Homeಮುಖಪುಟ$1=₹80 ಕಾರಣವೇನು ಮತ್ತು ಪರಿಣಾಮವೇನು?

$1=₹80 ಕಾರಣವೇನು ಮತ್ತು ಪರಿಣಾಮವೇನು?

- Advertisement -
- Advertisement -

ಈ ವರ್ಷದ ಜನವರಿಯಲ್ಲಿ (2022) ಒಂದು ಡಾಲರಿಗೆ, ರೂಪಾಯಿ ಮೌಲ್ಯ 74.50 ಇದ್ದದ್ದು ಆರು ತಿಂಗಳಲ್ಲಿ ನಿರಂತರ ಕುಸಿತ ಕಂಡು ಈಗ ಕೆಲವು ದಿನಗಳ ಹಿಂದೆ ಒಂದು ಡಾಲರಿಗೆ 80 ರೂಪಾಯಿ ದಾಟಿದೆ.

ನಮ್ಮ ದೇಶ ಹೊರದೇಶಗಳೊಂದಿಗೆ ಮಾಡುವ ಒಟ್ಟು ಆಮದು ರಫ್ತಿನಲ್ಲಿ ಶೇ.85.6ರಷ್ಟು ವ್ಯವಹಾರವನ್ನು ಡಾಲರಿನಲ್ಲಿ ಮಾಡುತ್ತದೆ. ಹಾಗಾಗಿ, ಜಾಗತಿಕ ಮಾರುಕಟ್ಟೆಯಲ್ಲಿ ಡಾಲರಿಗೆ ಬೇಡಿಕೆ ಜಾಸ್ತಿಯಾದಷ್ಟೂ ರೂಪಾಯಿಯ ಬೆಲೆ ಕುಸಿಯತೊಡಗುತ್ತದೆ. ಹಾಗೆಯೇ ಭಾರತ ತಾನು ಮಾಡುವ ರಫ್ತಿಗಿಂತ ಆಮದು ಜಾಸ್ತಿಯಾಗುತ್ತಾ ಹೋದಂತೆ ವ್ಯಾಪಾರದ ಕೊರತೆ ಜಾಸ್ತಿಯಾಗುವ ಜೊತೆಗೆ ಡಾಲರಿನ ಮುಂದೆ ರೂಪಾಯಿ ಬೆಲೆಯೂ ಕುಸಿಯುತ್ತಾ ಹೋಗುತ್ತದೆ.

2021ರ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್‌ನಿಂದ ಜೂನ್) 31 ಬಿಲಿಯನ್ ಡಾಲರುಗಳಷ್ಟಿದ್ದ ವ್ಯಾಪಾರದ ಕೊರತೆಯು (Trade deficit) ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ 71 ಬಿಲಿಯನ್ ಡಾಲರುಗಳಷ್ಟಾಗಿದೆ. (ರಪ್ತು $119 ಬಿಲಿಯನ್ ಮತ್ತು ಆಮದು $190 ಬಿಲಿಯನ್). ಇದು ದಾಖಲೆ ಮಟ್ಟದ ವ್ಯಾಪಾರದ ಕೊರತೆಯಾಗಿದ್ದು ಡಾಲರಿನ ಮುಂದೆ ರೂಪಾಯಿ ಕುಸಿಯಲು ಒಂದು ಮುಖ್ಯ ಕಾರಣವಾದಂತಿದೆ.

ಹಾಗೆಯೇ ಕಡೆಯ ಎಂಟು ತಿಂಗಳುಗಳಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು (Foreign Institutional Investors, FII) ಭಾರತದ ಮಾರುಕಟ್ಟೆಯಿಂದ 2.65 ಲಕ್ಷ ಕೋಟಿಯಷ್ಟು ಭಾರೀ ಮೊತ್ತದ ಹಣವನ್ನು ಹಿಂತೆಗೆದುಕೊಂಡಿದ್ದಾರೆ. ಅವರುಗಳು ಈ ಹಿಂತೆಗೆದಿರುವ ಹಣವನ್ನು ಡಾಲರಿಗೆ ಬದಲಾಯಿಸಿಕೊಳ್ಳುತ್ತಿರುವುದರಿಂದ ಡಾಲರಿಗೆ ಬೇಡಿಕೆ ಹೆಚ್ಚಾಗಿ, ಇದರಿಂದಲೂ ರೂಪಾಯಿ ಬೆಲೆ ಕುಸಿಯುತ್ತಾ ಬಂದಿದೆ.

