Homeಮುಖಪುಟಸುಳ್ಳು ‘ಬಲವಂತದ ಮತಾಂತರ’ ಪ್ರಕರಣ: ಒಪ್ಪಿಕೊಂಡ ಯುಪಿ ಪೊಲೀಸರು

ಸುಳ್ಳು ‘ಬಲವಂತದ ಮತಾಂತರ’ ಪ್ರಕರಣ: ಒಪ್ಪಿಕೊಂಡ ಯುಪಿ ಪೊಲೀಸರು

‘ಮೂವರು ಮುಸ್ಲಿಮರನ್ನು ತಪ್ಪಾಗಿ ಮತಾಂತರ ಪ್ರಕರಣದಲ್ಲಿ ಫ್ರೇಮ್ ಮಾಡಲಾಗಿದೆ’ ಎಂದು ಯುಪಿ ಪೊಲೀಸರೇ ಒಪ್ಪಿಕೊಂಡಿದ್ದಾರೆ.

- Advertisement -
- Advertisement -

‘ಮೂವರು ಮುಸ್ಲಿಮ್ ಯುವಕರನ್ನು ಬಲವಂತದ ಮತಾಂತರ ಪ್ರಕರಣದಲ್ಲಿ ಅನಗತ್ಯವಾಗಿ, ತಪ್ಪಾಗಿ ಸಿಕ್ಕಿಸಿಲಾಗಿದೆ’ ಎಂದು ಉತ್ತರಪ್ರದೇಶದ ಬರೇಲಿ ಜಿಲ್ಲೆಯ ಪೊಲೀಸ್ ಉನ್ನಾತಾಧಿಕಾರಿಗಳು ರವಿವಾರ ತಿಳಿಸಿದ್ದಾರೆ.

ಪೊಲೀಸರ ಈ ಒಪ್ಪಿಗೆ ಏನನ್ನು ಸೂಚಿಸುತ್ತಿದೆ? ಮತಾಂತರ ವಿರೋಧಿ ಕಾಯ್ದೆಯನ್ನು ದುರ್ಬಳಕೆ ಮಾಡಿಕೊಂಡು ಮುಸ್ಲಿಮರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಆತಂಕಗಳಿಗೆ ಇದು ಪುಷ್ಟಿ ನೀಡುತ್ತಿದೆ.
ಮೂವರು ಮುಸ್ಲಿಮರು 24 ವರ್ಷದ ಯುವತಿಯನ್ನು ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿದರು ಎಂಬ ದೂರು ಅಸತ್ಯವಾಗಿದೆ ಎಂದು ತನಿಖೆಯ ಬಳಿಕ ಪೊಲೀಸರೇ ಒಪ್ಪಿಕೊಂಡಿದ್ದಾರೆ.

ಏನಿದು ಪ್ರಕರಣ?

ಜನವರಿ 1 ರಂದು ಮೂವರು ಮುಸ್ಲಿಮರ ಮೇಲೆ ಬಲವಂತದ ಮತಾಂತರ ಪ್ರಕರಣದ ಕೇಸು ದಾಖಲಾಗಿತ್ತು. ‘ಸೆಪ್ಟೆಂಬರ್ 9, 2020ರಂದು ಮುಸ್ಲಿಮೇತರ ಯುವತಿ ಮನೆ ತೊರೆದು ಅಬ್ರಾರ್ ಖಾನ್ ಎಂಬ ಯುವಕನ ಜೊತೆ ದೆಹಲಿಗೆ ಹೋಗಿದ್ದಳು. ಫರೀದ್‌ಪುರ್ ಠಾಣೆಯಲ್ಲಿ ಅಪಹರಣದ ದೂರು ದಾಖಾಲಾಗಿತು. ಯುವತಿ ದೆಹಲಿಯ ತುಘಲಕ್‌ಬಾದ್‌ನಲ್ಲಿ ಅಬ್ರಾರ್ ಜೊತೆ 15 ದಿನ ಕಳೆದ ತನ್ನ ಮನೆಗೆ ವಾಪಸ್ಸಾದಳು. ನಂತರ ಆಕೆ ತನ್ನ ಸೋದರ ಮಾವನನ್ನು ವಿವಾಹವಾಗಿದ್ದಾಳೆ’ ಎಂದು ಬರೇಲಿಯ ಸೀನಿಯರ್ ಸುಪರಿಂಡೆಂಟ್ ಆಫ್ ಪೊಲೀಸ್ (ಎಸ್‌ಎಸ್‌ಪಿ) ರೋಹಿತ್ ಸಿಂಗ್ ಸಜ್ವಾನ್ ಪಿಟಿಐಗೆ ತಿಳಿಸಿದ್ದಾರೆ.

