Homeಮುಖಪುಟವರದಿಯಲ್ಲಿ ಸುಳ್ಳು ಹೇಳಿಕೆ ನೀಡುವುದು ಅಪರಾಧವಲ್ಲ: ಎಡಿಟರ್ಸ್ ಗಿಲ್ಡ್ ಪ್ರಕರಣದಲ್ಲಿ ಸುಪ್ರೀಂ ಹೇಳಿಕೆ

ವರದಿಯಲ್ಲಿ ಸುಳ್ಳು ಹೇಳಿಕೆ ನೀಡುವುದು ಅಪರಾಧವಲ್ಲ: ಎಡಿಟರ್ಸ್ ಗಿಲ್ಡ್ ಪ್ರಕರಣದಲ್ಲಿ ಸುಪ್ರೀಂ ಹೇಳಿಕೆ

- Advertisement -
- Advertisement -

ಮಣಿಪುರ ಹಿಂಸಾಚಾರದ ಸತ್ಯಶೋಧನಾ ವರದಿಯನ್ನು ಪ್ರಕಟಿಸಿದ್ದಕ್ಕೆ ಎಡಿಟರ್ಸ್ ಗಿಲ್ಡ್‌ನ ನಾಲ್ವರು ಸದಸ್ಯರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಅವರ ಬಂಧನದಿಂದ ಮಧ್ಯಂತರ ರಕ್ಷಣೆಯನ್ನು ಎರಡು ವಾರದವರೆಗೆ ಸುಪ್ರೀಂ ಕೋರ್ಟ್ ವಿಸ್ತರಿಸಿದೆ.

”ವರದಿಯಲ್ಲಿ ಸುಳ್ಳು ಹೇಳಿಕೆ ನೀಡುವುದು 153ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಪರಾಧವಲ್ಲ, ಅದು ತಪ್ಪು ಹೇಳಿಕೆಗಳಾಗಿರಬಹುದು” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

”ದೇಶದಾದ್ಯಂತ ಪತ್ರಕರ್ತರು ತಪ್ಪು ಹೇಳಿಕೆಗಳನ್ನು ನೀಡುತ್ತಾರೆ, ನೀವು ಎಲ್ಲರನ್ನೂ ವಿಚಾರಣೆಗೆ ಒಳಪಡಿಸುತ್ತೀರಾ?” ಎಂದು ನ್ಯಾಯಾಲಯ ಕೇಳಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು, ಮೇಲ್ನೋಟಕ್ಕೆ ತೋರುವಂತೆ, ಪತ್ರಕರ್ತರ ವಿರುದ್ಧ ಯಾವುದೇ ಅಪರಾಧಗಳನ್ನು ಮಾಡಲಾಗಿಲ್ಲ. ನಾಲ್ವರು ಪತ್ರಕರ್ತರ ವಿರುದ್ಧದ ಎಫ್‌ಐಆರ್‌ ಏಕೆ ರದ್ದುಗೊಳಿಸಬಾರದು ಎಂದು ಪ್ರಶ್ನಿಸಿದರು.

”ಪತ್ರಕರ್ತರು ವಿಷಯವನ್ನು ಪ್ರಸ್ತುತಪಡಿಸಲು ಮಾತ್ರ ಮುಂದಾಗಿದ್ದಾರೆ. ಈ ಅಪರಾಧಗಳನ್ನು (ಎಫ್‌ಐಆರ್‌ಗಳಲ್ಲಿ ಉಲ್ಲೇಖಿಸಿದಂತೆ) ಹೇಗೆ ಮಾಡಲಾಗಿದೆ ಎಂಬುದನ್ನು ನಮಗೆ ತೋರಿಸಿ. ಇದು ಕೇವಲ ವರದಿಯಾಗಿದೆ. ನೀವು ಅಪರಾಧಗಳನ್ನು ಮಾಡದಿರುವ ಸೆಕ್ಷನ್‌ಗಳನ್ನು ಸೇರಿಸಿದ್ದೀರಿ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ ವೇಳೆ ಎಡಿಟರ್ಸ್ ಗಿಲ್ಡ್‌ನ ನಾಲ್ವರು ಸದಸ್ಯರಿಗೆ ಇನ್ನೂ ಎರಡು ವಾರಗಳವರೆಗೆ ಬಂಧನದಿಂದ ರಕ್ಷಣೆಯನ್ನು ವಿಸ್ತರಿಸಿದೆ.

