Homeಕರ್ನಾಟಕಗೌರಿ ಟ್ರಸ್ಟ್ ಕುರಿತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆಗೆ ನಿರ್ಧಾರ.

ಗೌರಿ ಟ್ರಸ್ಟ್ ಕುರಿತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆಗೆ ನಿರ್ಧಾರ.

ಸ್ವತಃ ತನ್ನ ಅಕ್ಕ ಗೌರಿ ಲಂಕೇಶ್‌ರವರಿಗೆ ಬಂದೂಕು ತೋರಿಸಿದ ವ್ಯಕ್ತಿ ಇಂದ್ರಜಿತ್‌ ಲಂಕೇಶ್‌ರವರಿಂದ ಇದಕ್ಕಿಂತ ಹೆಚ್ಚಿನ ನಿರೀಕ್ಷೆ ಮಾಡುವುದೂ ಕಷ್ಟ ಎಂದು ನಗರಗೆರೆ ರಮೇಶ್‌ ತಿಳಿಸಿದ್ದಾರೆ.

- Advertisement -
- Advertisement -

ಗೌರಿ ಟ್ರಸ್ಟ್ ಹಣಕಾಸು ವ್ಯವಹಾರದ ತನಿಖೆಗೆ ಸ್ವಾಗತ, ತನಿಖೆ ನಡೆಯದಿದ್ದರೂ ಟ್ರಸ್ಟ್‌ನ ವತಿಯಿಂದ ಸಾರ್ವಜನಿಕ ಆಡಿಟ್‌ಗೆ ಆಹ್ವಾನ ಮತ್ತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆಗೆ ನಿರ್ಧಾರ ಮಾಡಲಾಗಿದೆ ಎಂದು ಗೌರಿ ಮೀಡಿಯಾ ಟ್ರಸ್ಟ್‌ನ ನಗರಗೆರೆ ರಮೇಶ್, ಪ್ರೊ.ವಿ.ಎಸ್.ಶ್ರೀಧರ ಮತ್ತು ಕೆ.ಎಲ್.ಅಶೋಕ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹೊಸದಿಗಂತ ಎಂಬ ಪತ್ರಿಕೆಯೊಂದು ಗೌರಿ ಸ್ಮಾರಕ ಟ್ರಸ್ಟ್‌ನ ಮೇಲೆ ದುರುದ್ದೇಶಪೂರ್ವಕವಾದ ಸುಳ್ಳು ಆರೋಪವನ್ನು ಮಾಡಿ ವರದಿಯೊಂದನ್ನು ಪ್ರಕಟಿಸಿದೆ. ಅದರ ನಂತರ ಚಿತ್ರ ನಿರ್ದೇಶಕ ಇಂದ್ರಜಿತ್ ಅವರು ಟಿವಿ ವಾಹಿನಿಯೊಂದರ ಜೊತೆ ಮಾತನಾಡಿದ್ದಲ್ಲದೇ ಇಂದು ಪತ್ರಿಕಾಗೋಷ್ಠಿಯನ್ನೂ ನಡೆಸಿ ಮೇಲಿನ ಆರೋಪಗಳನ್ನು ಉಲ್ಲೇಖಿಸಿ ತನಿಖೆ ನಡೆಯಬೇಕೆಂದು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆಗೆ ಸ್ವಾಗತಿಸುತ್ತೇವೆ, ಜೊತೆಗೆ ಮಾನನಷ್ಟ ಮೊಕದ್ದಮೆ ಕೂಡ ದಾಖಲಿಸುತ್ತೇವೆ ಎಂದಿದ್ದಾರೆ.

ಇವೆಲ್ಲವೂ ಅತ್ಯಂತ ಸುಳ್ಳು ಆರೋಪಗಳಷ್ಟೇ ಅಲ್ಲ, ದುರುದ್ದೇಶದಿಂದ ಕೂಡಿದೆ. ಸತ್ಯ ನುಡಿದಿದ್ದಕ್ಕೆ ಮತ್ತು ದೇಶದ ಪ್ರಜಾತಂತ್ರದ ಪರವಾಗಿ ದನಿಯೆತ್ತಿದ್ದಕ್ಕೆ ಜೀವವನ್ನೇ ಕಳೆದುಕೊಳ್ಳಬೇಕಾಗಿ ಬಂದ ಗೌರಿ ಲಂಕೇಶರ ಆಶಯಗಳನ್ನು ಮುಂದುವರೆಸುವ ಸಲುವಾಗಿ ಗೌರಿ ಸ್ಮಾರಕ ಟ್ರಸ್ಟ್ ಅಸ್ತಿತ್ವಕ್ಕೆ ಬಂದಿತು. ಹಾಗೆಯೇ ಮಾಧ್ಯಮ ಪ್ರಯತ್ನವನ್ನು ಮುಂದುವರೆಸುವ ಹೊಣೆ ಹೊರುವುದಕ್ಕೋಸ್ಕರ ಗೌರಿ ಮೀಡಿಯಾ ಟ್ರಸ್ಟ್ ರೂಪುಗೊಂಡಿತು ಎಂದು ಗೌರಿ ಸ್ಮಾರಕ ಟ್ರಸ್ಟ್‌ನ ಕಾರ್ಯದರ್ಶಿ ಕೆ.ಎಲ್‌ ಅಶೋಕ್‌ ತಿಳಿಸಿದ್ದಾರೆ.