‘ದೂರಿನ ಪ್ರಕಾರ, 2019ರ ಡಿಸೆಂಬರ್ 1ರಂದು ಫರೀದ್‌ಪುರ್‌ನಲ್ಲಿರುವ ತನ್ನ ಮನೆಗೆ ಯುವತಿ ವಾಪಸ್ಸಾಗುವ ಸಂದರ್ಭದಲ್ಲಿ ಅಬ್ರಾರ್ ಖಾನ್ ಮತ್ತು ಆತನ ಸಂಬಂಧಿಗಳಾದ ಮೈಸುರ್, ಇರ್ಷಾರ್‌ ಮದುವೆಗಾಗಿ ಆಕೆಯನ್ನು ಇಸ್ಲಾಂಗೆ ಮತಾಂತರವಾಗಲು ಬಲವಂತ ಮಾಡಿದರು ಎಂದು ಆರೋಪಿಸಲಾಗಿದೆ. ಆದರೆ ಪೊಲೀಸರು ಕಂಡುಕೊಂಡ ಪ್ರಕಾರ, ಆ ಮೂವರೂ ಮುಸ್ಲಿಂ ಯುವಕರು ಅಂದು ಆ ಜಾಗದಲ್ಲಿ ಇರಲೇ ಇಲ್ಲ. ಪೊಲೀಸರು ಸಂಗ್ರಹಿಸಿದ ಪುರಾವೆಗಳ ಪ್ರಕಾರ, ಈ ಮೂವರ ವಿರುದ್ಧ ಯುವತಿ ಮತ್ತು ಆಕೆಯ ಸೋದರ ಮಾವ ನೀಡಿದ ದೂರು ತಪ್ಪಾಗಿದೆ. ಮತಾಂತರ ಕಾಯ್ದೆಯ ಪ್ರಾವಿಷನ್‌ಗಳ ಪ್ರಕಾರ ಈ ವಿಷಯವನ್ನು ವಜಾಗೊಳಿಸಲಾಗುವುದು’ ಎಂದು ಎಸ್‌ಎಸ್‌ಪಿ ರೋಹಿತ್ ಸಿಂಗ್ ಹೇಳಿದ್ದಾರೆ.

ನಮ್ಮ ತನಿಖೆಯ ಸಮಯದಲ್ಲಿ, ಘಟನೆ ನಡೆದಾಗ ಆ ದಿನ ಆರೋಪಿಗಳು ಆ ಸ್ಥಳದಲ್ಲಿ ಹಾಜರಿರಲಿಲ್ಲ ಎಂದು ನಾವು ಕಂಡುಕೊಂಡಿದ್ದೇವೆ. ಪೊಲೀಸರು ಸಂಗ್ರಹಿಸಿದ ಸಾಕ್ಷ್ಯಗಳ ಪ್ರಕಾರ, ಮೂವರು ಪುರುಷರ ವಿರುದ್ಧ ಮಹಿಳೆ ಮಾಡಿರುವ ಆರೋಪಗಳು ತಪ್ಪು.

ಆದರೆ, ಮಾವಂದಿರ ಮನೆಯಲ್ಲಿದ್ದ ಯುವತಿಗೆ ಅಬ್ರಾರ್ ಬೆದರಿಕೆಗಳನ್ನು ಹಾಕಿದ್ದ ಎಂಬ ಆರೋಪವನ್ನು ಪರಿಶೀಲಿಸಲಾಗುವುದು ಎಂದು ಅವರು ಹೇಳಿದ್ದಾರೆ.

