Homeಮುಖಪುಟವರದಿಯಲ್ಲಿ ಸುಳ್ಳು ಹೇಳಿಕೆ ನೀಡುವುದು ಅಪರಾಧವಲ್ಲ: ಎಡಿಟರ್ಸ್ ಗಿಲ್ಡ್ ಪ್ರಕರಣದಲ್ಲಿ ಸುಪ್ರೀಂ ಹೇಳಿಕೆ

ವರದಿಯಲ್ಲಿ ಸುಳ್ಳು ಹೇಳಿಕೆ ನೀಡುವುದು ಅಪರಾಧವಲ್ಲ: ಎಡಿಟರ್ಸ್ ಗಿಲ್ಡ್ ಪ್ರಕರಣದಲ್ಲಿ ಸುಪ್ರೀಂ ಹೇಳಿಕೆ

- Advertisement -
- Advertisement -

ಮಣಿಪುರ ಹಿಂಸಾಚಾರದ ಸತ್ಯಶೋಧನಾ ವರದಿಯನ್ನು ಪ್ರಕಟಿಸಿದ್ದಕ್ಕೆ ಎಡಿಟರ್ಸ್ ಗಿಲ್ಡ್‌ನ ನಾಲ್ವರು ಸದಸ್ಯರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಅವರ ಬಂಧನದಿಂದ ಮಧ್ಯಂತರ ರಕ್ಷಣೆಯನ್ನು ಎರಡು ವಾರದವರೆಗೆ ಸುಪ್ರೀಂ ಕೋರ್ಟ್ ವಿಸ್ತರಿಸಿದೆ.

”ವರದಿಯಲ್ಲಿ ಸುಳ್ಳು ಹೇಳಿಕೆ ನೀಡುವುದು 153ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಪರಾಧವಲ್ಲ, ಅದು ತಪ್ಪು ಹೇಳಿಕೆಗಳಾಗಿರಬಹುದು” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

”ದೇಶದಾದ್ಯಂತ ಪತ್ರಕರ್ತರು ತಪ್ಪು ಹೇಳಿಕೆಗಳನ್ನು ನೀಡುತ್ತಾರೆ, ನೀವು ಎಲ್ಲರನ್ನೂ ವಿಚಾರಣೆಗೆ ಒಳಪಡಿಸುತ್ತೀರಾ?” ಎಂದು ನ್ಯಾಯಾಲಯ ಕೇಳಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು, ಮೇಲ್ನೋಟಕ್ಕೆ ತೋರುವಂತೆ, ಪತ್ರಕರ್ತರ ವಿರುದ್ಧ ಯಾವುದೇ ಅಪರಾಧಗಳನ್ನು ಮಾಡಲಾಗಿಲ್ಲ. ನಾಲ್ವರು ಪತ್ರಕರ್ತರ ವಿರುದ್ಧದ ಎಫ್‌ಐಆರ್‌ ಏಕೆ ರದ್ದುಗೊಳಿಸಬಾರದು ಎಂದು ಪ್ರಶ್ನಿಸಿದರು.

”ಪತ್ರಕರ್ತರು ವಿಷಯವನ್ನು ಪ್ರಸ್ತುತಪಡಿಸಲು ಮಾತ್ರ ಮುಂದಾಗಿದ್ದಾರೆ. ಈ ಅಪರಾಧಗಳನ್ನು (ಎಫ್‌ಐಆರ್‌ಗಳಲ್ಲಿ ಉಲ್ಲೇಖಿಸಿದಂತೆ) ಹೇಗೆ ಮಾಡಲಾಗಿದೆ ಎಂಬುದನ್ನು ನಮಗೆ ತೋರಿಸಿ. ಇದು ಕೇವಲ ವರದಿಯಾಗಿದೆ. ನೀವು ಅಪರಾಧಗಳನ್ನು ಮಾಡದಿರುವ ಸೆಕ್ಷನ್‌ಗಳನ್ನು ಸೇರಿಸಿದ್ದೀರಿ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ ವೇಳೆ ಎಡಿಟರ್ಸ್ ಗಿಲ್ಡ್‌ನ ನಾಲ್ವರು ಸದಸ್ಯರಿಗೆ ಇನ್ನೂ ಎರಡು ವಾರಗಳವರೆಗೆ ಬಂಧನದಿಂದ ರಕ್ಷಣೆಯನ್ನು ವಿಸ್ತರಿಸಿದೆ.

