Homeಮುಖಪುಟ$1=₹80 ಕಾರಣವೇನು ಮತ್ತು ಪರಿಣಾಮವೇನು?

$1=₹80 ಕಾರಣವೇನು ಮತ್ತು ಪರಿಣಾಮವೇನು?

- Advertisement -
- Advertisement -

ಈ ವರ್ಷದ ಜನವರಿಯಲ್ಲಿ (2022) ಒಂದು ಡಾಲರಿಗೆ, ರೂಪಾಯಿ ಮೌಲ್ಯ 74.50 ಇದ್ದದ್ದು ಆರು ತಿಂಗಳಲ್ಲಿ ನಿರಂತರ ಕುಸಿತ ಕಂಡು ಈಗ ಕೆಲವು ದಿನಗಳ ಹಿಂದೆ ಒಂದು ಡಾಲರಿಗೆ 80 ರೂಪಾಯಿ ದಾಟಿದೆ.

ನಮ್ಮ ದೇಶ ಹೊರದೇಶಗಳೊಂದಿಗೆ ಮಾಡುವ ಒಟ್ಟು ಆಮದು ರಫ್ತಿನಲ್ಲಿ ಶೇ.85.6ರಷ್ಟು ವ್ಯವಹಾರವನ್ನು ಡಾಲರಿನಲ್ಲಿ ಮಾಡುತ್ತದೆ. ಹಾಗಾಗಿ, ಜಾಗತಿಕ ಮಾರುಕಟ್ಟೆಯಲ್ಲಿ ಡಾಲರಿಗೆ ಬೇಡಿಕೆ ಜಾಸ್ತಿಯಾದಷ್ಟೂ ರೂಪಾಯಿಯ ಬೆಲೆ ಕುಸಿಯತೊಡಗುತ್ತದೆ. ಹಾಗೆಯೇ ಭಾರತ ತಾನು ಮಾಡುವ ರಫ್ತಿಗಿಂತ ಆಮದು ಜಾಸ್ತಿಯಾಗುತ್ತಾ ಹೋದಂತೆ ವ್ಯಾಪಾರದ ಕೊರತೆ ಜಾಸ್ತಿಯಾಗುವ ಜೊತೆಗೆ ಡಾಲರಿನ ಮುಂದೆ ರೂಪಾಯಿ ಬೆಲೆಯೂ ಕುಸಿಯುತ್ತಾ ಹೋಗುತ್ತದೆ.

2021ರ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್‌ನಿಂದ ಜೂನ್) 31 ಬಿಲಿಯನ್ ಡಾಲರುಗಳಷ್ಟಿದ್ದ ವ್ಯಾಪಾರದ ಕೊರತೆಯು (Trade deficit) ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ 71 ಬಿಲಿಯನ್ ಡಾಲರುಗಳಷ್ಟಾಗಿದೆ. (ರಪ್ತು $119 ಬಿಲಿಯನ್ ಮತ್ತು ಆಮದು $190 ಬಿಲಿಯನ್). ಇದು ದಾಖಲೆ ಮಟ್ಟದ ವ್ಯಾಪಾರದ ಕೊರತೆಯಾಗಿದ್ದು ಡಾಲರಿನ ಮುಂದೆ ರೂಪಾಯಿ ಕುಸಿಯಲು ಒಂದು ಮುಖ್ಯ ಕಾರಣವಾದಂತಿದೆ.

ಹಾಗೆಯೇ ಕಡೆಯ ಎಂಟು ತಿಂಗಳುಗಳಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು (Foreign Institutional Investors, FII) ಭಾರತದ ಮಾರುಕಟ್ಟೆಯಿಂದ 2.65 ಲಕ್ಷ ಕೋಟಿಯಷ್ಟು ಭಾರೀ ಮೊತ್ತದ ಹಣವನ್ನು ಹಿಂತೆಗೆದುಕೊಂಡಿದ್ದಾರೆ. ಅವರುಗಳು ಈ ಹಿಂತೆಗೆದಿರುವ ಹಣವನ್ನು ಡಾಲರಿಗೆ ಬದಲಾಯಿಸಿಕೊಳ್ಳುತ್ತಿರುವುದರಿಂದ ಡಾಲರಿಗೆ ಬೇಡಿಕೆ ಹೆಚ್ಚಾಗಿ, ಇದರಿಂದಲೂ ರೂಪಾಯಿ ಬೆಲೆ ಕುಸಿಯುತ್ತಾ ಬಂದಿದೆ.

