Homeಮುಖಪುಟಸುಳ್ಳು ‘ಬಲವಂತದ ಮತಾಂತರ’ ಪ್ರಕರಣ: ಒಪ್ಪಿಕೊಂಡ ಯುಪಿ ಪೊಲೀಸರು

ಸುಳ್ಳು ‘ಬಲವಂತದ ಮತಾಂತರ’ ಪ್ರಕರಣ: ಒಪ್ಪಿಕೊಂಡ ಯುಪಿ ಪೊಲೀಸರು

‘ಮೂವರು ಮುಸ್ಲಿಮರನ್ನು ತಪ್ಪಾಗಿ ಮತಾಂತರ ಪ್ರಕರಣದಲ್ಲಿ ಫ್ರೇಮ್ ಮಾಡಲಾಗಿದೆ’ ಎಂದು ಯುಪಿ ಪೊಲೀಸರೇ ಒಪ್ಪಿಕೊಂಡಿದ್ದಾರೆ.

- Advertisement -
- Advertisement -

‘ಮೂವರು ಮುಸ್ಲಿಮ್ ಯುವಕರನ್ನು ಬಲವಂತದ ಮತಾಂತರ ಪ್ರಕರಣದಲ್ಲಿ ಅನಗತ್ಯವಾಗಿ, ತಪ್ಪಾಗಿ ಸಿಕ್ಕಿಸಿಲಾಗಿದೆ’ ಎಂದು ಉತ್ತರಪ್ರದೇಶದ ಬರೇಲಿ ಜಿಲ್ಲೆಯ ಪೊಲೀಸ್ ಉನ್ನಾತಾಧಿಕಾರಿಗಳು ರವಿವಾರ ತಿಳಿಸಿದ್ದಾರೆ.

ಪೊಲೀಸರ ಈ ಒಪ್ಪಿಗೆ ಏನನ್ನು ಸೂಚಿಸುತ್ತಿದೆ? ಮತಾಂತರ ವಿರೋಧಿ ಕಾಯ್ದೆಯನ್ನು ದುರ್ಬಳಕೆ ಮಾಡಿಕೊಂಡು ಮುಸ್ಲಿಮರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಆತಂಕಗಳಿಗೆ ಇದು ಪುಷ್ಟಿ ನೀಡುತ್ತಿದೆ.
ಮೂವರು ಮುಸ್ಲಿಮರು 24 ವರ್ಷದ ಯುವತಿಯನ್ನು ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿದರು ಎಂಬ ದೂರು ಅಸತ್ಯವಾಗಿದೆ ಎಂದು ತನಿಖೆಯ ಬಳಿಕ ಪೊಲೀಸರೇ ಒಪ್ಪಿಕೊಂಡಿದ್ದಾರೆ.

ಏನಿದು ಪ್ರಕರಣ?

ಜನವರಿ 1 ರಂದು ಮೂವರು ಮುಸ್ಲಿಮರ ಮೇಲೆ ಬಲವಂತದ ಮತಾಂತರ ಪ್ರಕರಣದ ಕೇಸು ದಾಖಲಾಗಿತ್ತು. ‘ಸೆಪ್ಟೆಂಬರ್ 9, 2020ರಂದು ಮುಸ್ಲಿಮೇತರ ಯುವತಿ ಮನೆ ತೊರೆದು ಅಬ್ರಾರ್ ಖಾನ್ ಎಂಬ ಯುವಕನ ಜೊತೆ ದೆಹಲಿಗೆ ಹೋಗಿದ್ದಳು. ಫರೀದ್‌ಪುರ್ ಠಾಣೆಯಲ್ಲಿ ಅಪಹರಣದ ದೂರು ದಾಖಾಲಾಗಿತು. ಯುವತಿ ದೆಹಲಿಯ ತುಘಲಕ್‌ಬಾದ್‌ನಲ್ಲಿ ಅಬ್ರಾರ್ ಜೊತೆ 15 ದಿನ ಕಳೆದ ತನ್ನ ಮನೆಗೆ ವಾಪಸ್ಸಾದಳು. ನಂತರ ಆಕೆ ತನ್ನ ಸೋದರ ಮಾವನನ್ನು ವಿವಾಹವಾಗಿದ್ದಾಳೆ’ ಎಂದು ಬರೇಲಿಯ ಸೀನಿಯರ್ ಸುಪರಿಂಡೆಂಟ್ ಆಫ್ ಪೊಲೀಸ್ (ಎಸ್‌ಎಸ್‌ಪಿ) ರೋಹಿತ್ ಸಿಂಗ್ ಸಜ್ವಾನ್ ಪಿಟಿಐಗೆ ತಿಳಿಸಿದ್ದಾರೆ.