ಇದನ್ನೂ ಓದಿ: ಮಣಿಪುರ ಸಂಘರ್ಷ: ಎಡಿಟರ್ಸ್ ಗಿಲ್ಡ್ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರು

ಮಣಿಪುರ ಹಿಂಸಾಚಾರದ ಕುರಿತು ಅಲ್ಲಿಯ ಕೆಲವು ಪತ್ರಕರ್ತರು ಏಕಪಕ್ಷೀಯವಾಗಿ ವರದಿ ಮಾಡಿದ್ದಾರೆ ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಸತ್ಯಶೋಧನಾ ತಂಡ ಶನಿವಾರ ವರದಿ ಬಿಡುಗಡೆ ಮಾಡಿದೆ. ಈ ವರದಿಗೆ ಸಂಬಂಧಿಸಿದಂತೆ ಸತ್ಯಶೋಧನಾ ತಂಡದ ಮೂವರ ವಿರುದ್ಧ ಮಣಿಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66Aಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದರೂ ಸಹ ಪೊಲೀಸರು ಜಾರಿಯಲ್ಲಿಟ್ಟಿದ್ದಾರೆ. ಅನೇಕ ಸಂದರ್ಭಗಳಲ್ಲಿ, ಈ ನಿಬಂಧನೆಯ ಅಡಿಯಲ್ಲಿ ಯಾರನ್ನೂ ವಿಚಾರಣೆಗೆ ಒಳಪಡಿಸಬಾರದು ಎಂದು ನ್ಯಾಯಾಲಯವು ನಿರ್ದೇಶಿಸಿದೆ.

”ಆಕ್ಷೇಪಾರ್ಹ ಮತ್ತು ಬೆದರಿಕೆಯ” ಪೋಸ್ಟಗಳನ್ನು ಆನ್‌ಲೈನ್ ಬರೆಯುವ ವ್ಯಕ್ತಿಗಳನ್ನು ಬಂಧಿಸಲು ಮತ್ತು ಜೈಲಿನಲ್ಲಿಡಲು ಸರ್ಕಾರಕ್ಕೆ ಸೆಕ್ಷನ್ 66A ಅಡಿಯಲ್ಲಿ ಅಧಿಕಾರವನ್ನು ನೀಡಿದೆ.

ಸತ್ಯಶೋಧನಾ ತಂಡದ ಮೂವರ ವಿರುದ್ಧ ”ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಧಾರ್ಮಿಕ ಕಟ್ಟಡಗಳನ್ನು ಧ್ವಂಸಗೊಳಿಸುವುದು  ಅಥವಾ ಅಪವಿತ್ರಗೊಳಿಸುವುದು, ಧಾರ್ಮಿಕ ಭಾವನೆಗಳಿಗೆ ನೋವುಂಟುಮಾಡುವ ಉದ್ದೇಶಪೂರ್ವಕವಾಗಿ ಮಾತನಾಡುವುದು ಮತ್ತು ಸಾರ್ವಜನಿಕವಾಗಿ ಗಲಭೆಗೆ ಪ್ರಚೋದಿಸುವ ಹೇಳಿಕೆಗಳಿಗೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವರದಿಯ ಲೇಖಕರಾದ ಸೀಮಾ ಗುಹಾ, ಭರತ್ ಭೂಷಣ್, ಸಂಜಯ್ ಕಪೂರ್ ಮತ್ತು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಅಧ್ಯಕ್ಷೆ ಸೀಮಾ ಮುಸ್ತಫಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ವರದಿಯು “ಸುಳ್ಳು, ಮತ್ತು ಪ್ರಾಯೋಜಿತ” ಎಂದು ಪೊಲೀಸ್ ದೂರಿನಲ್ಲಿ ಆರೋಪಿಸಲಾಗಿದೆ. ವರದಿಯಲ್ಲಿನ ಫೋಟೋವು ಕುಕಿ ಮನೆಯಿಂದ ಹೊಗೆ ಏರುತ್ತಿದೆ ಎಂದು ತಪ್ಪಾಗಿ ಹೇಳಲಾಗಿದೆ, ಆದರೆ ಅದು ವಾಸ್ತವವಾಗಿ ಅರಣ್ಯ ಅಧಿಕಾರಿಯ ಕಚೇರಿಯಾಗಿದೆ. ವರದಿಯು ಸುಳ್ಳು ಮತ್ತು ಕುಕಿ ಉಗ್ರಗಾಮಿಗಳಿಂದ ಪ್ರಾಯೋಜಿತವಾಗಿದೆ” ಎಂದು ಪೊಲೀಸರು ಹೇಳಿದ್ದಾರೆ.

