Homeಮುಖಪುಟಸುಳ್ಳು ‘ಬಲವಂತದ ಮತಾಂತರ’ ಪ್ರಕರಣ: ಒಪ್ಪಿಕೊಂಡ ಯುಪಿ ಪೊಲೀಸರು

ಸುಳ್ಳು ‘ಬಲವಂತದ ಮತಾಂತರ’ ಪ್ರಕರಣ: ಒಪ್ಪಿಕೊಂಡ ಯುಪಿ ಪೊಲೀಸರು

‘ಮೂವರು ಮುಸ್ಲಿಮರನ್ನು ತಪ್ಪಾಗಿ ಮತಾಂತರ ಪ್ರಕರಣದಲ್ಲಿ ಫ್ರೇಮ್ ಮಾಡಲಾಗಿದೆ’ ಎಂದು ಯುಪಿ ಪೊಲೀಸರೇ ಒಪ್ಪಿಕೊಂಡಿದ್ದಾರೆ.

- Advertisement -
- Advertisement -

‘ಮೂವರು ಮುಸ್ಲಿಮ್ ಯುವಕರನ್ನು ಬಲವಂತದ ಮತಾಂತರ ಪ್ರಕರಣದಲ್ಲಿ ಅನಗತ್ಯವಾಗಿ, ತಪ್ಪಾಗಿ ಸಿಕ್ಕಿಸಿಲಾಗಿದೆ’ ಎಂದು ಉತ್ತರಪ್ರದೇಶದ ಬರೇಲಿ ಜಿಲ್ಲೆಯ ಪೊಲೀಸ್ ಉನ್ನಾತಾಧಿಕಾರಿಗಳು ರವಿವಾರ ತಿಳಿಸಿದ್ದಾರೆ.

ಪೊಲೀಸರ ಈ ಒಪ್ಪಿಗೆ ಏನನ್ನು ಸೂಚಿಸುತ್ತಿದೆ? ಮತಾಂತರ ವಿರೋಧಿ ಕಾಯ್ದೆಯನ್ನು ದುರ್ಬಳಕೆ ಮಾಡಿಕೊಂಡು ಮುಸ್ಲಿಮರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಆತಂಕಗಳಿಗೆ ಇದು ಪುಷ್ಟಿ ನೀಡುತ್ತಿದೆ.
ಮೂವರು ಮುಸ್ಲಿಮರು 24 ವರ್ಷದ ಯುವತಿಯನ್ನು ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿದರು ಎಂಬ ದೂರು ಅಸತ್ಯವಾಗಿದೆ ಎಂದು ತನಿಖೆಯ ಬಳಿಕ ಪೊಲೀಸರೇ ಒಪ್ಪಿಕೊಂಡಿದ್ದಾರೆ.

ಏನಿದು ಪ್ರಕರಣ?

ಜನವರಿ 1 ರಂದು ಮೂವರು ಮುಸ್ಲಿಮರ ಮೇಲೆ ಬಲವಂತದ ಮತಾಂತರ ಪ್ರಕರಣದ ಕೇಸು ದಾಖಲಾಗಿತ್ತು. ‘ಸೆಪ್ಟೆಂಬರ್ 9, 2020ರಂದು ಮುಸ್ಲಿಮೇತರ ಯುವತಿ ಮನೆ ತೊರೆದು ಅಬ್ರಾರ್ ಖಾನ್ ಎಂಬ ಯುವಕನ ಜೊತೆ ದೆಹಲಿಗೆ ಹೋಗಿದ್ದಳು. ಫರೀದ್‌ಪುರ್ ಠಾಣೆಯಲ್ಲಿ ಅಪಹರಣದ ದೂರು ದಾಖಾಲಾಗಿತು. ಯುವತಿ ದೆಹಲಿಯ ತುಘಲಕ್‌ಬಾದ್‌ನಲ್ಲಿ ಅಬ್ರಾರ್ ಜೊತೆ 15 ದಿನ ಕಳೆದ ತನ್ನ ಮನೆಗೆ ವಾಪಸ್ಸಾದಳು. ನಂತರ ಆಕೆ ತನ್ನ ಸೋದರ ಮಾವನನ್ನು ವಿವಾಹವಾಗಿದ್ದಾಳೆ’ ಎಂದು ಬರೇಲಿಯ ಸೀನಿಯರ್ ಸುಪರಿಂಡೆಂಟ್ ಆಫ್ ಪೊಲೀಸ್ (ಎಸ್‌ಎಸ್‌ಪಿ) ರೋಹಿತ್ ಸಿಂಗ್ ಸಜ್ವಾನ್ ಪಿಟಿಐಗೆ ತಿಳಿಸಿದ್ದಾರೆ.

