Homeಮುಖಪುಟಸುಳ್ಳು ‘ಬಲವಂತದ ಮತಾಂತರ’ ಪ್ರಕರಣ: ಒಪ್ಪಿಕೊಂಡ ಯುಪಿ ಪೊಲೀಸರು

ಸುಳ್ಳು ‘ಬಲವಂತದ ಮತಾಂತರ’ ಪ್ರಕರಣ: ಒಪ್ಪಿಕೊಂಡ ಯುಪಿ ಪೊಲೀಸರು

‘ಮೂವರು ಮುಸ್ಲಿಮರನ್ನು ತಪ್ಪಾಗಿ ಮತಾಂತರ ಪ್ರಕರಣದಲ್ಲಿ ಫ್ರೇಮ್ ಮಾಡಲಾಗಿದೆ’ ಎಂದು ಯುಪಿ ಪೊಲೀಸರೇ ಒಪ್ಪಿಕೊಂಡಿದ್ದಾರೆ.

- Advertisement -
- Advertisement -

‘ಮೂವರು ಮುಸ್ಲಿಮ್ ಯುವಕರನ್ನು ಬಲವಂತದ ಮತಾಂತರ ಪ್ರಕರಣದಲ್ಲಿ ಅನಗತ್ಯವಾಗಿ, ತಪ್ಪಾಗಿ ಸಿಕ್ಕಿಸಿಲಾಗಿದೆ’ ಎಂದು ಉತ್ತರಪ್ರದೇಶದ ಬರೇಲಿ ಜಿಲ್ಲೆಯ ಪೊಲೀಸ್ ಉನ್ನಾತಾಧಿಕಾರಿಗಳು ರವಿವಾರ ತಿಳಿಸಿದ್ದಾರೆ.

ಪೊಲೀಸರ ಈ ಒಪ್ಪಿಗೆ ಏನನ್ನು ಸೂಚಿಸುತ್ತಿದೆ? ಮತಾಂತರ ವಿರೋಧಿ ಕಾಯ್ದೆಯನ್ನು ದುರ್ಬಳಕೆ ಮಾಡಿಕೊಂಡು ಮುಸ್ಲಿಮರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಆತಂಕಗಳಿಗೆ ಇದು ಪುಷ್ಟಿ ನೀಡುತ್ತಿದೆ.
ಮೂವರು ಮುಸ್ಲಿಮರು 24 ವರ್ಷದ ಯುವತಿಯನ್ನು ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿದರು ಎಂಬ ದೂರು ಅಸತ್ಯವಾಗಿದೆ ಎಂದು ತನಿಖೆಯ ಬಳಿಕ ಪೊಲೀಸರೇ ಒಪ್ಪಿಕೊಂಡಿದ್ದಾರೆ.

ಏನಿದು ಪ್ರಕರಣ?

ಜನವರಿ 1 ರಂದು ಮೂವರು ಮುಸ್ಲಿಮರ ಮೇಲೆ ಬಲವಂತದ ಮತಾಂತರ ಪ್ರಕರಣದ ಕೇಸು ದಾಖಲಾಗಿತ್ತು. ‘ಸೆಪ್ಟೆಂಬರ್ 9, 2020ರಂದು ಮುಸ್ಲಿಮೇತರ ಯುವತಿ ಮನೆ ತೊರೆದು ಅಬ್ರಾರ್ ಖಾನ್ ಎಂಬ ಯುವಕನ ಜೊತೆ ದೆಹಲಿಗೆ ಹೋಗಿದ್ದಳು. ಫರೀದ್‌ಪುರ್ ಠಾಣೆಯಲ್ಲಿ ಅಪಹರಣದ ದೂರು ದಾಖಾಲಾಗಿತು. ಯುವತಿ ದೆಹಲಿಯ ತುಘಲಕ್‌ಬಾದ್‌ನಲ್ಲಿ ಅಬ್ರಾರ್ ಜೊತೆ 15 ದಿನ ಕಳೆದ ತನ್ನ ಮನೆಗೆ ವಾಪಸ್ಸಾದಳು. ನಂತರ ಆಕೆ ತನ್ನ ಸೋದರ ಮಾವನನ್ನು ವಿವಾಹವಾಗಿದ್ದಾಳೆ’ ಎಂದು ಬರೇಲಿಯ ಸೀನಿಯರ್ ಸುಪರಿಂಡೆಂಟ್ ಆಫ್ ಪೊಲೀಸ್ (ಎಸ್‌ಎಸ್‌ಪಿ) ರೋಹಿತ್ ಸಿಂಗ್ ಸಜ್ವಾನ್ ಪಿಟಿಐಗೆ ತಿಳಿಸಿದ್ದಾರೆ.

