Homeಕರ್ನಾಟಕಗೌರಿ ಟ್ರಸ್ಟ್ ಕುರಿತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆಗೆ ನಿರ್ಧಾರ.

ಗೌರಿ ಟ್ರಸ್ಟ್ ಕುರಿತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆಗೆ ನಿರ್ಧಾರ.

ಸ್ವತಃ ತನ್ನ ಅಕ್ಕ ಗೌರಿ ಲಂಕೇಶ್‌ರವರಿಗೆ ಬಂದೂಕು ತೋರಿಸಿದ ವ್ಯಕ್ತಿ ಇಂದ್ರಜಿತ್‌ ಲಂಕೇಶ್‌ರವರಿಂದ ಇದಕ್ಕಿಂತ ಹೆಚ್ಚಿನ ನಿರೀಕ್ಷೆ ಮಾಡುವುದೂ ಕಷ್ಟ ಎಂದು ನಗರಗೆರೆ ರಮೇಶ್‌ ತಿಳಿಸಿದ್ದಾರೆ.

- Advertisement -
- Advertisement -

ಗೌರಿ ಟ್ರಸ್ಟ್ ಹಣಕಾಸು ವ್ಯವಹಾರದ ತನಿಖೆಗೆ ಸ್ವಾಗತ, ತನಿಖೆ ನಡೆಯದಿದ್ದರೂ ಟ್ರಸ್ಟ್‌ನ ವತಿಯಿಂದ ಸಾರ್ವಜನಿಕ ಆಡಿಟ್‌ಗೆ ಆಹ್ವಾನ ಮತ್ತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆಗೆ ನಿರ್ಧಾರ ಮಾಡಲಾಗಿದೆ ಎಂದು ಗೌರಿ ಮೀಡಿಯಾ ಟ್ರಸ್ಟ್‌ನ ನಗರಗೆರೆ ರಮೇಶ್, ಪ್ರೊ.ವಿ.ಎಸ್.ಶ್ರೀಧರ ಮತ್ತು ಕೆ.ಎಲ್.ಅಶೋಕ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹೊಸದಿಗಂತ ಎಂಬ ಪತ್ರಿಕೆಯೊಂದು ಗೌರಿ ಸ್ಮಾರಕ ಟ್ರಸ್ಟ್‌ನ ಮೇಲೆ ದುರುದ್ದೇಶಪೂರ್ವಕವಾದ ಸುಳ್ಳು ಆರೋಪವನ್ನು ಮಾಡಿ ವರದಿಯೊಂದನ್ನು ಪ್ರಕಟಿಸಿದೆ. ಅದರ ನಂತರ ಚಿತ್ರ ನಿರ್ದೇಶಕ ಇಂದ್ರಜಿತ್ ಅವರು ಟಿವಿ ವಾಹಿನಿಯೊಂದರ ಜೊತೆ ಮಾತನಾಡಿದ್ದಲ್ಲದೇ ಇಂದು ಪತ್ರಿಕಾಗೋಷ್ಠಿಯನ್ನೂ ನಡೆಸಿ ಮೇಲಿನ ಆರೋಪಗಳನ್ನು ಉಲ್ಲೇಖಿಸಿ ತನಿಖೆ ನಡೆಯಬೇಕೆಂದು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆಗೆ ಸ್ವಾಗತಿಸುತ್ತೇವೆ, ಜೊತೆಗೆ ಮಾನನಷ್ಟ ಮೊಕದ್ದಮೆ ಕೂಡ ದಾಖಲಿಸುತ್ತೇವೆ ಎಂದಿದ್ದಾರೆ.

ಇವೆಲ್ಲವೂ ಅತ್ಯಂತ ಸುಳ್ಳು ಆರೋಪಗಳಷ್ಟೇ ಅಲ್ಲ, ದುರುದ್ದೇಶದಿಂದ ಕೂಡಿದೆ. ಸತ್ಯ ನುಡಿದಿದ್ದಕ್ಕೆ ಮತ್ತು ದೇಶದ ಪ್ರಜಾತಂತ್ರದ ಪರವಾಗಿ ದನಿಯೆತ್ತಿದ್ದಕ್ಕೆ ಜೀವವನ್ನೇ ಕಳೆದುಕೊಳ್ಳಬೇಕಾಗಿ ಬಂದ ಗೌರಿ ಲಂಕೇಶರ ಆಶಯಗಳನ್ನು ಮುಂದುವರೆಸುವ ಸಲುವಾಗಿ ಗೌರಿ ಸ್ಮಾರಕ ಟ್ರಸ್ಟ್ ಅಸ್ತಿತ್ವಕ್ಕೆ ಬಂದಿತು. ಹಾಗೆಯೇ ಮಾಧ್ಯಮ ಪ್ರಯತ್ನವನ್ನು ಮುಂದುವರೆಸುವ ಹೊಣೆ ಹೊರುವುದಕ್ಕೋಸ್ಕರ ಗೌರಿ ಮೀಡಿಯಾ ಟ್ರಸ್ಟ್ ರೂಪುಗೊಂಡಿತು ಎಂದು ಗೌರಿ ಸ್ಮಾರಕ ಟ್ರಸ್ಟ್‌ನ ಕಾರ್ಯದರ್ಶಿ ಕೆ.ಎಲ್‌ ಅಶೋಕ್‌ ತಿಳಿಸಿದ್ದಾರೆ.

