Homeಮುಖಪುಟ$1=₹80 ಕಾರಣವೇನು ಮತ್ತು ಪರಿಣಾಮವೇನು?

$1=₹80 ಕಾರಣವೇನು ಮತ್ತು ಪರಿಣಾಮವೇನು?

- Advertisement -
- Advertisement -

ಈ ವರ್ಷದ ಜನವರಿಯಲ್ಲಿ (2022) ಒಂದು ಡಾಲರಿಗೆ, ರೂಪಾಯಿ ಮೌಲ್ಯ 74.50 ಇದ್ದದ್ದು ಆರು ತಿಂಗಳಲ್ಲಿ ನಿರಂತರ ಕುಸಿತ ಕಂಡು ಈಗ ಕೆಲವು ದಿನಗಳ ಹಿಂದೆ ಒಂದು ಡಾಲರಿಗೆ 80 ರೂಪಾಯಿ ದಾಟಿದೆ.

ನಮ್ಮ ದೇಶ ಹೊರದೇಶಗಳೊಂದಿಗೆ ಮಾಡುವ ಒಟ್ಟು ಆಮದು ರಫ್ತಿನಲ್ಲಿ ಶೇ.85.6ರಷ್ಟು ವ್ಯವಹಾರವನ್ನು ಡಾಲರಿನಲ್ಲಿ ಮಾಡುತ್ತದೆ. ಹಾಗಾಗಿ, ಜಾಗತಿಕ ಮಾರುಕಟ್ಟೆಯಲ್ಲಿ ಡಾಲರಿಗೆ ಬೇಡಿಕೆ ಜಾಸ್ತಿಯಾದಷ್ಟೂ ರೂಪಾಯಿಯ ಬೆಲೆ ಕುಸಿಯತೊಡಗುತ್ತದೆ. ಹಾಗೆಯೇ ಭಾರತ ತಾನು ಮಾಡುವ ರಫ್ತಿಗಿಂತ ಆಮದು ಜಾಸ್ತಿಯಾಗುತ್ತಾ ಹೋದಂತೆ ವ್ಯಾಪಾರದ ಕೊರತೆ ಜಾಸ್ತಿಯಾಗುವ ಜೊತೆಗೆ ಡಾಲರಿನ ಮುಂದೆ ರೂಪಾಯಿ ಬೆಲೆಯೂ ಕುಸಿಯುತ್ತಾ ಹೋಗುತ್ತದೆ.

2021ರ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್‌ನಿಂದ ಜೂನ್) 31 ಬಿಲಿಯನ್ ಡಾಲರುಗಳಷ್ಟಿದ್ದ ವ್ಯಾಪಾರದ ಕೊರತೆಯು (Trade deficit) ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ 71 ಬಿಲಿಯನ್ ಡಾಲರುಗಳಷ್ಟಾಗಿದೆ. (ರಪ್ತು $119 ಬಿಲಿಯನ್ ಮತ್ತು ಆಮದು $190 ಬಿಲಿಯನ್). ಇದು ದಾಖಲೆ ಮಟ್ಟದ ವ್ಯಾಪಾರದ ಕೊರತೆಯಾಗಿದ್ದು ಡಾಲರಿನ ಮುಂದೆ ರೂಪಾಯಿ ಕುಸಿಯಲು ಒಂದು ಮುಖ್ಯ ಕಾರಣವಾದಂತಿದೆ.

ಹಾಗೆಯೇ ಕಡೆಯ ಎಂಟು ತಿಂಗಳುಗಳಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು (Foreign Institutional Investors, FII) ಭಾರತದ ಮಾರುಕಟ್ಟೆಯಿಂದ 2.65 ಲಕ್ಷ ಕೋಟಿಯಷ್ಟು ಭಾರೀ ಮೊತ್ತದ ಹಣವನ್ನು ಹಿಂತೆಗೆದುಕೊಂಡಿದ್ದಾರೆ. ಅವರುಗಳು ಈ ಹಿಂತೆಗೆದಿರುವ ಹಣವನ್ನು ಡಾಲರಿಗೆ ಬದಲಾಯಿಸಿಕೊಳ್ಳುತ್ತಿರುವುದರಿಂದ ಡಾಲರಿಗೆ ಬೇಡಿಕೆ ಹೆಚ್ಚಾಗಿ, ಇದರಿಂದಲೂ ರೂಪಾಯಿ ಬೆಲೆ ಕುಸಿಯುತ್ತಾ ಬಂದಿದೆ.