‘ದೂರಿನ ಪ್ರಕಾರ, 2019ರ ಡಿಸೆಂಬರ್ 1ರಂದು ಫರೀದ್‌ಪುರ್‌ನಲ್ಲಿರುವ ತನ್ನ ಮನೆಗೆ ಯುವತಿ ವಾಪಸ್ಸಾಗುವ ಸಂದರ್ಭದಲ್ಲಿ ಅಬ್ರಾರ್ ಖಾನ್ ಮತ್ತು ಆತನ ಸಂಬಂಧಿಗಳಾದ ಮೈಸುರ್, ಇರ್ಷಾರ್‌ ಮದುವೆಗಾಗಿ ಆಕೆಯನ್ನು ಇಸ್ಲಾಂಗೆ ಮತಾಂತರವಾಗಲು ಬಲವಂತ ಮಾಡಿದರು ಎಂದು ಆರೋಪಿಸಲಾಗಿದೆ. ಆದರೆ ಪೊಲೀಸರು ಕಂಡುಕೊಂಡ ಪ್ರಕಾರ, ಆ ಮೂವರೂ ಮುಸ್ಲಿಂ ಯುವಕರು ಅಂದು ಆ ಜಾಗದಲ್ಲಿ ಇರಲೇ ಇಲ್ಲ. ಪೊಲೀಸರು ಸಂಗ್ರಹಿಸಿದ ಪುರಾವೆಗಳ ಪ್ರಕಾರ, ಈ ಮೂವರ ವಿರುದ್ಧ ಯುವತಿ ಮತ್ತು ಆಕೆಯ ಸೋದರ ಮಾವ ನೀಡಿದ ದೂರು ತಪ್ಪಾಗಿದೆ. ಮತಾಂತರ ಕಾಯ್ದೆಯ ಪ್ರಾವಿಷನ್‌ಗಳ ಪ್ರಕಾರ ಈ ವಿಷಯವನ್ನು ವಜಾಗೊಳಿಸಲಾಗುವುದು’ ಎಂದು ಎಸ್‌ಎಸ್‌ಪಿ ರೋಹಿತ್ ಸಿಂಗ್ ಹೇಳಿದ್ದಾರೆ.

ನಮ್ಮ ತನಿಖೆಯ ಸಮಯದಲ್ಲಿ, ಘಟನೆ ನಡೆದಾಗ ಆ ದಿನ ಆರೋಪಿಗಳು ಆ ಸ್ಥಳದಲ್ಲಿ ಹಾಜರಿರಲಿಲ್ಲ ಎಂದು ನಾವು ಕಂಡುಕೊಂಡಿದ್ದೇವೆ. ಪೊಲೀಸರು ಸಂಗ್ರಹಿಸಿದ ಸಾಕ್ಷ್ಯಗಳ ಪ್ರಕಾರ, ಮೂವರು ಪುರುಷರ ವಿರುದ್ಧ ಮಹಿಳೆ ಮಾಡಿರುವ ಆರೋಪಗಳು ತಪ್ಪು.

ಆದರೆ, ಮಾವಂದಿರ ಮನೆಯಲ್ಲಿದ್ದ ಯುವತಿಗೆ ಅಬ್ರಾರ್ ಬೆದರಿಕೆಗಳನ್ನು ಹಾಕಿದ್ದ ಎಂಬ ಆರೋಪವನ್ನು ಪರಿಶೀಲಿಸಲಾಗುವುದು ಎಂದು ಅವರು ಹೇಳಿದ್ದಾರೆ.

