Homeಮುಖಪುಟಸುಳ್ಳು ‘ಬಲವಂತದ ಮತಾಂತರ’ ಪ್ರಕರಣ: ಒಪ್ಪಿಕೊಂಡ ಯುಪಿ ಪೊಲೀಸರು

ಸುಳ್ಳು ‘ಬಲವಂತದ ಮತಾಂತರ’ ಪ್ರಕರಣ: ಒಪ್ಪಿಕೊಂಡ ಯುಪಿ ಪೊಲೀಸರು

‘ಮೂವರು ಮುಸ್ಲಿಮರನ್ನು ತಪ್ಪಾಗಿ ಮತಾಂತರ ಪ್ರಕರಣದಲ್ಲಿ ಫ್ರೇಮ್ ಮಾಡಲಾಗಿದೆ’ ಎಂದು ಯುಪಿ ಪೊಲೀಸರೇ ಒಪ್ಪಿಕೊಂಡಿದ್ದಾರೆ.

- Advertisement -
- Advertisement -

‘ಮೂವರು ಮುಸ್ಲಿಮ್ ಯುವಕರನ್ನು ಬಲವಂತದ ಮತಾಂತರ ಪ್ರಕರಣದಲ್ಲಿ ಅನಗತ್ಯವಾಗಿ, ತಪ್ಪಾಗಿ ಸಿಕ್ಕಿಸಿಲಾಗಿದೆ’ ಎಂದು ಉತ್ತರಪ್ರದೇಶದ ಬರೇಲಿ ಜಿಲ್ಲೆಯ ಪೊಲೀಸ್ ಉನ್ನಾತಾಧಿಕಾರಿಗಳು ರವಿವಾರ ತಿಳಿಸಿದ್ದಾರೆ.

ಪೊಲೀಸರ ಈ ಒಪ್ಪಿಗೆ ಏನನ್ನು ಸೂಚಿಸುತ್ತಿದೆ? ಮತಾಂತರ ವಿರೋಧಿ ಕಾಯ್ದೆಯನ್ನು ದುರ್ಬಳಕೆ ಮಾಡಿಕೊಂಡು ಮುಸ್ಲಿಮರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಆತಂಕಗಳಿಗೆ ಇದು ಪುಷ್ಟಿ ನೀಡುತ್ತಿದೆ.
ಮೂವರು ಮುಸ್ಲಿಮರು 24 ವರ್ಷದ ಯುವತಿಯನ್ನು ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿದರು ಎಂಬ ದೂರು ಅಸತ್ಯವಾಗಿದೆ ಎಂದು ತನಿಖೆಯ ಬಳಿಕ ಪೊಲೀಸರೇ ಒಪ್ಪಿಕೊಂಡಿದ್ದಾರೆ.

ಏನಿದು ಪ್ರಕರಣ?

ಜನವರಿ 1 ರಂದು ಮೂವರು ಮುಸ್ಲಿಮರ ಮೇಲೆ ಬಲವಂತದ ಮತಾಂತರ ಪ್ರಕರಣದ ಕೇಸು ದಾಖಲಾಗಿತ್ತು. ‘ಸೆಪ್ಟೆಂಬರ್ 9, 2020ರಂದು ಮುಸ್ಲಿಮೇತರ ಯುವತಿ ಮನೆ ತೊರೆದು ಅಬ್ರಾರ್ ಖಾನ್ ಎಂಬ ಯುವಕನ ಜೊತೆ ದೆಹಲಿಗೆ ಹೋಗಿದ್ದಳು. ಫರೀದ್‌ಪುರ್ ಠಾಣೆಯಲ್ಲಿ ಅಪಹರಣದ ದೂರು ದಾಖಾಲಾಗಿತು. ಯುವತಿ ದೆಹಲಿಯ ತುಘಲಕ್‌ಬಾದ್‌ನಲ್ಲಿ ಅಬ್ರಾರ್ ಜೊತೆ 15 ದಿನ ಕಳೆದ ತನ್ನ ಮನೆಗೆ ವಾಪಸ್ಸಾದಳು. ನಂತರ ಆಕೆ ತನ್ನ ಸೋದರ ಮಾವನನ್ನು ವಿವಾಹವಾಗಿದ್ದಾಳೆ’ ಎಂದು ಬರೇಲಿಯ ಸೀನಿಯರ್ ಸುಪರಿಂಡೆಂಟ್ ಆಫ್ ಪೊಲೀಸ್ (ಎಸ್‌ಎಸ್‌ಪಿ) ರೋಹಿತ್ ಸಿಂಗ್ ಸಜ್ವಾನ್ ಪಿಟಿಐಗೆ ತಿಳಿಸಿದ್ದಾರೆ.

