Homeಮುಖಪುಟವರದಿಯಲ್ಲಿ ಸುಳ್ಳು ಹೇಳಿಕೆ ನೀಡುವುದು ಅಪರಾಧವಲ್ಲ: ಎಡಿಟರ್ಸ್ ಗಿಲ್ಡ್ ಪ್ರಕರಣದಲ್ಲಿ ಸುಪ್ರೀಂ ಹೇಳಿಕೆ

ವರದಿಯಲ್ಲಿ ಸುಳ್ಳು ಹೇಳಿಕೆ ನೀಡುವುದು ಅಪರಾಧವಲ್ಲ: ಎಡಿಟರ್ಸ್ ಗಿಲ್ಡ್ ಪ್ರಕರಣದಲ್ಲಿ ಸುಪ್ರೀಂ ಹೇಳಿಕೆ

- Advertisement -
- Advertisement -

ಮಣಿಪುರ ಹಿಂಸಾಚಾರದ ಸತ್ಯಶೋಧನಾ ವರದಿಯನ್ನು ಪ್ರಕಟಿಸಿದ್ದಕ್ಕೆ ಎಡಿಟರ್ಸ್ ಗಿಲ್ಡ್‌ನ ನಾಲ್ವರು ಸದಸ್ಯರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಅವರ ಬಂಧನದಿಂದ ಮಧ್ಯಂತರ ರಕ್ಷಣೆಯನ್ನು ಎರಡು ವಾರದವರೆಗೆ ಸುಪ್ರೀಂ ಕೋರ್ಟ್ ವಿಸ್ತರಿಸಿದೆ.

”ವರದಿಯಲ್ಲಿ ಸುಳ್ಳು ಹೇಳಿಕೆ ನೀಡುವುದು 153ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಪರಾಧವಲ್ಲ, ಅದು ತಪ್ಪು ಹೇಳಿಕೆಗಳಾಗಿರಬಹುದು” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

”ದೇಶದಾದ್ಯಂತ ಪತ್ರಕರ್ತರು ತಪ್ಪು ಹೇಳಿಕೆಗಳನ್ನು ನೀಡುತ್ತಾರೆ, ನೀವು ಎಲ್ಲರನ್ನೂ ವಿಚಾರಣೆಗೆ ಒಳಪಡಿಸುತ್ತೀರಾ?” ಎಂದು ನ್ಯಾಯಾಲಯ ಕೇಳಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು, ಮೇಲ್ನೋಟಕ್ಕೆ ತೋರುವಂತೆ, ಪತ್ರಕರ್ತರ ವಿರುದ್ಧ ಯಾವುದೇ ಅಪರಾಧಗಳನ್ನು ಮಾಡಲಾಗಿಲ್ಲ. ನಾಲ್ವರು ಪತ್ರಕರ್ತರ ವಿರುದ್ಧದ ಎಫ್‌ಐಆರ್‌ ಏಕೆ ರದ್ದುಗೊಳಿಸಬಾರದು ಎಂದು ಪ್ರಶ್ನಿಸಿದರು.

”ಪತ್ರಕರ್ತರು ವಿಷಯವನ್ನು ಪ್ರಸ್ತುತಪಡಿಸಲು ಮಾತ್ರ ಮುಂದಾಗಿದ್ದಾರೆ. ಈ ಅಪರಾಧಗಳನ್ನು (ಎಫ್‌ಐಆರ್‌ಗಳಲ್ಲಿ ಉಲ್ಲೇಖಿಸಿದಂತೆ) ಹೇಗೆ ಮಾಡಲಾಗಿದೆ ಎಂಬುದನ್ನು ನಮಗೆ ತೋರಿಸಿ. ಇದು ಕೇವಲ ವರದಿಯಾಗಿದೆ. ನೀವು ಅಪರಾಧಗಳನ್ನು ಮಾಡದಿರುವ ಸೆಕ್ಷನ್‌ಗಳನ್ನು ಸೇರಿಸಿದ್ದೀರಿ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ ವೇಳೆ ಎಡಿಟರ್ಸ್ ಗಿಲ್ಡ್‌ನ ನಾಲ್ವರು ಸದಸ್ಯರಿಗೆ ಇನ್ನೂ ಎರಡು ವಾರಗಳವರೆಗೆ ಬಂಧನದಿಂದ ರಕ್ಷಣೆಯನ್ನು ವಿಸ್ತರಿಸಿದೆ.

