Homeಕರ್ನಾಟಕಗೌರಿ ಟ್ರಸ್ಟ್ ಕುರಿತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆಗೆ ನಿರ್ಧಾರ.

ಗೌರಿ ಟ್ರಸ್ಟ್ ಕುರಿತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆಗೆ ನಿರ್ಧಾರ.

ಸ್ವತಃ ತನ್ನ ಅಕ್ಕ ಗೌರಿ ಲಂಕೇಶ್‌ರವರಿಗೆ ಬಂದೂಕು ತೋರಿಸಿದ ವ್ಯಕ್ತಿ ಇಂದ್ರಜಿತ್‌ ಲಂಕೇಶ್‌ರವರಿಂದ ಇದಕ್ಕಿಂತ ಹೆಚ್ಚಿನ ನಿರೀಕ್ಷೆ ಮಾಡುವುದೂ ಕಷ್ಟ ಎಂದು ನಗರಗೆರೆ ರಮೇಶ್‌ ತಿಳಿಸಿದ್ದಾರೆ.

- Advertisement -
- Advertisement -

ಗೌರಿ ಟ್ರಸ್ಟ್ ಹಣಕಾಸು ವ್ಯವಹಾರದ ತನಿಖೆಗೆ ಸ್ವಾಗತ, ತನಿಖೆ ನಡೆಯದಿದ್ದರೂ ಟ್ರಸ್ಟ್‌ನ ವತಿಯಿಂದ ಸಾರ್ವಜನಿಕ ಆಡಿಟ್‌ಗೆ ಆಹ್ವಾನ ಮತ್ತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆಗೆ ನಿರ್ಧಾರ ಮಾಡಲಾಗಿದೆ ಎಂದು ಗೌರಿ ಮೀಡಿಯಾ ಟ್ರಸ್ಟ್‌ನ ನಗರಗೆರೆ ರಮೇಶ್, ಪ್ರೊ.ವಿ.ಎಸ್.ಶ್ರೀಧರ ಮತ್ತು ಕೆ.ಎಲ್.ಅಶೋಕ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹೊಸದಿಗಂತ ಎಂಬ ಪತ್ರಿಕೆಯೊಂದು ಗೌರಿ ಸ್ಮಾರಕ ಟ್ರಸ್ಟ್‌ನ ಮೇಲೆ ದುರುದ್ದೇಶಪೂರ್ವಕವಾದ ಸುಳ್ಳು ಆರೋಪವನ್ನು ಮಾಡಿ ವರದಿಯೊಂದನ್ನು ಪ್ರಕಟಿಸಿದೆ. ಅದರ ನಂತರ ಚಿತ್ರ ನಿರ್ದೇಶಕ ಇಂದ್ರಜಿತ್ ಅವರು ಟಿವಿ ವಾಹಿನಿಯೊಂದರ ಜೊತೆ ಮಾತನಾಡಿದ್ದಲ್ಲದೇ ಇಂದು ಪತ್ರಿಕಾಗೋಷ್ಠಿಯನ್ನೂ ನಡೆಸಿ ಮೇಲಿನ ಆರೋಪಗಳನ್ನು ಉಲ್ಲೇಖಿಸಿ ತನಿಖೆ ನಡೆಯಬೇಕೆಂದು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆಗೆ ಸ್ವಾಗತಿಸುತ್ತೇವೆ, ಜೊತೆಗೆ ಮಾನನಷ್ಟ ಮೊಕದ್ದಮೆ ಕೂಡ ದಾಖಲಿಸುತ್ತೇವೆ ಎಂದಿದ್ದಾರೆ.

ಇವೆಲ್ಲವೂ ಅತ್ಯಂತ ಸುಳ್ಳು ಆರೋಪಗಳಷ್ಟೇ ಅಲ್ಲ, ದುರುದ್ದೇಶದಿಂದ ಕೂಡಿದೆ. ಸತ್ಯ ನುಡಿದಿದ್ದಕ್ಕೆ ಮತ್ತು ದೇಶದ ಪ್ರಜಾತಂತ್ರದ ಪರವಾಗಿ ದನಿಯೆತ್ತಿದ್ದಕ್ಕೆ ಜೀವವನ್ನೇ ಕಳೆದುಕೊಳ್ಳಬೇಕಾಗಿ ಬಂದ ಗೌರಿ ಲಂಕೇಶರ ಆಶಯಗಳನ್ನು ಮುಂದುವರೆಸುವ ಸಲುವಾಗಿ ಗೌರಿ ಸ್ಮಾರಕ ಟ್ರಸ್ಟ್ ಅಸ್ತಿತ್ವಕ್ಕೆ ಬಂದಿತು. ಹಾಗೆಯೇ ಮಾಧ್ಯಮ ಪ್ರಯತ್ನವನ್ನು ಮುಂದುವರೆಸುವ ಹೊಣೆ ಹೊರುವುದಕ್ಕೋಸ್ಕರ ಗೌರಿ ಮೀಡಿಯಾ ಟ್ರಸ್ಟ್ ರೂಪುಗೊಂಡಿತು ಎಂದು ಗೌರಿ ಸ್ಮಾರಕ ಟ್ರಸ್ಟ್‌ನ ಕಾರ್ಯದರ್ಶಿ ಕೆ.ಎಲ್‌ ಅಶೋಕ್‌ ತಿಳಿಸಿದ್ದಾರೆ.