‘ದೂರಿನ ಪ್ರಕಾರ, 2019ರ ಡಿಸೆಂಬರ್ 1ರಂದು ಫರೀದ್‌ಪುರ್‌ನಲ್ಲಿರುವ ತನ್ನ ಮನೆಗೆ ಯುವತಿ ವಾಪಸ್ಸಾಗುವ ಸಂದರ್ಭದಲ್ಲಿ ಅಬ್ರಾರ್ ಖಾನ್ ಮತ್ತು ಆತನ ಸಂಬಂಧಿಗಳಾದ ಮೈಸುರ್, ಇರ್ಷಾರ್‌ ಮದುವೆಗಾಗಿ ಆಕೆಯನ್ನು ಇಸ್ಲಾಂಗೆ ಮತಾಂತರವಾಗಲು ಬಲವಂತ ಮಾಡಿದರು ಎಂದು ಆರೋಪಿಸಲಾಗಿದೆ. ಆದರೆ ಪೊಲೀಸರು ಕಂಡುಕೊಂಡ ಪ್ರಕಾರ, ಆ ಮೂವರೂ ಮುಸ್ಲಿಂ ಯುವಕರು ಅಂದು ಆ ಜಾಗದಲ್ಲಿ ಇರಲೇ ಇಲ್ಲ. ಪೊಲೀಸರು ಸಂಗ್ರಹಿಸಿದ ಪುರಾವೆಗಳ ಪ್ರಕಾರ, ಈ ಮೂವರ ವಿರುದ್ಧ ಯುವತಿ ಮತ್ತು ಆಕೆಯ ಸೋದರ ಮಾವ ನೀಡಿದ ದೂರು ತಪ್ಪಾಗಿದೆ. ಮತಾಂತರ ಕಾಯ್ದೆಯ ಪ್ರಾವಿಷನ್‌ಗಳ ಪ್ರಕಾರ ಈ ವಿಷಯವನ್ನು ವಜಾಗೊಳಿಸಲಾಗುವುದು’ ಎಂದು ಎಸ್‌ಎಸ್‌ಪಿ ರೋಹಿತ್ ಸಿಂಗ್ ಹೇಳಿದ್ದಾರೆ.

ನಮ್ಮ ತನಿಖೆಯ ಸಮಯದಲ್ಲಿ, ಘಟನೆ ನಡೆದಾಗ ಆ ದಿನ ಆರೋಪಿಗಳು ಆ ಸ್ಥಳದಲ್ಲಿ ಹಾಜರಿರಲಿಲ್ಲ ಎಂದು ನಾವು ಕಂಡುಕೊಂಡಿದ್ದೇವೆ. ಪೊಲೀಸರು ಸಂಗ್ರಹಿಸಿದ ಸಾಕ್ಷ್ಯಗಳ ಪ್ರಕಾರ, ಮೂವರು ಪುರುಷರ ವಿರುದ್ಧ ಮಹಿಳೆ ಮಾಡಿರುವ ಆರೋಪಗಳು ತಪ್ಪು.

ಆದರೆ, ಮಾವಂದಿರ ಮನೆಯಲ್ಲಿದ್ದ ಯುವತಿಗೆ ಅಬ್ರಾರ್ ಬೆದರಿಕೆಗಳನ್ನು ಹಾಕಿದ್ದ ಎಂಬ ಆರೋಪವನ್ನು ಪರಿಶೀಲಿಸಲಾಗುವುದು ಎಂದು ಅವರು ಹೇಳಿದ್ದಾರೆ.

