Homeಕರ್ನಾಟಕಕಾಂಗ್ರೆಸ್ ನಾಯಕರ-ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸು ಆರೋಪ: ಬಿಜೆಪಿ ವಿರುದ್ಧ ಶಿವಮೊಗ್ಗ ಚಲೋ

ಕಾಂಗ್ರೆಸ್ ನಾಯಕರ-ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸು ಆರೋಪ: ಬಿಜೆಪಿ ವಿರುದ್ಧ ಶಿವಮೊಗ್ಗ ಚಲೋ

ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ವಿರೋಧ ಪಕ್ಷ ನಾಯಕರ ಸಮ್ಮುಖದಲ್ಲಿ ಎಲ್ಲ ನಾಯಕರು, ಶಾಸಕರು, ಸಂಸದರು, ಕಾರ್ಯಕರ್ತರು ಶಿವಮೊಗ್ಗ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ- ಡಿಕೆಶಿ

- Advertisement -
- Advertisement -

ರಾಜ್ಯದ ಬಿಜೆಪಿ ಸರ್ಕಾರ ಅಧಿಕಾರಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರ ಮೇಲೆ ಸುಳ್ಳು ಕೇಸು ಹಾಕಿಸಿ, ದೌರ್ಜನ್ಯ ನಡೆಸುತ್ತಿದೆ. ಇದನ್ನು ಖಂಡಿಸಿ ಕರ್ನಾಟಕ ಕಾಂಗ್ರೆಸ್ ವತಿಯಿಂದ ಇಂದು ‘ಶಿವಮೊಗ್ಗ ಚಲೋ’ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

“ಕೊರೋನಾ ಹಾಗೂ ನಂತರದ ಸಮಯದಲ್ಲಿ ಬಿಜೆಪಿ ನಾಯಕರು ಶಾಂತಿಭಂಗದ ಹೇಳಿಕೆ ಕೊಟ್ಟಿದ್ದರೂ ಈ ಸರ್ಕಾರ ಯಾರ ಮೇಲೂ ಕೇಸು ದಾಖಲಿಸಲಿಲ್ಲ. ಆಗಲೂ ಅಧಿಕಾರ ದುರುಪಯೋಗ ಮಾಡಿಕೊಂಡು ಸರ್ಕಾರದ ಪದಾರ್ಥವನ್ನು ತಮ್ಮ ಪದಾರ್ಥ ಎಂಬಂತೆ ಹಂಚಿದ್ದನ್ನು ನಾವು ಬಯಲು ಮಾಡಿದರೂ ಕ್ರಮ ಕೈಗೊಳ್ಳಲಿಲ್ಲ. ಆದರೆ ನಮ್ಮ ಶಾಸಕರು, ಮುಖಂಡರು, ಕಾರ್ಯಕರ್ತರ ಮೇಲೆ ನೂರಾರು ಕೇಸ್ ಹಾಕುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ಮಧ್ಯೆ ನಮ್ಮ ಪಕ್ಷದ ಶಾಸಕ ಸಂಗಮೇಶ್, ಅವರ ಕುಟುಂಬ ಸದಸ್ಯರು ಹಾಗೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸು ಹಾಕಲಾಗಿದೆ. ಹಾಗಾಗಿಯೇ ಈ ಪ್ರತಿಭಟನೆ” ಎಂದು ಡಿ.ಕೆ ಶಿವಕುಮಾರ್ ಈ ಹಿಂದೆ ಹೇಳಿದ್ದರು.

“ಸಂಗಮೇಶ್ ಅವರನ್ನು ಬಿಜೆಪಿಗೆ ಸೆಳೆಯಲು ಬಹಳ ಒತ್ತಡ ಹೇರಿದ್ದರು. ಆದರೂ ಇವರು ಆಪರೇಷನ್ ಕಮಲಕ್ಕೆ ಬಲಿಯಾಗಲಿಲ್ಲ ಎಂಬ ಕಾರಣಕ್ಕೆ ಈ ರೀತಿ ಕಿರುಕುಳ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಒಬ್ಬ ಕಾಂಗ್ರೆಸ್ ಶಾಸಕ ಇದ್ದಾನೆ ಎಂದು ಪೊಲೀಸರ ಕೈಯಲ್ಲಿ ಎಫ್ಐಆರ್ ಹಾಕಿಸಿ, ತೊಂದರೆ ನೀಡುತ್ತಿದ್ದಾರೆ. ತಮಗಾಗುತ್ತಿರುವ ಅನ್ಯಾಯದ ವಿರುದ್ಧ ಮಾತನಾಡಲು ಅವಕಾಶ ಕೊಡಿ ಎಂದು ಕೇಳಿದರೆ ಅವರಿಗೆ ಅವಕಾಶ ನೀಡಲಿಲ್ಲ. ಆಗ ನೋವಿನಿಂದ ನಮ್ಮ ಶಾಸಕ ತಮ್ಮ ಶರ್ಟ್ ಬಿಚ್ಚಿ ಮೈಮೇಲಾಗಿರುವ ಗಾಯ ತೋರಿಸಲು ಮುಂದಾದಾಗ, ಅದನ್ನು ಅಸಭ್ಯ ವರ್ತನೆ ಎಂದು ಹೇಳಿ ಅವರನ್ನು ಒಂದು ವಾರಕ್ಕೂ ಹೆಚ್ಚು ಕಾಲ ವಿಧಾನಸಭೆ ಕಲಾಪದಿಂದ ಅಮಾನತು ಮಾಡಲಾಗಿದೆ. ಆ ಮೂಲಕ ಅವರ ಹಕ್ಕಿಗೆ ಧಕ್ಕೆ ತರಲಾಗಿದೆ. ಈ ಬಗ್ಗೆ ನಾವು ಪ್ರತಿಭಟನೆಯನ್ನೂ ಮಾಡಿದ್ದೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ನೀಟ್ ರದ್ದು, ಪೆಟ್ರೋಲ್ ದರ ಕಡಿತ- ಪ್ರಣಾಳಿಕೆಯಲ್ಲಿ ಡಿಎಂಕೆ ಭರವಸೆ

ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ವಿರೋಧ ಪಕ್ಷ ನಾಯಕರ ಸಮ್ಮುಖದಲ್ಲಿ ಎಲ್ಲ ನಾಯಕರು, ಶಾಸಕರು, ಸಂಸದರು, ಕಾರ್ಯಕರ್ತರು ಶಿವಮೊಗ್ಗ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.

ಶಿವಮೊಗ್ಗದಲ್ಲಿ ಶನಿವಾರ ಕಾಂಗ್ರೆಸ್ ನಡೆಸಿದ ಬೃಹತ್ ಜಾಥಾದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಈಶ್ವರ ಖಂಡ್ರೆ, ಧೃವನಾರಾಯಣ್ ಸೇರಿದಂತೆ ಅನೇಕ ಮಾಜಿ ಸಚಿವರು, ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರು, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.


ಇದನ್ನೂ ಓದಿ: ಎಐಎಡಿಎಂಕೆ ಈಗ ಜಯಲಲಿತ ಅವರ ಪಕ್ಷವಲ್ಲ; ಮೋದಿಯ ಗುಲಾಮಿ ಪಕ್ಷ – ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...