Homeಚಳವಳಿಸುಳ್ಳು ಸಾಕ್ಷಿಗಳನ್ನು ಸೃಷ್ಟಿಸಲಾಗಿದೆ: ದೆಹಲಿ ಗಲಭೆ ಪ್ರಕರಣದಲ್ಲಿ ಉಮರ್‌ ಖಾಲಿದ್

ಸುಳ್ಳು ಸಾಕ್ಷಿಗಳನ್ನು ಸೃಷ್ಟಿಸಲಾಗಿದೆ: ದೆಹಲಿ ಗಲಭೆ ಪ್ರಕರಣದಲ್ಲಿ ಉಮರ್‌ ಖಾಲಿದ್

- Advertisement -
- Advertisement -

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ (ಜೆಎನ್‌ಯು) ಮಾಜಿ ವಿದ್ಯಾರ್ಥಿ ನಾಯಕ, 2020 ರ ದೆಹಲಿ ಗಲಭೆಯಲ್ಲಿ ಆರೋಪಿಯಾಗಿರುವ ಉಮರ್‌ ಖಾಲಿದ್ ಸೋಮವಾರ ಪ್ರಕರಣದ ಕುರಿತು ದೆಹಲಿ ನ್ಯಾಯಾಲಯಕ್ಕೆ ಹೇಳಿಕೆ ನೀಡಿದ್ದಾರೆ.

“ತಾನು ಕ್ರಿಮಿನಲ್ ಪಿತೂರಿ ಅಥವಾ ಭಯೋತ್ಪಾದನೆಗೆ ಸಂಬಂಧಿಸಿದ ಒಂದೇ ಒಂದು ಚಟುವಟಿಕೆನ್ನು ಮಾಡಿದ್ದೇನೆ ಎಂದು ಪೊಲೀಸ್‌ ಸಾಕ್ಷಿಗಳ ಹೇಳಿಕೆಗಳು ತೋರಿಸಿಲ್ಲ” ಎಂದು ಅವರು ಹೇಳಿದ್ದಾರೆ. ಈಶಾನ್ಯ ದೆಹಲಿಯಲ್ಲಿ ಫೆಬ್ರವರಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಅವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (ಯುಎಪಿಎ) ಪ್ರಕರಣದಲ್ಲಿ ದಾಖಲಿಸಲಾಗಿದೆ.

ಪೊಲೀಸರ ಬಳಿ ಯಾವುದೇ ಸಾಕ್ಷ್ಯಾಧಾರಗಳಿಲ್ಲದ ಕಾರಣ ಸಂಚು ಪ್ರಕರಣವನ್ನು ಬೇರೊಬ್ಬರು ಬರೆದು ಅವರಿಗೆ ನೀಡಿದ್ದಾರೆ. ಅಲ್ಲದೆ, ಅರ್ಧ ಸತ್ಯದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಿಸಲು ಆಗುವುದಿಲ್ಲ ಎಂದು ಉಮರ್‌ ಖಾಲಿದ್ ಅವರ ಪರವಾಗಿ ನ್ಯಾಯಾಲಯದಲ್ಲಿ ವಾದಿಸಿದ ತ್ರಿದೀಪ್‌ ಪಾಯಸ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ಜೈಲಿನೊಳಗಿಂದ ಹೋರಾಟಗಾರ ಉಮರ್‌ ಖಾಲಿದ್‌ ಬರೆದ ಹೃದಯಸ್ಪರ್ಶಿ ಪತ್ರ