ಇದುವರೆಗೆ ಗೌರಿ ಸ್ಮಾರಕ ಟ್ರಸ್ಟ್ 6 ಕಾರ್ಯಕ್ರಮಗಳನ್ನು ಸಂಘಟಿಸಿದ್ದು ಖ್ಯಾತ ಪತ್ರಕರ್ತ ರವೀಶ್‌ಕುಮಾರ್ ಅವರಿಗೆ ಗೌರಿ ಲಂಕೇಶ್ ರಾಷ್ಟ್ರೀಯ ಪ್ರಶಸ್ತಿಯನ್ನೂ ನೀಡಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಗೌರಿ ಲಂಕೇಶರ ಆಶಯವನ್ನು ಎತ್ತಿ ಹಿಡಿದು ದನಿಯೆತ್ತುತ್ತಿರುವ ಅವರ ಸಹೋದರಿ ಕವಿತಾ ಲಂಕೇಶ್‌ರು ಭಾಗವಹಿಸಿದ್ದಾರೆ. ಗೌರಿಯವರ ತಾಯಿ ಇಂದಿರಾ ಲಂಕೇಶ್‌ರೂ ಹಲವು ಕಾರ್ಯಕ್ರಮಗಳಲ್ಲಿ ಜೊತೆಯಾಗಿದ್ದಾರೆ. ಸ್ಮಾರಕ ಟ್ರಸ್ಟ್‌ನ ಪೋಷಕರಲ್ಲಿ ಕವಿತಾ ಲಂಕೇಶ್‌ರೂ ಸಹಾ ಒಬ್ಬರು. ಅವರುಗಳು ನಮ್ಮ ಸ್ಫೂರ್ತಿ ಹಾಗೂ ಶಕ್ತಿಯನ್ನು ಹೆಚ್ಚಿಸಿದ್ದಾರೆ. ಆದರೆ ಗೌರಿ ಲಂಕೇಶ್‌ ಬದುಕಿದ್ದಾಗಲೂ ಅವರ ಆಶಯಗಳಿಗೆ ವಿರುದ್ಧವಾಗಿದ್ದ ಮತ್ತು ನಂತರವೂ ಅದೇ ರೀತಿ ಮುಂದುವರೆದಿರುವ ಇಂದ್ರಜಿತ್ ಲಂಕೇಶ್‌ರು ಎಂದೂ ಇದರಲ್ಲಿ ಭಾಗಿಯಾಗುವ ಸಾಧ್ಯತೆ ಇರಲಿಲ್ಲ ಎಂದು ಕೆ.ಎಲ್‌ ಅಶೋಕ್‌ ತಿಳಿಸಿದ್ದಾರೆ.

ರವೀಶ್‌ ಕುಮಾರ್‌ರವರಿಗೆ ಗೌರಿ ಲಂಕೇಶ್‌ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ

ಟ್ರಸ್ಟ್‌ನ ಕಾರ್ಯಚಟುವಟಿಕೆಗಳಿಗೆ ಹಿತೈಷಿಗಳಿಂದ ಹಣ ಸಂಗ್ರಹಿಸಿದ್ದಲ್ಲದೇ, ಆಯಾ ಸಂದರ್ಭದಲ್ಲಿ ಅವನ್ನು ಸಾರ್ವಜನಿಕವಾಗಿಯೂ ಮುಂದಿಡಲಾಗಿದೆ. ಮಾಧ್ಯಮ ಸಂಸ್ಥೆಯು ತಾನು ನಡೆಸುತ್ತಿರುವ ನ್ಯಾಯಪಥ ಪತ್ರಿಕೆಯ ಓದುಗರಿಂದ ಚಂದಾ ಸಹಾ ಸಂಗ್ರಹಿಸಿದೆ. ವಾರ್ಷಿಕ ಚಂದಾ 1,000 ರೂ. ಇದ್ದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಚಂದಾದಾರರಿದ್ದಾರೆ. ಸಂಗ್ರಹಿಸಿದ ಮತ್ತು ಖರ್ಚು ಮಾಡಿದ ಎಲ್ಲಾ ಹಣಕ್ಕೂ ಲೆಕ್ಕವಿದ್ದು ಲೆಕ್ಕ ಪರಿಶೋಧಕರಿಂದ ಪರಿಶೀಲನೆಯೂ ಆಗಿದೆ. ಹಣಕಾಸಿನ ವ್ಯವಹಾರವೆಲ್ಲವೂ ಬ್ಯಾಂಕ್ ಮೂಲಕವೇ ನಡೆಯುತ್ತದಲ್ಲದೇ, ಎಲ್ಲಾ ಹಣಕಾಸಿನ ವ್ಯವಹಾರಗಳಿಗೂ ಸೂಕ್ತ ದಾಖಲಾತಿಗಳು ಇವೆ, ಪಾರದರ್ಶಕವಾಗಿವೆ.
ಹೀಗಿದ್ದೂ ಅದರ ಬಗ್ಗೆ ಸುಳ್ಳು ಆರೋಪ ಮಾಡುತ್ತಿರುವುದು ದುರುದ್ದೇಶದಿಂದ ಕೂಡಿದೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಗೌರಿ ಮೀಡಿಯಾ ಟ್ರಸ್ಟ್‌ ಅಧ್ಯಕ್ಷರಾದ ನಗರಗೆರೆ ರಮೇಶ್ ಹೇಳಿದ್ದಾರೆ.

