Homeಕರ್ನಾಟಕಗೌರಿ ಟ್ರಸ್ಟ್ ಕುರಿತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆಗೆ ನಿರ್ಧಾರ.

ಗೌರಿ ಟ್ರಸ್ಟ್ ಕುರಿತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆಗೆ ನಿರ್ಧಾರ.

ಸ್ವತಃ ತನ್ನ ಅಕ್ಕ ಗೌರಿ ಲಂಕೇಶ್‌ರವರಿಗೆ ಬಂದೂಕು ತೋರಿಸಿದ ವ್ಯಕ್ತಿ ಇಂದ್ರಜಿತ್‌ ಲಂಕೇಶ್‌ರವರಿಂದ ಇದಕ್ಕಿಂತ ಹೆಚ್ಚಿನ ನಿರೀಕ್ಷೆ ಮಾಡುವುದೂ ಕಷ್ಟ ಎಂದು ನಗರಗೆರೆ ರಮೇಶ್‌ ತಿಳಿಸಿದ್ದಾರೆ.

- Advertisement -
- Advertisement -

ಗೌರಿ ಟ್ರಸ್ಟ್ ಹಣಕಾಸು ವ್ಯವಹಾರದ ತನಿಖೆಗೆ ಸ್ವಾಗತ, ತನಿಖೆ ನಡೆಯದಿದ್ದರೂ ಟ್ರಸ್ಟ್‌ನ ವತಿಯಿಂದ ಸಾರ್ವಜನಿಕ ಆಡಿಟ್‌ಗೆ ಆಹ್ವಾನ ಮತ್ತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆಗೆ ನಿರ್ಧಾರ ಮಾಡಲಾಗಿದೆ ಎಂದು ಗೌರಿ ಮೀಡಿಯಾ ಟ್ರಸ್ಟ್‌ನ ನಗರಗೆರೆ ರಮೇಶ್, ಪ್ರೊ.ವಿ.ಎಸ್.ಶ್ರೀಧರ ಮತ್ತು ಕೆ.ಎಲ್.ಅಶೋಕ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹೊಸದಿಗಂತ ಎಂಬ ಪತ್ರಿಕೆಯೊಂದು ಗೌರಿ ಸ್ಮಾರಕ ಟ್ರಸ್ಟ್‌ನ ಮೇಲೆ ದುರುದ್ದೇಶಪೂರ್ವಕವಾದ ಸುಳ್ಳು ಆರೋಪವನ್ನು ಮಾಡಿ ವರದಿಯೊಂದನ್ನು ಪ್ರಕಟಿಸಿದೆ. ಅದರ ನಂತರ ಚಿತ್ರ ನಿರ್ದೇಶಕ ಇಂದ್ರಜಿತ್ ಅವರು ಟಿವಿ ವಾಹಿನಿಯೊಂದರ ಜೊತೆ ಮಾತನಾಡಿದ್ದಲ್ಲದೇ ಇಂದು ಪತ್ರಿಕಾಗೋಷ್ಠಿಯನ್ನೂ ನಡೆಸಿ ಮೇಲಿನ ಆರೋಪಗಳನ್ನು ಉಲ್ಲೇಖಿಸಿ ತನಿಖೆ ನಡೆಯಬೇಕೆಂದು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆಗೆ ಸ್ವಾಗತಿಸುತ್ತೇವೆ, ಜೊತೆಗೆ ಮಾನನಷ್ಟ ಮೊಕದ್ದಮೆ ಕೂಡ ದಾಖಲಿಸುತ್ತೇವೆ ಎಂದಿದ್ದಾರೆ.

ಇವೆಲ್ಲವೂ ಅತ್ಯಂತ ಸುಳ್ಳು ಆರೋಪಗಳಷ್ಟೇ ಅಲ್ಲ, ದುರುದ್ದೇಶದಿಂದ ಕೂಡಿದೆ. ಸತ್ಯ ನುಡಿದಿದ್ದಕ್ಕೆ ಮತ್ತು ದೇಶದ ಪ್ರಜಾತಂತ್ರದ ಪರವಾಗಿ ದನಿಯೆತ್ತಿದ್ದಕ್ಕೆ ಜೀವವನ್ನೇ ಕಳೆದುಕೊಳ್ಳಬೇಕಾಗಿ ಬಂದ ಗೌರಿ ಲಂಕೇಶರ ಆಶಯಗಳನ್ನು ಮುಂದುವರೆಸುವ ಸಲುವಾಗಿ ಗೌರಿ ಸ್ಮಾರಕ ಟ್ರಸ್ಟ್ ಅಸ್ತಿತ್ವಕ್ಕೆ ಬಂದಿತು. ಹಾಗೆಯೇ ಮಾಧ್ಯಮ ಪ್ರಯತ್ನವನ್ನು ಮುಂದುವರೆಸುವ ಹೊಣೆ ಹೊರುವುದಕ್ಕೋಸ್ಕರ ಗೌರಿ ಮೀಡಿಯಾ ಟ್ರಸ್ಟ್ ರೂಪುಗೊಂಡಿತು ಎಂದು ಗೌರಿ ಸ್ಮಾರಕ ಟ್ರಸ್ಟ್‌ನ ಕಾರ್ಯದರ್ಶಿ ಕೆ.ಎಲ್‌ ಅಶೋಕ್‌ ತಿಳಿಸಿದ್ದಾರೆ.