ಇದನ್ನೂ ಓದಿ: ಮಣಿಪುರ ಸಂಘರ್ಷ: ಎಡಿಟರ್ಸ್ ಗಿಲ್ಡ್ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರು

ಮಣಿಪುರ ಹಿಂಸಾಚಾರದ ಕುರಿತು ಅಲ್ಲಿಯ ಕೆಲವು ಪತ್ರಕರ್ತರು ಏಕಪಕ್ಷೀಯವಾಗಿ ವರದಿ ಮಾಡಿದ್ದಾರೆ ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಸತ್ಯಶೋಧನಾ ತಂಡ ಶನಿವಾರ ವರದಿ ಬಿಡುಗಡೆ ಮಾಡಿದೆ. ಈ ವರದಿಗೆ ಸಂಬಂಧಿಸಿದಂತೆ ಸತ್ಯಶೋಧನಾ ತಂಡದ ಮೂವರ ವಿರುದ್ಧ ಮಣಿಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66Aಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದರೂ ಸಹ ಪೊಲೀಸರು ಜಾರಿಯಲ್ಲಿಟ್ಟಿದ್ದಾರೆ. ಅನೇಕ ಸಂದರ್ಭಗಳಲ್ಲಿ, ಈ ನಿಬಂಧನೆಯ ಅಡಿಯಲ್ಲಿ ಯಾರನ್ನೂ ವಿಚಾರಣೆಗೆ ಒಳಪಡಿಸಬಾರದು ಎಂದು ನ್ಯಾಯಾಲಯವು ನಿರ್ದೇಶಿಸಿದೆ.

”ಆಕ್ಷೇಪಾರ್ಹ ಮತ್ತು ಬೆದರಿಕೆಯ” ಪೋಸ್ಟಗಳನ್ನು ಆನ್‌ಲೈನ್ ಬರೆಯುವ ವ್ಯಕ್ತಿಗಳನ್ನು ಬಂಧಿಸಲು ಮತ್ತು ಜೈಲಿನಲ್ಲಿಡಲು ಸರ್ಕಾರಕ್ಕೆ ಸೆಕ್ಷನ್ 66A ಅಡಿಯಲ್ಲಿ ಅಧಿಕಾರವನ್ನು ನೀಡಿದೆ.

ಸತ್ಯಶೋಧನಾ ತಂಡದ ಮೂವರ ವಿರುದ್ಧ ”ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಧಾರ್ಮಿಕ ಕಟ್ಟಡಗಳನ್ನು ಧ್ವಂಸಗೊಳಿಸುವುದು  ಅಥವಾ ಅಪವಿತ್ರಗೊಳಿಸುವುದು, ಧಾರ್ಮಿಕ ಭಾವನೆಗಳಿಗೆ ನೋವುಂಟುಮಾಡುವ ಉದ್ದೇಶಪೂರ್ವಕವಾಗಿ ಮಾತನಾಡುವುದು ಮತ್ತು ಸಾರ್ವಜನಿಕವಾಗಿ ಗಲಭೆಗೆ ಪ್ರಚೋದಿಸುವ ಹೇಳಿಕೆಗಳಿಗೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವರದಿಯ ಲೇಖಕರಾದ ಸೀಮಾ ಗುಹಾ, ಭರತ್ ಭೂಷಣ್, ಸಂಜಯ್ ಕಪೂರ್ ಮತ್ತು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಅಧ್ಯಕ್ಷೆ ಸೀಮಾ ಮುಸ್ತಫಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ವರದಿಯು “ಸುಳ್ಳು, ಮತ್ತು ಪ್ರಾಯೋಜಿತ” ಎಂದು ಪೊಲೀಸ್ ದೂರಿನಲ್ಲಿ ಆರೋಪಿಸಲಾಗಿದೆ. ವರದಿಯಲ್ಲಿನ ಫೋಟೋವು ಕುಕಿ ಮನೆಯಿಂದ ಹೊಗೆ ಏರುತ್ತಿದೆ ಎಂದು ತಪ್ಪಾಗಿ ಹೇಳಲಾಗಿದೆ, ಆದರೆ ಅದು ವಾಸ್ತವವಾಗಿ ಅರಣ್ಯ ಅಧಿಕಾರಿಯ ಕಚೇರಿಯಾಗಿದೆ. ವರದಿಯು ಸುಳ್ಳು ಮತ್ತು ಕುಕಿ ಉಗ್ರಗಾಮಿಗಳಿಂದ ಪ್ರಾಯೋಜಿತವಾಗಿದೆ” ಎಂದು ಪೊಲೀಸರು ಹೇಳಿದ್ದಾರೆ.

