Homeಕರ್ನಾಟಕಗೌರಿ ಟ್ರಸ್ಟ್ ಕುರಿತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆಗೆ ನಿರ್ಧಾರ.

ಗೌರಿ ಟ್ರಸ್ಟ್ ಕುರಿತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆಗೆ ನಿರ್ಧಾರ.

ಸ್ವತಃ ತನ್ನ ಅಕ್ಕ ಗೌರಿ ಲಂಕೇಶ್‌ರವರಿಗೆ ಬಂದೂಕು ತೋರಿಸಿದ ವ್ಯಕ್ತಿ ಇಂದ್ರಜಿತ್‌ ಲಂಕೇಶ್‌ರವರಿಂದ ಇದಕ್ಕಿಂತ ಹೆಚ್ಚಿನ ನಿರೀಕ್ಷೆ ಮಾಡುವುದೂ ಕಷ್ಟ ಎಂದು ನಗರಗೆರೆ ರಮೇಶ್‌ ತಿಳಿಸಿದ್ದಾರೆ.

- Advertisement -
- Advertisement -

ಗೌರಿ ಟ್ರಸ್ಟ್ ಹಣಕಾಸು ವ್ಯವಹಾರದ ತನಿಖೆಗೆ ಸ್ವಾಗತ, ತನಿಖೆ ನಡೆಯದಿದ್ದರೂ ಟ್ರಸ್ಟ್‌ನ ವತಿಯಿಂದ ಸಾರ್ವಜನಿಕ ಆಡಿಟ್‌ಗೆ ಆಹ್ವಾನ ಮತ್ತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆಗೆ ನಿರ್ಧಾರ ಮಾಡಲಾಗಿದೆ ಎಂದು ಗೌರಿ ಮೀಡಿಯಾ ಟ್ರಸ್ಟ್‌ನ ನಗರಗೆರೆ ರಮೇಶ್, ಪ್ರೊ.ವಿ.ಎಸ್.ಶ್ರೀಧರ ಮತ್ತು ಕೆ.ಎಲ್.ಅಶೋಕ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹೊಸದಿಗಂತ ಎಂಬ ಪತ್ರಿಕೆಯೊಂದು ಗೌರಿ ಸ್ಮಾರಕ ಟ್ರಸ್ಟ್‌ನ ಮೇಲೆ ದುರುದ್ದೇಶಪೂರ್ವಕವಾದ ಸುಳ್ಳು ಆರೋಪವನ್ನು ಮಾಡಿ ವರದಿಯೊಂದನ್ನು ಪ್ರಕಟಿಸಿದೆ. ಅದರ ನಂತರ ಚಿತ್ರ ನಿರ್ದೇಶಕ ಇಂದ್ರಜಿತ್ ಅವರು ಟಿವಿ ವಾಹಿನಿಯೊಂದರ ಜೊತೆ ಮಾತನಾಡಿದ್ದಲ್ಲದೇ ಇಂದು ಪತ್ರಿಕಾಗೋಷ್ಠಿಯನ್ನೂ ನಡೆಸಿ ಮೇಲಿನ ಆರೋಪಗಳನ್ನು ಉಲ್ಲೇಖಿಸಿ ತನಿಖೆ ನಡೆಯಬೇಕೆಂದು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆಗೆ ಸ್ವಾಗತಿಸುತ್ತೇವೆ, ಜೊತೆಗೆ ಮಾನನಷ್ಟ ಮೊಕದ್ದಮೆ ಕೂಡ ದಾಖಲಿಸುತ್ತೇವೆ ಎಂದಿದ್ದಾರೆ.

ಇವೆಲ್ಲವೂ ಅತ್ಯಂತ ಸುಳ್ಳು ಆರೋಪಗಳಷ್ಟೇ ಅಲ್ಲ, ದುರುದ್ದೇಶದಿಂದ ಕೂಡಿದೆ. ಸತ್ಯ ನುಡಿದಿದ್ದಕ್ಕೆ ಮತ್ತು ದೇಶದ ಪ್ರಜಾತಂತ್ರದ ಪರವಾಗಿ ದನಿಯೆತ್ತಿದ್ದಕ್ಕೆ ಜೀವವನ್ನೇ ಕಳೆದುಕೊಳ್ಳಬೇಕಾಗಿ ಬಂದ ಗೌರಿ ಲಂಕೇಶರ ಆಶಯಗಳನ್ನು ಮುಂದುವರೆಸುವ ಸಲುವಾಗಿ ಗೌರಿ ಸ್ಮಾರಕ ಟ್ರಸ್ಟ್ ಅಸ್ತಿತ್ವಕ್ಕೆ ಬಂದಿತು. ಹಾಗೆಯೇ ಮಾಧ್ಯಮ ಪ್ರಯತ್ನವನ್ನು ಮುಂದುವರೆಸುವ ಹೊಣೆ ಹೊರುವುದಕ್ಕೋಸ್ಕರ ಗೌರಿ ಮೀಡಿಯಾ ಟ್ರಸ್ಟ್ ರೂಪುಗೊಂಡಿತು ಎಂದು ಗೌರಿ ಸ್ಮಾರಕ ಟ್ರಸ್ಟ್‌ನ ಕಾರ್ಯದರ್ಶಿ ಕೆ.ಎಲ್‌ ಅಶೋಕ್‌ ತಿಳಿಸಿದ್ದಾರೆ.