ಒಂದು ಪಕ್ಷದಲ್ಲಿ ಇದೇ ಪರಿಸ್ಥಿತಿ ಉಲ್ಟಾ ಆಗಿದ್ದು, ಹೆಚ್ಚು ಡಾಲರು ಭಾರತದ ಮಾರುಕಟ್ಟಯಲ್ಲಿ ಹೂಡಿಕೆಯಾಗಿದ್ದರೆ ಆಗ ರೂಪಾಯಿಗೆ ಬೇಡಿಕೆ ಜಾಸ್ತಿಯಾಗಿರುತ್ತಿತ್ತು.

ಹೀಗೆ ಡಾಲರಿನ ಮುಂದೆ ರೂಪಾಯಿ ಬೆಲೆ ಕುಸಿಯುತ್ತಿರುವುದರಿಂದ ನಮ್ಮ ಮೇಲೆ ಏನು ಪರಿಣಾಮ ಬೀರುತ್ತಿದೆ?

2021-22ರಲ್ಲಿ ನಮಗೆ ಬೇಕಾದ ಒಟ್ಟು ಕಚ್ಚಾತೈಲದಲ್ಲಿ ಶೇ.85.6ರಷ್ಟನ್ನು ಆಮದು ಮಾಡಿಕೊಂಡಿದ್ದೇವೆ. ಈ ಕಚ್ಚಾತೈಲಕ್ಕೆ ನಾವು ಡಾಲರಿನಲ್ಲಿಯೆ ಪಾವತಿಸುತ್ತಿದ್ದೇವೆ. (ರಷ್ಯಾದಿಂದ ಶೇ.10ರಷ್ಟು ತೈಲ ಮಾತ್ರ ಖರೀದಿಸುತ್ತಿದ್ದೇವೆ, ಅದೂ ಕೇವಲ ಶೇ.6ರಷ್ಟು ಮಾತ್ರ ಕಡಿಮೆ ಬೆಲೆಗೆ).

ಡಾಲರಿನ ಎದುರು ರೂಪಾಯಿ ಕುಸಿದಷ್ಟೂ ಕಚ್ಚಾತೈಲಕ್ಕೆ ನಾವು ಕೊಡಬೇಕಾಗಿರುವ ಬೆಲೆ ಜಾಸ್ತಿಯಾಗುತ್ತಲೇ ಹೋಗುತ್ತದೆ. ಇದರಿಂದಾಗಿ ದೇಶದೊಳಗೆ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಗ್ಯಾಸ್‌ನ ಬೆಲೆ ಜಾಸ್ತಿಯಾಗುತ್ತಲೇ ಹೋಗುತ್ತದೆ (ಎಕ್ಸೈಸ್ ಡ್ಯೂಟಿ ಕಡಿಮೆ ಮಾಡಿದಾಗ್ಯೂ ಕೂಡ).

ಈ ಕಾರಣಕ್ಕೇ ಕಳೆದ ಏಪ್ರಿಲ್-ಜೂನ್ ಅವಧಿಯಲ್ಲಿ ಪೆಟ್ರೋಲ್ ಬೆಲೆ ಶೇ.14ರಷ್ಟು ಮತ್ತು ಡೀಸೆಲ್ ಬೆಲೆ ಶೇ.9.3ರಷ್ಟು ಜಾಸ್ತಿಯಾಗಿದೆ. ನಮಗೆಲ್ಲಾ ತಿಳಿದಿರುವಂತೆ ಇದು ಎಲ್ಲಾ ದೈನಂದಿನ ಅಗತ್ಯ ವಸ್ತುಗಳ ಬೆಲೆಯೇರಿಕೆಗೂ ಕಾರಣವಾಗುತ್ತದೆ.

