Homeಮುಖಪುಟವರದಿಯಲ್ಲಿ ಸುಳ್ಳು ಹೇಳಿಕೆ ನೀಡುವುದು ಅಪರಾಧವಲ್ಲ: ಎಡಿಟರ್ಸ್ ಗಿಲ್ಡ್ ಪ್ರಕರಣದಲ್ಲಿ ಸುಪ್ರೀಂ ಹೇಳಿಕೆ

ವರದಿಯಲ್ಲಿ ಸುಳ್ಳು ಹೇಳಿಕೆ ನೀಡುವುದು ಅಪರಾಧವಲ್ಲ: ಎಡಿಟರ್ಸ್ ಗಿಲ್ಡ್ ಪ್ರಕರಣದಲ್ಲಿ ಸುಪ್ರೀಂ ಹೇಳಿಕೆ

- Advertisement -
- Advertisement -

ಮಣಿಪುರ ಹಿಂಸಾಚಾರದ ಸತ್ಯಶೋಧನಾ ವರದಿಯನ್ನು ಪ್ರಕಟಿಸಿದ್ದಕ್ಕೆ ಎಡಿಟರ್ಸ್ ಗಿಲ್ಡ್‌ನ ನಾಲ್ವರು ಸದಸ್ಯರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಅವರ ಬಂಧನದಿಂದ ಮಧ್ಯಂತರ ರಕ್ಷಣೆಯನ್ನು ಎರಡು ವಾರದವರೆಗೆ ಸುಪ್ರೀಂ ಕೋರ್ಟ್ ವಿಸ್ತರಿಸಿದೆ.

”ವರದಿಯಲ್ಲಿ ಸುಳ್ಳು ಹೇಳಿಕೆ ನೀಡುವುದು 153ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಪರಾಧವಲ್ಲ, ಅದು ತಪ್ಪು ಹೇಳಿಕೆಗಳಾಗಿರಬಹುದು” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

”ದೇಶದಾದ್ಯಂತ ಪತ್ರಕರ್ತರು ತಪ್ಪು ಹೇಳಿಕೆಗಳನ್ನು ನೀಡುತ್ತಾರೆ, ನೀವು ಎಲ್ಲರನ್ನೂ ವಿಚಾರಣೆಗೆ ಒಳಪಡಿಸುತ್ತೀರಾ?” ಎಂದು ನ್ಯಾಯಾಲಯ ಕೇಳಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು, ಮೇಲ್ನೋಟಕ್ಕೆ ತೋರುವಂತೆ, ಪತ್ರಕರ್ತರ ವಿರುದ್ಧ ಯಾವುದೇ ಅಪರಾಧಗಳನ್ನು ಮಾಡಲಾಗಿಲ್ಲ. ನಾಲ್ವರು ಪತ್ರಕರ್ತರ ವಿರುದ್ಧದ ಎಫ್‌ಐಆರ್‌ ಏಕೆ ರದ್ದುಗೊಳಿಸಬಾರದು ಎಂದು ಪ್ರಶ್ನಿಸಿದರು.

”ಪತ್ರಕರ್ತರು ವಿಷಯವನ್ನು ಪ್ರಸ್ತುತಪಡಿಸಲು ಮಾತ್ರ ಮುಂದಾಗಿದ್ದಾರೆ. ಈ ಅಪರಾಧಗಳನ್ನು (ಎಫ್‌ಐಆರ್‌ಗಳಲ್ಲಿ ಉಲ್ಲೇಖಿಸಿದಂತೆ) ಹೇಗೆ ಮಾಡಲಾಗಿದೆ ಎಂಬುದನ್ನು ನಮಗೆ ತೋರಿಸಿ. ಇದು ಕೇವಲ ವರದಿಯಾಗಿದೆ. ನೀವು ಅಪರಾಧಗಳನ್ನು ಮಾಡದಿರುವ ಸೆಕ್ಷನ್‌ಗಳನ್ನು ಸೇರಿಸಿದ್ದೀರಿ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ ವೇಳೆ ಎಡಿಟರ್ಸ್ ಗಿಲ್ಡ್‌ನ ನಾಲ್ವರು ಸದಸ್ಯರಿಗೆ ಇನ್ನೂ ಎರಡು ವಾರಗಳವರೆಗೆ ಬಂಧನದಿಂದ ರಕ್ಷಣೆಯನ್ನು ವಿಸ್ತರಿಸಿದೆ.