‘ಡಿಸೆಂಬರ್ 11 ರಂದು ಯುವತಿಯ ಸೋದರಮಾವ ಬರೇಲಿ ಜಿಲ್ಲೆಯ ಅವೊನ್ಲಾ ಎಂಬಲ್ಲಿ ಯುವತಿಯನ್ನು ಮದುವೆಯಾಗಿದ್ದಾನೆ. ಯುವತಿಯ ಸೋದಮಾವಂದಿರ ಮನೆಗೆ ಹೋದ ಅಬ್ರಾರ್, ಬೇಗನೆ ಫರೀದ್‌ಪುರಕ್ಕೆ ಬಾ, ಇಲ್ಲವಾದರೆ ತೊಂದರೆಯಾಗುತ್ತದೆ ಎಂದು ಯುವತಿಗೆ ಹೇಳಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ. ಇದನ್ನು ಪರೀಕ್ಷಿಸುತ್ತಿದ್ದು, ಆರೋಪ ಸತ್ಯವಾಗಿದ್ದರೆ ಕಾನೂನು ಪ್ರಕಾ ಕ್ರಮ ಜರುಗಿಸುತ್ತೇವೆ’ ಎಂದು ಎಸ್‌ಎಸ್‌ಪಿ ರೋಹಿತ್ ಸಿಂಗ್ ಹೇಳಿದ್ದಾರೆ.

ನವಂಬರ್ 2020ರಲ್ಲಿ ಲವ್ ಜಿಹಾದ್ ‘ತಡೆಯಲು’ ಯೋಗಿ ಆದಿತ್ಯನಾಥ್ ಸರ್ಕಾರ ಜಾರಿಗೆ ತಂದ ಮತಾಂತರ ವಿರೋದಿ ಕಾಯ್ದೆ ಮುಸ್ಲಿಂರಲ್ಲಿ ಆತಂಕ ಮೂಡಿಸಿದೆ. ಮುಸ್ಲಿಂ ಪುರುಷರನ್ನು ಟಾರ್ಗೆಟ್ ಮಾಡಲು ಮತ್ತು ಅಂತರ್‌ಧರ್ಮೀಯ ಸಂಬಂಧಗಳನ್ನು ತಡೆಯಲೆಂದೇ ಈ ಕಾಯ್ದೆ ತರಲಾಗಿದೆ ಎಂಬ ಆತಂಕಗಳು ಮನೆ ಮಾಡಿವೆ.

ಮುಸ್ಲಿಂ ಪುರುಷರು ಆಮಿಷ-ಓಲೈಕೆಗಳ ಮೂಲಕ ಮತ್ತು ಮದುವೆಯ ಮೂಲಕ ಹಿಂದೂ ಯುವತಿಯರನ್ನು ಇಸ್ಲಾಂಗೆ ಮತಾಂತರ ಮಾಡುವ ಸಂಚು ನಡೆಸುತ್ತಿದ್ದಾರೆ ಎಂಬ ಸಂಘ ಪರಿವಾರದ ಅನಿಸಿಕೆಯನ್ನು ಕಾನೂನಾತ್ಮಕಗೊಳಿಸಲೆಂದೇ ಈ ಕಾಯ್ದೆ ಜಾರಿಗೆ ತರಲಾಗಿದೆ ಎಂದು ಪ್ರಗತಿಪರರು ಹೇಳುತ್ತಿದ್ದಾರೆ. (ಸಂಘ ಪರಿವಾರದ ಈ ‘ಥಿಯರಿ’ಗೆ ಯಾವುದೇ ಆಧಾರವಿಲ್ಲದಿದ್ದರೂ ಕೇಂದ್ರ ಸರ್ಕಾರವೂ ಇದನ್ನು ಒಪ್ಪಿಕೊಂಡಿದೆ) ಬಿಜೆಪಿ ಆಡಳಿತವಿರುವ ಹಲವು ರಾಜ್ಯಗಳು ಮತಾಂತರ ವಿರೋಧಿ ಕಾಯ್ದೆಯನ್ನು ಜಾರಿಗೆ ತಂದಿವೆ. ಇನ್ನು ಹಲವು ರಾಜ್ಯಗಳು ತರುವ ತಯಾರಿಯಲ್ಲಿವೆ.

ಶಿವಮೊಗ್ಗದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಕಾರ್ಯಕಾರಿಣಿ ಸಮಿತಿಯ ಸಭೆಯಲ್ಲಿ ಕರ್ನಾಟಕದಲ್ಲಿಯೂ ಈ ಕಾಯ್ದೆ ತರುವ ಕುರಿತು ಚರ್ಚೆ ನಡೆದಿದೆ.


ಇದನ್ನೂ ಓದಿ: ಸಾವಿರವಲ್ಲ, ಕೇವಲ ಒಂದು ಸುಳ್ಳು ಹೇಳಿ ಮದುವೆಯಾದಳು: ‘ಅವನು’ ಈಗ ಜೈಲಿನಲ್ಲಿ, ‘ಅವಳು’ ಪೋಷಕರ ಬಂಧನದಲ್ಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...