ಹಾಗೆಯೇ ಭಾರತ ದೇಶವು ರಸಗೊಬ್ಬರವನ್ನೂ ಹೆಚ್ಚು ಆಮದು ಮಾಡಿಕೊಳ್ಳುತ್ತಿದ್ದು ರೂಪಾಯಿ ಕುಸಿತದಿಂದಾಗಿ ರಸಗೊಬ್ಬರಕ್ಕೆ ಹೆಚ್ಚಿನ ಬೆಲೆ ತೆರಬೇಕಾಗಿ ಬರುತ್ತಿದೆ. ಇದು ಸರ್ಕಾರದ ಒಟ್ಟಾರೆ ವೆಚ್ಚವನ್ನು ಜಾಸ್ತಿ ಮಾಡುತ್ತಿದ್ದು, ಸರ್ಕಾರ ಸಾರ್ವಜನಿಕ ಸೇವೆಗಳಿಗೆ (ಆರೋಗ್ಯ, ಶಿಕ್ಷಣ, ಮೂಲಭೂತ ಸೌಕರ್ಯ ಇತ್ಯಾದಿ) ಅಗತ್ಯವಾಗಿ ಮಾಡಬೇಕಾದ ವೆಚ್ಚಕ್ಕೆ ಕಡಿವಾಣ ಹಾಕಬೇಕಾದ ಪರಿಸ್ಥಿತಿ ಬರುತ್ತದೆ. ಇದು ಇಡೀ ಸಮಾಜದ ಅಭಿವೃದ್ದಿಯ ಮೇಲೆ ಕೆಟ್ಟ ಪರಿಣಾಮ ಬೀರುವುದಲ್ಲದೆ, ತಪ್ಪಿಸಿಕೊಳ್ಳಲು ಕಷ್ಟವಾಗುವಂತ ಆರ್ಥಿಕ ವಿಷವರ್ತುಲದಲ್ಲಿ ಇಡೀ ದೇಶವನ್ನು ಸಿಲುಕಿಸುತ್ತದೆ.

ರೂಪಾಯಿ ಕುಸಿತದಿಂದ ಲಾಭವೇನಾದರೂ ಇದೆಯೆ?

ಡಾಲರಿನ ಮುಂದೆ ರೂಪಾಯಿಯ ಬೆಲೆ ಕಡಿಮೆಯಾದಷ್ಟೂ ನಾವು ರಫ್ತು ಮಾಡುವ ಸರಕು ಸೇವೆಗಳ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಡಿಮೆಯಾಗುತ್ತದೆ. ಇದರಿಂದ ಸ್ಪರ್ಧಾತ್ಮಕ ಬೆಲೆಗೆ ನಮ್ಮಿಂದ ರಫ್ತಾಗುವ ಸರಕು ಸೇವೆಗಳು ಲಭ್ಯವಾಗಿ ಅದರಿಂದ ರಫ್ತು ಹೆಚ್ಚಾಗುತ್ತಾ ವ್ಯಾಪಾರದ ಕೊರತೆ ಕಡಿಮೆಯಾಗಿ ನಮ್ಮ
ಅರ್ಥವ್ಯವಸ್ಥೆಗೆ ಅನುಕೂಲವಾಗುತ್ತದೆ ಎಂಬ ವಾದವಿದೆ (ಈ ವಾದ ಚೈನಾ, ಜಪಾನುಗಳ ವಿಷಯದಲ್ಲಿ ನಿಜವೂ ಆಗಿದೆ).

ಆದರೆ, ಚೈನಾ ಅಥವಾ ಜಪಾನ್‌ಗಳ ಮಟ್ಟಕ್ಕೆ ರಫ್ತು ವ್ಯವಹಾರದಲ್ಲಿ ಭಾರತ ತಲುಪುವ ಲಕ್ಷಣಗಳು ಹತ್ತಿರದಲ್ಲೆಲ್ಲೂ ಕಾಣಿಸುತ್ತಿಲ್ಲ.

ಹಾಗಿದ್ದರೆ, ಸದ್ಯದಲ್ಲಿ ರೂಪಾಯಿ ಕುಸಿತ ತಡೆಯುವ ದಾರಿಗಳು ಇವೆಯೆ?

ಡಾಲರಿನ ಮುಂದೆ ರೂಪಾಯಿ ಶಕ್ತವಾಗಲು ಸದ್ಯ ಎರಡು ದಾರಿಗಳು ಕಾಣಿಸುತ್ತಿದ್ದರೂ ಅವು ಕ್ಷೀಣವಾದ ಸಾಧ್ಯತೆಗಳಾಗಿವೆ.