ಇದುವರೆಗೆ ಗೌರಿ ಸ್ಮಾರಕ ಟ್ರಸ್ಟ್ 6 ಕಾರ್ಯಕ್ರಮಗಳನ್ನು ಸಂಘಟಿಸಿದ್ದು ಖ್ಯಾತ ಪತ್ರಕರ್ತ ರವೀಶ್‌ಕುಮಾರ್ ಅವರಿಗೆ ಗೌರಿ ಲಂಕೇಶ್ ರಾಷ್ಟ್ರೀಯ ಪ್ರಶಸ್ತಿಯನ್ನೂ ನೀಡಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಗೌರಿ ಲಂಕೇಶರ ಆಶಯವನ್ನು ಎತ್ತಿ ಹಿಡಿದು ದನಿಯೆತ್ತುತ್ತಿರುವ ಅವರ ಸಹೋದರಿ ಕವಿತಾ ಲಂಕೇಶ್‌ರು ಭಾಗವಹಿಸಿದ್ದಾರೆ. ಗೌರಿಯವರ ತಾಯಿ ಇಂದಿರಾ ಲಂಕೇಶ್‌ರೂ ಹಲವು ಕಾರ್ಯಕ್ರಮಗಳಲ್ಲಿ ಜೊತೆಯಾಗಿದ್ದಾರೆ. ಸ್ಮಾರಕ ಟ್ರಸ್ಟ್‌ನ ಪೋಷಕರಲ್ಲಿ ಕವಿತಾ ಲಂಕೇಶ್‌ರೂ ಸಹಾ ಒಬ್ಬರು. ಅವರುಗಳು ನಮ್ಮ ಸ್ಫೂರ್ತಿ ಹಾಗೂ ಶಕ್ತಿಯನ್ನು ಹೆಚ್ಚಿಸಿದ್ದಾರೆ. ಆದರೆ ಗೌರಿ ಲಂಕೇಶ್‌ ಬದುಕಿದ್ದಾಗಲೂ ಅವರ ಆಶಯಗಳಿಗೆ ವಿರುದ್ಧವಾಗಿದ್ದ ಮತ್ತು ನಂತರವೂ ಅದೇ ರೀತಿ ಮುಂದುವರೆದಿರುವ ಇಂದ್ರಜಿತ್ ಲಂಕೇಶ್‌ರು ಎಂದೂ ಇದರಲ್ಲಿ ಭಾಗಿಯಾಗುವ ಸಾಧ್ಯತೆ ಇರಲಿಲ್ಲ ಎಂದು ಕೆ.ಎಲ್‌ ಅಶೋಕ್‌ ತಿಳಿಸಿದ್ದಾರೆ.

ರವೀಶ್‌ ಕುಮಾರ್‌ರವರಿಗೆ ಗೌರಿ ಲಂಕೇಶ್‌ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ

ಟ್ರಸ್ಟ್‌ನ ಕಾರ್ಯಚಟುವಟಿಕೆಗಳಿಗೆ ಹಿತೈಷಿಗಳಿಂದ ಹಣ ಸಂಗ್ರಹಿಸಿದ್ದಲ್ಲದೇ, ಆಯಾ ಸಂದರ್ಭದಲ್ಲಿ ಅವನ್ನು ಸಾರ್ವಜನಿಕವಾಗಿಯೂ ಮುಂದಿಡಲಾಗಿದೆ. ಮಾಧ್ಯಮ ಸಂಸ್ಥೆಯು ತಾನು ನಡೆಸುತ್ತಿರುವ ನ್ಯಾಯಪಥ ಪತ್ರಿಕೆಯ ಓದುಗರಿಂದ ಚಂದಾ ಸಹಾ ಸಂಗ್ರಹಿಸಿದೆ. ವಾರ್ಷಿಕ ಚಂದಾ 1,000 ರೂ. ಇದ್ದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಚಂದಾದಾರರಿದ್ದಾರೆ. ಸಂಗ್ರಹಿಸಿದ ಮತ್ತು ಖರ್ಚು ಮಾಡಿದ ಎಲ್ಲಾ ಹಣಕ್ಕೂ ಲೆಕ್ಕವಿದ್ದು ಲೆಕ್ಕ ಪರಿಶೋಧಕರಿಂದ ಪರಿಶೀಲನೆಯೂ ಆಗಿದೆ. ಹಣಕಾಸಿನ ವ್ಯವಹಾರವೆಲ್ಲವೂ ಬ್ಯಾಂಕ್ ಮೂಲಕವೇ ನಡೆಯುತ್ತದಲ್ಲದೇ, ಎಲ್ಲಾ ಹಣಕಾಸಿನ ವ್ಯವಹಾರಗಳಿಗೂ ಸೂಕ್ತ ದಾಖಲಾತಿಗಳು ಇವೆ, ಪಾರದರ್ಶಕವಾಗಿವೆ.
ಹೀಗಿದ್ದೂ ಅದರ ಬಗ್ಗೆ ಸುಳ್ಳು ಆರೋಪ ಮಾಡುತ್ತಿರುವುದು ದುರುದ್ದೇಶದಿಂದ ಕೂಡಿದೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಗೌರಿ ಮೀಡಿಯಾ ಟ್ರಸ್ಟ್‌ ಅಧ್ಯಕ್ಷರಾದ ನಗರಗೆರೆ ರಮೇಶ್ ಹೇಳಿದ್ದಾರೆ.