ಇದನ್ನೂ ಓದಿ: ಮಣಿಪುರ ಸಂಘರ್ಷ: ಎಡಿಟರ್ಸ್ ಗಿಲ್ಡ್ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರು

ಮಣಿಪುರ ಹಿಂಸಾಚಾರದ ಕುರಿತು ಅಲ್ಲಿಯ ಕೆಲವು ಪತ್ರಕರ್ತರು ಏಕಪಕ್ಷೀಯವಾಗಿ ವರದಿ ಮಾಡಿದ್ದಾರೆ ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಸತ್ಯಶೋಧನಾ ತಂಡ ಶನಿವಾರ ವರದಿ ಬಿಡುಗಡೆ ಮಾಡಿದೆ. ಈ ವರದಿಗೆ ಸಂಬಂಧಿಸಿದಂತೆ ಸತ್ಯಶೋಧನಾ ತಂಡದ ಮೂವರ ವಿರುದ್ಧ ಮಣಿಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66Aಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದರೂ ಸಹ ಪೊಲೀಸರು ಜಾರಿಯಲ್ಲಿಟ್ಟಿದ್ದಾರೆ. ಅನೇಕ ಸಂದರ್ಭಗಳಲ್ಲಿ, ಈ ನಿಬಂಧನೆಯ ಅಡಿಯಲ್ಲಿ ಯಾರನ್ನೂ ವಿಚಾರಣೆಗೆ ಒಳಪಡಿಸಬಾರದು ಎಂದು ನ್ಯಾಯಾಲಯವು ನಿರ್ದೇಶಿಸಿದೆ.

”ಆಕ್ಷೇಪಾರ್ಹ ಮತ್ತು ಬೆದರಿಕೆಯ” ಪೋಸ್ಟಗಳನ್ನು ಆನ್‌ಲೈನ್ ಬರೆಯುವ ವ್ಯಕ್ತಿಗಳನ್ನು ಬಂಧಿಸಲು ಮತ್ತು ಜೈಲಿನಲ್ಲಿಡಲು ಸರ್ಕಾರಕ್ಕೆ ಸೆಕ್ಷನ್ 66A ಅಡಿಯಲ್ಲಿ ಅಧಿಕಾರವನ್ನು ನೀಡಿದೆ.

ಸತ್ಯಶೋಧನಾ ತಂಡದ ಮೂವರ ವಿರುದ್ಧ ”ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಧಾರ್ಮಿಕ ಕಟ್ಟಡಗಳನ್ನು ಧ್ವಂಸಗೊಳಿಸುವುದು  ಅಥವಾ ಅಪವಿತ್ರಗೊಳಿಸುವುದು, ಧಾರ್ಮಿಕ ಭಾವನೆಗಳಿಗೆ ನೋವುಂಟುಮಾಡುವ ಉದ್ದೇಶಪೂರ್ವಕವಾಗಿ ಮಾತನಾಡುವುದು ಮತ್ತು ಸಾರ್ವಜನಿಕವಾಗಿ ಗಲಭೆಗೆ ಪ್ರಚೋದಿಸುವ ಹೇಳಿಕೆಗಳಿಗೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವರದಿಯ ಲೇಖಕರಾದ ಸೀಮಾ ಗುಹಾ, ಭರತ್ ಭೂಷಣ್, ಸಂಜಯ್ ಕಪೂರ್ ಮತ್ತು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಅಧ್ಯಕ್ಷೆ ಸೀಮಾ ಮುಸ್ತಫಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ವರದಿಯು “ಸುಳ್ಳು, ಮತ್ತು ಪ್ರಾಯೋಜಿತ” ಎಂದು ಪೊಲೀಸ್ ದೂರಿನಲ್ಲಿ ಆರೋಪಿಸಲಾಗಿದೆ. ವರದಿಯಲ್ಲಿನ ಫೋಟೋವು ಕುಕಿ ಮನೆಯಿಂದ ಹೊಗೆ ಏರುತ್ತಿದೆ ಎಂದು ತಪ್ಪಾಗಿ ಹೇಳಲಾಗಿದೆ, ಆದರೆ ಅದು ವಾಸ್ತವವಾಗಿ ಅರಣ್ಯ ಅಧಿಕಾರಿಯ ಕಚೇರಿಯಾಗಿದೆ. ವರದಿಯು ಸುಳ್ಳು ಮತ್ತು ಕುಕಿ ಉಗ್ರಗಾಮಿಗಳಿಂದ ಪ್ರಾಯೋಜಿತವಾಗಿದೆ” ಎಂದು ಪೊಲೀಸರು ಹೇಳಿದ್ದಾರೆ.

