Homeಕರ್ನಾಟಕಗೌರಿ ಟ್ರಸ್ಟ್ ಕುರಿತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆಗೆ ನಿರ್ಧಾರ.

ಗೌರಿ ಟ್ರಸ್ಟ್ ಕುರಿತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆಗೆ ನಿರ್ಧಾರ.

ಸ್ವತಃ ತನ್ನ ಅಕ್ಕ ಗೌರಿ ಲಂಕೇಶ್‌ರವರಿಗೆ ಬಂದೂಕು ತೋರಿಸಿದ ವ್ಯಕ್ತಿ ಇಂದ್ರಜಿತ್‌ ಲಂಕೇಶ್‌ರವರಿಂದ ಇದಕ್ಕಿಂತ ಹೆಚ್ಚಿನ ನಿರೀಕ್ಷೆ ಮಾಡುವುದೂ ಕಷ್ಟ ಎಂದು ನಗರಗೆರೆ ರಮೇಶ್‌ ತಿಳಿಸಿದ್ದಾರೆ.

- Advertisement -
- Advertisement -

ಗೌರಿ ಟ್ರಸ್ಟ್ ಹಣಕಾಸು ವ್ಯವಹಾರದ ತನಿಖೆಗೆ ಸ್ವಾಗತ, ತನಿಖೆ ನಡೆಯದಿದ್ದರೂ ಟ್ರಸ್ಟ್‌ನ ವತಿಯಿಂದ ಸಾರ್ವಜನಿಕ ಆಡಿಟ್‌ಗೆ ಆಹ್ವಾನ ಮತ್ತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆಗೆ ನಿರ್ಧಾರ ಮಾಡಲಾಗಿದೆ ಎಂದು ಗೌರಿ ಮೀಡಿಯಾ ಟ್ರಸ್ಟ್‌ನ ನಗರಗೆರೆ ರಮೇಶ್, ಪ್ರೊ.ವಿ.ಎಸ್.ಶ್ರೀಧರ ಮತ್ತು ಕೆ.ಎಲ್.ಅಶೋಕ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹೊಸದಿಗಂತ ಎಂಬ ಪತ್ರಿಕೆಯೊಂದು ಗೌರಿ ಸ್ಮಾರಕ ಟ್ರಸ್ಟ್‌ನ ಮೇಲೆ ದುರುದ್ದೇಶಪೂರ್ವಕವಾದ ಸುಳ್ಳು ಆರೋಪವನ್ನು ಮಾಡಿ ವರದಿಯೊಂದನ್ನು ಪ್ರಕಟಿಸಿದೆ. ಅದರ ನಂತರ ಚಿತ್ರ ನಿರ್ದೇಶಕ ಇಂದ್ರಜಿತ್ ಅವರು ಟಿವಿ ವಾಹಿನಿಯೊಂದರ ಜೊತೆ ಮಾತನಾಡಿದ್ದಲ್ಲದೇ ಇಂದು ಪತ್ರಿಕಾಗೋಷ್ಠಿಯನ್ನೂ ನಡೆಸಿ ಮೇಲಿನ ಆರೋಪಗಳನ್ನು ಉಲ್ಲೇಖಿಸಿ ತನಿಖೆ ನಡೆಯಬೇಕೆಂದು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆಗೆ ಸ್ವಾಗತಿಸುತ್ತೇವೆ, ಜೊತೆಗೆ ಮಾನನಷ್ಟ ಮೊಕದ್ದಮೆ ಕೂಡ ದಾಖಲಿಸುತ್ತೇವೆ ಎಂದಿದ್ದಾರೆ.

ಇವೆಲ್ಲವೂ ಅತ್ಯಂತ ಸುಳ್ಳು ಆರೋಪಗಳಷ್ಟೇ ಅಲ್ಲ, ದುರುದ್ದೇಶದಿಂದ ಕೂಡಿದೆ. ಸತ್ಯ ನುಡಿದಿದ್ದಕ್ಕೆ ಮತ್ತು ದೇಶದ ಪ್ರಜಾತಂತ್ರದ ಪರವಾಗಿ ದನಿಯೆತ್ತಿದ್ದಕ್ಕೆ ಜೀವವನ್ನೇ ಕಳೆದುಕೊಳ್ಳಬೇಕಾಗಿ ಬಂದ ಗೌರಿ ಲಂಕೇಶರ ಆಶಯಗಳನ್ನು ಮುಂದುವರೆಸುವ ಸಲುವಾಗಿ ಗೌರಿ ಸ್ಮಾರಕ ಟ್ರಸ್ಟ್ ಅಸ್ತಿತ್ವಕ್ಕೆ ಬಂದಿತು. ಹಾಗೆಯೇ ಮಾಧ್ಯಮ ಪ್ರಯತ್ನವನ್ನು ಮುಂದುವರೆಸುವ ಹೊಣೆ ಹೊರುವುದಕ್ಕೋಸ್ಕರ ಗೌರಿ ಮೀಡಿಯಾ ಟ್ರಸ್ಟ್ ರೂಪುಗೊಂಡಿತು ಎಂದು ಗೌರಿ ಸ್ಮಾರಕ ಟ್ರಸ್ಟ್‌ನ ಕಾರ್ಯದರ್ಶಿ ಕೆ.ಎಲ್‌ ಅಶೋಕ್‌ ತಿಳಿಸಿದ್ದಾರೆ.