ಒಂದು ಪಕ್ಷದಲ್ಲಿ ಇದೇ ಪರಿಸ್ಥಿತಿ ಉಲ್ಟಾ ಆಗಿದ್ದು, ಹೆಚ್ಚು ಡಾಲರು ಭಾರತದ ಮಾರುಕಟ್ಟಯಲ್ಲಿ ಹೂಡಿಕೆಯಾಗಿದ್ದರೆ ಆಗ ರೂಪಾಯಿಗೆ ಬೇಡಿಕೆ ಜಾಸ್ತಿಯಾಗಿರುತ್ತಿತ್ತು.

ಹೀಗೆ ಡಾಲರಿನ ಮುಂದೆ ರೂಪಾಯಿ ಬೆಲೆ ಕುಸಿಯುತ್ತಿರುವುದರಿಂದ ನಮ್ಮ ಮೇಲೆ ಏನು ಪರಿಣಾಮ ಬೀರುತ್ತಿದೆ?

2021-22ರಲ್ಲಿ ನಮಗೆ ಬೇಕಾದ ಒಟ್ಟು ಕಚ್ಚಾತೈಲದಲ್ಲಿ ಶೇ.85.6ರಷ್ಟನ್ನು ಆಮದು ಮಾಡಿಕೊಂಡಿದ್ದೇವೆ. ಈ ಕಚ್ಚಾತೈಲಕ್ಕೆ ನಾವು ಡಾಲರಿನಲ್ಲಿಯೆ ಪಾವತಿಸುತ್ತಿದ್ದೇವೆ. (ರಷ್ಯಾದಿಂದ ಶೇ.10ರಷ್ಟು ತೈಲ ಮಾತ್ರ ಖರೀದಿಸುತ್ತಿದ್ದೇವೆ, ಅದೂ ಕೇವಲ ಶೇ.6ರಷ್ಟು ಮಾತ್ರ ಕಡಿಮೆ ಬೆಲೆಗೆ).

ಡಾಲರಿನ ಎದುರು ರೂಪಾಯಿ ಕುಸಿದಷ್ಟೂ ಕಚ್ಚಾತೈಲಕ್ಕೆ ನಾವು ಕೊಡಬೇಕಾಗಿರುವ ಬೆಲೆ ಜಾಸ್ತಿಯಾಗುತ್ತಲೇ ಹೋಗುತ್ತದೆ. ಇದರಿಂದಾಗಿ ದೇಶದೊಳಗೆ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಗ್ಯಾಸ್‌ನ ಬೆಲೆ ಜಾಸ್ತಿಯಾಗುತ್ತಲೇ ಹೋಗುತ್ತದೆ (ಎಕ್ಸೈಸ್ ಡ್ಯೂಟಿ ಕಡಿಮೆ ಮಾಡಿದಾಗ್ಯೂ ಕೂಡ).

ಈ ಕಾರಣಕ್ಕೇ ಕಳೆದ ಏಪ್ರಿಲ್-ಜೂನ್ ಅವಧಿಯಲ್ಲಿ ಪೆಟ್ರೋಲ್ ಬೆಲೆ ಶೇ.14ರಷ್ಟು ಮತ್ತು ಡೀಸೆಲ್ ಬೆಲೆ ಶೇ.9.3ರಷ್ಟು ಜಾಸ್ತಿಯಾಗಿದೆ. ನಮಗೆಲ್ಲಾ ತಿಳಿದಿರುವಂತೆ ಇದು ಎಲ್ಲಾ ದೈನಂದಿನ ಅಗತ್ಯ ವಸ್ತುಗಳ ಬೆಲೆಯೇರಿಕೆಗೂ ಕಾರಣವಾಗುತ್ತದೆ.