ಈ ಬಗ್ಗೆ ತನಿಖೆ ನಡೆಯಬೇಕು ಎಂದು ಯಾರೇ ಹೇಳಲಿ ಅದಕ್ಕೆ ನಮ್ಮ ಸ್ವಾಗತವಿದೆ. ಒಂದು ವೇಳೆ ತನಿಖೆ ನಡೆಯದಿದ್ದಲ್ಲಿ ಜನವರಿ 29ರಂದು (ಗೌರಿ ದಿನ) ನಮ್ಮ ಹಣಕಾಸಿನ ಲೆಕ್ಕಾಚಾರದ ಸಾರ್ವಜನಿಕ ಆಡಿಟ್ ಮಾಡಲು ಆಹ್ವಾನಿಸಲಾಗುವುದು. ನಮ್ಮ ಹಿತೈಷಿಗಳು ಮಾತ್ರವಲ್ಲದೇ ಯಾರೇ ಸಾರ್ವಜನಿಕರೂ ಅದನ್ನು ಪರಿಶೀಲಿಸಲು ಮುಕ್ತ ಆಹ್ವಾನ ನೀಡಲಾಗುತ್ತದೆ. ಆದರೆ ದುರಂತವೆಂದರೆ, ಗೌರಿ ಲಂಕೇಶ್‌ರವರ ಉನ್ನತ ಆದರ್ಶಗಳ ವಿರುದ್ಧವೇ ಬದುಕುತ್ತಿರುವ ವ್ಯಕ್ತಿಯು ಈಗ ಅವರ ಕುರಿತು ಮಾತನಾಡುತ್ತಿದ್ದಾರೆ. ಅವರ ಮೇಲೆ ಮತ್ತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಲಾಗಿದೆ. ಹಣಕಾಸಿನ ಕುರಿತ ಆರೋಪಗಳಲ್ಲದೇ ಇತರೆಲ್ಲಾ ಸುಳ್ಳು ಆರೋಪಗಳಿಗೂ ಸಂಬಂಧಪಟ್ಟವರು ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಗೌರಿ ಸ್ಮಾರಕ ಟ್ರಸ್ಟ್‌ನ ಅಧ್ಯಕ್ಷರಾದ ಮತ್ತು ಸಾರ್ವಜನಿಕ ಬದುಕಿನಲ್ಲಿ ಕಟು ಪ್ರಾಮಾಣಿಕತೆಯನ್ನು ಪಾಲಿಸಿಕೊಂಡು ಬಂದಿರುವವರಾದ ಎಚ್.ಎಸ್.ದೊರೆಸ್ವಾಮಿಯವರ ಮಡದಿಯು ತೀರಿಕೊಂಡ ದಿನವೇ ಇಂತಹ ಹೇಳಿಕೆಯನ್ನು ನೀಡಿರುವ ವಿಷಾದಕರ ಘಟನೆ ನಡೆದಿದೆ. ಸ್ವತಃ ತನ್ನ ಅಕ್ಕ ಗೌರಿ ಲಂಕೇಶ್‌ರವರಿಗೆ ಬಂದೂಕು ತೋರಿಸಿದ ವ್ಯಕ್ತಿಯಿಂದ ಇದಕ್ಕಿಂತ ಹೆಚ್ಚಿನ ನಿರೀಕ್ಷೆ ಮಾಡುವುದೂ ಕಷ್ಟವೇ ಎಂದು ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪತ್ರಿಕೆಗೆ ಶುಭವಾಗಲಿ…ಕೇಸರಿ ಕ್ರಿಮಿಗಳ ಪಿತೂರಿಯನ್ನು ಬಯಲಿಗೆಳೆದು ಸಮಾಜಕ್ಕೆ ತೋರಿಸಲಿ…

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...