‘ಡಿಸೆಂಬರ್ 11 ರಂದು ಯುವತಿಯ ಸೋದರಮಾವ ಬರೇಲಿ ಜಿಲ್ಲೆಯ ಅವೊನ್ಲಾ ಎಂಬಲ್ಲಿ ಯುವತಿಯನ್ನು ಮದುವೆಯಾಗಿದ್ದಾನೆ. ಯುವತಿಯ ಸೋದಮಾವಂದಿರ ಮನೆಗೆ ಹೋದ ಅಬ್ರಾರ್, ಬೇಗನೆ ಫರೀದ್‌ಪುರಕ್ಕೆ ಬಾ, ಇಲ್ಲವಾದರೆ ತೊಂದರೆಯಾಗುತ್ತದೆ ಎಂದು ಯುವತಿಗೆ ಹೇಳಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ. ಇದನ್ನು ಪರೀಕ್ಷಿಸುತ್ತಿದ್ದು, ಆರೋಪ ಸತ್ಯವಾಗಿದ್ದರೆ ಕಾನೂನು ಪ್ರಕಾ ಕ್ರಮ ಜರುಗಿಸುತ್ತೇವೆ’ ಎಂದು ಎಸ್‌ಎಸ್‌ಪಿ ರೋಹಿತ್ ಸಿಂಗ್ ಹೇಳಿದ್ದಾರೆ.

ನವಂಬರ್ 2020ರಲ್ಲಿ ಲವ್ ಜಿಹಾದ್ ‘ತಡೆಯಲು’ ಯೋಗಿ ಆದಿತ್ಯನಾಥ್ ಸರ್ಕಾರ ಜಾರಿಗೆ ತಂದ ಮತಾಂತರ ವಿರೋದಿ ಕಾಯ್ದೆ ಮುಸ್ಲಿಂರಲ್ಲಿ ಆತಂಕ ಮೂಡಿಸಿದೆ. ಮುಸ್ಲಿಂ ಪುರುಷರನ್ನು ಟಾರ್ಗೆಟ್ ಮಾಡಲು ಮತ್ತು ಅಂತರ್‌ಧರ್ಮೀಯ ಸಂಬಂಧಗಳನ್ನು ತಡೆಯಲೆಂದೇ ಈ ಕಾಯ್ದೆ ತರಲಾಗಿದೆ ಎಂಬ ಆತಂಕಗಳು ಮನೆ ಮಾಡಿವೆ.

ಮುಸ್ಲಿಂ ಪುರುಷರು ಆಮಿಷ-ಓಲೈಕೆಗಳ ಮೂಲಕ ಮತ್ತು ಮದುವೆಯ ಮೂಲಕ ಹಿಂದೂ ಯುವತಿಯರನ್ನು ಇಸ್ಲಾಂಗೆ ಮತಾಂತರ ಮಾಡುವ ಸಂಚು ನಡೆಸುತ್ತಿದ್ದಾರೆ ಎಂಬ ಸಂಘ ಪರಿವಾರದ ಅನಿಸಿಕೆಯನ್ನು ಕಾನೂನಾತ್ಮಕಗೊಳಿಸಲೆಂದೇ ಈ ಕಾಯ್ದೆ ಜಾರಿಗೆ ತರಲಾಗಿದೆ ಎಂದು ಪ್ರಗತಿಪರರು ಹೇಳುತ್ತಿದ್ದಾರೆ. (ಸಂಘ ಪರಿವಾರದ ಈ ‘ಥಿಯರಿ’ಗೆ ಯಾವುದೇ ಆಧಾರವಿಲ್ಲದಿದ್ದರೂ ಕೇಂದ್ರ ಸರ್ಕಾರವೂ ಇದನ್ನು ಒಪ್ಪಿಕೊಂಡಿದೆ) ಬಿಜೆಪಿ ಆಡಳಿತವಿರುವ ಹಲವು ರಾಜ್ಯಗಳು ಮತಾಂತರ ವಿರೋಧಿ ಕಾಯ್ದೆಯನ್ನು ಜಾರಿಗೆ ತಂದಿವೆ. ಇನ್ನು ಹಲವು ರಾಜ್ಯಗಳು ತರುವ ತಯಾರಿಯಲ್ಲಿವೆ.

ಶಿವಮೊಗ್ಗದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಕಾರ್ಯಕಾರಿಣಿ ಸಮಿತಿಯ ಸಭೆಯಲ್ಲಿ ಕರ್ನಾಟಕದಲ್ಲಿಯೂ ಈ ಕಾಯ್ದೆ ತರುವ ಕುರಿತು ಚರ್ಚೆ ನಡೆದಿದೆ.


ಇದನ್ನೂ ಓದಿ: ಸಾವಿರವಲ್ಲ, ಕೇವಲ ಒಂದು ಸುಳ್ಳು ಹೇಳಿ ಮದುವೆಯಾದಳು: ‘ಅವನು’ ಈಗ ಜೈಲಿನಲ್ಲಿ, ‘ಅವಳು’ ಪೋಷಕರ ಬಂಧನದಲ್ಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...