‘ದೂರಿನ ಪ್ರಕಾರ, 2019ರ ಡಿಸೆಂಬರ್ 1ರಂದು ಫರೀದ್‌ಪುರ್‌ನಲ್ಲಿರುವ ತನ್ನ ಮನೆಗೆ ಯುವತಿ ವಾಪಸ್ಸಾಗುವ ಸಂದರ್ಭದಲ್ಲಿ ಅಬ್ರಾರ್ ಖಾನ್ ಮತ್ತು ಆತನ ಸಂಬಂಧಿಗಳಾದ ಮೈಸುರ್, ಇರ್ಷಾರ್‌ ಮದುವೆಗಾಗಿ ಆಕೆಯನ್ನು ಇಸ್ಲಾಂಗೆ ಮತಾಂತರವಾಗಲು ಬಲವಂತ ಮಾಡಿದರು ಎಂದು ಆರೋಪಿಸಲಾಗಿದೆ. ಆದರೆ ಪೊಲೀಸರು ಕಂಡುಕೊಂಡ ಪ್ರಕಾರ, ಆ ಮೂವರೂ ಮುಸ್ಲಿಂ ಯುವಕರು ಅಂದು ಆ ಜಾಗದಲ್ಲಿ ಇರಲೇ ಇಲ್ಲ. ಪೊಲೀಸರು ಸಂಗ್ರಹಿಸಿದ ಪುರಾವೆಗಳ ಪ್ರಕಾರ, ಈ ಮೂವರ ವಿರುದ್ಧ ಯುವತಿ ಮತ್ತು ಆಕೆಯ ಸೋದರ ಮಾವ ನೀಡಿದ ದೂರು ತಪ್ಪಾಗಿದೆ. ಮತಾಂತರ ಕಾಯ್ದೆಯ ಪ್ರಾವಿಷನ್‌ಗಳ ಪ್ರಕಾರ ಈ ವಿಷಯವನ್ನು ವಜಾಗೊಳಿಸಲಾಗುವುದು’ ಎಂದು ಎಸ್‌ಎಸ್‌ಪಿ ರೋಹಿತ್ ಸಿಂಗ್ ಹೇಳಿದ್ದಾರೆ.

ನಮ್ಮ ತನಿಖೆಯ ಸಮಯದಲ್ಲಿ, ಘಟನೆ ನಡೆದಾಗ ಆ ದಿನ ಆರೋಪಿಗಳು ಆ ಸ್ಥಳದಲ್ಲಿ ಹಾಜರಿರಲಿಲ್ಲ ಎಂದು ನಾವು ಕಂಡುಕೊಂಡಿದ್ದೇವೆ. ಪೊಲೀಸರು ಸಂಗ್ರಹಿಸಿದ ಸಾಕ್ಷ್ಯಗಳ ಪ್ರಕಾರ, ಮೂವರು ಪುರುಷರ ವಿರುದ್ಧ ಮಹಿಳೆ ಮಾಡಿರುವ ಆರೋಪಗಳು ತಪ್ಪು.

ಆದರೆ, ಮಾವಂದಿರ ಮನೆಯಲ್ಲಿದ್ದ ಯುವತಿಗೆ ಅಬ್ರಾರ್ ಬೆದರಿಕೆಗಳನ್ನು ಹಾಕಿದ್ದ ಎಂಬ ಆರೋಪವನ್ನು ಪರಿಶೀಲಿಸಲಾಗುವುದು ಎಂದು ಅವರು ಹೇಳಿದ್ದಾರೆ.

