಲಕ್ಷಣಗಳು ಹತ್ತಿರದಲ್ಲೆಲ್ಲೂ ಕಾಣಿಸುತ್ತಿಲ್ಲ.

ಹಾಗಿದ್ದರೆ, ಸದ್ಯದಲ್ಲಿ ರೂಪಾಯಿ ಕುಸಿತ ತಡೆಯುವ ದಾರಿಗಳು ಇವೆಯೆ?

ಡಾಲರಿನ ಮುಂದೆ ರೂಪಾಯಿ ಶಕ್ತವಾಗಲು ಸದ್ಯ ಎರಡು ದಾರಿಗಳು ಕಾಣಿಸುತ್ತಿದ್ದರೂ ಅವು ಕ್ಷೀಣವಾದ ಸಾಧ್ಯತೆಗಳಾಗಿವೆ.

ಒಂದು, ಭಾರತದಿಂದ ಹೆಚ್ಚಿನ ಮಟ್ಟದಲ್ಲಿ ರಫ್ತಾಗುತ್ತಿರುವ ಐ.ಟಿ ಸೇವೆಗಳಿಂದ ರೂಪಾಯಿ ಬೆಲೆ ಹೆಚ್ಚಿಸಲು ಸಾಧ್ಯವಿದೆ. ಆದರೆ, ಯೂರೋಪ್ ಮತ್ತು ಅಮೆರಿಕದಲ್ಲಿ ಆರ್ಥಿಕ ಕುಸಿತದ/ ಹಿಂಜರಿತದ ನಿರೀಕ್ಷೆಯಿರುವುದರಿಂದ ಭಾರತದ ಐ.ಟಿ ಸೇವೆಗಳು ನಿರೀಕ್ಷೆಯ ಮಟ್ಟಕ್ಕೆ ರಫ್ತಾಗುವ ಸಾಧ್ಯತೆ ಕ್ಷೀಣವಾಗಿದೆ.

ಹಾಗಾಗಿ, ಐ.ಟಿ ಸೇವೆಗಳ ಹೆಚ್ಚಿನ ರಫ್ತಿನಿಂದ ರೂಪಾಯಿ ಕುಸಿತ ತಡೆಯಬಹುದೆನ್ನುವ ಸಾಧ್ಯತೆಯೂ ಫಲ ಕೊಡದ ಪರಿಸ್ಥಿತಿ ನಿರ್ಮಾಣವಾಗಿದೆ.

ಮತ್ತೊಂದು, ಹೆಚ್ಚಿನ ವಿದೇಶಿ ನೇರ ಬಂಡವಾಳ ಹೂಡಿಕೆಯಿಂದ ಡಾಲರಿನ ಮುಂದೆ ರೂಪಾಯಿ ಬೇಡಿಕೆ ಹೆಚ್ಚಿಸಬಹುದು. ಅದರೆ, ಆರ್ಥಿಕ ಸದೃಢತೆಯ ಕೊರತೆಯಿಂದ ವಿದೇಶಿ ನೇರ ಬಂಡವಾಳವೂ ನಿರೀಕ್ಷಿತ ಮಟ್ಟಕ್ಕೆ ಬರುವುದು ಅಸಾಧ್ಯವಾಗಿದೆ.

ಜೊತೆಗೆ, ನಿರೀಕ್ಷಿತ ಜಾಗತಿಕ ಆರ್ಥಿಕ ಹಿಂಜರಿಕೆಯಿಂದಾಗಿ ಎನ್‌ಆರ್‌ಐಗಳಿಂದ (ವಿದೇಶದಲ್ಲಿ ನೆಲೆಸಿರುವ ಭಾರತೀಯರು) ಭಾರತಕ್ಕೆ ಬರುವ ಹಣವೂ ಕಡಿಮೆಯಾಗುವ ಸಾಧ್ಯತೆಯೇ ಹೆಚ್ಚಿದೆ.

ಹೀಗೆ ಈ ಎಲ್ಲ ವಾಸ್ತವದ ಹಿನ್ನೆಲೆಯಲ್ಲಿ ಸದ್ಯಕ್ಕೆ ರೂಪಾಯಿಯ ಕುಸಿತ ಮತ್ತಷ್ಟು ಜಾಸ್ತಿಯಾಗುವ ಸಾಧ್ಯತೆಗಳೇ ಕಾಣಿಸುತ್ತಿವೆ ಮತ್ತು ಇದರಿಂದ ಜನಸಾಮಾನ್ಯರ ಬದುಕು ಮತ್ತಷ್ಟು ದುಸ್ತರವಾಗುವ ಸಾಧ್ಯತೆಗಳೂ ನಿಚ್ಚಳವಾಗಿ ಗೋಚರಿಸುತ್ತಿವೆ.

ಡಾ. ಬಿ.ಸಿ. ಬಸವರಾಜು

ಡಾ. ಬಿ.ಸಿ. ಬಸವರಾಜು 
ಎಂಜಿನಿಯರಿಂಗ್ ವಿದ್ಯಾಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿರುವ ಬಸವರಾಜು ಹಾಡುಗಾರರೂ, ಪ್ರಚಲಿತ ವಿದ್ಯಮಾನಗಳಿಗೆ ಲೇಖನಗಳು ಮತ್ತು ವಿಡಿಯೋಗಳ ಮೂಲಕ ನಿರಂತರವಾಗಿ ಪ್ರತಿಕ್ರಿಯಿಸುತ್ತಾರೆ.


ಇದನ್ನೂ ಓದಿ: ಅಮೆರಿಕನ್ ಡಾಲರ್‌‌ ಮುಂದೆ 80ರೂ. ತಲುಪಲಿರುವ ಭಾರತೀಯ ರುಪಾಯಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...