ಇದುವರೆಗೆ ಗೌರಿ ಸ್ಮಾರಕ ಟ್ರಸ್ಟ್ 6 ಕಾರ್ಯಕ್ರಮಗಳನ್ನು ಸಂಘಟಿಸಿದ್ದು ಖ್ಯಾತ ಪತ್ರಕರ್ತ ರವೀಶ್‌ಕುಮಾರ್ ಅವರಿಗೆ ಗೌರಿ ಲಂಕೇಶ್ ರಾಷ್ಟ್ರೀಯ ಪ್ರಶಸ್ತಿಯನ್ನೂ ನೀಡಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಗೌರಿ ಲಂಕೇಶರ ಆಶಯವನ್ನು ಎತ್ತಿ ಹಿಡಿದು ದನಿಯೆತ್ತುತ್ತಿರುವ ಅವರ ಸಹೋದರಿ ಕವಿತಾ ಲಂಕೇಶ್‌ರು ಭಾಗವಹಿಸಿದ್ದಾರೆ. ಗೌರಿಯವರ ತಾಯಿ ಇಂದಿರಾ ಲಂಕೇಶ್‌ರೂ ಹಲವು ಕಾರ್ಯಕ್ರಮಗಳಲ್ಲಿ ಜೊತೆಯಾಗಿದ್ದಾರೆ. ಸ್ಮಾರಕ ಟ್ರಸ್ಟ್‌ನ ಪೋಷಕರಲ್ಲಿ ಕವಿತಾ ಲಂಕೇಶ್‌ರೂ ಸಹಾ ಒಬ್ಬರು. ಅವರುಗಳು ನಮ್ಮ ಸ್ಫೂರ್ತಿ ಹಾಗೂ ಶಕ್ತಿಯನ್ನು ಹೆಚ್ಚಿಸಿದ್ದಾರೆ. ಆದರೆ ಗೌರಿ ಲಂಕೇಶ್‌ ಬದುಕಿದ್ದಾಗಲೂ ಅವರ ಆಶಯಗಳಿಗೆ ವಿರುದ್ಧವಾಗಿದ್ದ ಮತ್ತು ನಂತರವೂ ಅದೇ ರೀತಿ ಮುಂದುವರೆದಿರುವ ಇಂದ್ರಜಿತ್ ಲಂಕೇಶ್‌ರು ಎಂದೂ ಇದರಲ್ಲಿ ಭಾಗಿಯಾಗುವ ಸಾಧ್ಯತೆ ಇರಲಿಲ್ಲ ಎಂದು ಕೆ.ಎಲ್‌ ಅಶೋಕ್‌ ತಿಳಿಸಿದ್ದಾರೆ.

ರವೀಶ್‌ ಕುಮಾರ್‌ರವರಿಗೆ ಗೌರಿ ಲಂಕೇಶ್‌ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ

ಟ್ರಸ್ಟ್‌ನ ಕಾರ್ಯಚಟುವಟಿಕೆಗಳಿಗೆ ಹಿತೈಷಿಗಳಿಂದ ಹಣ ಸಂಗ್ರಹಿಸಿದ್ದಲ್ಲದೇ, ಆಯಾ ಸಂದರ್ಭದಲ್ಲಿ ಅವನ್ನು ಸಾರ್ವಜನಿಕವಾಗಿಯೂ ಮುಂದಿಡಲಾಗಿದೆ. ಮಾಧ್ಯಮ ಸಂಸ್ಥೆಯು ತಾನು ನಡೆಸುತ್ತಿರುವ ನ್ಯಾಯಪಥ ಪತ್ರಿಕೆಯ ಓದುಗರಿಂದ ಚಂದಾ ಸಹಾ ಸಂಗ್ರಹಿಸಿದೆ. ವಾರ್ಷಿಕ ಚಂದಾ 1,000 ರೂ. ಇದ್ದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಚಂದಾದಾರರಿದ್ದಾರೆ. ಸಂಗ್ರಹಿಸಿದ ಮತ್ತು ಖರ್ಚು ಮಾಡಿದ ಎಲ್ಲಾ ಹಣಕ್ಕೂ ಲೆಕ್ಕವಿದ್ದು ಲೆಕ್ಕ ಪರಿಶೋಧಕರಿಂದ ಪರಿಶೀಲನೆಯೂ ಆಗಿದೆ. ಹಣಕಾಸಿನ ವ್ಯವಹಾರವೆಲ್ಲವೂ ಬ್ಯಾಂಕ್ ಮೂಲಕವೇ ನಡೆಯುತ್ತದಲ್ಲದೇ, ಎಲ್ಲಾ ಹಣಕಾಸಿನ ವ್ಯವಹಾರಗಳಿಗೂ ಸೂಕ್ತ ದಾಖಲಾತಿಗಳು ಇವೆ, ಪಾರದರ್ಶಕವಾಗಿವೆ.
ಹೀಗಿದ್ದೂ ಅದರ ಬಗ್ಗೆ ಸುಳ್ಳು ಆರೋಪ ಮಾಡುತ್ತಿರುವುದು ದುರುದ್ದೇಶದಿಂದ ಕೂಡಿದೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಗೌರಿ ಮೀಡಿಯಾ ಟ್ರಸ್ಟ್‌ ಅಧ್ಯಕ್ಷರಾದ ನಗರಗೆರೆ ರಮೇಶ್ ಹೇಳಿದ್ದಾರೆ.

