Homeಮುಖಪುಟಸುಳ್ಳು ‘ಬಲವಂತದ ಮತಾಂತರ’ ಪ್ರಕರಣ: ಒಪ್ಪಿಕೊಂಡ ಯುಪಿ ಪೊಲೀಸರು

ಸುಳ್ಳು ‘ಬಲವಂತದ ಮತಾಂತರ’ ಪ್ರಕರಣ: ಒಪ್ಪಿಕೊಂಡ ಯುಪಿ ಪೊಲೀಸರು

‘ಮೂವರು ಮುಸ್ಲಿಮರನ್ನು ತಪ್ಪಾಗಿ ಮತಾಂತರ ಪ್ರಕರಣದಲ್ಲಿ ಫ್ರೇಮ್ ಮಾಡಲಾಗಿದೆ’ ಎಂದು ಯುಪಿ ಪೊಲೀಸರೇ ಒಪ್ಪಿಕೊಂಡಿದ್ದಾರೆ.

- Advertisement -
- Advertisement -

‘ಮೂವರು ಮುಸ್ಲಿಮ್ ಯುವಕರನ್ನು ಬಲವಂತದ ಮತಾಂತರ ಪ್ರಕರಣದಲ್ಲಿ ಅನಗತ್ಯವಾಗಿ, ತಪ್ಪಾಗಿ ಸಿಕ್ಕಿಸಿಲಾಗಿದೆ’ ಎಂದು ಉತ್ತರಪ್ರದೇಶದ ಬರೇಲಿ ಜಿಲ್ಲೆಯ ಪೊಲೀಸ್ ಉನ್ನಾತಾಧಿಕಾರಿಗಳು ರವಿವಾರ ತಿಳಿಸಿದ್ದಾರೆ.

ಪೊಲೀಸರ ಈ ಒಪ್ಪಿಗೆ ಏನನ್ನು ಸೂಚಿಸುತ್ತಿದೆ? ಮತಾಂತರ ವಿರೋಧಿ ಕಾಯ್ದೆಯನ್ನು ದುರ್ಬಳಕೆ ಮಾಡಿಕೊಂಡು ಮುಸ್ಲಿಮರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಆತಂಕಗಳಿಗೆ ಇದು ಪುಷ್ಟಿ ನೀಡುತ್ತಿದೆ.
ಮೂವರು ಮುಸ್ಲಿಮರು 24 ವರ್ಷದ ಯುವತಿಯನ್ನು ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿದರು ಎಂಬ ದೂರು ಅಸತ್ಯವಾಗಿದೆ ಎಂದು ತನಿಖೆಯ ಬಳಿಕ ಪೊಲೀಸರೇ ಒಪ್ಪಿಕೊಂಡಿದ್ದಾರೆ.

ಏನಿದು ಪ್ರಕರಣ?

ಜನವರಿ 1 ರಂದು ಮೂವರು ಮುಸ್ಲಿಮರ ಮೇಲೆ ಬಲವಂತದ ಮತಾಂತರ ಪ್ರಕರಣದ ಕೇಸು ದಾಖಲಾಗಿತ್ತು. ‘ಸೆಪ್ಟೆಂಬರ್ 9, 2020ರಂದು ಮುಸ್ಲಿಮೇತರ ಯುವತಿ ಮನೆ ತೊರೆದು ಅಬ್ರಾರ್ ಖಾನ್ ಎಂಬ ಯುವಕನ ಜೊತೆ ದೆಹಲಿಗೆ ಹೋಗಿದ್ದಳು. ಫರೀದ್‌ಪುರ್ ಠಾಣೆಯಲ್ಲಿ ಅಪಹರಣದ ದೂರು ದಾಖಾಲಾಗಿತು. ಯುವತಿ ದೆಹಲಿಯ ತುಘಲಕ್‌ಬಾದ್‌ನಲ್ಲಿ ಅಬ್ರಾರ್ ಜೊತೆ 15 ದಿನ ಕಳೆದ ತನ್ನ ಮನೆಗೆ ವಾಪಸ್ಸಾದಳು. ನಂತರ ಆಕೆ ತನ್ನ ಸೋದರ ಮಾವನನ್ನು ವಿವಾಹವಾಗಿದ್ದಾಳೆ’ ಎಂದು ಬರೇಲಿಯ ಸೀನಿಯರ್ ಸುಪರಿಂಡೆಂಟ್ ಆಫ್ ಪೊಲೀಸ್ (ಎಸ್‌ಎಸ್‌ಪಿ) ರೋಹಿತ್ ಸಿಂಗ್ ಸಜ್ವಾನ್ ಪಿಟಿಐಗೆ ತಿಳಿಸಿದ್ದಾರೆ.