‘ಡಿಸೆಂಬರ್ 11 ರಂದು ಯುವತಿಯ ಸೋದರಮಾವ ಬರೇಲಿ ಜಿಲ್ಲೆಯ ಅವೊನ್ಲಾ ಎಂಬಲ್ಲಿ ಯುವತಿಯನ್ನು ಮದುವೆಯಾಗಿದ್ದಾನೆ. ಯುವತಿಯ ಸೋದಮಾವಂದಿರ ಮನೆಗೆ ಹೋದ ಅಬ್ರಾರ್, ಬೇಗನೆ ಫರೀದ್‌ಪುರಕ್ಕೆ ಬಾ, ಇಲ್ಲವಾದರೆ ತೊಂದರೆಯಾಗುತ್ತದೆ ಎಂದು ಯುವತಿಗೆ ಹೇಳಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ. ಇದನ್ನು ಪರೀಕ್ಷಿಸುತ್ತಿದ್ದು, ಆರೋಪ ಸತ್ಯವಾಗಿದ್ದರೆ ಕಾನೂನು ಪ್ರಕಾ ಕ್ರಮ ಜರುಗಿಸುತ್ತೇವೆ’ ಎಂದು ಎಸ್‌ಎಸ್‌ಪಿ ರೋಹಿತ್ ಸಿಂಗ್ ಹೇಳಿದ್ದಾರೆ.

ನವಂಬರ್ 2020ರಲ್ಲಿ ಲವ್ ಜಿಹಾದ್ ‘ತಡೆಯಲು’ ಯೋಗಿ ಆದಿತ್ಯನಾಥ್ ಸರ್ಕಾರ ಜಾರಿಗೆ ತಂದ ಮತಾಂತರ ವಿರೋದಿ ಕಾಯ್ದೆ ಮುಸ್ಲಿಂರಲ್ಲಿ ಆತಂಕ ಮೂಡಿಸಿದೆ. ಮುಸ್ಲಿಂ ಪುರುಷರನ್ನು ಟಾರ್ಗೆಟ್ ಮಾಡಲು ಮತ್ತು ಅಂತರ್‌ಧರ್ಮೀಯ ಸಂಬಂಧಗಳನ್ನು ತಡೆಯಲೆಂದೇ ಈ ಕಾಯ್ದೆ ತರಲಾಗಿದೆ ಎಂಬ ಆತಂಕಗಳು ಮನೆ ಮಾಡಿವೆ.

ಮುಸ್ಲಿಂ ಪುರುಷರು ಆಮಿಷ-ಓಲೈಕೆಗಳ ಮೂಲಕ ಮತ್ತು ಮದುವೆಯ ಮೂಲಕ ಹಿಂದೂ ಯುವತಿಯರನ್ನು ಇಸ್ಲಾಂಗೆ ಮತಾಂತರ ಮಾಡುವ ಸಂಚು ನಡೆಸುತ್ತಿದ್ದಾರೆ ಎಂಬ ಸಂಘ ಪರಿವಾರದ ಅನಿಸಿಕೆಯನ್ನು ಕಾನೂನಾತ್ಮಕಗೊಳಿಸಲೆಂದೇ ಈ ಕಾಯ್ದೆ ಜಾರಿಗೆ ತರಲಾಗಿದೆ ಎಂದು ಪ್ರಗತಿಪರರು ಹೇಳುತ್ತಿದ್ದಾರೆ. (ಸಂಘ ಪರಿವಾರದ ಈ ‘ಥಿಯರಿ’ಗೆ ಯಾವುದೇ ಆಧಾರವಿಲ್ಲದಿದ್ದರೂ ಕೇಂದ್ರ ಸರ್ಕಾರವೂ ಇದನ್ನು ಒಪ್ಪಿಕೊಂಡಿದೆ) ಬಿಜೆಪಿ ಆಡಳಿತವಿರುವ ಹಲವು ರಾಜ್ಯಗಳು ಮತಾಂತರ ವಿರೋಧಿ ಕಾಯ್ದೆಯನ್ನು ಜಾರಿಗೆ ತಂದಿವೆ. ಇನ್ನು ಹಲವು ರಾಜ್ಯಗಳು ತರುವ ತಯಾರಿಯಲ್ಲಿವೆ.

ಶಿವಮೊಗ್ಗದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಕಾರ್ಯಕಾರಿಣಿ ಸಮಿತಿಯ ಸಭೆಯಲ್ಲಿ ಕರ್ನಾಟಕದಲ್ಲಿಯೂ ಈ ಕಾಯ್ದೆ ತರುವ ಕುರಿತು ಚರ್ಚೆ ನಡೆದಿದೆ.


ಇದನ್ನೂ ಓದಿ: ಸಾವಿರವಲ್ಲ, ಕೇವಲ ಒಂದು ಸುಳ್ಳು ಹೇಳಿ ಮದುವೆಯಾದಳು: ‘ಅವನು’ ಈಗ ಜೈಲಿನಲ್ಲಿ, ‘ಅವಳು’ ಪೋಷಕರ ಬಂಧನದಲ್ಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...