ಈ ಬಗ್ಗೆ ತನಿಖೆ ನಡೆಯಬೇಕು ಎಂದು ಯಾರೇ ಹೇಳಲಿ ಅದಕ್ಕೆ ನಮ್ಮ ಸ್ವಾಗತವಿದೆ. ಒಂದು ವೇಳೆ ತನಿಖೆ ನಡೆಯದಿದ್ದಲ್ಲಿ ಜನವರಿ 29ರಂದು (ಗೌರಿ ದಿನ) ನಮ್ಮ ಹಣಕಾಸಿನ ಲೆಕ್ಕಾಚಾರದ ಸಾರ್ವಜನಿಕ ಆಡಿಟ್ ಮಾಡಲು ಆಹ್ವಾನಿಸಲಾಗುವುದು. ನಮ್ಮ ಹಿತೈಷಿಗಳು ಮಾತ್ರವಲ್ಲದೇ ಯಾರೇ ಸಾರ್ವಜನಿಕರೂ ಅದನ್ನು ಪರಿಶೀಲಿಸಲು ಮುಕ್ತ ಆಹ್ವಾನ ನೀಡಲಾಗುತ್ತದೆ. ಆದರೆ ದುರಂತವೆಂದರೆ, ಗೌರಿ ಲಂಕೇಶ್‌ರವರ ಉನ್ನತ ಆದರ್ಶಗಳ ವಿರುದ್ಧವೇ ಬದುಕುತ್ತಿರುವ ವ್ಯಕ್ತಿಯು ಈಗ ಅವರ ಕುರಿತು ಮಾತನಾಡುತ್ತಿದ್ದಾರೆ. ಅವರ ಮೇಲೆ ಮತ್ತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಲಾಗಿದೆ. ಹಣಕಾಸಿನ ಕುರಿತ ಆರೋಪಗಳಲ್ಲದೇ ಇತರೆಲ್ಲಾ ಸುಳ್ಳು ಆರೋಪಗಳಿಗೂ ಸಂಬಂಧಪಟ್ಟವರು ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಗೌರಿ ಸ್ಮಾರಕ ಟ್ರಸ್ಟ್‌ನ ಅಧ್ಯಕ್ಷರಾದ ಮತ್ತು ಸಾರ್ವಜನಿಕ ಬದುಕಿನಲ್ಲಿ ಕಟು ಪ್ರಾಮಾಣಿಕತೆಯನ್ನು ಪಾಲಿಸಿಕೊಂಡು ಬಂದಿರುವವರಾದ ಎಚ್.ಎಸ್.ದೊರೆಸ್ವಾಮಿಯವರ ಮಡದಿಯು ತೀರಿಕೊಂಡ ದಿನವೇ ಇಂತಹ ಹೇಳಿಕೆಯನ್ನು ನೀಡಿರುವ ವಿಷಾದಕರ ಘಟನೆ ನಡೆದಿದೆ. ಸ್ವತಃ ತನ್ನ ಅಕ್ಕ ಗೌರಿ ಲಂಕೇಶ್‌ರವರಿಗೆ ಬಂದೂಕು ತೋರಿಸಿದ ವ್ಯಕ್ತಿಯಿಂದ ಇದಕ್ಕಿಂತ ಹೆಚ್ಚಿನ ನಿರೀಕ್ಷೆ ಮಾಡುವುದೂ ಕಷ್ಟವೇ ಎಂದು ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪತ್ರಿಕೆಗೆ ಶುಭವಾಗಲಿ…ಕೇಸರಿ ಕ್ರಿಮಿಗಳ ಪಿತೂರಿಯನ್ನು ಬಯಲಿಗೆಳೆದು ಸಮಾಜಕ್ಕೆ ತೋರಿಸಲಿ…

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...