‘ದೂರಿನ ಪ್ರಕಾರ, 2019ರ ಡಿಸೆಂಬರ್ 1ರಂದು ಫರೀದ್‌ಪುರ್‌ನಲ್ಲಿರುವ ತನ್ನ ಮನೆಗೆ ಯುವತಿ ವಾಪಸ್ಸಾಗುವ ಸಂದರ್ಭದಲ್ಲಿ ಅಬ್ರಾರ್ ಖಾನ್ ಮತ್ತು ಆತನ ಸಂಬಂಧಿಗಳಾದ ಮೈಸುರ್, ಇರ್ಷಾರ್‌ ಮದುವೆಗಾಗಿ ಆಕೆಯನ್ನು ಇಸ್ಲಾಂಗೆ ಮತಾಂತರವಾಗಲು ಬಲವಂತ ಮಾಡಿದರು ಎಂದು ಆರೋಪಿಸಲಾಗಿದೆ. ಆದರೆ ಪೊಲೀಸರು ಕಂಡುಕೊಂಡ ಪ್ರಕಾರ, ಆ ಮೂವರೂ ಮುಸ್ಲಿಂ ಯುವಕರು ಅಂದು ಆ ಜಾಗದಲ್ಲಿ ಇರಲೇ ಇಲ್ಲ. ಪೊಲೀಸರು ಸಂಗ್ರಹಿಸಿದ ಪುರಾವೆಗಳ ಪ್ರಕಾರ, ಈ ಮೂವರ ವಿರುದ್ಧ ಯುವತಿ ಮತ್ತು ಆಕೆಯ ಸೋದರ ಮಾವ ನೀಡಿದ ದೂರು ತಪ್ಪಾಗಿದೆ. ಮತಾಂತರ ಕಾಯ್ದೆಯ ಪ್ರಾವಿಷನ್‌ಗಳ ಪ್ರಕಾರ ಈ ವಿಷಯವನ್ನು ವಜಾಗೊಳಿಸಲಾಗುವುದು’ ಎಂದು ಎಸ್‌ಎಸ್‌ಪಿ ರೋಹಿತ್ ಸಿಂಗ್ ಹೇಳಿದ್ದಾರೆ.

ನಮ್ಮ ತನಿಖೆಯ ಸಮಯದಲ್ಲಿ, ಘಟನೆ ನಡೆದಾಗ ಆ ದಿನ ಆರೋಪಿಗಳು ಆ ಸ್ಥಳದಲ್ಲಿ ಹಾಜರಿರಲಿಲ್ಲ ಎಂದು ನಾವು ಕಂಡುಕೊಂಡಿದ್ದೇವೆ. ಪೊಲೀಸರು ಸಂಗ್ರಹಿಸಿದ ಸಾಕ್ಷ್ಯಗಳ ಪ್ರಕಾರ, ಮೂವರು ಪುರುಷರ ವಿರುದ್ಧ ಮಹಿಳೆ ಮಾಡಿರುವ ಆರೋಪಗಳು ತಪ್ಪು.

ಆದರೆ, ಮಾವಂದಿರ ಮನೆಯಲ್ಲಿದ್ದ ಯುವತಿಗೆ ಅಬ್ರಾರ್ ಬೆದರಿಕೆಗಳನ್ನು ಹಾಕಿದ್ದ ಎಂಬ ಆರೋಪವನ್ನು ಪರಿಶೀಲಿಸಲಾಗುವುದು ಎಂದು ಅವರು ಹೇಳಿದ್ದಾರೆ.