ಒಂದು ಪಕ್ಷದಲ್ಲಿ ಇದೇ ಪರಿಸ್ಥಿತಿ ಉಲ್ಟಾ ಆಗಿದ್ದು, ಹೆಚ್ಚು ಡಾಲರು ಭಾರತದ ಮಾರುಕಟ್ಟಯಲ್ಲಿ ಹೂಡಿಕೆಯಾಗಿದ್ದರೆ ಆಗ ರೂಪಾಯಿಗೆ ಬೇಡಿಕೆ ಜಾಸ್ತಿಯಾಗಿರುತ್ತಿತ್ತು.

ಹೀಗೆ ಡಾಲರಿನ ಮುಂದೆ ರೂಪಾಯಿ ಬೆಲೆ ಕುಸಿಯುತ್ತಿರುವುದರಿಂದ ನಮ್ಮ ಮೇಲೆ ಏನು ಪರಿಣಾಮ ಬೀರುತ್ತಿದೆ?

2021-22ರಲ್ಲಿ ನಮಗೆ ಬೇಕಾದ ಒಟ್ಟು ಕಚ್ಚಾತೈಲದಲ್ಲಿ ಶೇ.85.6ರಷ್ಟನ್ನು ಆಮದು ಮಾಡಿಕೊಂಡಿದ್ದೇವೆ. ಈ ಕಚ್ಚಾತೈಲಕ್ಕೆ ನಾವು ಡಾಲರಿನಲ್ಲಿಯೆ ಪಾವತಿಸುತ್ತಿದ್ದೇವೆ. (ರಷ್ಯಾದಿಂದ ಶೇ.10ರಷ್ಟು ತೈಲ ಮಾತ್ರ ಖರೀದಿಸುತ್ತಿದ್ದೇವೆ, ಅದೂ ಕೇವಲ ಶೇ.6ರಷ್ಟು ಮಾತ್ರ ಕಡಿಮೆ ಬೆಲೆಗೆ).

ಡಾಲರಿನ ಎದುರು ರೂಪಾಯಿ ಕುಸಿದಷ್ಟೂ ಕಚ್ಚಾತೈಲಕ್ಕೆ ನಾವು ಕೊಡಬೇಕಾಗಿರುವ ಬೆಲೆ ಜಾಸ್ತಿಯಾಗುತ್ತಲೇ ಹೋಗುತ್ತದೆ. ಇದರಿಂದಾಗಿ ದೇಶದೊಳಗೆ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಗ್ಯಾಸ್‌ನ ಬೆಲೆ ಜಾಸ್ತಿಯಾಗುತ್ತಲೇ ಹೋಗುತ್ತದೆ (ಎಕ್ಸೈಸ್ ಡ್ಯೂಟಿ ಕಡಿಮೆ ಮಾಡಿದಾಗ್ಯೂ ಕೂಡ).

ಈ ಕಾರಣಕ್ಕೇ ಕಳೆದ ಏಪ್ರಿಲ್-ಜೂನ್ ಅವಧಿಯಲ್ಲಿ ಪೆಟ್ರೋಲ್ ಬೆಲೆ ಶೇ.14ರಷ್ಟು ಮತ್ತು ಡೀಸೆಲ್ ಬೆಲೆ ಶೇ.9.3ರಷ್ಟು ಜಾಸ್ತಿಯಾಗಿದೆ. ನಮಗೆಲ್ಲಾ ತಿಳಿದಿರುವಂತೆ ಇದು ಎಲ್ಲಾ ದೈನಂದಿನ ಅಗತ್ಯ ವಸ್ತುಗಳ ಬೆಲೆಯೇರಿಕೆಗೂ ಕಾರಣವಾಗುತ್ತದೆ.