‘ದೂರಿನ ಪ್ರಕಾರ, 2019ರ ಡಿಸೆಂಬರ್ 1ರಂದು ಫರೀದ್‌ಪುರ್‌ನಲ್ಲಿರುವ ತನ್ನ ಮನೆಗೆ ಯುವತಿ ವಾಪಸ್ಸಾಗುವ ಸಂದರ್ಭದಲ್ಲಿ ಅಬ್ರಾರ್ ಖಾನ್ ಮತ್ತು ಆತನ ಸಂಬಂಧಿಗಳಾದ ಮೈಸುರ್, ಇರ್ಷಾರ್‌ ಮದುವೆಗಾಗಿ ಆಕೆಯನ್ನು ಇಸ್ಲಾಂಗೆ ಮತಾಂತರವಾಗಲು ಬಲವಂತ ಮಾಡಿದರು ಎಂದು ಆರೋಪಿಸಲಾಗಿದೆ. ಆದರೆ ಪೊಲೀಸರು ಕಂಡುಕೊಂಡ ಪ್ರಕಾರ, ಆ ಮೂವರೂ ಮುಸ್ಲಿಂ ಯುವಕರು ಅಂದು ಆ ಜಾಗದಲ್ಲಿ ಇರಲೇ ಇಲ್ಲ. ಪೊಲೀಸರು ಸಂಗ್ರಹಿಸಿದ ಪುರಾವೆಗಳ ಪ್ರಕಾರ, ಈ ಮೂವರ ವಿರುದ್ಧ ಯುವತಿ ಮತ್ತು ಆಕೆಯ ಸೋದರ ಮಾವ ನೀಡಿದ ದೂರು ತಪ್ಪಾಗಿದೆ. ಮತಾಂತರ ಕಾಯ್ದೆಯ ಪ್ರಾವಿಷನ್‌ಗಳ ಪ್ರಕಾರ ಈ ವಿಷಯವನ್ನು ವಜಾಗೊಳಿಸಲಾಗುವುದು’ ಎಂದು ಎಸ್‌ಎಸ್‌ಪಿ ರೋಹಿತ್ ಸಿಂಗ್ ಹೇಳಿದ್ದಾರೆ.

ನಮ್ಮ ತನಿಖೆಯ ಸಮಯದಲ್ಲಿ, ಘಟನೆ ನಡೆದಾಗ ಆ ದಿನ ಆರೋಪಿಗಳು ಆ ಸ್ಥಳದಲ್ಲಿ ಹಾಜರಿರಲಿಲ್ಲ ಎಂದು ನಾವು ಕಂಡುಕೊಂಡಿದ್ದೇವೆ. ಪೊಲೀಸರು ಸಂಗ್ರಹಿಸಿದ ಸಾಕ್ಷ್ಯಗಳ ಪ್ರಕಾರ, ಮೂವರು ಪುರುಷರ ವಿರುದ್ಧ ಮಹಿಳೆ ಮಾಡಿರುವ ಆರೋಪಗಳು ತಪ್ಪು.

ಆದರೆ, ಮಾವಂದಿರ ಮನೆಯಲ್ಲಿದ್ದ ಯುವತಿಗೆ ಅಬ್ರಾರ್ ಬೆದರಿಕೆಗಳನ್ನು ಹಾಕಿದ್ದ ಎಂಬ ಆರೋಪವನ್ನು ಪರಿಶೀಲಿಸಲಾಗುವುದು ಎಂದು ಅವರು ಹೇಳಿದ್ದಾರೆ.