ವರದಿ ಏನು ಹೇಳಿದೆ?

ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ಕುರಿತು ವರದಿಗಾರಿಕೆ ಮಾಡುವಾಗ ಅಲ್ಲಿಯ ಪತ್ರಕರ್ತರು ಏಕಪಕ್ಷೀಯ ವರದಿಗಳನ್ನು ಬರೆದಿದ್ದರು ಎಂದು ಶನಿವಾರ ಬಿಡುಗಡೆಗೊಂಡ ಎಡಿಟರ್ಸ್ ಗಿಲ್ಡ್‌ನ ಸತ್ಯಶೋಧನಾ ತಂಡವು ತನ್ನ ವರದಿಯಲ್ಲಿ ಹೇಳಿದೆ.

ಸಾಮಾನ್ಯ ಸಂದರ್ಭಗಳಲ್ಲಿ ಪತ್ರಿಕೆಗಳ ಸಂಪಾದಕರು ಅಥವಾ ಸ್ಥಳೀಯಾಡಳಿತದ ಸ್ಥಳೀಯ ಬ್ಯೂರೊಗಳ ಮುಖ್ಯಸ್ಥರು, ಪೊಲೀಸರು ಮತ್ತು ಭದ್ರತಾ ಪಡೆಗಳು ಈ ವರದಿಗಳನ್ನು ಪುನರ್‌ಪರಿಶೀಲಿಸುತ್ತಾರೆ. ಆದರೆ ಸಂಘರ್ಷದ ಸಮಯದಲ್ಲಿ ಇದು ಸಾಧ್ಯವಾಗಿರಲಿಲ್ಲ ಎನ್ನುವುದನ್ನು ವರದಿಯು ಗಮನಿಸಿದೆ.

ಮೈತಿಗಳು ಮತ್ತು ಕುಕಿಗಳ ನಡುವೆ ಘರ್ಷಣೆಗಳು ಆರಂಭಗೊಂಡಿದ್ದ ಮೇ ಮೊದಲ ವಾರದಲ್ಲಿ ರಾಜ್ಯದಲ್ಲಿ ಇಂಟರ್ನೆಟ್ ನಿಷೇಧ ಹೇರಲಾಗಿದ್ದರಿಂದ ಮಣಿಪುರದಿಂದ ವರದಿಗಾರಿಕೆ ಕಷ್ಟವಾಗಿತ್ತು. ಯಾವುದೇ ಸಂವಹನ ಸೌಲಭ್ಯಗಳಿಲ್ಲದೆ ಸಂಗ್ರಹಿಸಲಾಗಿದ್ದ ಸ್ಥಳೀಯ ಸುದ್ಧಿಗಳು ಪರಿಸ್ಥಿತಿಯ ಸಮತೋಲಿತ ನೋಟವನ್ನು ನೀಡುವಷ್ಟಿರಲಿಲ್ಲ ಎನ್ನುವುದನ್ನು ಎಡಿಟರ್ಸ್ ಗಿಲ್ಡ್ ಕಂಡುಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...