Homeಕರ್ನಾಟಕಗೌರಿ ಟ್ರಸ್ಟ್ ಕುರಿತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆಗೆ ನಿರ್ಧಾರ.

ಗೌರಿ ಟ್ರಸ್ಟ್ ಕುರಿತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆಗೆ ನಿರ್ಧಾರ.

ಸ್ವತಃ ತನ್ನ ಅಕ್ಕ ಗೌರಿ ಲಂಕೇಶ್‌ರವರಿಗೆ ಬಂದೂಕು ತೋರಿಸಿದ ವ್ಯಕ್ತಿ ಇಂದ್ರಜಿತ್‌ ಲಂಕೇಶ್‌ರವರಿಂದ ಇದಕ್ಕಿಂತ ಹೆಚ್ಚಿನ ನಿರೀಕ್ಷೆ ಮಾಡುವುದೂ ಕಷ್ಟ ಎಂದು ನಗರಗೆರೆ ರಮೇಶ್‌ ತಿಳಿಸಿದ್ದಾರೆ.

- Advertisement -
- Advertisement -

ಗೌರಿ ಟ್ರಸ್ಟ್ ಹಣಕಾಸು ವ್ಯವಹಾರದ ತನಿಖೆಗೆ ಸ್ವಾಗತ, ತನಿಖೆ ನಡೆಯದಿದ್ದರೂ ಟ್ರಸ್ಟ್‌ನ ವತಿಯಿಂದ ಸಾರ್ವಜನಿಕ ಆಡಿಟ್‌ಗೆ ಆಹ್ವಾನ ಮತ್ತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆಗೆ ನಿರ್ಧಾರ ಮಾಡಲಾಗಿದೆ ಎಂದು ಗೌರಿ ಮೀಡಿಯಾ ಟ್ರಸ್ಟ್‌ನ ನಗರಗೆರೆ ರಮೇಶ್, ಪ್ರೊ.ವಿ.ಎಸ್.ಶ್ರೀಧರ ಮತ್ತು ಕೆ.ಎಲ್.ಅಶೋಕ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹೊಸದಿಗಂತ ಎಂಬ ಪತ್ರಿಕೆಯೊಂದು ಗೌರಿ ಸ್ಮಾರಕ ಟ್ರಸ್ಟ್‌ನ ಮೇಲೆ ದುರುದ್ದೇಶಪೂರ್ವಕವಾದ ಸುಳ್ಳು ಆರೋಪವನ್ನು ಮಾಡಿ ವರದಿಯೊಂದನ್ನು ಪ್ರಕಟಿಸಿದೆ. ಅದರ ನಂತರ ಚಿತ್ರ ನಿರ್ದೇಶಕ ಇಂದ್ರಜಿತ್ ಅವರು ಟಿವಿ ವಾಹಿನಿಯೊಂದರ ಜೊತೆ ಮಾತನಾಡಿದ್ದಲ್ಲದೇ ಇಂದು ಪತ್ರಿಕಾಗೋಷ್ಠಿಯನ್ನೂ ನಡೆಸಿ ಮೇಲಿನ ಆರೋಪಗಳನ್ನು ಉಲ್ಲೇಖಿಸಿ ತನಿಖೆ ನಡೆಯಬೇಕೆಂದು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆಗೆ ಸ್ವಾಗತಿಸುತ್ತೇವೆ, ಜೊತೆಗೆ ಮಾನನಷ್ಟ ಮೊಕದ್ದಮೆ ಕೂಡ ದಾಖಲಿಸುತ್ತೇವೆ ಎಂದಿದ್ದಾರೆ.

ಇವೆಲ್ಲವೂ ಅತ್ಯಂತ ಸುಳ್ಳು ಆರೋಪಗಳಷ್ಟೇ ಅಲ್ಲ, ದುರುದ್ದೇಶದಿಂದ ಕೂಡಿದೆ. ಸತ್ಯ ನುಡಿದಿದ್ದಕ್ಕೆ ಮತ್ತು ದೇಶದ ಪ್ರಜಾತಂತ್ರದ ಪರವಾಗಿ ದನಿಯೆತ್ತಿದ್ದಕ್ಕೆ ಜೀವವನ್ನೇ ಕಳೆದುಕೊಳ್ಳಬೇಕಾಗಿ ಬಂದ ಗೌರಿ ಲಂಕೇಶರ ಆಶಯಗಳನ್ನು ಮುಂದುವರೆಸುವ ಸಲುವಾಗಿ ಗೌರಿ ಸ್ಮಾರಕ ಟ್ರಸ್ಟ್ ಅಸ್ತಿತ್ವಕ್ಕೆ ಬಂದಿತು. ಹಾಗೆಯೇ ಮಾಧ್ಯಮ ಪ್ರಯತ್ನವನ್ನು ಮುಂದುವರೆಸುವ ಹೊಣೆ ಹೊರುವುದಕ್ಕೋಸ್ಕರ ಗೌರಿ ಮೀಡಿಯಾ ಟ್ರಸ್ಟ್ ರೂಪುಗೊಂಡಿತು ಎಂದು ಗೌರಿ ಸ್ಮಾರಕ ಟ್ರಸ್ಟ್‌ನ ಕಾರ್ಯದರ್ಶಿ ಕೆ.ಎಲ್‌ ಅಶೋಕ್‌ ತಿಳಿಸಿದ್ದಾರೆ.