ಇದುವರೆಗೆ ಗೌರಿ ಸ್ಮಾರಕ ಟ್ರಸ್ಟ್ 6 ಕಾರ್ಯಕ್ರಮಗಳನ್ನು ಸಂಘಟಿಸಿದ್ದು ಖ್ಯಾತ ಪತ್ರಕರ್ತ ರವೀಶ್‌ಕುಮಾರ್ ಅವರಿಗೆ ಗೌರಿ ಲಂಕೇಶ್ ರಾಷ್ಟ್ರೀಯ ಪ್ರಶಸ್ತಿಯನ್ನೂ ನೀಡಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಗೌರಿ ಲಂಕೇಶರ ಆಶಯವನ್ನು ಎತ್ತಿ ಹಿಡಿದು ದನಿಯೆತ್ತುತ್ತಿರುವ ಅವರ ಸಹೋದರಿ ಕವಿತಾ ಲಂಕೇಶ್‌ರು ಭಾಗವಹಿಸಿದ್ದಾರೆ. ಗೌರಿಯವರ ತಾಯಿ ಇಂದಿರಾ ಲಂಕೇಶ್‌ರೂ ಹಲವು ಕಾರ್ಯಕ್ರಮಗಳಲ್ಲಿ ಜೊತೆಯಾಗಿದ್ದಾರೆ. ಸ್ಮಾರಕ ಟ್ರಸ್ಟ್‌ನ ಪೋಷಕರಲ್ಲಿ ಕವಿತಾ ಲಂಕೇಶ್‌ರೂ ಸಹಾ ಒಬ್ಬರು. ಅವರುಗಳು ನಮ್ಮ ಸ್ಫೂರ್ತಿ ಹಾಗೂ ಶಕ್ತಿಯನ್ನು ಹೆಚ್ಚಿಸಿದ್ದಾರೆ. ಆದರೆ ಗೌರಿ ಲಂಕೇಶ್‌ ಬದುಕಿದ್ದಾಗಲೂ ಅವರ ಆಶಯಗಳಿಗೆ ವಿರುದ್ಧವಾಗಿದ್ದ ಮತ್ತು ನಂತರವೂ ಅದೇ ರೀತಿ ಮುಂದುವರೆದಿರುವ ಇಂದ್ರಜಿತ್ ಲಂಕೇಶ್‌ರು ಎಂದೂ ಇದರಲ್ಲಿ ಭಾಗಿಯಾಗುವ ಸಾಧ್ಯತೆ ಇರಲಿಲ್ಲ ಎಂದು ಕೆ.ಎಲ್‌ ಅಶೋಕ್‌ ತಿಳಿಸಿದ್ದಾರೆ.

ರವೀಶ್‌ ಕುಮಾರ್‌ರವರಿಗೆ ಗೌರಿ ಲಂಕೇಶ್‌ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ

ಟ್ರಸ್ಟ್‌ನ ಕಾರ್ಯಚಟುವಟಿಕೆಗಳಿಗೆ ಹಿತೈಷಿಗಳಿಂದ ಹಣ ಸಂಗ್ರಹಿಸಿದ್ದಲ್ಲದೇ, ಆಯಾ ಸಂದರ್ಭದಲ್ಲಿ ಅವನ್ನು ಸಾರ್ವಜನಿಕವಾಗಿಯೂ ಮುಂದಿಡಲಾಗಿದೆ. ಮಾಧ್ಯಮ ಸಂಸ್ಥೆಯು ತಾನು ನಡೆಸುತ್ತಿರುವ ನ್ಯಾಯಪಥ ಪತ್ರಿಕೆಯ ಓದುಗರಿಂದ ಚಂದಾ ಸಹಾ ಸಂಗ್ರಹಿಸಿದೆ. ವಾರ್ಷಿಕ ಚಂದಾ 1,000 ರೂ. ಇದ್ದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಚಂದಾದಾರರಿದ್ದಾರೆ. ಸಂಗ್ರಹಿಸಿದ ಮತ್ತು ಖರ್ಚು ಮಾಡಿದ ಎಲ್ಲಾ ಹಣಕ್ಕೂ ಲೆಕ್ಕವಿದ್ದು ಲೆಕ್ಕ ಪರಿಶೋಧಕರಿಂದ ಪರಿಶೀಲನೆಯೂ ಆಗಿದೆ. ಹಣಕಾಸಿನ ವ್ಯವಹಾರವೆಲ್ಲವೂ ಬ್ಯಾಂಕ್ ಮೂಲಕವೇ ನಡೆಯುತ್ತದಲ್ಲದೇ, ಎಲ್ಲಾ ಹಣಕಾಸಿನ ವ್ಯವಹಾರಗಳಿಗೂ ಸೂಕ್ತ ದಾಖಲಾತಿಗಳು ಇವೆ, ಪಾರದರ್ಶಕವಾಗಿವೆ.
ಹೀಗಿದ್ದೂ ಅದರ ಬಗ್ಗೆ ಸುಳ್ಳು ಆರೋಪ ಮಾಡುತ್ತಿರುವುದು ದುರುದ್ದೇಶದಿಂದ ಕೂಡಿದೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಗೌರಿ ಮೀಡಿಯಾ ಟ್ರಸ್ಟ್‌ ಅಧ್ಯಕ್ಷರಾದ ನಗರಗೆರೆ ರಮೇಶ್ ಹೇಳಿದ್ದಾರೆ.