ಇದುವರೆಗೆ ಗೌರಿ ಸ್ಮಾರಕ ಟ್ರಸ್ಟ್ 6 ಕಾರ್ಯಕ್ರಮಗಳನ್ನು ಸಂಘಟಿಸಿದ್ದು ಖ್ಯಾತ ಪತ್ರಕರ್ತ ರವೀಶ್‌ಕುಮಾರ್ ಅವರಿಗೆ ಗೌರಿ ಲಂಕೇಶ್ ರಾಷ್ಟ್ರೀಯ ಪ್ರಶಸ್ತಿಯನ್ನೂ ನೀಡಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಗೌರಿ ಲಂಕೇಶರ ಆಶಯವನ್ನು ಎತ್ತಿ ಹಿಡಿದು ದನಿಯೆತ್ತುತ್ತಿರುವ ಅವರ ಸಹೋದರಿ ಕವಿತಾ ಲಂಕೇಶ್‌ರು ಭಾಗವಹಿಸಿದ್ದಾರೆ. ಗೌರಿಯವರ ತಾಯಿ ಇಂದಿರಾ ಲಂಕೇಶ್‌ರೂ ಹಲವು ಕಾರ್ಯಕ್ರಮಗಳಲ್ಲಿ ಜೊತೆಯಾಗಿದ್ದಾರೆ. ಸ್ಮಾರಕ ಟ್ರಸ್ಟ್‌ನ ಪೋಷಕರಲ್ಲಿ ಕವಿತಾ ಲಂಕೇಶ್‌ರೂ ಸಹಾ ಒಬ್ಬರು. ಅವರುಗಳು ನಮ್ಮ ಸ್ಫೂರ್ತಿ ಹಾಗೂ ಶಕ್ತಿಯನ್ನು ಹೆಚ್ಚಿಸಿದ್ದಾರೆ. ಆದರೆ ಗೌರಿ ಲಂಕೇಶ್‌ ಬದುಕಿದ್ದಾಗಲೂ ಅವರ ಆಶಯಗಳಿಗೆ ವಿರುದ್ಧವಾಗಿದ್ದ ಮತ್ತು ನಂತರವೂ ಅದೇ ರೀತಿ ಮುಂದುವರೆದಿರುವ ಇಂದ್ರಜಿತ್ ಲಂಕೇಶ್‌ರು ಎಂದೂ ಇದರಲ್ಲಿ ಭಾಗಿಯಾಗುವ ಸಾಧ್ಯತೆ ಇರಲಿಲ್ಲ ಎಂದು ಕೆ.ಎಲ್‌ ಅಶೋಕ್‌ ತಿಳಿಸಿದ್ದಾರೆ.

ರವೀಶ್‌ ಕುಮಾರ್‌ರವರಿಗೆ ಗೌರಿ ಲಂಕೇಶ್‌ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ

ಟ್ರಸ್ಟ್‌ನ ಕಾರ್ಯಚಟುವಟಿಕೆಗಳಿಗೆ ಹಿತೈಷಿಗಳಿಂದ ಹಣ ಸಂಗ್ರಹಿಸಿದ್ದಲ್ಲದೇ, ಆಯಾ ಸಂದರ್ಭದಲ್ಲಿ ಅವನ್ನು ಸಾರ್ವಜನಿಕವಾಗಿಯೂ ಮುಂದಿಡಲಾಗಿದೆ. ಮಾಧ್ಯಮ ಸಂಸ್ಥೆಯು ತಾನು ನಡೆಸುತ್ತಿರುವ ನ್ಯಾಯಪಥ ಪತ್ರಿಕೆಯ ಓದುಗರಿಂದ ಚಂದಾ ಸಹಾ ಸಂಗ್ರಹಿಸಿದೆ. ವಾರ್ಷಿಕ ಚಂದಾ 1,000 ರೂ. ಇದ್ದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಚಂದಾದಾರರಿದ್ದಾರೆ. ಸಂಗ್ರಹಿಸಿದ ಮತ್ತು ಖರ್ಚು ಮಾಡಿದ ಎಲ್ಲಾ ಹಣಕ್ಕೂ ಲೆಕ್ಕವಿದ್ದು ಲೆಕ್ಕ ಪರಿಶೋಧಕರಿಂದ ಪರಿಶೀಲನೆಯೂ ಆಗಿದೆ. ಹಣಕಾಸಿನ ವ್ಯವಹಾರವೆಲ್ಲವೂ ಬ್ಯಾಂಕ್ ಮೂಲಕವೇ ನಡೆಯುತ್ತದಲ್ಲದೇ, ಎಲ್ಲಾ ಹಣಕಾಸಿನ ವ್ಯವಹಾರಗಳಿಗೂ ಸೂಕ್ತ ದಾಖಲಾತಿಗಳು ಇವೆ, ಪಾರದರ್ಶಕವಾಗಿವೆ.
ಹೀಗಿದ್ದೂ ಅದರ ಬಗ್ಗೆ ಸುಳ್ಳು ಆರೋಪ ಮಾಡುತ್ತಿರುವುದು ದುರುದ್ದೇಶದಿಂದ ಕೂಡಿದೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಗೌರಿ ಮೀಡಿಯಾ ಟ್ರಸ್ಟ್‌ ಅಧ್ಯಕ್ಷರಾದ ನಗರಗೆರೆ ರಮೇಶ್ ಹೇಳಿದ್ದಾರೆ.

