Homeಮುಖಪುಟಸುಳ್ಳು ‘ಬಲವಂತದ ಮತಾಂತರ’ ಪ್ರಕರಣ: ಒಪ್ಪಿಕೊಂಡ ಯುಪಿ ಪೊಲೀಸರು

ಸುಳ್ಳು ‘ಬಲವಂತದ ಮತಾಂತರ’ ಪ್ರಕರಣ: ಒಪ್ಪಿಕೊಂಡ ಯುಪಿ ಪೊಲೀಸರು

‘ಮೂವರು ಮುಸ್ಲಿಮರನ್ನು ತಪ್ಪಾಗಿ ಮತಾಂತರ ಪ್ರಕರಣದಲ್ಲಿ ಫ್ರೇಮ್ ಮಾಡಲಾಗಿದೆ’ ಎಂದು ಯುಪಿ ಪೊಲೀಸರೇ ಒಪ್ಪಿಕೊಂಡಿದ್ದಾರೆ.

- Advertisement -
- Advertisement -

‘ಮೂವರು ಮುಸ್ಲಿಮ್ ಯುವಕರನ್ನು ಬಲವಂತದ ಮತಾಂತರ ಪ್ರಕರಣದಲ್ಲಿ ಅನಗತ್ಯವಾಗಿ, ತಪ್ಪಾಗಿ ಸಿಕ್ಕಿಸಿಲಾಗಿದೆ’ ಎಂದು ಉತ್ತರಪ್ರದೇಶದ ಬರೇಲಿ ಜಿಲ್ಲೆಯ ಪೊಲೀಸ್ ಉನ್ನಾತಾಧಿಕಾರಿಗಳು ರವಿವಾರ ತಿಳಿಸಿದ್ದಾರೆ.

ಪೊಲೀಸರ ಈ ಒಪ್ಪಿಗೆ ಏನನ್ನು ಸೂಚಿಸುತ್ತಿದೆ? ಮತಾಂತರ ವಿರೋಧಿ ಕಾಯ್ದೆಯನ್ನು ದುರ್ಬಳಕೆ ಮಾಡಿಕೊಂಡು ಮುಸ್ಲಿಮರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಆತಂಕಗಳಿಗೆ ಇದು ಪುಷ್ಟಿ ನೀಡುತ್ತಿದೆ.
ಮೂವರು ಮುಸ್ಲಿಮರು 24 ವರ್ಷದ ಯುವತಿಯನ್ನು ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿದರು ಎಂಬ ದೂರು ಅಸತ್ಯವಾಗಿದೆ ಎಂದು ತನಿಖೆಯ ಬಳಿಕ ಪೊಲೀಸರೇ ಒಪ್ಪಿಕೊಂಡಿದ್ದಾರೆ.

ಏನಿದು ಪ್ರಕರಣ?

ಜನವರಿ 1 ರಂದು ಮೂವರು ಮುಸ್ಲಿಮರ ಮೇಲೆ ಬಲವಂತದ ಮತಾಂತರ ಪ್ರಕರಣದ ಕೇಸು ದಾಖಲಾಗಿತ್ತು. ‘ಸೆಪ್ಟೆಂಬರ್ 9, 2020ರಂದು ಮುಸ್ಲಿಮೇತರ ಯುವತಿ ಮನೆ ತೊರೆದು ಅಬ್ರಾರ್ ಖಾನ್ ಎಂಬ ಯುವಕನ ಜೊತೆ ದೆಹಲಿಗೆ ಹೋಗಿದ್ದಳು. ಫರೀದ್‌ಪುರ್ ಠಾಣೆಯಲ್ಲಿ ಅಪಹರಣದ ದೂರು ದಾಖಾಲಾಗಿತು. ಯುವತಿ ದೆಹಲಿಯ ತುಘಲಕ್‌ಬಾದ್‌ನಲ್ಲಿ ಅಬ್ರಾರ್ ಜೊತೆ 15 ದಿನ ಕಳೆದ ತನ್ನ ಮನೆಗೆ ವಾಪಸ್ಸಾದಳು. ನಂತರ ಆಕೆ ತನ್ನ ಸೋದರ ಮಾವನನ್ನು ವಿವಾಹವಾಗಿದ್ದಾಳೆ’ ಎಂದು ಬರೇಲಿಯ ಸೀನಿಯರ್ ಸುಪರಿಂಡೆಂಟ್ ಆಫ್ ಪೊಲೀಸ್ (ಎಸ್‌ಎಸ್‌ಪಿ) ರೋಹಿತ್ ಸಿಂಗ್ ಸಜ್ವಾನ್ ಪಿಟಿಐಗೆ ತಿಳಿಸಿದ್ದಾರೆ.