‘ಡಿಸೆಂಬರ್ 11 ರಂದು ಯುವತಿಯ ಸೋದರಮಾವ ಬರೇಲಿ ಜಿಲ್ಲೆಯ ಅವೊನ್ಲಾ ಎಂಬಲ್ಲಿ ಯುವತಿಯನ್ನು ಮದುವೆಯಾಗಿದ್ದಾನೆ. ಯುವತಿಯ ಸೋದಮಾವಂದಿರ ಮನೆಗೆ ಹೋದ ಅಬ್ರಾರ್, ಬೇಗನೆ ಫರೀದ್‌ಪುರಕ್ಕೆ ಬಾ, ಇಲ್ಲವಾದರೆ ತೊಂದರೆಯಾಗುತ್ತದೆ ಎಂದು ಯುವತಿಗೆ ಹೇಳಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ. ಇದನ್ನು ಪರೀಕ್ಷಿಸುತ್ತಿದ್ದು, ಆರೋಪ ಸತ್ಯವಾಗಿದ್ದರೆ ಕಾನೂನು ಪ್ರಕಾ ಕ್ರಮ ಜರುಗಿಸುತ್ತೇವೆ’ ಎಂದು ಎಸ್‌ಎಸ್‌ಪಿ ರೋಹಿತ್ ಸಿಂಗ್ ಹೇಳಿದ್ದಾರೆ.

ನವಂಬರ್ 2020ರಲ್ಲಿ ಲವ್ ಜಿಹಾದ್ ‘ತಡೆಯಲು’ ಯೋಗಿ ಆದಿತ್ಯನಾಥ್ ಸರ್ಕಾರ ಜಾರಿಗೆ ತಂದ ಮತಾಂತರ ವಿರೋದಿ ಕಾಯ್ದೆ ಮುಸ್ಲಿಂರಲ್ಲಿ ಆತಂಕ ಮೂಡಿಸಿದೆ. ಮುಸ್ಲಿಂ ಪುರುಷರನ್ನು ಟಾರ್ಗೆಟ್ ಮಾಡಲು ಮತ್ತು ಅಂತರ್‌ಧರ್ಮೀಯ ಸಂಬಂಧಗಳನ್ನು ತಡೆಯಲೆಂದೇ ಈ ಕಾಯ್ದೆ ತರಲಾಗಿದೆ ಎಂಬ ಆತಂಕಗಳು ಮನೆ ಮಾಡಿವೆ.

ಮುಸ್ಲಿಂ ಪುರುಷರು ಆಮಿಷ-ಓಲೈಕೆಗಳ ಮೂಲಕ ಮತ್ತು ಮದುವೆಯ ಮೂಲಕ ಹಿಂದೂ ಯುವತಿಯರನ್ನು ಇಸ್ಲಾಂಗೆ ಮತಾಂತರ ಮಾಡುವ ಸಂಚು ನಡೆಸುತ್ತಿದ್ದಾರೆ ಎಂಬ ಸಂಘ ಪರಿವಾರದ ಅನಿಸಿಕೆಯನ್ನು ಕಾನೂನಾತ್ಮಕಗೊಳಿಸಲೆಂದೇ ಈ ಕಾಯ್ದೆ ಜಾರಿಗೆ ತರಲಾಗಿದೆ ಎಂದು ಪ್ರಗತಿಪರರು ಹೇಳುತ್ತಿದ್ದಾರೆ. (ಸಂಘ ಪರಿವಾರದ ಈ ‘ಥಿಯರಿ’ಗೆ ಯಾವುದೇ ಆಧಾರವಿಲ್ಲದಿದ್ದರೂ ಕೇಂದ್ರ ಸರ್ಕಾರವೂ ಇದನ್ನು ಒಪ್ಪಿಕೊಂಡಿದೆ) ಬಿಜೆಪಿ ಆಡಳಿತವಿರುವ ಹಲವು ರಾಜ್ಯಗಳು ಮತಾಂತರ ವಿರೋಧಿ ಕಾಯ್ದೆಯನ್ನು ಜಾರಿಗೆ ತಂದಿವೆ. ಇನ್ನು ಹಲವು ರಾಜ್ಯಗಳು ತರುವ ತಯಾರಿಯಲ್ಲಿವೆ.

ಶಿವಮೊಗ್ಗದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಕಾರ್ಯಕಾರಿಣಿ ಸಮಿತಿಯ ಸಭೆಯಲ್ಲಿ ಕರ್ನಾಟಕದಲ್ಲಿಯೂ ಈ ಕಾಯ್ದೆ ತರುವ ಕುರಿತು ಚರ್ಚೆ ನಡೆದಿದೆ.


ಇದನ್ನೂ ಓದಿ: ಸಾವಿರವಲ್ಲ, ಕೇವಲ ಒಂದು ಸುಳ್ಳು ಹೇಳಿ ಮದುವೆಯಾದಳು: ‘ಅವನು’ ಈಗ ಜೈಲಿನಲ್ಲಿ, ‘ಅವಳು’ ಪೋಷಕರ ಬಂಧನದಲ್ಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...