Homeಫ್ಯಾಕ್ಟ್‌ಚೆಕ್ಅಂತ್ಯಕ್ರಿಯೆಗೆ ಸೇರಿದ್ದ ಕೂಟವನ್ನು ‘ರಂಝಾನ್‌‌’ ಆಚರಣೆ ಎಂದು ತಪ್ಪಾಗಿ ಪ್ರತಿಪಾದನೆ

ಅಂತ್ಯಕ್ರಿಯೆಗೆ ಸೇರಿದ್ದ ಕೂಟವನ್ನು ‘ರಂಝಾನ್‌‌’ ಆಚರಣೆ ಎಂದು ತಪ್ಪಾಗಿ ಪ್ರತಿಪಾದನೆ

- Advertisement -
- Advertisement -

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಕಿಕ್ಕಿರಿದು ಸೇರಿರುವ ದೊಡ್ಡ ಕೂಟವೊಂದರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಲಪಂಥೀಯ ಟ್ವಿಟರ್ ಬಳಕೆದಾರರು ಕೊರೊನಾ ಮಾರ್ಗಸೂಚಿಗಳನ್ನು ಮೀರಿ ರಂಝಾನ್‌ ಆಚರಣೆಗೆ ಜನರು ಸೇರಿದ್ದಾರೆ ಎಂದು ತಪ್ಪಾಗಿ ಪ್ರತಿಪಾದಿಸುತ್ತಿದ್ದಾರೆ.

2021 ರ ಏಪ್ರಿಲ್ 16 ರಂದು ನಿಧನರಾದ ಸ್ಥಳೀಯ ಧರ್ಮಗುರು ಮೌಲಾನಾ ಅಬ್ದುಲ್ ಮೊಮಿನ್ ನದ್ವಿ ಅವರ ಅಂತ್ಯಕ್ರಿಯೆಯ ಮೆರವಣಿಗೆ ಸಂಭಾಲ್‌ನ ಮದರಸಾ ಅಂಜುಮಾನ್ ಮುಯಿನುಲ್ ಇಸ್ಲಾಂನಲ್ಲಿ ಜನರು ನೆರೆದಿರುವುದನ್ನು ತೋರಿಸುವ ವಿಡಿಯೊ ಇದಾಗಿದೆ.

ಮದರಸ ಮತ್ತು ಅದರ ಸುತ್ತಲೂ ಚಿತ್ರೀಕರಿಸಿದ ವಿಡಿಯೋವನ್ನು, ಹರಿದ್ವಾರದ ಕುಂಭಮೇಳಕ್ಕೆ ಹೋಲಿಕೆ ಮಾಡಿರುವ ನೆಟ್ಟಿಗರು, ಕೊರೊನಾ ಎರಡನೇ ಅಲೆಯ ಕಾರಣಕ್ಕೆ ದೇಶವು ತೀವ್ರ ಹಿನ್ನಡೆ ಅನುಭವಿಸುತ್ತಿರುವ ಸಂದರ್ಭದಲ್ಲಿ ಧಾರ್ಮಿಕ ಸಭೆ ನಡೆಸಲು ಅವಕಾಶ ನೀಡಿದ್ದಕ್ಕಾಗಿ ಸರ್ಕಾರವನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: ಕೋವಿಡ್ ಉಲ್ಬಣ: ಖಾಸಗಿ ಜೆಟ್‌ಗಳ ಮೂಲಕ ವಿದೇಶಕ್ಕೆ ಹಾರುತ್ತಿರುವ ಭಾರತದ ಅತಿ ಸಿರಿವಂತರು!

ಉತ್ತರ ಪ್ರದೇಶ ಸರ್ಕಾರವು ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಕಾರಣಕ್ಕೆ ಘೋಷಿಸಿದ ಇತ್ತೀಚಿನ ನಿರ್ಬಂಧಗಳ ಪ್ರಕಾರ, ಶವಸಂಸ್ಕಾರ ಅಥವಾ ಸಮಾಧಿ ಸ್ಥಳಗಳಲ್ಲಿ ಅಂತ್ಯಕ್ರಿಯೆಯ ಸಮಯದಲ್ಲಿ 20 ಕ್ಕಿಂತ ಹೆಚ್ಚು ವ್ಯಕ್ತಿಗಳು ಸೇರುವಂತಿಲ್ಲ.

ಇದೇ ವಿಡಿಯೊ ಕ್ಲಿಪ್ ಅನ್ನು ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಾಣಾವತ್‌, “ಕುಂಭಮೇಳದ ನಂತರ ….ಗೌರವಾನ್ವಿತ ಪ್ರಧಾನಿಯವರೆ, ದಯವಿಟ್ಟು ರಂಜಾನ್ ಸಭೆಯನ್ನು ಕೂಡಾ ನಿಲ್ಲಿಸುವಂತೆ ವಿನಂತಿಸುತ್ತೇನೆ” ಎಂದು ಬರೆದು ಕೊಂಡಿದ್ದಾರೆ. ಆದರೆ ಈ ಟ್ವೀಟನ್ನು ಅವರು ಡಿಲಿಟ್ ಮಾಡಿದ್ದಾರೆ. ಅವರ ಟ್ವೀಟ್‌ನ ಆರ್ಕೈವ್‌ ಅನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ: ಅರ್ಹರಿಗೆ ಆರ್ಥಿಕ ಪ್ಯಾಕೇಜ್ ಘೋಷಿಸಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹ

“ವೈರಲ್‌ ವೀಡಿಯೊದಲ್ಲಿ ನೋಡಿದ ಜನಸಮೂಹವು, ಸಂಭಾಲ್‌ನ ನಖಾಸ್ ಪ್ರದೇಶದಲ್ಲಿನ ಅಂಜುಮಾನ್ ಮುಯಿನುಲ್ ಇಸ್ಲಾಂ ಮದ್ರಸದಲ್ಲಿ ಸೇರಿದ ಜನ ಸಮೂಹವಾಗಿದೆ” ಎಂದು ಸಂಭಾಲ್ ನಿವಾಸಿ ಶಾನ್ ಅವರು ತಿಳಿಸಿದ್ದಾರೆಂದು ಭೂಮ್‌ಲೈವ್‌ ವರದಿ ಮಾಡಿದೆ. ಮೌಲಾನಾ ಅಬ್ದುಲ್ ಮೊಮಿನ್ ನದ್ವಿ ಅವರು ಸಂಭಾಲ್‌ನಲ್ಲಿ ನಿಧನರಾಗಿದ್ದು, ಅವರ ಅಂತ್ಯಕ್ರಿಯೆಯ ಪ್ರಾರ್ಥನೆಗಾಗಿ ಈ ಜನರು ಸೇರಿದ್ದರು ಎಂದು ಅವರು ತಿಳಿಸಿದ್ದಾರೆ.

ಈ ಮೆರವಣಿಗೆಯ ಇತರ ತುಣುಕುಗಳು ಫೇಸ್‌ಬುಕ್‌ನಲ್ಲಿ ನೋಡಬಹುದಾಗಿದೆ. ವಿಡಿಯೊದಲ್ಲಿ ಅಂಜುಮಾನ್ ಮುಯಿನುಲ್ ಇಸ್ಲಾಂ ಮದರಸಾದ ಹಿನ್ನಲೆಯನ್ನು ಕೂಡಾ ನೋಡಬಹುದಾಗಿದೆ.

“ಮೌಲಾನಾ ನದ್ವಿ ಬಹಳ ಪ್ರಭಾವಿತ ವ್ಯಕ್ತಿ. ಅನೇಕ ಜನರು ಅವರ ಅಭಿಮಾನಿಗಳಾಗಿದ್ದರು. ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಜನರು ದೂರದಿಂದ ಬಂದಿದ್ದರು. ದೈಹಿಕ ಅಂತರವನ್ನು ಕಾಪಾಡಿಕೊಳ್ಳಲು ನಾವು ನಿರಂತರವಾಗಿ ಜನರಿಗೆ ಮನವಿ ಮಾಡುತ್ತಿದ್ದೆವು. ಜೊತೆಗೆ ನಾವು ಪ್ರದೇಶವನ್ನು ಸ್ಯಾನಿಟೈಝ್ ಕೂಡಾ ಮಾಡುತ್ತಿದ್ದೆವು” ಎಂದು ಮದರಸಾ ಸಂಬಂಧಿತ ವ್ಯಕ್ತಿಯಾದ ಜೈದ್ ನೋಮಾನಿ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೇಶಾದ್ಯಂತ ಆಕ್ಸಿಜನ್ ಪ್ಲಾಂಟ್‌ ಸ್ಥಾಪನೆ ವಿಳಂಬಕ್ಕೆ ಮೋದಿ ಸರ್ಕಾರವೇ ಕಾರಣ ಹೊರತು ರಾಜ್ಯಗಳಲ್ಲ

“ಆದರೆ ಅಂತಹ ಜನಸಮೂಹವನ್ನು ನಿರ್ವಹಿಸುವುದು ಮತ್ತು ನಿಯಂತ್ರಿಸುವುದು ನಮಗೆ ತುಂಬಾ ಕಷ್ಟಕರವಾಗಿತ್ತು. ಆದಾಗ್ಯೂ, ದಫನ ಭೂಮಿಯನ್ನು ತಲುಪಲು ಮತ್ತು ಅಂತ್ಯಕ್ರಿಯೆಯನ್ನು ಪೂರೈಸಲು ನಾವು ಸರಪಣಿಯನ್ನು ಮಾಡಿಕೊಂಡೆವು. ಅಲ್ಲದೆ ಪೊಲೀಸ್ ಆಡಳಿತದ ಕಡೆಯಿಂದ ನಮಗೆ ಯಾವುದೇ ನಿರ್ದಿಷ್ಟ ಸೂಚನೆಗಳು ಸಿಗಲಿಲ್ಲ. ನಾವು ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಲು ಪ್ರಯತ್ನಿಸಿದ್ದೇವೆ ಆದರೆ ಜನಸಂದಣಿಯನ್ನು ನಿಯಂತ್ರಿಸುವುದು ಸುಲಭವಲ್ಲ” ಎಂದು ಅವರು ಹೇಳಿದ್ದಾರೆ.

ಮೌಲಾನಾ ನಿಧನರಾಗಿದ್ದಾರೆ ಎಂದು ಅವರ ಹೆಸರಲ್ಲಿ ಇರುವ ಫೇಸ್‌ಬುಕ್ ಪೇಜೊಂದು, ಏಪ್ರಿಲ್ 16, 2021 ರಂದು ಘೋಷಿಸಿತ್ತು.

ವಿಡಿಯೊದಲ್ಲಿ ಇರುವುದು ಅಂತ್ಯಕ್ರಿಯೆಯ ಮೆರವಣಿಗೆ ಎಂದು ಸಂಭಾಲ್ ಪೊಲೀಸರು ದೃಡಪಡಿಸಿದ್ದಾರೆ. ಆದರೆ ಸಭೆ ಸೇರಲು ಅನುಮತಿ ಇರಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸಂಕೇಶ್ವರರ ‘ನಿಂಬೆ’ ಸಲಹೆ ಪಾಲಿಸಿ ಎಂದ ಬಿಜೆಪಿ ಸಂಸದ; ಅವೈಜ್ಞಾನಿಕತೆ ಹರಡುತ್ತಿದ್ದಾರೆಂದು ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...