Homeಕರ್ನಾಟಕಗೌರಿ ಟ್ರಸ್ಟ್ ಕುರಿತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆಗೆ ನಿರ್ಧಾರ.

ಗೌರಿ ಟ್ರಸ್ಟ್ ಕುರಿತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆಗೆ ನಿರ್ಧಾರ.

ಸ್ವತಃ ತನ್ನ ಅಕ್ಕ ಗೌರಿ ಲಂಕೇಶ್‌ರವರಿಗೆ ಬಂದೂಕು ತೋರಿಸಿದ ವ್ಯಕ್ತಿ ಇಂದ್ರಜಿತ್‌ ಲಂಕೇಶ್‌ರವರಿಂದ ಇದಕ್ಕಿಂತ ಹೆಚ್ಚಿನ ನಿರೀಕ್ಷೆ ಮಾಡುವುದೂ ಕಷ್ಟ ಎಂದು ನಗರಗೆರೆ ರಮೇಶ್‌ ತಿಳಿಸಿದ್ದಾರೆ.

- Advertisement -
- Advertisement -

ಗೌರಿ ಟ್ರಸ್ಟ್ ಹಣಕಾಸು ವ್ಯವಹಾರದ ತನಿಖೆಗೆ ಸ್ವಾಗತ, ತನಿಖೆ ನಡೆಯದಿದ್ದರೂ ಟ್ರಸ್ಟ್‌ನ ವತಿಯಿಂದ ಸಾರ್ವಜನಿಕ ಆಡಿಟ್‌ಗೆ ಆಹ್ವಾನ ಮತ್ತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆಗೆ ನಿರ್ಧಾರ ಮಾಡಲಾಗಿದೆ ಎಂದು ಗೌರಿ ಮೀಡಿಯಾ ಟ್ರಸ್ಟ್‌ನ ನಗರಗೆರೆ ರಮೇಶ್, ಪ್ರೊ.ವಿ.ಎಸ್.ಶ್ರೀಧರ ಮತ್ತು ಕೆ.ಎಲ್.ಅಶೋಕ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹೊಸದಿಗಂತ ಎಂಬ ಪತ್ರಿಕೆಯೊಂದು ಗೌರಿ ಸ್ಮಾರಕ ಟ್ರಸ್ಟ್‌ನ ಮೇಲೆ ದುರುದ್ದೇಶಪೂರ್ವಕವಾದ ಸುಳ್ಳು ಆರೋಪವನ್ನು ಮಾಡಿ ವರದಿಯೊಂದನ್ನು ಪ್ರಕಟಿಸಿದೆ. ಅದರ ನಂತರ ಚಿತ್ರ ನಿರ್ದೇಶಕ ಇಂದ್ರಜಿತ್ ಅವರು ಟಿವಿ ವಾಹಿನಿಯೊಂದರ ಜೊತೆ ಮಾತನಾಡಿದ್ದಲ್ಲದೇ ಇಂದು ಪತ್ರಿಕಾಗೋಷ್ಠಿಯನ್ನೂ ನಡೆಸಿ ಮೇಲಿನ ಆರೋಪಗಳನ್ನು ಉಲ್ಲೇಖಿಸಿ ತನಿಖೆ ನಡೆಯಬೇಕೆಂದು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆಗೆ ಸ್ವಾಗತಿಸುತ್ತೇವೆ, ಜೊತೆಗೆ ಮಾನನಷ್ಟ ಮೊಕದ್ದಮೆ ಕೂಡ ದಾಖಲಿಸುತ್ತೇವೆ ಎಂದಿದ್ದಾರೆ.

ಇವೆಲ್ಲವೂ ಅತ್ಯಂತ ಸುಳ್ಳು ಆರೋಪಗಳಷ್ಟೇ ಅಲ್ಲ, ದುರುದ್ದೇಶದಿಂದ ಕೂಡಿದೆ. ಸತ್ಯ ನುಡಿದಿದ್ದಕ್ಕೆ ಮತ್ತು ದೇಶದ ಪ್ರಜಾತಂತ್ರದ ಪರವಾಗಿ ದನಿಯೆತ್ತಿದ್ದಕ್ಕೆ ಜೀವವನ್ನೇ ಕಳೆದುಕೊಳ್ಳಬೇಕಾಗಿ ಬಂದ ಗೌರಿ ಲಂಕೇಶರ ಆಶಯಗಳನ್ನು ಮುಂದುವರೆಸುವ ಸಲುವಾಗಿ ಗೌರಿ ಸ್ಮಾರಕ ಟ್ರಸ್ಟ್ ಅಸ್ತಿತ್ವಕ್ಕೆ ಬಂದಿತು. ಹಾಗೆಯೇ ಮಾಧ್ಯಮ ಪ್ರಯತ್ನವನ್ನು ಮುಂದುವರೆಸುವ ಹೊಣೆ ಹೊರುವುದಕ್ಕೋಸ್ಕರ ಗೌರಿ ಮೀಡಿಯಾ ಟ್ರಸ್ಟ್ ರೂಪುಗೊಂಡಿತು ಎಂದು ಗೌರಿ ಸ್ಮಾರಕ ಟ್ರಸ್ಟ್‌ನ ಕಾರ್ಯದರ್ಶಿ ಕೆ.ಎಲ್‌ ಅಶೋಕ್‌ ತಿಳಿಸಿದ್ದಾರೆ.