ಹಾಗೆಯೇ ಭಾರತ ದೇಶವು ರಸಗೊಬ್ಬರವನ್ನೂ ಹೆಚ್ಚು ಆಮದು ಮಾಡಿಕೊಳ್ಳುತ್ತಿದ್ದು ರೂಪಾಯಿ ಕುಸಿತದಿಂದಾಗಿ ರಸಗೊಬ್ಬರಕ್ಕೆ ಹೆಚ್ಚಿನ ಬೆಲೆ ತೆರಬೇಕಾಗಿ ಬರುತ್ತಿದೆ. ಇದು ಸರ್ಕಾರದ ಒಟ್ಟಾರೆ ವೆಚ್ಚವನ್ನು ಜಾಸ್ತಿ ಮಾಡುತ್ತಿದ್ದು, ಸರ್ಕಾರ ಸಾರ್ವಜನಿಕ ಸೇವೆಗಳಿಗೆ (ಆರೋಗ್ಯ, ಶಿಕ್ಷಣ, ಮೂಲಭೂತ ಸೌಕರ್ಯ ಇತ್ಯಾದಿ) ಅಗತ್ಯವಾಗಿ ಮಾಡಬೇಕಾದ ವೆಚ್ಚಕ್ಕೆ ಕಡಿವಾಣ ಹಾಕಬೇಕಾದ ಪರಿಸ್ಥಿತಿ ಬರುತ್ತದೆ. ಇದು ಇಡೀ ಸಮಾಜದ ಅಭಿವೃದ್ದಿಯ ಮೇಲೆ ಕೆಟ್ಟ ಪರಿಣಾಮ ಬೀರುವುದಲ್ಲದೆ, ತಪ್ಪಿಸಿಕೊಳ್ಳಲು ಕಷ್ಟವಾಗುವಂತ ಆರ್ಥಿಕ ವಿಷವರ್ತುಲದಲ್ಲಿ ಇಡೀ ದೇಶವನ್ನು ಸಿಲುಕಿಸುತ್ತದೆ.

ರೂಪಾಯಿ ಕುಸಿತದಿಂದ ಲಾಭವೇನಾದರೂ ಇದೆಯೆ?

ಡಾಲರಿನ ಮುಂದೆ ರೂಪಾಯಿಯ ಬೆಲೆ ಕಡಿಮೆಯಾದಷ್ಟೂ ನಾವು ರಫ್ತು ಮಾಡುವ ಸರಕು ಸೇವೆಗಳ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಡಿಮೆಯಾಗುತ್ತದೆ. ಇದರಿಂದ ಸ್ಪರ್ಧಾತ್ಮಕ ಬೆಲೆಗೆ ನಮ್ಮಿಂದ ರಫ್ತಾಗುವ ಸರಕು ಸೇವೆಗಳು ಲಭ್ಯವಾಗಿ ಅದರಿಂದ ರಫ್ತು ಹೆಚ್ಚಾಗುತ್ತಾ ವ್ಯಾಪಾರದ ಕೊರತೆ ಕಡಿಮೆಯಾಗಿ ನಮ್ಮ
ಅರ್ಥವ್ಯವಸ್ಥೆಗೆ ಅನುಕೂಲವಾಗುತ್ತದೆ ಎಂಬ ವಾದವಿದೆ (ಈ ವಾದ ಚೈನಾ, ಜಪಾನುಗಳ ವಿಷಯದಲ್ಲಿ ನಿಜವೂ ಆಗಿದೆ).

ಆದರೆ, ಚೈನಾ ಅಥವಾ ಜಪಾನ್‌ಗಳ ಮಟ್ಟಕ್ಕೆ ರಫ್ತು ವ್ಯವಹಾರದಲ್ಲಿ ಭಾರತ ತಲುಪುವ ಲಕ್ಷಣಗಳು ಹತ್ತಿರದಲ್ಲೆಲ್ಲೂ ಕಾಣಿಸುತ್ತಿಲ್ಲ.

ಹಾಗಿದ್ದರೆ, ಸದ್ಯದಲ್ಲಿ ರೂಪಾಯಿ ಕುಸಿತ ತಡೆಯುವ ದಾರಿಗಳು ಇವೆಯೆ?

ಡಾಲರಿನ ಮುಂದೆ ರೂಪಾಯಿ ಶಕ್ತವಾಗಲು ಸದ್ಯ ಎರಡು ದಾರಿಗಳು ಕಾಣಿಸುತ್ತಿದ್ದರೂ ಅವು ಕ್ಷೀಣವಾದ ಸಾಧ್ಯತೆಗಳಾಗಿವೆ.