ಇದನ್ನೂ ಓದಿ: ಮಣಿಪುರ ಸಂಘರ್ಷ: ಎಡಿಟರ್ಸ್ ಗಿಲ್ಡ್ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರು

ಮಣಿಪುರ ಹಿಂಸಾಚಾರದ ಕುರಿತು ಅಲ್ಲಿಯ ಕೆಲವು ಪತ್ರಕರ್ತರು ಏಕಪಕ್ಷೀಯವಾಗಿ ವರದಿ ಮಾಡಿದ್ದಾರೆ ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಸತ್ಯಶೋಧನಾ ತಂಡ ಶನಿವಾರ ವರದಿ ಬಿಡುಗಡೆ ಮಾಡಿದೆ. ಈ ವರದಿಗೆ ಸಂಬಂಧಿಸಿದಂತೆ ಸತ್ಯಶೋಧನಾ ತಂಡದ ಮೂವರ ವಿರುದ್ಧ ಮಣಿಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66Aಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದರೂ ಸಹ ಪೊಲೀಸರು ಜಾರಿಯಲ್ಲಿಟ್ಟಿದ್ದಾರೆ. ಅನೇಕ ಸಂದರ್ಭಗಳಲ್ಲಿ, ಈ ನಿಬಂಧನೆಯ ಅಡಿಯಲ್ಲಿ ಯಾರನ್ನೂ ವಿಚಾರಣೆಗೆ ಒಳಪಡಿಸಬಾರದು ಎಂದು ನ್ಯಾಯಾಲಯವು ನಿರ್ದೇಶಿಸಿದೆ.

”ಆಕ್ಷೇಪಾರ್ಹ ಮತ್ತು ಬೆದರಿಕೆಯ” ಪೋಸ್ಟಗಳನ್ನು ಆನ್‌ಲೈನ್ ಬರೆಯುವ ವ್ಯಕ್ತಿಗಳನ್ನು ಬಂಧಿಸಲು ಮತ್ತು ಜೈಲಿನಲ್ಲಿಡಲು ಸರ್ಕಾರಕ್ಕೆ ಸೆಕ್ಷನ್ 66A ಅಡಿಯಲ್ಲಿ ಅಧಿಕಾರವನ್ನು ನೀಡಿದೆ.

ಸತ್ಯಶೋಧನಾ ತಂಡದ ಮೂವರ ವಿರುದ್ಧ ”ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಧಾರ್ಮಿಕ ಕಟ್ಟಡಗಳನ್ನು ಧ್ವಂಸಗೊಳಿಸುವುದು  ಅಥವಾ ಅಪವಿತ್ರಗೊಳಿಸುವುದು, ಧಾರ್ಮಿಕ ಭಾವನೆಗಳಿಗೆ ನೋವುಂಟುಮಾಡುವ ಉದ್ದೇಶಪೂರ್ವಕವಾಗಿ ಮಾತನಾಡುವುದು ಮತ್ತು ಸಾರ್ವಜನಿಕವಾಗಿ ಗಲಭೆಗೆ ಪ್ರಚೋದಿಸುವ ಹೇಳಿಕೆಗಳಿಗೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವರದಿಯ ಲೇಖಕರಾದ ಸೀಮಾ ಗುಹಾ, ಭರತ್ ಭೂಷಣ್, ಸಂಜಯ್ ಕಪೂರ್ ಮತ್ತು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಅಧ್ಯಕ್ಷೆ ಸೀಮಾ ಮುಸ್ತಫಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ವರದಿಯು “ಸುಳ್ಳು, ಮತ್ತು ಪ್ರಾಯೋಜಿತ” ಎಂದು ಪೊಲೀಸ್ ದೂರಿನಲ್ಲಿ ಆರೋಪಿಸಲಾಗಿದೆ. ವರದಿಯಲ್ಲಿನ ಫೋಟೋವು ಕುಕಿ ಮನೆಯಿಂದ ಹೊಗೆ ಏರುತ್ತಿದೆ ಎಂದು ತಪ್ಪಾಗಿ ಹೇಳಲಾಗಿದೆ, ಆದರೆ ಅದು ವಾಸ್ತವವಾಗಿ ಅರಣ್ಯ ಅಧಿಕಾರಿಯ ಕಚೇರಿಯಾಗಿದೆ. ವರದಿಯು ಸುಳ್ಳು ಮತ್ತು ಕುಕಿ ಉಗ್ರಗಾಮಿಗಳಿಂದ ಪ್ರಾಯೋಜಿತವಾಗಿದೆ” ಎಂದು ಪೊಲೀಸರು ಹೇಳಿದ್ದಾರೆ.