ಈ ಬಗ್ಗೆ ತನಿಖೆ ನಡೆಯಬೇಕು ಎಂದು ಯಾರೇ ಹೇಳಲಿ ಅದಕ್ಕೆ ನಮ್ಮ ಸ್ವಾಗತವಿದೆ. ಒಂದು ವೇಳೆ ತನಿಖೆ ನಡೆಯದಿದ್ದಲ್ಲಿ ಜನವರಿ 29ರಂದು (ಗೌರಿ ದಿನ) ನಮ್ಮ ಹಣಕಾಸಿನ ಲೆಕ್ಕಾಚಾರದ ಸಾರ್ವಜನಿಕ ಆಡಿಟ್ ಮಾಡಲು ಆಹ್ವಾನಿಸಲಾಗುವುದು. ನಮ್ಮ ಹಿತೈಷಿಗಳು ಮಾತ್ರವಲ್ಲದೇ ಯಾರೇ ಸಾರ್ವಜನಿಕರೂ ಅದನ್ನು ಪರಿಶೀಲಿಸಲು ಮುಕ್ತ ಆಹ್ವಾನ ನೀಡಲಾಗುತ್ತದೆ. ಆದರೆ ದುರಂತವೆಂದರೆ, ಗೌರಿ ಲಂಕೇಶ್‌ರವರ ಉನ್ನತ ಆದರ್ಶಗಳ ವಿರುದ್ಧವೇ ಬದುಕುತ್ತಿರುವ ವ್ಯಕ್ತಿಯು ಈಗ ಅವರ ಕುರಿತು ಮಾತನಾಡುತ್ತಿದ್ದಾರೆ. ಅವರ ಮೇಲೆ ಮತ್ತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಲಾಗಿದೆ. ಹಣಕಾಸಿನ ಕುರಿತ ಆರೋಪಗಳಲ್ಲದೇ ಇತರೆಲ್ಲಾ ಸುಳ್ಳು ಆರೋಪಗಳಿಗೂ ಸಂಬಂಧಪಟ್ಟವರು ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಗೌರಿ ಸ್ಮಾರಕ ಟ್ರಸ್ಟ್‌ನ ಅಧ್ಯಕ್ಷರಾದ ಮತ್ತು ಸಾರ್ವಜನಿಕ ಬದುಕಿನಲ್ಲಿ ಕಟು ಪ್ರಾಮಾಣಿಕತೆಯನ್ನು ಪಾಲಿಸಿಕೊಂಡು ಬಂದಿರುವವರಾದ ಎಚ್.ಎಸ್.ದೊರೆಸ್ವಾಮಿಯವರ ಮಡದಿಯು ತೀರಿಕೊಂಡ ದಿನವೇ ಇಂತಹ ಹೇಳಿಕೆಯನ್ನು ನೀಡಿರುವ ವಿಷಾದಕರ ಘಟನೆ ನಡೆದಿದೆ. ಸ್ವತಃ ತನ್ನ ಅಕ್ಕ ಗೌರಿ ಲಂಕೇಶ್‌ರವರಿಗೆ ಬಂದೂಕು ತೋರಿಸಿದ ವ್ಯಕ್ತಿಯಿಂದ ಇದಕ್ಕಿಂತ ಹೆಚ್ಚಿನ ನಿರೀಕ್ಷೆ ಮಾಡುವುದೂ ಕಷ್ಟವೇ ಎಂದು ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪತ್ರಿಕೆಗೆ ಶುಭವಾಗಲಿ…ಕೇಸರಿ ಕ್ರಿಮಿಗಳ ಪಿತೂರಿಯನ್ನು ಬಯಲಿಗೆಳೆದು ಸಮಾಜಕ್ಕೆ ತೋರಿಸಲಿ…

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...