ಒಂದು, ಭಾರತದಿಂದ ಹೆಚ್ಚಿನ ಮಟ್ಟದಲ್ಲಿ ರಫ್ತಾಗುತ್ತಿರುವ ಐ.ಟಿ ಸೇವೆಗಳಿಂದ ರೂಪಾಯಿ ಬೆಲೆ ಹೆಚ್ಚಿಸಲು ಸಾಧ್ಯವಿದೆ. ಆದರೆ, ಯೂರೋಪ್ ಮತ್ತು ಅಮೆರಿಕದಲ್ಲಿ ಆರ್ಥಿಕ ಕುಸಿತದ/ ಹಿಂಜರಿತದ ನಿರೀಕ್ಷೆಯಿರುವುದರಿಂದ ಭಾರತದ ಐ.ಟಿ ಸೇವೆಗಳು ನಿರೀಕ್ಷೆಯ ಮಟ್ಟಕ್ಕೆ ರಫ್ತಾಗುವ ಸಾಧ್ಯತೆ ಕ್ಷೀಣವಾಗಿದೆ.

ಹಾಗಾಗಿ, ಐ.ಟಿ ಸೇವೆಗಳ ಹೆಚ್ಚಿನ ರಫ್ತಿನಿಂದ ರೂಪಾಯಿ ಕುಸಿತ ತಡೆಯಬಹುದೆನ್ನುವ ಸಾಧ್ಯತೆಯೂ ಫಲ ಕೊಡದ ಪರಿಸ್ಥಿತಿ ನಿರ್ಮಾಣವಾಗಿದೆ.

ಮತ್ತೊಂದು, ಹೆಚ್ಚಿನ ವಿದೇಶಿ ನೇರ ಬಂಡವಾಳ ಹೂಡಿಕೆಯಿಂದ ಡಾಲರಿನ ಮುಂದೆ ರೂಪಾಯಿ ಬೇಡಿಕೆ ಹೆಚ್ಚಿಸಬಹುದು. ಅದರೆ, ಆರ್ಥಿಕ ಸದೃಢತೆಯ ಕೊರತೆಯಿಂದ ವಿದೇಶಿ ನೇರ ಬಂಡವಾಳವೂ ನಿರೀಕ್ಷಿತ ಮಟ್ಟಕ್ಕೆ ಬರುವುದು ಅಸಾಧ್ಯವಾಗಿದೆ.

ಜೊತೆಗೆ, ನಿರೀಕ್ಷಿತ ಜಾಗತಿಕ ಆರ್ಥಿಕ ಹಿಂಜರಿಕೆಯಿಂದಾಗಿ ಎನ್‌ಆರ್‌ಐಗಳಿಂದ (ವಿದೇಶದಲ್ಲಿ ನೆಲೆಸಿರುವ ಭಾರತೀಯರು) ಭಾರತಕ್ಕೆ ಬರುವ ಹಣವೂ ಕಡಿಮೆಯಾಗುವ ಸಾಧ್ಯತೆಯೇ ಹೆಚ್ಚಿದೆ.

ಹೀಗೆ ಈ ಎಲ್ಲ ವಾಸ್ತವದ ಹಿನ್ನೆಲೆಯಲ್ಲಿ ಸದ್ಯಕ್ಕೆ ರೂಪಾಯಿಯ ಕುಸಿತ ಮತ್ತಷ್ಟು ಜಾಸ್ತಿಯಾಗುವ ಸಾಧ್ಯತೆಗಳೇ ಕಾಣಿಸುತ್ತಿವೆ ಮತ್ತು ಇದರಿಂದ ಜನಸಾಮಾನ್ಯರ ಬದುಕು ಮತ್ತಷ್ಟು ದುಸ್ತರವಾಗುವ ಸಾಧ್ಯತೆಗಳೂ ನಿಚ್ಚಳವಾಗಿ ಗೋಚರಿಸುತ್ತಿವೆ.

ಡಾ. ಬಿ.ಸಿ. ಬಸವರಾಜು

ಡಾ. ಬಿ.ಸಿ. ಬಸವರಾಜು 
ಎಂಜಿನಿಯರಿಂಗ್ ವಿದ್ಯಾಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿರುವ ಬಸವರಾಜು ಹಾಡುಗಾರರೂ, ಪ್ರಚಲಿತ ವಿದ್ಯಮಾನಗಳಿಗೆ ಲೇಖನಗಳು ಮತ್ತು ವಿಡಿಯೋಗಳ ಮೂಲಕ ನಿರಂತರವಾಗಿ ಪ್ರತಿಕ್ರಿಯಿಸುತ್ತಾರೆ.


ಇದನ್ನೂ ಓದಿ: ಅಮೆರಿಕನ್ ಡಾಲರ್‌‌ ಮುಂದೆ 80ರೂ. ತಲುಪಲಿರುವ ಭಾರತೀಯ ರುಪಾಯಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...