ಹಾಗೆಯೇ ಭಾರತ ದೇಶವು ರಸಗೊಬ್ಬರವನ್ನೂ ಹೆಚ್ಚು ಆಮದು ಮಾಡಿಕೊಳ್ಳುತ್ತಿದ್ದು ರೂಪಾಯಿ ಕುಸಿತದಿಂದಾಗಿ ರಸಗೊಬ್ಬರಕ್ಕೆ ಹೆಚ್ಚಿನ ಬೆಲೆ ತೆರಬೇಕಾಗಿ ಬರುತ್ತಿದೆ. ಇದು ಸರ್ಕಾರದ ಒಟ್ಟಾರೆ ವೆಚ್ಚವನ್ನು ಜಾಸ್ತಿ ಮಾಡುತ್ತಿದ್ದು, ಸರ್ಕಾರ ಸಾರ್ವಜನಿಕ ಸೇವೆಗಳಿಗೆ (ಆರೋಗ್ಯ, ಶಿಕ್ಷಣ, ಮೂಲಭೂತ ಸೌಕರ್ಯ ಇತ್ಯಾದಿ) ಅಗತ್ಯವಾಗಿ ಮಾಡಬೇಕಾದ ವೆಚ್ಚಕ್ಕೆ ಕಡಿವಾಣ ಹಾಕಬೇಕಾದ ಪರಿಸ್ಥಿತಿ ಬರುತ್ತದೆ. ಇದು ಇಡೀ ಸಮಾಜದ ಅಭಿವೃದ್ದಿಯ ಮೇಲೆ ಕೆಟ್ಟ ಪರಿಣಾಮ ಬೀರುವುದಲ್ಲದೆ, ತಪ್ಪಿಸಿಕೊಳ್ಳಲು ಕಷ್ಟವಾಗುವಂತ ಆರ್ಥಿಕ ವಿಷವರ್ತುಲದಲ್ಲಿ ಇಡೀ ದೇಶವನ್ನು ಸಿಲುಕಿಸುತ್ತದೆ.

ರೂಪಾಯಿ ಕುಸಿತದಿಂದ ಲಾಭವೇನಾದರೂ ಇದೆಯೆ?

ಡಾಲರಿನ ಮುಂದೆ ರೂಪಾಯಿಯ ಬೆಲೆ ಕಡಿಮೆಯಾದಷ್ಟೂ ನಾವು ರಫ್ತು ಮಾಡುವ ಸರಕು ಸೇವೆಗಳ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಡಿಮೆಯಾಗುತ್ತದೆ. ಇದರಿಂದ ಸ್ಪರ್ಧಾತ್ಮಕ ಬೆಲೆಗೆ ನಮ್ಮಿಂದ ರಫ್ತಾಗುವ ಸರಕು ಸೇವೆಗಳು ಲಭ್ಯವಾಗಿ ಅದರಿಂದ ರಫ್ತು ಹೆಚ್ಚಾಗುತ್ತಾ ವ್ಯಾಪಾರದ ಕೊರತೆ ಕಡಿಮೆಯಾಗಿ ನಮ್ಮ
ಅರ್ಥವ್ಯವಸ್ಥೆಗೆ ಅನುಕೂಲವಾಗುತ್ತದೆ ಎಂಬ ವಾದವಿದೆ (ಈ ವಾದ ಚೈನಾ, ಜಪಾನುಗಳ ವಿಷಯದಲ್ಲಿ ನಿಜವೂ ಆಗಿದೆ).

ಆದರೆ, ಚೈನಾ ಅಥವಾ ಜಪಾನ್‌ಗಳ ಮಟ್ಟಕ್ಕೆ ರಫ್ತು ವ್ಯವಹಾರದಲ್ಲಿ ಭಾರತ ತಲುಪುವ ಲಕ್ಷಣಗಳು ಹತ್ತಿರದಲ್ಲೆಲ್ಲೂ ಕಾಣಿಸುತ್ತಿಲ್ಲ.

ಹಾಗಿದ್ದರೆ, ಸದ್ಯದಲ್ಲಿ ರೂಪಾಯಿ ಕುಸಿತ ತಡೆಯುವ ದಾರಿಗಳು ಇವೆಯೆ?

ಡಾಲರಿನ ಮುಂದೆ ರೂಪಾಯಿ ಶಕ್ತವಾಗಲು ಸದ್ಯ ಎರಡು ದಾರಿಗಳು ಕಾಣಿಸುತ್ತಿದ್ದರೂ ಅವು ಕ್ಷೀಣವಾದ ಸಾಧ್ಯತೆಗಳಾಗಿವೆ.