ಇದುವರೆಗೆ ಗೌರಿ ಸ್ಮಾರಕ ಟ್ರಸ್ಟ್ 6 ಕಾರ್ಯಕ್ರಮಗಳನ್ನು ಸಂಘಟಿಸಿದ್ದು ಖ್ಯಾತ ಪತ್ರಕರ್ತ ರವೀಶ್‌ಕುಮಾರ್ ಅವರಿಗೆ ಗೌರಿ ಲಂಕೇಶ್ ರಾಷ್ಟ್ರೀಯ ಪ್ರಶಸ್ತಿಯನ್ನೂ ನೀಡಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಗೌರಿ ಲಂಕೇಶರ ಆಶಯವನ್ನು ಎತ್ತಿ ಹಿಡಿದು ದನಿಯೆತ್ತುತ್ತಿರುವ ಅವರ ಸಹೋದರಿ ಕವಿತಾ ಲಂಕೇಶ್‌ರು ಭಾಗವಹಿಸಿದ್ದಾರೆ. ಗೌರಿಯವರ ತಾಯಿ ಇಂದಿರಾ ಲಂಕೇಶ್‌ರೂ ಹಲವು ಕಾರ್ಯಕ್ರಮಗಳಲ್ಲಿ ಜೊತೆಯಾಗಿದ್ದಾರೆ. ಸ್ಮಾರಕ ಟ್ರಸ್ಟ್‌ನ ಪೋಷಕರಲ್ಲಿ ಕವಿತಾ ಲಂಕೇಶ್‌ರೂ ಸಹಾ ಒಬ್ಬರು. ಅವರುಗಳು ನಮ್ಮ ಸ್ಫೂರ್ತಿ ಹಾಗೂ ಶಕ್ತಿಯನ್ನು ಹೆಚ್ಚಿಸಿದ್ದಾರೆ. ಆದರೆ ಗೌರಿ ಲಂಕೇಶ್‌ ಬದುಕಿದ್ದಾಗಲೂ ಅವರ ಆಶಯಗಳಿಗೆ ವಿರುದ್ಧವಾಗಿದ್ದ ಮತ್ತು ನಂತರವೂ ಅದೇ ರೀತಿ ಮುಂದುವರೆದಿರುವ ಇಂದ್ರಜಿತ್ ಲಂಕೇಶ್‌ರು ಎಂದೂ ಇದರಲ್ಲಿ ಭಾಗಿಯಾಗುವ ಸಾಧ್ಯತೆ ಇರಲಿಲ್ಲ ಎಂದು ಕೆ.ಎಲ್‌ ಅಶೋಕ್‌ ತಿಳಿಸಿದ್ದಾರೆ.

ರವೀಶ್‌ ಕುಮಾರ್‌ರವರಿಗೆ ಗೌರಿ ಲಂಕೇಶ್‌ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ

ಟ್ರಸ್ಟ್‌ನ ಕಾರ್ಯಚಟುವಟಿಕೆಗಳಿಗೆ ಹಿತೈಷಿಗಳಿಂದ ಹಣ ಸಂಗ್ರಹಿಸಿದ್ದಲ್ಲದೇ, ಆಯಾ ಸಂದರ್ಭದಲ್ಲಿ ಅವನ್ನು ಸಾರ್ವಜನಿಕವಾಗಿಯೂ ಮುಂದಿಡಲಾಗಿದೆ. ಮಾಧ್ಯಮ ಸಂಸ್ಥೆಯು ತಾನು ನಡೆಸುತ್ತಿರುವ ನ್ಯಾಯಪಥ ಪತ್ರಿಕೆಯ ಓದುಗರಿಂದ ಚಂದಾ ಸಹಾ ಸಂಗ್ರಹಿಸಿದೆ. ವಾರ್ಷಿಕ ಚಂದಾ 1,000 ರೂ. ಇದ್ದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಚಂದಾದಾರರಿದ್ದಾರೆ. ಸಂಗ್ರಹಿಸಿದ ಮತ್ತು ಖರ್ಚು ಮಾಡಿದ ಎಲ್ಲಾ ಹಣಕ್ಕೂ ಲೆಕ್ಕವಿದ್ದು ಲೆಕ್ಕ ಪರಿಶೋಧಕರಿಂದ ಪರಿಶೀಲನೆಯೂ ಆಗಿದೆ. ಹಣಕಾಸಿನ ವ್ಯವಹಾರವೆಲ್ಲವೂ ಬ್ಯಾಂಕ್ ಮೂಲಕವೇ ನಡೆಯುತ್ತದಲ್ಲದೇ, ಎಲ್ಲಾ ಹಣಕಾಸಿನ ವ್ಯವಹಾರಗಳಿಗೂ ಸೂಕ್ತ ದಾಖಲಾತಿಗಳು ಇವೆ, ಪಾರದರ್ಶಕವಾಗಿವೆ.
ಹೀಗಿದ್ದೂ ಅದರ ಬಗ್ಗೆ ಸುಳ್ಳು ಆರೋಪ ಮಾಡುತ್ತಿರುವುದು ದುರುದ್ದೇಶದಿಂದ ಕೂಡಿದೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಗೌರಿ ಮೀಡಿಯಾ ಟ್ರಸ್ಟ್‌ ಅಧ್ಯಕ್ಷರಾದ ನಗರಗೆರೆ ರಮೇಶ್ ಹೇಳಿದ್ದಾರೆ.