‘ಡಿಸೆಂಬರ್ 11 ರಂದು ಯುವತಿಯ ಸೋದರಮಾವ ಬರೇಲಿ ಜಿಲ್ಲೆಯ ಅವೊನ್ಲಾ ಎಂಬಲ್ಲಿ ಯುವತಿಯನ್ನು ಮದುವೆಯಾಗಿದ್ದಾನೆ. ಯುವತಿಯ ಸೋದಮಾವಂದಿರ ಮನೆಗೆ ಹೋದ ಅಬ್ರಾರ್, ಬೇಗನೆ ಫರೀದ್‌ಪುರಕ್ಕೆ ಬಾ, ಇಲ್ಲವಾದರೆ ತೊಂದರೆಯಾಗುತ್ತದೆ ಎಂದು ಯುವತಿಗೆ ಹೇಳಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ. ಇದನ್ನು ಪರೀಕ್ಷಿಸುತ್ತಿದ್ದು, ಆರೋಪ ಸತ್ಯವಾಗಿದ್ದರೆ ಕಾನೂನು ಪ್ರಕಾ ಕ್ರಮ ಜರುಗಿಸುತ್ತೇವೆ’ ಎಂದು ಎಸ್‌ಎಸ್‌ಪಿ ರೋಹಿತ್ ಸಿಂಗ್ ಹೇಳಿದ್ದಾರೆ.

ನವಂಬರ್ 2020ರಲ್ಲಿ ಲವ್ ಜಿಹಾದ್ ‘ತಡೆಯಲು’ ಯೋಗಿ ಆದಿತ್ಯನಾಥ್ ಸರ್ಕಾರ ಜಾರಿಗೆ ತಂದ ಮತಾಂತರ ವಿರೋದಿ ಕಾಯ್ದೆ ಮುಸ್ಲಿಂರಲ್ಲಿ ಆತಂಕ ಮೂಡಿಸಿದೆ. ಮುಸ್ಲಿಂ ಪುರುಷರನ್ನು ಟಾರ್ಗೆಟ್ ಮಾಡಲು ಮತ್ತು ಅಂತರ್‌ಧರ್ಮೀಯ ಸಂಬಂಧಗಳನ್ನು ತಡೆಯಲೆಂದೇ ಈ ಕಾಯ್ದೆ ತರಲಾಗಿದೆ ಎಂಬ ಆತಂಕಗಳು ಮನೆ ಮಾಡಿವೆ.

ಮುಸ್ಲಿಂ ಪುರುಷರು ಆಮಿಷ-ಓಲೈಕೆಗಳ ಮೂಲಕ ಮತ್ತು ಮದುವೆಯ ಮೂಲಕ ಹಿಂದೂ ಯುವತಿಯರನ್ನು ಇಸ್ಲಾಂಗೆ ಮತಾಂತರ ಮಾಡುವ ಸಂಚು ನಡೆಸುತ್ತಿದ್ದಾರೆ ಎಂಬ ಸಂಘ ಪರಿವಾರದ ಅನಿಸಿಕೆಯನ್ನು ಕಾನೂನಾತ್ಮಕಗೊಳಿಸಲೆಂದೇ ಈ ಕಾಯ್ದೆ ಜಾರಿಗೆ ತರಲಾಗಿದೆ ಎಂದು ಪ್ರಗತಿಪರರು ಹೇಳುತ್ತಿದ್ದಾರೆ. (ಸಂಘ ಪರಿವಾರದ ಈ ‘ಥಿಯರಿ’ಗೆ ಯಾವುದೇ ಆಧಾರವಿಲ್ಲದಿದ್ದರೂ ಕೇಂದ್ರ ಸರ್ಕಾರವೂ ಇದನ್ನು ಒಪ್ಪಿಕೊಂಡಿದೆ) ಬಿಜೆಪಿ ಆಡಳಿತವಿರುವ ಹಲವು ರಾಜ್ಯಗಳು ಮತಾಂತರ ವಿರೋಧಿ ಕಾಯ್ದೆಯನ್ನು ಜಾರಿಗೆ ತಂದಿವೆ. ಇನ್ನು ಹಲವು ರಾಜ್ಯಗಳು ತರುವ ತಯಾರಿಯಲ್ಲಿವೆ.

ಶಿವಮೊಗ್ಗದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಕಾರ್ಯಕಾರಿಣಿ ಸಮಿತಿಯ ಸಭೆಯಲ್ಲಿ ಕರ್ನಾಟಕದಲ್ಲಿಯೂ ಈ ಕಾಯ್ದೆ ತರುವ ಕುರಿತು ಚರ್ಚೆ ನಡೆದಿದೆ.


ಇದನ್ನೂ ಓದಿ: ಸಾವಿರವಲ್ಲ, ಕೇವಲ ಒಂದು ಸುಳ್ಳು ಹೇಳಿ ಮದುವೆಯಾದಳು: ‘ಅವನು’ ಈಗ ಜೈಲಿನಲ್ಲಿ, ‘ಅವಳು’ ಪೋಷಕರ ಬಂಧನದಲ್ಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...