ಒಂದು, ಭಾರತದಿಂದ ಹೆಚ್ಚಿನ ಮಟ್ಟದಲ್ಲಿ ರಫ್ತಾಗುತ್ತಿರುವ ಐ.ಟಿ ಸೇವೆಗಳಿಂದ ರೂಪಾಯಿ ಬೆಲೆ ಹೆಚ್ಚಿಸಲು ಸಾಧ್ಯವಿದೆ. ಆದರೆ, ಯೂರೋಪ್ ಮತ್ತು ಅಮೆರಿಕದಲ್ಲಿ ಆರ್ಥಿಕ ಕುಸಿತದ/ ಹಿಂಜರಿತದ ನಿರೀಕ್ಷೆಯಿರುವುದರಿಂದ ಭಾರತದ ಐ.ಟಿ ಸೇವೆಗಳು ನಿರೀಕ್ಷೆಯ ಮಟ್ಟಕ್ಕೆ ರಫ್ತಾಗುವ ಸಾಧ್ಯತೆ ಕ್ಷೀಣವಾಗಿದೆ.

ಹಾಗಾಗಿ, ಐ.ಟಿ ಸೇವೆಗಳ ಹೆಚ್ಚಿನ ರಫ್ತಿನಿಂದ ರೂಪಾಯಿ ಕುಸಿತ ತಡೆಯಬಹುದೆನ್ನುವ ಸಾಧ್ಯತೆಯೂ ಫಲ ಕೊಡದ ಪರಿಸ್ಥಿತಿ ನಿರ್ಮಾಣವಾಗಿದೆ.

ಮತ್ತೊಂದು, ಹೆಚ್ಚಿನ ವಿದೇಶಿ ನೇರ ಬಂಡವಾಳ ಹೂಡಿಕೆಯಿಂದ ಡಾಲರಿನ ಮುಂದೆ ರೂಪಾಯಿ ಬೇಡಿಕೆ ಹೆಚ್ಚಿಸಬಹುದು. ಅದರೆ, ಆರ್ಥಿಕ ಸದೃಢತೆಯ ಕೊರತೆಯಿಂದ ವಿದೇಶಿ ನೇರ ಬಂಡವಾಳವೂ ನಿರೀಕ್ಷಿತ ಮಟ್ಟಕ್ಕೆ ಬರುವುದು ಅಸಾಧ್ಯವಾಗಿದೆ.

ಜೊತೆಗೆ, ನಿರೀಕ್ಷಿತ ಜಾಗತಿಕ ಆರ್ಥಿಕ ಹಿಂಜರಿಕೆಯಿಂದಾಗಿ ಎನ್‌ಆರ್‌ಐಗಳಿಂದ (ವಿದೇಶದಲ್ಲಿ ನೆಲೆಸಿರುವ ಭಾರತೀಯರು) ಭಾರತಕ್ಕೆ ಬರುವ ಹಣವೂ ಕಡಿಮೆಯಾಗುವ ಸಾಧ್ಯತೆಯೇ ಹೆಚ್ಚಿದೆ.

ಹೀಗೆ ಈ ಎಲ್ಲ ವಾಸ್ತವದ ಹಿನ್ನೆಲೆಯಲ್ಲಿ ಸದ್ಯಕ್ಕೆ ರೂಪಾಯಿಯ ಕುಸಿತ ಮತ್ತಷ್ಟು ಜಾಸ್ತಿಯಾಗುವ ಸಾಧ್ಯತೆಗಳೇ ಕಾಣಿಸುತ್ತಿವೆ ಮತ್ತು ಇದರಿಂದ ಜನಸಾಮಾನ್ಯರ ಬದುಕು ಮತ್ತಷ್ಟು ದುಸ್ತರವಾಗುವ ಸಾಧ್ಯತೆಗಳೂ ನಿಚ್ಚಳವಾಗಿ ಗೋಚರಿಸುತ್ತಿವೆ.

ಡಾ. ಬಿ.ಸಿ. ಬಸವರಾಜು

ಡಾ. ಬಿ.ಸಿ. ಬಸವರಾಜು 
ಎಂಜಿನಿಯರಿಂಗ್ ವಿದ್ಯಾಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿರುವ ಬಸವರಾಜು ಹಾಡುಗಾರರೂ, ಪ್ರಚಲಿತ ವಿದ್ಯಮಾನಗಳಿಗೆ ಲೇಖನಗಳು ಮತ್ತು ವಿಡಿಯೋಗಳ ಮೂಲಕ ನಿರಂತರವಾಗಿ ಪ್ರತಿಕ್ರಿಯಿಸುತ್ತಾರೆ.


ಇದನ್ನೂ ಓದಿ: ಅಮೆರಿಕನ್ ಡಾಲರ್‌‌ ಮುಂದೆ 80ರೂ. ತಲುಪಲಿರುವ ಭಾರತೀಯ ರುಪಾಯಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...