ಇದುವರೆಗೆ ಗೌರಿ ಸ್ಮಾರಕ ಟ್ರಸ್ಟ್ 6 ಕಾರ್ಯಕ್ರಮಗಳನ್ನು ಸಂಘಟಿಸಿದ್ದು ಖ್ಯಾತ ಪತ್ರಕರ್ತ ರವೀಶ್‌ಕುಮಾರ್ ಅವರಿಗೆ ಗೌರಿ ಲಂಕೇಶ್ ರಾಷ್ಟ್ರೀಯ ಪ್ರಶಸ್ತಿಯನ್ನೂ ನೀಡಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಗೌರಿ ಲಂಕೇಶರ ಆಶಯವನ್ನು ಎತ್ತಿ ಹಿಡಿದು ದನಿಯೆತ್ತುತ್ತಿರುವ ಅವರ ಸಹೋದರಿ ಕವಿತಾ ಲಂಕೇಶ್‌ರು ಭಾಗವಹಿಸಿದ್ದಾರೆ. ಗೌರಿಯವರ ತಾಯಿ ಇಂದಿರಾ ಲಂಕೇಶ್‌ರೂ ಹಲವು ಕಾರ್ಯಕ್ರಮಗಳಲ್ಲಿ ಜೊತೆಯಾಗಿದ್ದಾರೆ. ಸ್ಮಾರಕ ಟ್ರಸ್ಟ್‌ನ ಪೋಷಕರಲ್ಲಿ ಕವಿತಾ ಲಂಕೇಶ್‌ರೂ ಸಹಾ ಒಬ್ಬರು. ಅವರುಗಳು ನಮ್ಮ ಸ್ಫೂರ್ತಿ ಹಾಗೂ ಶಕ್ತಿಯನ್ನು ಹೆಚ್ಚಿಸಿದ್ದಾರೆ. ಆದರೆ ಗೌರಿ ಲಂಕೇಶ್‌ ಬದುಕಿದ್ದಾಗಲೂ ಅವರ ಆಶಯಗಳಿಗೆ ವಿರುದ್ಧವಾಗಿದ್ದ ಮತ್ತು ನಂತರವೂ ಅದೇ ರೀತಿ ಮುಂದುವರೆದಿರುವ ಇಂದ್ರಜಿತ್ ಲಂಕೇಶ್‌ರು ಎಂದೂ ಇದರಲ್ಲಿ ಭಾಗಿಯಾಗುವ ಸಾಧ್ಯತೆ ಇರಲಿಲ್ಲ ಎಂದು ಕೆ.ಎಲ್‌ ಅಶೋಕ್‌ ತಿಳಿಸಿದ್ದಾರೆ.

ರವೀಶ್‌ ಕುಮಾರ್‌ರವರಿಗೆ ಗೌರಿ ಲಂಕೇಶ್‌ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ

ಟ್ರಸ್ಟ್‌ನ ಕಾರ್ಯಚಟುವಟಿಕೆಗಳಿಗೆ ಹಿತೈಷಿಗಳಿಂದ ಹಣ ಸಂಗ್ರಹಿಸಿದ್ದಲ್ಲದೇ, ಆಯಾ ಸಂದರ್ಭದಲ್ಲಿ ಅವನ್ನು ಸಾರ್ವಜನಿಕವಾಗಿಯೂ ಮುಂದಿಡಲಾಗಿದೆ. ಮಾಧ್ಯಮ ಸಂಸ್ಥೆಯು ತಾನು ನಡೆಸುತ್ತಿರುವ ನ್ಯಾಯಪಥ ಪತ್ರಿಕೆಯ ಓದುಗರಿಂದ ಚಂದಾ ಸಹಾ ಸಂಗ್ರಹಿಸಿದೆ. ವಾರ್ಷಿಕ ಚಂದಾ 1,000 ರೂ. ಇದ್ದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಚಂದಾದಾರರಿದ್ದಾರೆ. ಸಂಗ್ರಹಿಸಿದ ಮತ್ತು ಖರ್ಚು ಮಾಡಿದ ಎಲ್ಲಾ ಹಣಕ್ಕೂ ಲೆಕ್ಕವಿದ್ದು ಲೆಕ್ಕ ಪರಿಶೋಧಕರಿಂದ ಪರಿಶೀಲನೆಯೂ ಆಗಿದೆ. ಹಣಕಾಸಿನ ವ್ಯವಹಾರವೆಲ್ಲವೂ ಬ್ಯಾಂಕ್ ಮೂಲಕವೇ ನಡೆಯುತ್ತದಲ್ಲದೇ, ಎಲ್ಲಾ ಹಣಕಾಸಿನ ವ್ಯವಹಾರಗಳಿಗೂ ಸೂಕ್ತ ದಾಖಲಾತಿಗಳು ಇವೆ, ಪಾರದರ್ಶಕವಾಗಿವೆ.
ಹೀಗಿದ್ದೂ ಅದರ ಬಗ್ಗೆ ಸುಳ್ಳು ಆರೋಪ ಮಾಡುತ್ತಿರುವುದು ದುರುದ್ದೇಶದಿಂದ ಕೂಡಿದೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಗೌರಿ ಮೀಡಿಯಾ ಟ್ರಸ್ಟ್‌ ಅಧ್ಯಕ್ಷರಾದ ನಗರಗೆರೆ ರಮೇಶ್ ಹೇಳಿದ್ದಾರೆ.