ಇದುವರೆಗೆ ಗೌರಿ ಸ್ಮಾರಕ ಟ್ರಸ್ಟ್ 6 ಕಾರ್ಯಕ್ರಮಗಳನ್ನು ಸಂಘಟಿಸಿದ್ದು ಖ್ಯಾತ ಪತ್ರಕರ್ತ ರವೀಶ್‌ಕುಮಾರ್ ಅವರಿಗೆ ಗೌರಿ ಲಂಕೇಶ್ ರಾಷ್ಟ್ರೀಯ ಪ್ರಶಸ್ತಿಯನ್ನೂ ನೀಡಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಗೌರಿ ಲಂಕೇಶರ ಆಶಯವನ್ನು ಎತ್ತಿ ಹಿಡಿದು ದನಿಯೆತ್ತುತ್ತಿರುವ ಅವರ ಸಹೋದರಿ ಕವಿತಾ ಲಂಕೇಶ್‌ರು ಭಾಗವಹಿಸಿದ್ದಾರೆ. ಗೌರಿಯವರ ತಾಯಿ ಇಂದಿರಾ ಲಂಕೇಶ್‌ರೂ ಹಲವು ಕಾರ್ಯಕ್ರಮಗಳಲ್ಲಿ ಜೊತೆಯಾಗಿದ್ದಾರೆ. ಸ್ಮಾರಕ ಟ್ರಸ್ಟ್‌ನ ಪೋಷಕರಲ್ಲಿ ಕವಿತಾ ಲಂಕೇಶ್‌ರೂ ಸಹಾ ಒಬ್ಬರು. ಅವರುಗಳು ನಮ್ಮ ಸ್ಫೂರ್ತಿ ಹಾಗೂ ಶಕ್ತಿಯನ್ನು ಹೆಚ್ಚಿಸಿದ್ದಾರೆ. ಆದರೆ ಗೌರಿ ಲಂಕೇಶ್‌ ಬದುಕಿದ್ದಾಗಲೂ ಅವರ ಆಶಯಗಳಿಗೆ ವಿರುದ್ಧವಾಗಿದ್ದ ಮತ್ತು ನಂತರವೂ ಅದೇ ರೀತಿ ಮುಂದುವರೆದಿರುವ ಇಂದ್ರಜಿತ್ ಲಂಕೇಶ್‌ರು ಎಂದೂ ಇದರಲ್ಲಿ ಭಾಗಿಯಾಗುವ ಸಾಧ್ಯತೆ ಇರಲಿಲ್ಲ ಎಂದು ಕೆ.ಎಲ್‌ ಅಶೋಕ್‌ ತಿಳಿಸಿದ್ದಾರೆ.

ರವೀಶ್‌ ಕುಮಾರ್‌ರವರಿಗೆ ಗೌರಿ ಲಂಕೇಶ್‌ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ

ಟ್ರಸ್ಟ್‌ನ ಕಾರ್ಯಚಟುವಟಿಕೆಗಳಿಗೆ ಹಿತೈಷಿಗಳಿಂದ ಹಣ ಸಂಗ್ರಹಿಸಿದ್ದಲ್ಲದೇ, ಆಯಾ ಸಂದರ್ಭದಲ್ಲಿ ಅವನ್ನು ಸಾರ್ವಜನಿಕವಾಗಿಯೂ ಮುಂದಿಡಲಾಗಿದೆ. ಮಾಧ್ಯಮ ಸಂಸ್ಥೆಯು ತಾನು ನಡೆಸುತ್ತಿರುವ ನ್ಯಾಯಪಥ ಪತ್ರಿಕೆಯ ಓದುಗರಿಂದ ಚಂದಾ ಸಹಾ ಸಂಗ್ರಹಿಸಿದೆ. ವಾರ್ಷಿಕ ಚಂದಾ 1,000 ರೂ. ಇದ್ದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಚಂದಾದಾರರಿದ್ದಾರೆ. ಸಂಗ್ರಹಿಸಿದ ಮತ್ತು ಖರ್ಚು ಮಾಡಿದ ಎಲ್ಲಾ ಹಣಕ್ಕೂ ಲೆಕ್ಕವಿದ್ದು ಲೆಕ್ಕ ಪರಿಶೋಧಕರಿಂದ ಪರಿಶೀಲನೆಯೂ ಆಗಿದೆ. ಹಣಕಾಸಿನ ವ್ಯವಹಾರವೆಲ್ಲವೂ ಬ್ಯಾಂಕ್ ಮೂಲಕವೇ ನಡೆಯುತ್ತದಲ್ಲದೇ, ಎಲ್ಲಾ ಹಣಕಾಸಿನ ವ್ಯವಹಾರಗಳಿಗೂ ಸೂಕ್ತ ದಾಖಲಾತಿಗಳು ಇವೆ, ಪಾರದರ್ಶಕವಾಗಿವೆ.
ಹೀಗಿದ್ದೂ ಅದರ ಬಗ್ಗೆ ಸುಳ್ಳು ಆರೋಪ ಮಾಡುತ್ತಿರುವುದು ದುರುದ್ದೇಶದಿಂದ ಕೂಡಿದೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಗೌರಿ ಮೀಡಿಯಾ ಟ್ರಸ್ಟ್‌ ಅಧ್ಯಕ್ಷರಾದ ನಗರಗೆರೆ ರಮೇಶ್ ಹೇಳಿದ್ದಾರೆ.

