Homeಫ್ಯಾಕ್ಟ್‌ಚೆಕ್ಅಂತ್ಯಕ್ರಿಯೆಗೆ ಸೇರಿದ್ದ ಕೂಟವನ್ನು ‘ರಂಝಾನ್‌‌’ ಆಚರಣೆ ಎಂದು ತಪ್ಪಾಗಿ ಪ್ರತಿಪಾದನೆ

ಅಂತ್ಯಕ್ರಿಯೆಗೆ ಸೇರಿದ್ದ ಕೂಟವನ್ನು ‘ರಂಝಾನ್‌‌’ ಆಚರಣೆ ಎಂದು ತಪ್ಪಾಗಿ ಪ್ರತಿಪಾದನೆ

- Advertisement -
- Advertisement -

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಕಿಕ್ಕಿರಿದು ಸೇರಿರುವ ದೊಡ್ಡ ಕೂಟವೊಂದರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಲಪಂಥೀಯ ಟ್ವಿಟರ್ ಬಳಕೆದಾರರು ಕೊರೊನಾ ಮಾರ್ಗಸೂಚಿಗಳನ್ನು ಮೀರಿ ರಂಝಾನ್‌ ಆಚರಣೆಗೆ ಜನರು ಸೇರಿದ್ದಾರೆ ಎಂದು ತಪ್ಪಾಗಿ ಪ್ರತಿಪಾದಿಸುತ್ತಿದ್ದಾರೆ.

2021 ರ ಏಪ್ರಿಲ್ 16 ರಂದು ನಿಧನರಾದ ಸ್ಥಳೀಯ ಧರ್ಮಗುರು ಮೌಲಾನಾ ಅಬ್ದುಲ್ ಮೊಮಿನ್ ನದ್ವಿ ಅವರ ಅಂತ್ಯಕ್ರಿಯೆಯ ಮೆರವಣಿಗೆ ಸಂಭಾಲ್‌ನ ಮದರಸಾ ಅಂಜುಮಾನ್ ಮುಯಿನುಲ್ ಇಸ್ಲಾಂನಲ್ಲಿ ಜನರು ನೆರೆದಿರುವುದನ್ನು ತೋರಿಸುವ ವಿಡಿಯೊ ಇದಾಗಿದೆ.

ಮದರಸ ಮತ್ತು ಅದರ ಸುತ್ತಲೂ ಚಿತ್ರೀಕರಿಸಿದ ವಿಡಿಯೋವನ್ನು, ಹರಿದ್ವಾರದ ಕುಂಭಮೇಳಕ್ಕೆ ಹೋಲಿಕೆ ಮಾಡಿರುವ ನೆಟ್ಟಿಗರು, ಕೊರೊನಾ ಎರಡನೇ ಅಲೆಯ ಕಾರಣಕ್ಕೆ ದೇಶವು ತೀವ್ರ ಹಿನ್ನಡೆ ಅನುಭವಿಸುತ್ತಿರುವ ಸಂದರ್ಭದಲ್ಲಿ ಧಾರ್ಮಿಕ ಸಭೆ ನಡೆಸಲು ಅವಕಾಶ ನೀಡಿದ್ದಕ್ಕಾಗಿ ಸರ್ಕಾರವನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: ಕೋವಿಡ್ ಉಲ್ಬಣ: ಖಾಸಗಿ ಜೆಟ್‌ಗಳ ಮೂಲಕ ವಿದೇಶಕ್ಕೆ ಹಾರುತ್ತಿರುವ ಭಾರತದ ಅತಿ ಸಿರಿವಂತರು!

ಉತ್ತರ ಪ್ರದೇಶ ಸರ್ಕಾರವು ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಕಾರಣಕ್ಕೆ ಘೋಷಿಸಿದ ಇತ್ತೀಚಿನ ನಿರ್ಬಂಧಗಳ ಪ್ರಕಾರ, ಶವಸಂಸ್ಕಾರ ಅಥವಾ ಸಮಾಧಿ ಸ್ಥಳಗಳಲ್ಲಿ ಅಂತ್ಯಕ್ರಿಯೆಯ ಸಮಯದಲ್ಲಿ 20 ಕ್ಕಿಂತ ಹೆಚ್ಚು ವ್ಯಕ್ತಿಗಳು ಸೇರುವಂತಿಲ್ಲ.

ಇದೇ ವಿಡಿಯೊ ಕ್ಲಿಪ್ ಅನ್ನು ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಾಣಾವತ್‌, “ಕುಂಭಮೇಳದ ನಂತರ ….ಗೌರವಾನ್ವಿತ ಪ್ರಧಾನಿಯವರೆ, ದಯವಿಟ್ಟು ರಂಜಾನ್ ಸಭೆಯನ್ನು ಕೂಡಾ ನಿಲ್ಲಿಸುವಂತೆ ವಿನಂತಿಸುತ್ತೇನೆ” ಎಂದು ಬರೆದು ಕೊಂಡಿದ್ದಾರೆ. ಆದರೆ ಈ ಟ್ವೀಟನ್ನು ಅವರು ಡಿಲಿಟ್ ಮಾಡಿದ್ದಾರೆ. ಅವರ ಟ್ವೀಟ್‌ನ ಆರ್ಕೈವ್‌ ಅನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ: ಅರ್ಹರಿಗೆ ಆರ್ಥಿಕ ಪ್ಯಾಕೇಜ್ ಘೋಷಿಸಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹ

“ವೈರಲ್‌ ವೀಡಿಯೊದಲ್ಲಿ ನೋಡಿದ ಜನಸಮೂಹವು, ಸಂಭಾಲ್‌ನ ನಖಾಸ್ ಪ್ರದೇಶದಲ್ಲಿನ ಅಂಜುಮಾನ್ ಮುಯಿನುಲ್ ಇಸ್ಲಾಂ ಮದ್ರಸದಲ್ಲಿ ಸೇರಿದ ಜನ ಸಮೂಹವಾಗಿದೆ” ಎಂದು ಸಂಭಾಲ್ ನಿವಾಸಿ ಶಾನ್ ಅವರು ತಿಳಿಸಿದ್ದಾರೆಂದು ಭೂಮ್‌ಲೈವ್‌ ವರದಿ ಮಾಡಿದೆ. ಮೌಲಾನಾ ಅಬ್ದುಲ್ ಮೊಮಿನ್ ನದ್ವಿ ಅವರು ಸಂಭಾಲ್‌ನಲ್ಲಿ ನಿಧನರಾಗಿದ್ದು, ಅವರ ಅಂತ್ಯಕ್ರಿಯೆಯ ಪ್ರಾರ್ಥನೆಗಾಗಿ ಈ ಜನರು ಸೇರಿದ್ದರು ಎಂದು ಅವರು ತಿಳಿಸಿದ್ದಾರೆ.

ಈ ಮೆರವಣಿಗೆಯ ಇತರ ತುಣುಕುಗಳು ಫೇಸ್‌ಬುಕ್‌ನಲ್ಲಿ ನೋಡಬಹುದಾಗಿದೆ. ವಿಡಿಯೊದಲ್ಲಿ ಅಂಜುಮಾನ್ ಮುಯಿನುಲ್ ಇಸ್ಲಾಂ ಮದರಸಾದ ಹಿನ್ನಲೆಯನ್ನು ಕೂಡಾ ನೋಡಬಹುದಾಗಿದೆ.

“ಮೌಲಾನಾ ನದ್ವಿ ಬಹಳ ಪ್ರಭಾವಿತ ವ್ಯಕ್ತಿ. ಅನೇಕ ಜನರು ಅವರ ಅಭಿಮಾನಿಗಳಾಗಿದ್ದರು. ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಜನರು ದೂರದಿಂದ ಬಂದಿದ್ದರು. ದೈಹಿಕ ಅಂತರವನ್ನು ಕಾಪಾಡಿಕೊಳ್ಳಲು ನಾವು ನಿರಂತರವಾಗಿ ಜನರಿಗೆ ಮನವಿ ಮಾಡುತ್ತಿದ್ದೆವು. ಜೊತೆಗೆ ನಾವು ಪ್ರದೇಶವನ್ನು ಸ್ಯಾನಿಟೈಝ್ ಕೂಡಾ ಮಾಡುತ್ತಿದ್ದೆವು” ಎಂದು ಮದರಸಾ ಸಂಬಂಧಿತ ವ್ಯಕ್ತಿಯಾದ ಜೈದ್ ನೋಮಾನಿ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೇಶಾದ್ಯಂತ ಆಕ್ಸಿಜನ್ ಪ್ಲಾಂಟ್‌ ಸ್ಥಾಪನೆ ವಿಳಂಬಕ್ಕೆ ಮೋದಿ ಸರ್ಕಾರವೇ ಕಾರಣ ಹೊರತು ರಾಜ್ಯಗಳಲ್ಲ

“ಆದರೆ ಅಂತಹ ಜನಸಮೂಹವನ್ನು ನಿರ್ವಹಿಸುವುದು ಮತ್ತು ನಿಯಂತ್ರಿಸುವುದು ನಮಗೆ ತುಂಬಾ ಕಷ್ಟಕರವಾಗಿತ್ತು. ಆದಾಗ್ಯೂ, ದಫನ ಭೂಮಿಯನ್ನು ತಲುಪಲು ಮತ್ತು ಅಂತ್ಯಕ್ರಿಯೆಯನ್ನು ಪೂರೈಸಲು ನಾವು ಸರಪಣಿಯನ್ನು ಮಾಡಿಕೊಂಡೆವು. ಅಲ್ಲದೆ ಪೊಲೀಸ್ ಆಡಳಿತದ ಕಡೆಯಿಂದ ನಮಗೆ ಯಾವುದೇ ನಿರ್ದಿಷ್ಟ ಸೂಚನೆಗಳು ಸಿಗಲಿಲ್ಲ. ನಾವು ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಲು ಪ್ರಯತ್ನಿಸಿದ್ದೇವೆ ಆದರೆ ಜನಸಂದಣಿಯನ್ನು ನಿಯಂತ್ರಿಸುವುದು ಸುಲಭವಲ್ಲ” ಎಂದು ಅವರು ಹೇಳಿದ್ದಾರೆ.

ಮೌಲಾನಾ ನಿಧನರಾಗಿದ್ದಾರೆ ಎಂದು ಅವರ ಹೆಸರಲ್ಲಿ ಇರುವ ಫೇಸ್‌ಬುಕ್ ಪೇಜೊಂದು, ಏಪ್ರಿಲ್ 16, 2021 ರಂದು ಘೋಷಿಸಿತ್ತು.

ವಿಡಿಯೊದಲ್ಲಿ ಇರುವುದು ಅಂತ್ಯಕ್ರಿಯೆಯ ಮೆರವಣಿಗೆ ಎಂದು ಸಂಭಾಲ್ ಪೊಲೀಸರು ದೃಡಪಡಿಸಿದ್ದಾರೆ. ಆದರೆ ಸಭೆ ಸೇರಲು ಅನುಮತಿ ಇರಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸಂಕೇಶ್ವರರ ‘ನಿಂಬೆ’ ಸಲಹೆ ಪಾಲಿಸಿ ಎಂದ ಬಿಜೆಪಿ ಸಂಸದ; ಅವೈಜ್ಞಾನಿಕತೆ ಹರಡುತ್ತಿದ್ದಾರೆಂದು ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...