ಈ ಬಗ್ಗೆ ತನಿಖೆ ನಡೆಯಬೇಕು ಎಂದು ಯಾರೇ ಹೇಳಲಿ ಅದಕ್ಕೆ ನಮ್ಮ ಸ್ವಾಗತವಿದೆ. ಒಂದು ವೇಳೆ ತನಿಖೆ ನಡೆಯದಿದ್ದಲ್ಲಿ ಜನವರಿ 29ರಂದು (ಗೌರಿ ದಿನ) ನಮ್ಮ ಹಣಕಾಸಿನ ಲೆಕ್ಕಾಚಾರದ ಸಾರ್ವಜನಿಕ ಆಡಿಟ್ ಮಾಡಲು ಆಹ್ವಾನಿಸಲಾಗುವುದು. ನಮ್ಮ ಹಿತೈಷಿಗಳು ಮಾತ್ರವಲ್ಲದೇ ಯಾರೇ ಸಾರ್ವಜನಿಕರೂ ಅದನ್ನು ಪರಿಶೀಲಿಸಲು ಮುಕ್ತ ಆಹ್ವಾನ ನೀಡಲಾಗುತ್ತದೆ. ಆದರೆ ದುರಂತವೆಂದರೆ, ಗೌರಿ ಲಂಕೇಶ್‌ರವರ ಉನ್ನತ ಆದರ್ಶಗಳ ವಿರುದ್ಧವೇ ಬದುಕುತ್ತಿರುವ ವ್ಯಕ್ತಿಯು ಈಗ ಅವರ ಕುರಿತು ಮಾತನಾಡುತ್ತಿದ್ದಾರೆ. ಅವರ ಮೇಲೆ ಮತ್ತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಲಾಗಿದೆ. ಹಣಕಾಸಿನ ಕುರಿತ ಆರೋಪಗಳಲ್ಲದೇ ಇತರೆಲ್ಲಾ ಸುಳ್ಳು ಆರೋಪಗಳಿಗೂ ಸಂಬಂಧಪಟ್ಟವರು ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಗೌರಿ ಸ್ಮಾರಕ ಟ್ರಸ್ಟ್‌ನ ಅಧ್ಯಕ್ಷರಾದ ಮತ್ತು ಸಾರ್ವಜನಿಕ ಬದುಕಿನಲ್ಲಿ ಕಟು ಪ್ರಾಮಾಣಿಕತೆಯನ್ನು ಪಾಲಿಸಿಕೊಂಡು ಬಂದಿರುವವರಾದ ಎಚ್.ಎಸ್.ದೊರೆಸ್ವಾಮಿಯವರ ಮಡದಿಯು ತೀರಿಕೊಂಡ ದಿನವೇ ಇಂತಹ ಹೇಳಿಕೆಯನ್ನು ನೀಡಿರುವ ವಿಷಾದಕರ ಘಟನೆ ನಡೆದಿದೆ. ಸ್ವತಃ ತನ್ನ ಅಕ್ಕ ಗೌರಿ ಲಂಕೇಶ್‌ರವರಿಗೆ ಬಂದೂಕು ತೋರಿಸಿದ ವ್ಯಕ್ತಿಯಿಂದ ಇದಕ್ಕಿಂತ ಹೆಚ್ಚಿನ ನಿರೀಕ್ಷೆ ಮಾಡುವುದೂ ಕಷ್ಟವೇ ಎಂದು ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪತ್ರಿಕೆಗೆ ಶುಭವಾಗಲಿ…ಕೇಸರಿ ಕ್ರಿಮಿಗಳ ಪಿತೂರಿಯನ್ನು ಬಯಲಿಗೆಳೆದು ಸಮಾಜಕ್ಕೆ ತೋರಿಸಲಿ…

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...