ಈ ಬಗ್ಗೆ ತನಿಖೆ ನಡೆಯಬೇಕು ಎಂದು ಯಾರೇ ಹೇಳಲಿ ಅದಕ್ಕೆ ನಮ್ಮ ಸ್ವಾಗತವಿದೆ. ಒಂದು ವೇಳೆ ತನಿಖೆ ನಡೆಯದಿದ್ದಲ್ಲಿ ಜನವರಿ 29ರಂದು (ಗೌರಿ ದಿನ) ನಮ್ಮ ಹಣಕಾಸಿನ ಲೆಕ್ಕಾಚಾರದ ಸಾರ್ವಜನಿಕ ಆಡಿಟ್ ಮಾಡಲು ಆಹ್ವಾನಿಸಲಾಗುವುದು. ನಮ್ಮ ಹಿತೈಷಿಗಳು ಮಾತ್ರವಲ್ಲದೇ ಯಾರೇ ಸಾರ್ವಜನಿಕರೂ ಅದನ್ನು ಪರಿಶೀಲಿಸಲು ಮುಕ್ತ ಆಹ್ವಾನ ನೀಡಲಾಗುತ್ತದೆ. ಆದರೆ ದುರಂತವೆಂದರೆ, ಗೌರಿ ಲಂಕೇಶ್‌ರವರ ಉನ್ನತ ಆದರ್ಶಗಳ ವಿರುದ್ಧವೇ ಬದುಕುತ್ತಿರುವ ವ್ಯಕ್ತಿಯು ಈಗ ಅವರ ಕುರಿತು ಮಾತನಾಡುತ್ತಿದ್ದಾರೆ. ಅವರ ಮೇಲೆ ಮತ್ತು ಸುಳ್ಳು ವರದಿ ಪ್ರಕಟಿಸಿದ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಲಾಗಿದೆ. ಹಣಕಾಸಿನ ಕುರಿತ ಆರೋಪಗಳಲ್ಲದೇ ಇತರೆಲ್ಲಾ ಸುಳ್ಳು ಆರೋಪಗಳಿಗೂ ಸಂಬಂಧಪಟ್ಟವರು ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಗೌರಿ ಸ್ಮಾರಕ ಟ್ರಸ್ಟ್‌ನ ಅಧ್ಯಕ್ಷರಾದ ಮತ್ತು ಸಾರ್ವಜನಿಕ ಬದುಕಿನಲ್ಲಿ ಕಟು ಪ್ರಾಮಾಣಿಕತೆಯನ್ನು ಪಾಲಿಸಿಕೊಂಡು ಬಂದಿರುವವರಾದ ಎಚ್.ಎಸ್.ದೊರೆಸ್ವಾಮಿಯವರ ಮಡದಿಯು ತೀರಿಕೊಂಡ ದಿನವೇ ಇಂತಹ ಹೇಳಿಕೆಯನ್ನು ನೀಡಿರುವ ವಿಷಾದಕರ ಘಟನೆ ನಡೆದಿದೆ. ಸ್ವತಃ ತನ್ನ ಅಕ್ಕ ಗೌರಿ ಲಂಕೇಶ್‌ರವರಿಗೆ ಬಂದೂಕು ತೋರಿಸಿದ ವ್ಯಕ್ತಿಯಿಂದ ಇದಕ್ಕಿಂತ ಹೆಚ್ಚಿನ ನಿರೀಕ್ಷೆ ಮಾಡುವುದೂ ಕಷ್ಟವೇ ಎಂದು ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪತ್ರಿಕೆಗೆ ಶುಭವಾಗಲಿ…ಕೇಸರಿ ಕ್ರಿಮಿಗಳ ಪಿತೂರಿಯನ್ನು ಬಯಲಿಗೆಳೆದು ಸಮಾಜಕ್ಕೆ ತೋರಿಸಲಿ…

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...