Homeಫ್ಯಾಕ್ಟ್‌ಚೆಕ್ಅಂತ್ಯಕ್ರಿಯೆಗೆ ಸೇರಿದ್ದ ಕೂಟವನ್ನು ‘ರಂಝಾನ್‌‌’ ಆಚರಣೆ ಎಂದು ತಪ್ಪಾಗಿ ಪ್ರತಿಪಾದನೆ

ಅಂತ್ಯಕ್ರಿಯೆಗೆ ಸೇರಿದ್ದ ಕೂಟವನ್ನು ‘ರಂಝಾನ್‌‌’ ಆಚರಣೆ ಎಂದು ತಪ್ಪಾಗಿ ಪ್ರತಿಪಾದನೆ

- Advertisement -
- Advertisement -

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಕಿಕ್ಕಿರಿದು ಸೇರಿರುವ ದೊಡ್ಡ ಕೂಟವೊಂದರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಲಪಂಥೀಯ ಟ್ವಿಟರ್ ಬಳಕೆದಾರರು ಕೊರೊನಾ ಮಾರ್ಗಸೂಚಿಗಳನ್ನು ಮೀರಿ ರಂಝಾನ್‌ ಆಚರಣೆಗೆ ಜನರು ಸೇರಿದ್ದಾರೆ ಎಂದು ತಪ್ಪಾಗಿ ಪ್ರತಿಪಾದಿಸುತ್ತಿದ್ದಾರೆ.

2021 ರ ಏಪ್ರಿಲ್ 16 ರಂದು ನಿಧನರಾದ ಸ್ಥಳೀಯ ಧರ್ಮಗುರು ಮೌಲಾನಾ ಅಬ್ದುಲ್ ಮೊಮಿನ್ ನದ್ವಿ ಅವರ ಅಂತ್ಯಕ್ರಿಯೆಯ ಮೆರವಣಿಗೆ ಸಂಭಾಲ್‌ನ ಮದರಸಾ ಅಂಜುಮಾನ್ ಮುಯಿನುಲ್ ಇಸ್ಲಾಂನಲ್ಲಿ ಜನರು ನೆರೆದಿರುವುದನ್ನು ತೋರಿಸುವ ವಿಡಿಯೊ ಇದಾಗಿದೆ.

ಮದರಸ ಮತ್ತು ಅದರ ಸುತ್ತಲೂ ಚಿತ್ರೀಕರಿಸಿದ ವಿಡಿಯೋವನ್ನು, ಹರಿದ್ವಾರದ ಕುಂಭಮೇಳಕ್ಕೆ ಹೋಲಿಕೆ ಮಾಡಿರುವ ನೆಟ್ಟಿಗರು, ಕೊರೊನಾ ಎರಡನೇ ಅಲೆಯ ಕಾರಣಕ್ಕೆ ದೇಶವು ತೀವ್ರ ಹಿನ್ನಡೆ ಅನುಭವಿಸುತ್ತಿರುವ ಸಂದರ್ಭದಲ್ಲಿ ಧಾರ್ಮಿಕ ಸಭೆ ನಡೆಸಲು ಅವಕಾಶ ನೀಡಿದ್ದಕ್ಕಾಗಿ ಸರ್ಕಾರವನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: ಕೋವಿಡ್ ಉಲ್ಬಣ: ಖಾಸಗಿ ಜೆಟ್‌ಗಳ ಮೂಲಕ ವಿದೇಶಕ್ಕೆ ಹಾರುತ್ತಿರುವ ಭಾರತದ ಅತಿ ಸಿರಿವಂತರು!

ಉತ್ತರ ಪ್ರದೇಶ ಸರ್ಕಾರವು ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಕಾರಣಕ್ಕೆ ಘೋಷಿಸಿದ ಇತ್ತೀಚಿನ ನಿರ್ಬಂಧಗಳ ಪ್ರಕಾರ, ಶವಸಂಸ್ಕಾರ ಅಥವಾ ಸಮಾಧಿ ಸ್ಥಳಗಳಲ್ಲಿ ಅಂತ್ಯಕ್ರಿಯೆಯ ಸಮಯದಲ್ಲಿ 20 ಕ್ಕಿಂತ ಹೆಚ್ಚು ವ್ಯಕ್ತಿಗಳು ಸೇರುವಂತಿಲ್ಲ.

ಇದೇ ವಿಡಿಯೊ ಕ್ಲಿಪ್ ಅನ್ನು ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಾಣಾವತ್‌, “ಕುಂಭಮೇಳದ ನಂತರ ….ಗೌರವಾನ್ವಿತ ಪ್ರಧಾನಿಯವರೆ, ದಯವಿಟ್ಟು ರಂಜಾನ್ ಸಭೆಯನ್ನು ಕೂಡಾ ನಿಲ್ಲಿಸುವಂತೆ ವಿನಂತಿಸುತ್ತೇನೆ” ಎಂದು ಬರೆದು ಕೊಂಡಿದ್ದಾರೆ. ಆದರೆ ಈ ಟ್ವೀಟನ್ನು ಅವರು ಡಿಲಿಟ್ ಮಾಡಿದ್ದಾರೆ. ಅವರ ಟ್ವೀಟ್‌ನ ಆರ್ಕೈವ್‌ ಅನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ: ಅರ್ಹರಿಗೆ ಆರ್ಥಿಕ ಪ್ಯಾಕೇಜ್ ಘೋಷಿಸಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹ

“ವೈರಲ್‌ ವೀಡಿಯೊದಲ್ಲಿ ನೋಡಿದ ಜನಸಮೂಹವು, ಸಂಭಾಲ್‌ನ ನಖಾಸ್ ಪ್ರದೇಶದಲ್ಲಿನ ಅಂಜುಮಾನ್ ಮುಯಿನುಲ್ ಇಸ್ಲಾಂ ಮದ್ರಸದಲ್ಲಿ ಸೇರಿದ ಜನ ಸಮೂಹವಾಗಿದೆ” ಎಂದು ಸಂಭಾಲ್ ನಿವಾಸಿ ಶಾನ್ ಅವರು ತಿಳಿಸಿದ್ದಾರೆಂದು ಭೂಮ್‌ಲೈವ್‌ ವರದಿ ಮಾಡಿದೆ. ಮೌಲಾನಾ ಅಬ್ದುಲ್ ಮೊಮಿನ್ ನದ್ವಿ ಅವರು ಸಂಭಾಲ್‌ನಲ್ಲಿ ನಿಧನರಾಗಿದ್ದು, ಅವರ ಅಂತ್ಯಕ್ರಿಯೆಯ ಪ್ರಾರ್ಥನೆಗಾಗಿ ಈ ಜನರು ಸೇರಿದ್ದರು ಎಂದು ಅವರು ತಿಳಿಸಿದ್ದಾರೆ.

ಈ ಮೆರವಣಿಗೆಯ ಇತರ ತುಣುಕುಗಳು ಫೇಸ್‌ಬುಕ್‌ನಲ್ಲಿ ನೋಡಬಹುದಾಗಿದೆ. ವಿಡಿಯೊದಲ್ಲಿ ಅಂಜುಮಾನ್ ಮುಯಿನುಲ್ ಇಸ್ಲಾಂ ಮದರಸಾದ ಹಿನ್ನಲೆಯನ್ನು ಕೂಡಾ ನೋಡಬಹುದಾಗಿದೆ.

“ಮೌಲಾನಾ ನದ್ವಿ ಬಹಳ ಪ್ರಭಾವಿತ ವ್ಯಕ್ತಿ. ಅನೇಕ ಜನರು ಅವರ ಅಭಿಮಾನಿಗಳಾಗಿದ್ದರು. ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಜನರು ದೂರದಿಂದ ಬಂದಿದ್ದರು. ದೈಹಿಕ ಅಂತರವನ್ನು ಕಾಪಾಡಿಕೊಳ್ಳಲು ನಾವು ನಿರಂತರವಾಗಿ ಜನರಿಗೆ ಮನವಿ ಮಾಡುತ್ತಿದ್ದೆವು. ಜೊತೆಗೆ ನಾವು ಪ್ರದೇಶವನ್ನು ಸ್ಯಾನಿಟೈಝ್ ಕೂಡಾ ಮಾಡುತ್ತಿದ್ದೆವು” ಎಂದು ಮದರಸಾ ಸಂಬಂಧಿತ ವ್ಯಕ್ತಿಯಾದ ಜೈದ್ ನೋಮಾನಿ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೇಶಾದ್ಯಂತ ಆಕ್ಸಿಜನ್ ಪ್ಲಾಂಟ್‌ ಸ್ಥಾಪನೆ ವಿಳಂಬಕ್ಕೆ ಮೋದಿ ಸರ್ಕಾರವೇ ಕಾರಣ ಹೊರತು ರಾಜ್ಯಗಳಲ್ಲ

“ಆದರೆ ಅಂತಹ ಜನಸಮೂಹವನ್ನು ನಿರ್ವಹಿಸುವುದು ಮತ್ತು ನಿಯಂತ್ರಿಸುವುದು ನಮಗೆ ತುಂಬಾ ಕಷ್ಟಕರವಾಗಿತ್ತು. ಆದಾಗ್ಯೂ, ದಫನ ಭೂಮಿಯನ್ನು ತಲುಪಲು ಮತ್ತು ಅಂತ್ಯಕ್ರಿಯೆಯನ್ನು ಪೂರೈಸಲು ನಾವು ಸರಪಣಿಯನ್ನು ಮಾಡಿಕೊಂಡೆವು. ಅಲ್ಲದೆ ಪೊಲೀಸ್ ಆಡಳಿತದ ಕಡೆಯಿಂದ ನಮಗೆ ಯಾವುದೇ ನಿರ್ದಿಷ್ಟ ಸೂಚನೆಗಳು ಸಿಗಲಿಲ್ಲ. ನಾವು ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಲು ಪ್ರಯತ್ನಿಸಿದ್ದೇವೆ ಆದರೆ ಜನಸಂದಣಿಯನ್ನು ನಿಯಂತ್ರಿಸುವುದು ಸುಲಭವಲ್ಲ” ಎಂದು ಅವರು ಹೇಳಿದ್ದಾರೆ.

ಮೌಲಾನಾ ನಿಧನರಾಗಿದ್ದಾರೆ ಎಂದು ಅವರ ಹೆಸರಲ್ಲಿ ಇರುವ ಫೇಸ್‌ಬುಕ್ ಪೇಜೊಂದು, ಏಪ್ರಿಲ್ 16, 2021 ರಂದು ಘೋಷಿಸಿತ್ತು.

ವಿಡಿಯೊದಲ್ಲಿ ಇರುವುದು ಅಂತ್ಯಕ್ರಿಯೆಯ ಮೆರವಣಿಗೆ ಎಂದು ಸಂಭಾಲ್ ಪೊಲೀಸರು ದೃಡಪಡಿಸಿದ್ದಾರೆ. ಆದರೆ ಸಭೆ ಸೇರಲು ಅನುಮತಿ ಇರಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸಂಕೇಶ್ವರರ ‘ನಿಂಬೆ’ ಸಲಹೆ ಪಾಲಿಸಿ ಎಂದ ಬಿಜೆಪಿ ಸಂಸದ; ಅವೈಜ್ಞಾನಿಕತೆ ಹರಡುತ್ತಿದ್ದಾರೆಂದು ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...