Homeಫ್ಯಾಕ್ಟ್‌ಚೆಕ್ಅಂತ್ಯಕ್ರಿಯೆಗೆ ಸೇರಿದ್ದ ಕೂಟವನ್ನು ‘ರಂಝಾನ್‌‌’ ಆಚರಣೆ ಎಂದು ತಪ್ಪಾಗಿ ಪ್ರತಿಪಾದನೆ

ಅಂತ್ಯಕ್ರಿಯೆಗೆ ಸೇರಿದ್ದ ಕೂಟವನ್ನು ‘ರಂಝಾನ್‌‌’ ಆಚರಣೆ ಎಂದು ತಪ್ಪಾಗಿ ಪ್ರತಿಪಾದನೆ

- Advertisement -
- Advertisement -

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಕಿಕ್ಕಿರಿದು ಸೇರಿರುವ ದೊಡ್ಡ ಕೂಟವೊಂದರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಲಪಂಥೀಯ ಟ್ವಿಟರ್ ಬಳಕೆದಾರರು ಕೊರೊನಾ ಮಾರ್ಗಸೂಚಿಗಳನ್ನು ಮೀರಿ ರಂಝಾನ್‌ ಆಚರಣೆಗೆ ಜನರು ಸೇರಿದ್ದಾರೆ ಎಂದು ತಪ್ಪಾಗಿ ಪ್ರತಿಪಾದಿಸುತ್ತಿದ್ದಾರೆ.

2021 ರ ಏಪ್ರಿಲ್ 16 ರಂದು ನಿಧನರಾದ ಸ್ಥಳೀಯ ಧರ್ಮಗುರು ಮೌಲಾನಾ ಅಬ್ದುಲ್ ಮೊಮಿನ್ ನದ್ವಿ ಅವರ ಅಂತ್ಯಕ್ರಿಯೆಯ ಮೆರವಣಿಗೆ ಸಂಭಾಲ್‌ನ ಮದರಸಾ ಅಂಜುಮಾನ್ ಮುಯಿನುಲ್ ಇಸ್ಲಾಂನಲ್ಲಿ ಜನರು ನೆರೆದಿರುವುದನ್ನು ತೋರಿಸುವ ವಿಡಿಯೊ ಇದಾಗಿದೆ.

ಮದರಸ ಮತ್ತು ಅದರ ಸುತ್ತಲೂ ಚಿತ್ರೀಕರಿಸಿದ ವಿಡಿಯೋವನ್ನು, ಹರಿದ್ವಾರದ ಕುಂಭಮೇಳಕ್ಕೆ ಹೋಲಿಕೆ ಮಾಡಿರುವ ನೆಟ್ಟಿಗರು, ಕೊರೊನಾ ಎರಡನೇ ಅಲೆಯ ಕಾರಣಕ್ಕೆ ದೇಶವು ತೀವ್ರ ಹಿನ್ನಡೆ ಅನುಭವಿಸುತ್ತಿರುವ ಸಂದರ್ಭದಲ್ಲಿ ಧಾರ್ಮಿಕ ಸಭೆ ನಡೆಸಲು ಅವಕಾಶ ನೀಡಿದ್ದಕ್ಕಾಗಿ ಸರ್ಕಾರವನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: ಕೋವಿಡ್ ಉಲ್ಬಣ: ಖಾಸಗಿ ಜೆಟ್‌ಗಳ ಮೂಲಕ ವಿದೇಶಕ್ಕೆ ಹಾರುತ್ತಿರುವ ಭಾರತದ ಅತಿ ಸಿರಿವಂತರು!

ಉತ್ತರ ಪ್ರದೇಶ ಸರ್ಕಾರವು ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಕಾರಣಕ್ಕೆ ಘೋಷಿಸಿದ ಇತ್ತೀಚಿನ ನಿರ್ಬಂಧಗಳ ಪ್ರಕಾರ, ಶವಸಂಸ್ಕಾರ ಅಥವಾ ಸಮಾಧಿ ಸ್ಥಳಗಳಲ್ಲಿ ಅಂತ್ಯಕ್ರಿಯೆಯ ಸಮಯದಲ್ಲಿ 20 ಕ್ಕಿಂತ ಹೆಚ್ಚು ವ್ಯಕ್ತಿಗಳು ಸೇರುವಂತಿಲ್ಲ.

ಇದೇ ವಿಡಿಯೊ ಕ್ಲಿಪ್ ಅನ್ನು ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಾಣಾವತ್‌, “ಕುಂಭಮೇಳದ ನಂತರ ….ಗೌರವಾನ್ವಿತ ಪ್ರಧಾನಿಯವರೆ, ದಯವಿಟ್ಟು ರಂಜಾನ್ ಸಭೆಯನ್ನು ಕೂಡಾ ನಿಲ್ಲಿಸುವಂತೆ ವಿನಂತಿಸುತ್ತೇನೆ” ಎಂದು ಬರೆದು ಕೊಂಡಿದ್ದಾರೆ. ಆದರೆ ಈ ಟ್ವೀಟನ್ನು ಅವರು ಡಿಲಿಟ್ ಮಾಡಿದ್ದಾರೆ. ಅವರ ಟ್ವೀಟ್‌ನ ಆರ್ಕೈವ್‌ ಅನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ: ಅರ್ಹರಿಗೆ ಆರ್ಥಿಕ ಪ್ಯಾಕೇಜ್ ಘೋಷಿಸಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹ

“ವೈರಲ್‌ ವೀಡಿಯೊದಲ್ಲಿ ನೋಡಿದ ಜನಸಮೂಹವು, ಸಂಭಾಲ್‌ನ ನಖಾಸ್ ಪ್ರದೇಶದಲ್ಲಿನ ಅಂಜುಮಾನ್ ಮುಯಿನುಲ್ ಇಸ್ಲಾಂ ಮದ್ರಸದಲ್ಲಿ ಸೇರಿದ ಜನ ಸಮೂಹವಾಗಿದೆ” ಎಂದು ಸಂಭಾಲ್ ನಿವಾಸಿ ಶಾನ್ ಅವರು ತಿಳಿಸಿದ್ದಾರೆಂದು ಭೂಮ್‌ಲೈವ್‌ ವರದಿ ಮಾಡಿದೆ. ಮೌಲಾನಾ ಅಬ್ದುಲ್ ಮೊಮಿನ್ ನದ್ವಿ ಅವರು ಸಂಭಾಲ್‌ನಲ್ಲಿ ನಿಧನರಾಗಿದ್ದು, ಅವರ ಅಂತ್ಯಕ್ರಿಯೆಯ ಪ್ರಾರ್ಥನೆಗಾಗಿ ಈ ಜನರು ಸೇರಿದ್ದರು ಎಂದು ಅವರು ತಿಳಿಸಿದ್ದಾರೆ.

ಈ ಮೆರವಣಿಗೆಯ ಇತರ ತುಣುಕುಗಳು ಫೇಸ್‌ಬುಕ್‌ನಲ್ಲಿ ನೋಡಬಹುದಾಗಿದೆ. ವಿಡಿಯೊದಲ್ಲಿ ಅಂಜುಮಾನ್ ಮುಯಿನುಲ್ ಇಸ್ಲಾಂ ಮದರಸಾದ ಹಿನ್ನಲೆಯನ್ನು ಕೂಡಾ ನೋಡಬಹುದಾಗಿದೆ.

“ಮೌಲಾನಾ ನದ್ವಿ ಬಹಳ ಪ್ರಭಾವಿತ ವ್ಯಕ್ತಿ. ಅನೇಕ ಜನರು ಅವರ ಅಭಿಮಾನಿಗಳಾಗಿದ್ದರು. ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಜನರು ದೂರದಿಂದ ಬಂದಿದ್ದರು. ದೈಹಿಕ ಅಂತರವನ್ನು ಕಾಪಾಡಿಕೊಳ್ಳಲು ನಾವು ನಿರಂತರವಾಗಿ ಜನರಿಗೆ ಮನವಿ ಮಾಡುತ್ತಿದ್ದೆವು. ಜೊತೆಗೆ ನಾವು ಪ್ರದೇಶವನ್ನು ಸ್ಯಾನಿಟೈಝ್ ಕೂಡಾ ಮಾಡುತ್ತಿದ್ದೆವು” ಎಂದು ಮದರಸಾ ಸಂಬಂಧಿತ ವ್ಯಕ್ತಿಯಾದ ಜೈದ್ ನೋಮಾನಿ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೇಶಾದ್ಯಂತ ಆಕ್ಸಿಜನ್ ಪ್ಲಾಂಟ್‌ ಸ್ಥಾಪನೆ ವಿಳಂಬಕ್ಕೆ ಮೋದಿ ಸರ್ಕಾರವೇ ಕಾರಣ ಹೊರತು ರಾಜ್ಯಗಳಲ್ಲ

“ಆದರೆ ಅಂತಹ ಜನಸಮೂಹವನ್ನು ನಿರ್ವಹಿಸುವುದು ಮತ್ತು ನಿಯಂತ್ರಿಸುವುದು ನಮಗೆ ತುಂಬಾ ಕಷ್ಟಕರವಾಗಿತ್ತು. ಆದಾಗ್ಯೂ, ದಫನ ಭೂಮಿಯನ್ನು ತಲುಪಲು ಮತ್ತು ಅಂತ್ಯಕ್ರಿಯೆಯನ್ನು ಪೂರೈಸಲು ನಾವು ಸರಪಣಿಯನ್ನು ಮಾಡಿಕೊಂಡೆವು. ಅಲ್ಲದೆ ಪೊಲೀಸ್ ಆಡಳಿತದ ಕಡೆಯಿಂದ ನಮಗೆ ಯಾವುದೇ ನಿರ್ದಿಷ್ಟ ಸೂಚನೆಗಳು ಸಿಗಲಿಲ್ಲ. ನಾವು ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಲು ಪ್ರಯತ್ನಿಸಿದ್ದೇವೆ ಆದರೆ ಜನಸಂದಣಿಯನ್ನು ನಿಯಂತ್ರಿಸುವುದು ಸುಲಭವಲ್ಲ” ಎಂದು ಅವರು ಹೇಳಿದ್ದಾರೆ.

ಮೌಲಾನಾ ನಿಧನರಾಗಿದ್ದಾರೆ ಎಂದು ಅವರ ಹೆಸರಲ್ಲಿ ಇರುವ ಫೇಸ್‌ಬುಕ್ ಪೇಜೊಂದು, ಏಪ್ರಿಲ್ 16, 2021 ರಂದು ಘೋಷಿಸಿತ್ತು.

ವಿಡಿಯೊದಲ್ಲಿ ಇರುವುದು ಅಂತ್ಯಕ್ರಿಯೆಯ ಮೆರವಣಿಗೆ ಎಂದು ಸಂಭಾಲ್ ಪೊಲೀಸರು ದೃಡಪಡಿಸಿದ್ದಾರೆ. ಆದರೆ ಸಭೆ ಸೇರಲು ಅನುಮತಿ ಇರಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸಂಕೇಶ್ವರರ ‘ನಿಂಬೆ’ ಸಲಹೆ ಪಾಲಿಸಿ ಎಂದ ಬಿಜೆಪಿ ಸಂಸದ; ಅವೈಜ್ಞಾನಿಕತೆ ಹರಡುತ್ತಿದ್ದಾರೆಂದು ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...