‘ದೂರಿನ ಪ್ರಕಾರ, 2019ರ ಡಿಸೆಂಬರ್ 1ರಂದು ಫರೀದ್‌ಪುರ್‌ನಲ್ಲಿರುವ ತನ್ನ ಮನೆಗೆ ಯುವತಿ ವಾಪಸ್ಸಾಗುವ ಸಂದರ್ಭದಲ್ಲಿ ಅಬ್ರಾರ್ ಖಾನ್ ಮತ್ತು ಆತನ ಸಂಬಂಧಿಗಳಾದ ಮೈಸುರ್, ಇರ್ಷಾರ್‌ ಮದುವೆಗಾಗಿ ಆಕೆಯನ್ನು ಇಸ್ಲಾಂಗೆ ಮತಾಂತರವಾಗಲು ಬಲವಂತ ಮಾಡಿದರು ಎಂದು ಆರೋಪಿಸಲಾಗಿದೆ. ಆದರೆ ಪೊಲೀಸರು ಕಂಡುಕೊಂಡ ಪ್ರಕಾರ, ಆ ಮೂವರೂ ಮುಸ್ಲಿಂ ಯುವಕರು ಅಂದು ಆ ಜಾಗದಲ್ಲಿ ಇರಲೇ ಇಲ್ಲ. ಪೊಲೀಸರು ಸಂಗ್ರಹಿಸಿದ ಪುರಾವೆಗಳ ಪ್ರಕಾರ, ಈ ಮೂವರ ವಿರುದ್ಧ ಯುವತಿ ಮತ್ತು ಆಕೆಯ ಸೋದರ ಮಾವ ನೀಡಿದ ದೂರು ತಪ್ಪಾಗಿದೆ. ಮತಾಂತರ ಕಾಯ್ದೆಯ ಪ್ರಾವಿಷನ್‌ಗಳ ಪ್ರಕಾರ ಈ ವಿಷಯವನ್ನು ವಜಾಗೊಳಿಸಲಾಗುವುದು’ ಎಂದು ಎಸ್‌ಎಸ್‌ಪಿ ರೋಹಿತ್ ಸಿಂಗ್ ಹೇಳಿದ್ದಾರೆ.

ನಮ್ಮ ತನಿಖೆಯ ಸಮಯದಲ್ಲಿ, ಘಟನೆ ನಡೆದಾಗ ಆ ದಿನ ಆರೋಪಿಗಳು ಆ ಸ್ಥಳದಲ್ಲಿ ಹಾಜರಿರಲಿಲ್ಲ ಎಂದು ನಾವು ಕಂಡುಕೊಂಡಿದ್ದೇವೆ. ಪೊಲೀಸರು ಸಂಗ್ರಹಿಸಿದ ಸಾಕ್ಷ್ಯಗಳ ಪ್ರಕಾರ, ಮೂವರು ಪುರುಷರ ವಿರುದ್ಧ ಮಹಿಳೆ ಮಾಡಿರುವ ಆರೋಪಗಳು ತಪ್ಪು.

ಆದರೆ, ಮಾವಂದಿರ ಮನೆಯಲ್ಲಿದ್ದ ಯುವತಿಗೆ ಅಬ್ರಾರ್ ಬೆದರಿಕೆಗಳನ್ನು ಹಾಕಿದ್ದ ಎಂಬ ಆರೋಪವನ್ನು ಪರಿಶೀಲಿಸಲಾಗುವುದು ಎಂದು ಅವರು ಹೇಳಿದ್ದಾರೆ.