ವರದಿ ಏನು ಹೇಳಿದೆ?

ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ಕುರಿತು ವರದಿಗಾರಿಕೆ ಮಾಡುವಾಗ ಅಲ್ಲಿಯ ಪತ್ರಕರ್ತರು ಏಕಪಕ್ಷೀಯ ವರದಿಗಳನ್ನು ಬರೆದಿದ್ದರು ಎಂದು ಶನಿವಾರ ಬಿಡುಗಡೆಗೊಂಡ ಎಡಿಟರ್ಸ್ ಗಿಲ್ಡ್‌ನ ಸತ್ಯಶೋಧನಾ ತಂಡವು ತನ್ನ ವರದಿಯಲ್ಲಿ ಹೇಳಿದೆ.

ಸಾಮಾನ್ಯ ಸಂದರ್ಭಗಳಲ್ಲಿ ಪತ್ರಿಕೆಗಳ ಸಂಪಾದಕರು ಅಥವಾ ಸ್ಥಳೀಯಾಡಳಿತದ ಸ್ಥಳೀಯ ಬ್ಯೂರೊಗಳ ಮುಖ್ಯಸ್ಥರು, ಪೊಲೀಸರು ಮತ್ತು ಭದ್ರತಾ ಪಡೆಗಳು ಈ ವರದಿಗಳನ್ನು ಪುನರ್‌ಪರಿಶೀಲಿಸುತ್ತಾರೆ. ಆದರೆ ಸಂಘರ್ಷದ ಸಮಯದಲ್ಲಿ ಇದು ಸಾಧ್ಯವಾಗಿರಲಿಲ್ಲ ಎನ್ನುವುದನ್ನು ವರದಿಯು ಗಮನಿಸಿದೆ.

ಮೈತಿಗಳು ಮತ್ತು ಕುಕಿಗಳ ನಡುವೆ ಘರ್ಷಣೆಗಳು ಆರಂಭಗೊಂಡಿದ್ದ ಮೇ ಮೊದಲ ವಾರದಲ್ಲಿ ರಾಜ್ಯದಲ್ಲಿ ಇಂಟರ್ನೆಟ್ ನಿಷೇಧ ಹೇರಲಾಗಿದ್ದರಿಂದ ಮಣಿಪುರದಿಂದ ವರದಿಗಾರಿಕೆ ಕಷ್ಟವಾಗಿತ್ತು. ಯಾವುದೇ ಸಂವಹನ ಸೌಲಭ್ಯಗಳಿಲ್ಲದೆ ಸಂಗ್ರಹಿಸಲಾಗಿದ್ದ ಸ್ಥಳೀಯ ಸುದ್ಧಿಗಳು ಪರಿಸ್ಥಿತಿಯ ಸಮತೋಲಿತ ನೋಟವನ್ನು ನೀಡುವಷ್ಟಿರಲಿಲ್ಲ ಎನ್ನುವುದನ್ನು ಎಡಿಟರ್ಸ್ ಗಿಲ್ಡ್ ಕಂಡುಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...