ದೆಹಲಿ ಗಲಭೆಗೆ ಸಂಬಂಧಿಸಿದಂತೆ, ಉಮರ್ ಖಾಲಿದ್ ಮತ್ತು ಇತರ ಹಲವರ ವಿರುದ್ಧ ಕಠಿಣವಾದ ಭಯೋತ್ಪಾದನಾ ವಿರೋಧಿ ಕಾನೂನಾದ ‘ಯುಎಪಿಎ’ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಜೊತೆಗೆ ಅವರನ್ನು ದೆಹಲಿ ಗಲಭೆಯ ‘ಮಾಸ್ಟರ್‌ಮೈಂಡ್‌ಗಳು’ ಎಂದು ಆರೋಪಿಸಲಾಗಿದೆ. ಈ ಗಲಭೆಯಲ್ಲಿ 53 ಜನರು ಮೃತಪಟ್ಟಿದ್ದರು ಮತ್ತು 700 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ವೈಯಕ್ತಿಕ ಸಾಕ್ಷಿ ಹೇಳಿಕೆಗಳನ್ನು ಉಲ್ಲೇಖಿಸಿದ ಉಮರ್‌ ಖಾಲಿದ್ ಅವರ ವಕೀಲ, ಸಾಕ್ಷಿಗಳಲ್ಲಿ ಒಬ್ಬರನ್ನು “ಸೃಷ್ಟಿಸಲಾಗಿರುವ ಸಾಕ್ಷಿ” ಎಂದು ಕರೆದಿದ್ದಾರೆ. ಈ ಸಾಕ್ಷಿಯು, ಜನವರಿ 23 ಮತ್ತು 24 ರಂದು ದೆಹಲಿಯ ಸೀಲಂಪುರ್ ಪ್ರದೇಶದಲ್ಲಿ ರಹಸ್ಯ ಸಭೆ ನಡೆದಿದೆ ಎಂದು ಹೇಳಿದ್ದು, ಖಾಲಿದ್ ಅದರ ಭಾಗವಾಗಿದ್ದರು ಎಂದು ಉಲ್ಲೇಖಿಸಿದೆ.

ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ವಕೀಲರು, ಇದು ರಹಸ್ಯ ಸಭೆಯಾಗಿದ್ದರೆ, ಭಾಗವಹಿಸುವವರು ತಮ್ಮ ಫೋಟೋ ತೆಗೆಯಲು ಮತ್ತು ಅವುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಲು ಬಿಡುತ್ತಿರಲಿಲ್ಲ ಎಂದು ಅವರು ವಾದಿಸಿದ್ದಾರೆ.

ನ್ಯಾಯಾಲಯವು ನವೆಂಬರ್ 16 ರಂದು ಮುಂದಿನ ವಾದಗಳನ್ನು ಆಲಿಸಲಿದೆ. ಉಮರ್‌ ಖಾಲಿದ್‌ ಅವರ ವಕೀಲ ಪಾಯಸ್‌ ಅವರು ವಾದಗಳನ್ನು ಪೂರ್ತಿಗೊಳಿಸಿದ ನಂತರ, ಅವರ ವಿರುದ್ದವಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅಮಿತ್ ಪ್ರಸಾದ್ ಅವರು ವಾದ ಮಂಡಿಸಲಿದ್ದಾರೆ.

ಇದನ್ನೂ ಓದಿ: ಯಾರನ್ನೂ ಭೇಟಿಯಾಗಲು ಬಿಡುತ್ತಿಲ್ಲ, ಭದ್ರತೆಯ ಹೆಸರಲ್ಲಿ ಏಕಾಂತ ಶಿಕ್ಷೆ: ಉಮರ್‌ ಖಾಲಿದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Islamic terror organization ಅವರು ಕೊಟ್ಟಿರುವ ದೇಣಿಗೆ ‌‌ಸಾಕಾಗಿಲ್ಲವೇ ನಿಮಗೇ? ಇನ್ನೂ ಬೇಕೆಂಬ ದುರಾಸೆ ಇದ್ದರೆ, ದೇಶವಿರೋದಿಗಳು ಮತ್ತು ಹಿಂದೂ ವಿರೋಧಿಗಳ ಬಳಿ ಕೇಳಿ ಕೊಡುತ್ತಾರೆ.

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...