ಈ ಬಗ್ಗೆ ತನಿಖೆ ನಡೆಯಬೇಕು ಎಂದು ಯಾರೇ ಹೇಳಲಿ ಅದಕ್ಕೆ ನಮ್ಮ ಸ್ವಾಗತವಿದೆ. ಒಂದು ವೇಳೆ ತನಿಖೆ ನಡೆಯದಿದ್ದಲ್ಲಿ ಜನವರಿ 29ರಂದು (ಗೌರಿ ದಿನ) ನಮ್ಮ ಹಣಕಾಸಿನ ಲೆಕ್ಕಾಚಾರದ ಸಾರ್ವಜನಿಕ ಆಡಿಟ್ ಮಾಡಲು ಆಹ್ವಾನಿಸಲಾಗುವುದು. ನಮ್ಮ ಹಿತೈಷಿಗಳು ಮಾತ್ರವಲ್ಲದೇ ಯಾರೇ ಸಾರ್ವಜನಿಕರೂ ಅದನ್ನು ಪರಿಶೀಲಿಸಲು ಮುಕ್ತ ಆಹ್ವಾನ ನೀಡಲಾಗುತ್ತದೆ. ಆದರೆ ದುರಂತವೆಂದರೆ, ಗೌರಿ ಲಂಕೇಶ್‌ರವರ ಉನ್ನತ ಆದರ್ಶಗಳ ವಿರುದ್ಧವೇ ಬದುಕುತ್ತಿರುವ ವ್ಯಕ್ತಿಯು ಈಗ ಅವರ ಕುರಿತು ಮಾತನಾಡುತ್ತಿದ್ದಾರೆ. ಅವರ ಮೇಲೆ ಮತ್ತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಲಾಗಿದೆ. ಹಣಕಾಸಿನ ಕುರಿತ ಆರೋಪಗಳಲ್ಲದೇ ಇತರೆಲ್ಲಾ ಸುಳ್ಳು ಆರೋಪಗಳಿಗೂ ಸಂಬಂಧಪಟ್ಟವರು ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಗೌರಿ ಸ್ಮಾರಕ ಟ್ರಸ್ಟ್‌ನ ಅಧ್ಯಕ್ಷರಾದ ಮತ್ತು ಸಾರ್ವಜನಿಕ ಬದುಕಿನಲ್ಲಿ ಕಟು ಪ್ರಾಮಾಣಿಕತೆಯನ್ನು ಪಾಲಿಸಿಕೊಂಡು ಬಂದಿರುವವರಾದ ಎಚ್.ಎಸ್.ದೊರೆಸ್ವಾಮಿಯವರ ಮಡದಿಯು ತೀರಿಕೊಂಡ ದಿನವೇ ಇಂತಹ ಹೇಳಿಕೆಯನ್ನು ನೀಡಿರುವ ವಿಷಾದಕರ ಘಟನೆ ನಡೆದಿದೆ. ಸ್ವತಃ ತನ್ನ ಅಕ್ಕ ಗೌರಿ ಲಂಕೇಶ್‌ರವರಿಗೆ ಬಂದೂಕು ತೋರಿಸಿದ ವ್ಯಕ್ತಿಯಿಂದ ಇದಕ್ಕಿಂತ ಹೆಚ್ಚಿನ ನಿರೀಕ್ಷೆ ಮಾಡುವುದೂ ಕಷ್ಟವೇ ಎಂದು ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪತ್ರಿಕೆಗೆ ಶುಭವಾಗಲಿ…ಕೇಸರಿ ಕ್ರಿಮಿಗಳ ಪಿತೂರಿಯನ್ನು ಬಯಲಿಗೆಳೆದು ಸಮಾಜಕ್ಕೆ ತೋರಿಸಲಿ…

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...