ಈ ಬಗ್ಗೆ ತನಿಖೆ ನಡೆಯಬೇಕು ಎಂದು ಯಾರೇ ಹೇಳಲಿ ಅದಕ್ಕೆ ನಮ್ಮ ಸ್ವಾಗತವಿದೆ. ಒಂದು ವೇಳೆ ತನಿಖೆ ನಡೆಯದಿದ್ದಲ್ಲಿ ಜನವರಿ 29ರಂದು (ಗೌರಿ ದಿನ) ನಮ್ಮ ಹಣಕಾಸಿನ ಲೆಕ್ಕಾಚಾರದ ಸಾರ್ವಜನಿಕ ಆಡಿಟ್ ಮಾಡಲು ಆಹ್ವಾನಿಸಲಾಗುವುದು. ನಮ್ಮ ಹಿತೈಷಿಗಳು ಮಾತ್ರವಲ್ಲದೇ ಯಾರೇ ಸಾರ್ವಜನಿಕರೂ ಅದನ್ನು ಪರಿಶೀಲಿಸಲು ಮುಕ್ತ ಆಹ್ವಾನ ನೀಡಲಾಗುತ್ತದೆ. ಆದರೆ ದುರಂತವೆಂದರೆ, ಗೌರಿ ಲಂಕೇಶ್‌ರವರ ಉನ್ನತ ಆದರ್ಶಗಳ ವಿರುದ್ಧವೇ ಬದುಕುತ್ತಿರುವ ವ್ಯಕ್ತಿಯು ಈಗ ಅವರ ಕುರಿತು ಮಾತನಾಡುತ್ತಿದ್ದಾರೆ. ಅವರ ಮೇಲೆ ಮತ್ತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಲಾಗಿದೆ. ಹಣಕಾಸಿನ ಕುರಿತ ಆರೋಪಗಳಲ್ಲದೇ ಇತರೆಲ್ಲಾ ಸುಳ್ಳು ಆರೋಪಗಳಿಗೂ ಸಂಬಂಧಪಟ್ಟವರು ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಗೌರಿ ಸ್ಮಾರಕ ಟ್ರಸ್ಟ್‌ನ ಅಧ್ಯಕ್ಷರಾದ ಮತ್ತು ಸಾರ್ವಜನಿಕ ಬದುಕಿನಲ್ಲಿ ಕಟು ಪ್ರಾಮಾಣಿಕತೆಯನ್ನು ಪಾಲಿಸಿಕೊಂಡು ಬಂದಿರುವವರಾದ ಎಚ್.ಎಸ್.ದೊರೆಸ್ವಾಮಿಯವರ ಮಡದಿಯು ತೀರಿಕೊಂಡ ದಿನವೇ ಇಂತಹ ಹೇಳಿಕೆಯನ್ನು ನೀಡಿರುವ ವಿಷಾದಕರ ಘಟನೆ ನಡೆದಿದೆ. ಸ್ವತಃ ತನ್ನ ಅಕ್ಕ ಗೌರಿ ಲಂಕೇಶ್‌ರವರಿಗೆ ಬಂದೂಕು ತೋರಿಸಿದ ವ್ಯಕ್ತಿಯಿಂದ ಇದಕ್ಕಿಂತ ಹೆಚ್ಚಿನ ನಿರೀಕ್ಷೆ ಮಾಡುವುದೂ ಕಷ್ಟವೇ ಎಂದು ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪತ್ರಿಕೆಗೆ ಶುಭವಾಗಲಿ…ಕೇಸರಿ ಕ್ರಿಮಿಗಳ ಪಿತೂರಿಯನ್ನು ಬಯಲಿಗೆಳೆದು ಸಮಾಜಕ್ಕೆ ತೋರಿಸಲಿ…

LEAVE A REPLY

Please enter your comment!
Please enter your name here

- Advertisment -

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...