ಈ ಬಗ್ಗೆ ತನಿಖೆ ನಡೆಯಬೇಕು ಎಂದು ಯಾರೇ ಹೇಳಲಿ ಅದಕ್ಕೆ ನಮ್ಮ ಸ್ವಾಗತವಿದೆ. ಒಂದು ವೇಳೆ ತನಿಖೆ ನಡೆಯದಿದ್ದಲ್ಲಿ ಜನವರಿ 29ರಂದು (ಗೌರಿ ದಿನ) ನಮ್ಮ ಹಣಕಾಸಿನ ಲೆಕ್ಕಾಚಾರದ ಸಾರ್ವಜನಿಕ ಆಡಿಟ್ ಮಾಡಲು ಆಹ್ವಾನಿಸಲಾಗುವುದು. ನಮ್ಮ ಹಿತೈಷಿಗಳು ಮಾತ್ರವಲ್ಲದೇ ಯಾರೇ ಸಾರ್ವಜನಿಕರೂ ಅದನ್ನು ಪರಿಶೀಲಿಸಲು ಮುಕ್ತ ಆಹ್ವಾನ ನೀಡಲಾಗುತ್ತದೆ. ಆದರೆ ದುರಂತವೆಂದರೆ, ಗೌರಿ ಲಂಕೇಶ್‌ರವರ ಉನ್ನತ ಆದರ್ಶಗಳ ವಿರುದ್ಧವೇ ಬದುಕುತ್ತಿರುವ ವ್ಯಕ್ತಿಯು ಈಗ ಅವರ ಕುರಿತು ಮಾತನಾಡುತ್ತಿದ್ದಾರೆ. ಅವರ ಮೇಲೆ ಮತ್ತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಲಾಗಿದೆ. ಹಣಕಾಸಿನ ಕುರಿತ ಆರೋಪಗಳಲ್ಲದೇ ಇತರೆಲ್ಲಾ ಸುಳ್ಳು ಆರೋಪಗಳಿಗೂ ಸಂಬಂಧಪಟ್ಟವರು ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಗೌರಿ ಸ್ಮಾರಕ ಟ್ರಸ್ಟ್‌ನ ಅಧ್ಯಕ್ಷರಾದ ಮತ್ತು ಸಾರ್ವಜನಿಕ ಬದುಕಿನಲ್ಲಿ ಕಟು ಪ್ರಾಮಾಣಿಕತೆಯನ್ನು ಪಾಲಿಸಿಕೊಂಡು ಬಂದಿರುವವರಾದ ಎಚ್.ಎಸ್.ದೊರೆಸ್ವಾಮಿಯವರ ಮಡದಿಯು ತೀರಿಕೊಂಡ ದಿನವೇ ಇಂತಹ ಹೇಳಿಕೆಯನ್ನು ನೀಡಿರುವ ವಿಷಾದಕರ ಘಟನೆ ನಡೆದಿದೆ. ಸ್ವತಃ ತನ್ನ ಅಕ್ಕ ಗೌರಿ ಲಂಕೇಶ್‌ರವರಿಗೆ ಬಂದೂಕು ತೋರಿಸಿದ ವ್ಯಕ್ತಿಯಿಂದ ಇದಕ್ಕಿಂತ ಹೆಚ್ಚಿನ ನಿರೀಕ್ಷೆ ಮಾಡುವುದೂ ಕಷ್ಟವೇ ಎಂದು ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪತ್ರಿಕೆಗೆ ಶುಭವಾಗಲಿ…ಕೇಸರಿ ಕ್ರಿಮಿಗಳ ಪಿತೂರಿಯನ್ನು ಬಯಲಿಗೆಳೆದು ಸಮಾಜಕ್ಕೆ ತೋರಿಸಲಿ…

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...