‘ಡಿಸೆಂಬರ್ 11 ರಂದು ಯುವತಿಯ ಸೋದರಮಾವ ಬರೇಲಿ ಜಿಲ್ಲೆಯ ಅವೊನ್ಲಾ ಎಂಬಲ್ಲಿ ಯುವತಿಯನ್ನು ಮದುವೆಯಾಗಿದ್ದಾನೆ. ಯುವತಿಯ ಸೋದಮಾವಂದಿರ ಮನೆಗೆ ಹೋದ ಅಬ್ರಾರ್, ಬೇಗನೆ ಫರೀದ್‌ಪುರಕ್ಕೆ ಬಾ, ಇಲ್ಲವಾದರೆ ತೊಂದರೆಯಾಗುತ್ತದೆ ಎಂದು ಯುವತಿಗೆ ಹೇಳಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ. ಇದನ್ನು ಪರೀಕ್ಷಿಸುತ್ತಿದ್ದು, ಆರೋಪ ಸತ್ಯವಾಗಿದ್ದರೆ ಕಾನೂನು ಪ್ರಕಾ ಕ್ರಮ ಜರುಗಿಸುತ್ತೇವೆ’ ಎಂದು ಎಸ್‌ಎಸ್‌ಪಿ ರೋಹಿತ್ ಸಿಂಗ್ ಹೇಳಿದ್ದಾರೆ.

ನವಂಬರ್ 2020ರಲ್ಲಿ ಲವ್ ಜಿಹಾದ್ ‘ತಡೆಯಲು’ ಯೋಗಿ ಆದಿತ್ಯನಾಥ್ ಸರ್ಕಾರ ಜಾರಿಗೆ ತಂದ ಮತಾಂತರ ವಿರೋದಿ ಕಾಯ್ದೆ ಮುಸ್ಲಿಂರಲ್ಲಿ ಆತಂಕ ಮೂಡಿಸಿದೆ. ಮುಸ್ಲಿಂ ಪುರುಷರನ್ನು ಟಾರ್ಗೆಟ್ ಮಾಡಲು ಮತ್ತು ಅಂತರ್‌ಧರ್ಮೀಯ ಸಂಬಂಧಗಳನ್ನು ತಡೆಯಲೆಂದೇ ಈ ಕಾಯ್ದೆ ತರಲಾಗಿದೆ ಎಂಬ ಆತಂಕಗಳು ಮನೆ ಮಾಡಿವೆ.

ಮುಸ್ಲಿಂ ಪುರುಷರು ಆಮಿಷ-ಓಲೈಕೆಗಳ ಮೂಲಕ ಮತ್ತು ಮದುವೆಯ ಮೂಲಕ ಹಿಂದೂ ಯುವತಿಯರನ್ನು ಇಸ್ಲಾಂಗೆ ಮತಾಂತರ ಮಾಡುವ ಸಂಚು ನಡೆಸುತ್ತಿದ್ದಾರೆ ಎಂಬ ಸಂಘ ಪರಿವಾರದ ಅನಿಸಿಕೆಯನ್ನು ಕಾನೂನಾತ್ಮಕಗೊಳಿಸಲೆಂದೇ ಈ ಕಾಯ್ದೆ ಜಾರಿಗೆ ತರಲಾಗಿದೆ ಎಂದು ಪ್ರಗತಿಪರರು ಹೇಳುತ್ತಿದ್ದಾರೆ. (ಸಂಘ ಪರಿವಾರದ ಈ ‘ಥಿಯರಿ’ಗೆ ಯಾವುದೇ ಆಧಾರವಿಲ್ಲದಿದ್ದರೂ ಕೇಂದ್ರ ಸರ್ಕಾರವೂ ಇದನ್ನು ಒಪ್ಪಿಕೊಂಡಿದೆ) ಬಿಜೆಪಿ ಆಡಳಿತವಿರುವ ಹಲವು ರಾಜ್ಯಗಳು ಮತಾಂತರ ವಿರೋಧಿ ಕಾಯ್ದೆಯನ್ನು ಜಾರಿಗೆ ತಂದಿವೆ. ಇನ್ನು ಹಲವು ರಾಜ್ಯಗಳು ತರುವ ತಯಾರಿಯಲ್ಲಿವೆ.

ಶಿವಮೊಗ್ಗದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಕಾರ್ಯಕಾರಿಣಿ ಸಮಿತಿಯ ಸಭೆಯಲ್ಲಿ ಕರ್ನಾಟಕದಲ್ಲಿಯೂ ಈ ಕಾಯ್ದೆ ತರುವ ಕುರಿತು ಚರ್ಚೆ ನಡೆದಿದೆ.


ಇದನ್ನೂ ಓದಿ: ಸಾವಿರವಲ್ಲ, ಕೇವಲ ಒಂದು ಸುಳ್ಳು ಹೇಳಿ ಮದುವೆಯಾದಳು: ‘ಅವನು’ ಈಗ ಜೈಲಿನಲ್ಲಿ, ‘ಅವಳು’ ಪೋಷಕರ ಬಂಧನದಲ್ಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...