ವರದಿ ಏನು ಹೇಳಿದೆ?

ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ಕುರಿತು ವರದಿಗಾರಿಕೆ ಮಾಡುವಾಗ ಅಲ್ಲಿಯ ಪತ್ರಕರ್ತರು ಏಕಪಕ್ಷೀಯ ವರದಿಗಳನ್ನು ಬರೆದಿದ್ದರು ಎಂದು ಶನಿವಾರ ಬಿಡುಗಡೆಗೊಂಡ ಎಡಿಟರ್ಸ್ ಗಿಲ್ಡ್‌ನ ಸತ್ಯಶೋಧನಾ ತಂಡವು ತನ್ನ ವರದಿಯಲ್ಲಿ ಹೇಳಿದೆ.

ಸಾಮಾನ್ಯ ಸಂದರ್ಭಗಳಲ್ಲಿ ಪತ್ರಿಕೆಗಳ ಸಂಪಾದಕರು ಅಥವಾ ಸ್ಥಳೀಯಾಡಳಿತದ ಸ್ಥಳೀಯ ಬ್ಯೂರೊಗಳ ಮುಖ್ಯಸ್ಥರು, ಪೊಲೀಸರು ಮತ್ತು ಭದ್ರತಾ ಪಡೆಗಳು ಈ ವರದಿಗಳನ್ನು ಪುನರ್‌ಪರಿಶೀಲಿಸುತ್ತಾರೆ. ಆದರೆ ಸಂಘರ್ಷದ ಸಮಯದಲ್ಲಿ ಇದು ಸಾಧ್ಯವಾಗಿರಲಿಲ್ಲ ಎನ್ನುವುದನ್ನು ವರದಿಯು ಗಮನಿಸಿದೆ.

ಮೈತಿಗಳು ಮತ್ತು ಕುಕಿಗಳ ನಡುವೆ ಘರ್ಷಣೆಗಳು ಆರಂಭಗೊಂಡಿದ್ದ ಮೇ ಮೊದಲ ವಾರದಲ್ಲಿ ರಾಜ್ಯದಲ್ಲಿ ಇಂಟರ್ನೆಟ್ ನಿಷೇಧ ಹೇರಲಾಗಿದ್ದರಿಂದ ಮಣಿಪುರದಿಂದ ವರದಿಗಾರಿಕೆ ಕಷ್ಟವಾಗಿತ್ತು. ಯಾವುದೇ ಸಂವಹನ ಸೌಲಭ್ಯಗಳಿಲ್ಲದೆ ಸಂಗ್ರಹಿಸಲಾಗಿದ್ದ ಸ್ಥಳೀಯ ಸುದ್ಧಿಗಳು ಪರಿಸ್ಥಿತಿಯ ಸಮತೋಲಿತ ನೋಟವನ್ನು ನೀಡುವಷ್ಟಿರಲಿಲ್ಲ ಎನ್ನುವುದನ್ನು ಎಡಿಟರ್ಸ್ ಗಿಲ್ಡ್ ಕಂಡುಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...