ಒಂದು, ಭಾರತದಿಂದ ಹೆಚ್ಚಿನ ಮಟ್ಟದಲ್ಲಿ ರಫ್ತಾಗುತ್ತಿರುವ ಐ.ಟಿ ಸೇವೆಗಳಿಂದ ರೂಪಾಯಿ ಬೆಲೆ ಹೆಚ್ಚಿಸಲು ಸಾಧ್ಯವಿದೆ. ಆದರೆ, ಯೂರೋಪ್ ಮತ್ತು ಅಮೆರಿಕದಲ್ಲಿ ಆರ್ಥಿಕ ಕುಸಿತದ/ ಹಿಂಜರಿತದ ನಿರೀಕ್ಷೆಯಿರುವುದರಿಂದ ಭಾರತದ ಐ.ಟಿ ಸೇವೆಗಳು ನಿರೀಕ್ಷೆಯ ಮಟ್ಟಕ್ಕೆ ರಫ್ತಾಗುವ ಸಾಧ್ಯತೆ ಕ್ಷೀಣವಾಗಿದೆ.

ಹಾಗಾಗಿ, ಐ.ಟಿ ಸೇವೆಗಳ ಹೆಚ್ಚಿನ ರಫ್ತಿನಿಂದ ರೂಪಾಯಿ ಕುಸಿತ ತಡೆಯಬಹುದೆನ್ನುವ ಸಾಧ್ಯತೆಯೂ ಫಲ ಕೊಡದ ಪರಿಸ್ಥಿತಿ ನಿರ್ಮಾಣವಾಗಿದೆ.

ಮತ್ತೊಂದು, ಹೆಚ್ಚಿನ ವಿದೇಶಿ ನೇರ ಬಂಡವಾಳ ಹೂಡಿಕೆಯಿಂದ ಡಾಲರಿನ ಮುಂದೆ ರೂಪಾಯಿ ಬೇಡಿಕೆ ಹೆಚ್ಚಿಸಬಹುದು. ಅದರೆ, ಆರ್ಥಿಕ ಸದೃಢತೆಯ ಕೊರತೆಯಿಂದ ವಿದೇಶಿ ನೇರ ಬಂಡವಾಳವೂ ನಿರೀಕ್ಷಿತ ಮಟ್ಟಕ್ಕೆ ಬರುವುದು ಅಸಾಧ್ಯವಾಗಿದೆ.

ಜೊತೆಗೆ, ನಿರೀಕ್ಷಿತ ಜಾಗತಿಕ ಆರ್ಥಿಕ ಹಿಂಜರಿಕೆಯಿಂದಾಗಿ ಎನ್‌ಆರ್‌ಐಗಳಿಂದ (ವಿದೇಶದಲ್ಲಿ ನೆಲೆಸಿರುವ ಭಾರತೀಯರು) ಭಾರತಕ್ಕೆ ಬರುವ ಹಣವೂ ಕಡಿಮೆಯಾಗುವ ಸಾಧ್ಯತೆಯೇ ಹೆಚ್ಚಿದೆ.

ಹೀಗೆ ಈ ಎಲ್ಲ ವಾಸ್ತವದ ಹಿನ್ನೆಲೆಯಲ್ಲಿ ಸದ್ಯಕ್ಕೆ ರೂಪಾಯಿಯ ಕುಸಿತ ಮತ್ತಷ್ಟು ಜಾಸ್ತಿಯಾಗುವ ಸಾಧ್ಯತೆಗಳೇ ಕಾಣಿಸುತ್ತಿವೆ ಮತ್ತು ಇದರಿಂದ ಜನಸಾಮಾನ್ಯರ ಬದುಕು ಮತ್ತಷ್ಟು ದುಸ್ತರವಾಗುವ ಸಾಧ್ಯತೆಗಳೂ ನಿಚ್ಚಳವಾಗಿ ಗೋಚರಿಸುತ್ತಿವೆ.

ಡಾ. ಬಿ.ಸಿ. ಬಸವರಾಜು

ಡಾ. ಬಿ.ಸಿ. ಬಸವರಾಜು 
ಎಂಜಿನಿಯರಿಂಗ್ ವಿದ್ಯಾಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿರುವ ಬಸವರಾಜು ಹಾಡುಗಾರರೂ, ಪ್ರಚಲಿತ ವಿದ್ಯಮಾನಗಳಿಗೆ ಲೇಖನಗಳು ಮತ್ತು ವಿಡಿಯೋಗಳ ಮೂಲಕ ನಿರಂತರವಾಗಿ ಪ್ರತಿಕ್ರಿಯಿಸುತ್ತಾರೆ.


ಇದನ್ನೂ ಓದಿ: ಅಮೆರಿಕನ್ ಡಾಲರ್‌‌ ಮುಂದೆ 80ರೂ. ತಲುಪಲಿರುವ ಭಾರತೀಯ ರುಪಾಯಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...