ವರದಿ ಏನು ಹೇಳಿದೆ?

ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ಕುರಿತು ವರದಿಗಾರಿಕೆ ಮಾಡುವಾಗ ಅಲ್ಲಿಯ ಪತ್ರಕರ್ತರು ಏಕಪಕ್ಷೀಯ ವರದಿಗಳನ್ನು ಬರೆದಿದ್ದರು ಎಂದು ಶನಿವಾರ ಬಿಡುಗಡೆಗೊಂಡ ಎಡಿಟರ್ಸ್ ಗಿಲ್ಡ್‌ನ ಸತ್ಯಶೋಧನಾ ತಂಡವು ತನ್ನ ವರದಿಯಲ್ಲಿ ಹೇಳಿದೆ.

ಸಾಮಾನ್ಯ ಸಂದರ್ಭಗಳಲ್ಲಿ ಪತ್ರಿಕೆಗಳ ಸಂಪಾದಕರು ಅಥವಾ ಸ್ಥಳೀಯಾಡಳಿತದ ಸ್ಥಳೀಯ ಬ್ಯೂರೊಗಳ ಮುಖ್ಯಸ್ಥರು, ಪೊಲೀಸರು ಮತ್ತು ಭದ್ರತಾ ಪಡೆಗಳು ಈ ವರದಿಗಳನ್ನು ಪುನರ್‌ಪರಿಶೀಲಿಸುತ್ತಾರೆ. ಆದರೆ ಸಂಘರ್ಷದ ಸಮಯದಲ್ಲಿ ಇದು ಸಾಧ್ಯವಾಗಿರಲಿಲ್ಲ ಎನ್ನುವುದನ್ನು ವರದಿಯು ಗಮನಿಸಿದೆ.

ಮೈತಿಗಳು ಮತ್ತು ಕುಕಿಗಳ ನಡುವೆ ಘರ್ಷಣೆಗಳು ಆರಂಭಗೊಂಡಿದ್ದ ಮೇ ಮೊದಲ ವಾರದಲ್ಲಿ ರಾಜ್ಯದಲ್ಲಿ ಇಂಟರ್ನೆಟ್ ನಿಷೇಧ ಹೇರಲಾಗಿದ್ದರಿಂದ ಮಣಿಪುರದಿಂದ ವರದಿಗಾರಿಕೆ ಕಷ್ಟವಾಗಿತ್ತು. ಯಾವುದೇ ಸಂವಹನ ಸೌಲಭ್ಯಗಳಿಲ್ಲದೆ ಸಂಗ್ರಹಿಸಲಾಗಿದ್ದ ಸ್ಥಳೀಯ ಸುದ್ಧಿಗಳು ಪರಿಸ್ಥಿತಿಯ ಸಮತೋಲಿತ ನೋಟವನ್ನು ನೀಡುವಷ್ಟಿರಲಿಲ್ಲ ಎನ್ನುವುದನ್ನು ಎಡಿಟರ್ಸ್ ಗಿಲ್ಡ್ ಕಂಡುಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...