‘ಡಿಸೆಂಬರ್ 11 ರಂದು ಯುವತಿಯ ಸೋದರಮಾವ ಬರೇಲಿ ಜಿಲ್ಲೆಯ ಅವೊನ್ಲಾ ಎಂಬಲ್ಲಿ ಯುವತಿಯನ್ನು ಮದುವೆಯಾಗಿದ್ದಾನೆ. ಯುವತಿಯ ಸೋದಮಾವಂದಿರ ಮನೆಗೆ ಹೋದ ಅಬ್ರಾರ್, ಬೇಗನೆ ಫರೀದ್‌ಪುರಕ್ಕೆ ಬಾ, ಇಲ್ಲವಾದರೆ ತೊಂದರೆಯಾಗುತ್ತದೆ ಎಂದು ಯುವತಿಗೆ ಹೇಳಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ. ಇದನ್ನು ಪರೀಕ್ಷಿಸುತ್ತಿದ್ದು, ಆರೋಪ ಸತ್ಯವಾಗಿದ್ದರೆ ಕಾನೂನು ಪ್ರಕಾ ಕ್ರಮ ಜರುಗಿಸುತ್ತೇವೆ’ ಎಂದು ಎಸ್‌ಎಸ್‌ಪಿ ರೋಹಿತ್ ಸಿಂಗ್ ಹೇಳಿದ್ದಾರೆ.

ನವಂಬರ್ 2020ರಲ್ಲಿ ಲವ್ ಜಿಹಾದ್ ‘ತಡೆಯಲು’ ಯೋಗಿ ಆದಿತ್ಯನಾಥ್ ಸರ್ಕಾರ ಜಾರಿಗೆ ತಂದ ಮತಾಂತರ ವಿರೋದಿ ಕಾಯ್ದೆ ಮುಸ್ಲಿಂರಲ್ಲಿ ಆತಂಕ ಮೂಡಿಸಿದೆ. ಮುಸ್ಲಿಂ ಪುರುಷರನ್ನು ಟಾರ್ಗೆಟ್ ಮಾಡಲು ಮತ್ತು ಅಂತರ್‌ಧರ್ಮೀಯ ಸಂಬಂಧಗಳನ್ನು ತಡೆಯಲೆಂದೇ ಈ ಕಾಯ್ದೆ ತರಲಾಗಿದೆ ಎಂಬ ಆತಂಕಗಳು ಮನೆ ಮಾಡಿವೆ.

ಮುಸ್ಲಿಂ ಪುರುಷರು ಆಮಿಷ-ಓಲೈಕೆಗಳ ಮೂಲಕ ಮತ್ತು ಮದುವೆಯ ಮೂಲಕ ಹಿಂದೂ ಯುವತಿಯರನ್ನು ಇಸ್ಲಾಂಗೆ ಮತಾಂತರ ಮಾಡುವ ಸಂಚು ನಡೆಸುತ್ತಿದ್ದಾರೆ ಎಂಬ ಸಂಘ ಪರಿವಾರದ ಅನಿಸಿಕೆಯನ್ನು ಕಾನೂನಾತ್ಮಕಗೊಳಿಸಲೆಂದೇ ಈ ಕಾಯ್ದೆ ಜಾರಿಗೆ ತರಲಾಗಿದೆ ಎಂದು ಪ್ರಗತಿಪರರು ಹೇಳುತ್ತಿದ್ದಾರೆ. (ಸಂಘ ಪರಿವಾರದ ಈ ‘ಥಿಯರಿ’ಗೆ ಯಾವುದೇ ಆಧಾರವಿಲ್ಲದಿದ್ದರೂ ಕೇಂದ್ರ ಸರ್ಕಾರವೂ ಇದನ್ನು ಒಪ್ಪಿಕೊಂಡಿದೆ) ಬಿಜೆಪಿ ಆಡಳಿತವಿರುವ ಹಲವು ರಾಜ್ಯಗಳು ಮತಾಂತರ ವಿರೋಧಿ ಕಾಯ್ದೆಯನ್ನು ಜಾರಿಗೆ ತಂದಿವೆ. ಇನ್ನು ಹಲವು ರಾಜ್ಯಗಳು ತರುವ ತಯಾರಿಯಲ್ಲಿವೆ.

ಶಿವಮೊಗ್ಗದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಕಾರ್ಯಕಾರಿಣಿ ಸಮಿತಿಯ ಸಭೆಯಲ್ಲಿ ಕರ್ನಾಟಕದಲ್ಲಿಯೂ ಈ ಕಾಯ್ದೆ ತರುವ ಕುರಿತು ಚರ್ಚೆ ನಡೆದಿದೆ.


ಇದನ್ನೂ ಓದಿ: ಸಾವಿರವಲ್ಲ, ಕೇವಲ ಒಂದು ಸುಳ್ಳು ಹೇಳಿ ಮದುವೆಯಾದಳು: ‘ಅವನು’ ಈಗ ಜೈಲಿನಲ್ಲಿ, ‘ಅವಳು’ ಪೋಷಕರ ಬಂಧನದಲ್ಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...