Homeಕರ್ನಾಟಕಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಬೇರೊಬ್ಬರು ಸಿಎಂ ಆಗಲಿ: ಎಚ್.ವಿಶ್ವನಾಥ್

ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಬೇರೊಬ್ಬರು ಸಿಎಂ ಆಗಲಿ: ಎಚ್.ವಿಶ್ವನಾಥ್

ಅಧಿಕಾರದಲ್ಲಿ ಕುಟುಂಬದ ಹಸ್ತಕ್ಷೇಪ ಸರಿಯಲ್ಲ. ಬಿ.ವೈ.ವಿಜಯೇಂದ್ರ ಮತ್ತು ಅವರ ಸ್ನೇಹಿತರು ನಾವು ಹಣವನ್ನು ಸಂಗ್ರಹಿಸುತ್ತಿದ್ದೇವೆ ಮತ್ತು ಅದು ದೆಹಲಿಗೆ ಹೋಗುತ್ತದೆ ಎಂದು ಹೇಳುತ್ತಿದ್ದರು.

- Advertisement -
- Advertisement -

ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಕೂಗು ಜೋರಾಗಿದ್ದು, ಅದಕ್ಕೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಕೂಡ ದನಿಗೂಡಿಸಿದ್ದಾರೆ. ಒಂದು ಕಡೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಯಡಿಯೂರಪ್ಪನವರೆ ಮುಂದಿನ ಎರಡು ವರ್ಷಗಳವರೆಗೆ ಸಿಎಂ ಎಂದು ಹೇಳುತ್ತಿದ್ದಾರೆ. ಆದರೆ ಇನ್ನೊಂದು ಕಡೆ ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಕೆಲ ಶಾಸಕರು ಪ್ರಯತ್ನ ಮುಂದುವರೆಸಿದ್ದಾರೆ. ಇಂದು ಅರುಣ್‌ ಸಿಂಗ್‌ರವರನ್ನು ಭೇಟಿಯಾದ ವಿಶ್ವನಾಥ್ ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಬೇರೊಬ್ಬರು ಸಿಎಂ ಆಗಲಿ ಎಂದು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಸರ್ಕಾರ ಮತ್ತು ಬಿಜೆಪಿ ಪಕ್ಷದ ಬಗ್ಗೆ ಜನರು ನಕರಾತ್ಮಕ ಅಭಿಪ್ರಾಯ ಹೊಂದಿದ್ದಾರೆ. ಇದು ಪಕ್ಷದ ದೃಷ್ಟಿಯಿಂದ ಒಳ್ಳೆಯದಲ್ಲ. ಯಡಿಯೂರಪ್ಪನವರ ವಯಸ್ಸು ಮತ್ತು ಆರೋಗ್ಯದಿಂದಾಗಿ ಅವರು ಸಿಎಂ ಆಗಿ ಮುಂದುವರೆಯುವ ಉತ್ಸಾಹ ಉಳಿಸಿಕೊಂಡಿಲ್ಲ. ಅವರ ಮಾರ್ಗದರ್ಶನದಲ್ಲಿ ಬೇರೊಬ್ಬರು ಸಿಎಂ ಆದರೆ ಒಳ್ಳೆಯದು ಎಂದು ಎಚ್. ವಿಶ್ವನಾಥ್ ಅರುಣ್‌ ಸಿಂಗ್‌ರವರ ಬಳಿ ಹೇಳಿದ್ದಾಗಿ ತಿಳಿಸಿದ್ದಾರೆ.

ಅಧಿಕಾರದಲ್ಲಿ ಕುಟುಂಬದ ಹಸ್ತಕ್ಷೇಪ ಸರಿಯಲ್ಲ. ಬಿ.ವೈ.ವಿಜಯೇಂದ್ರ ಮತ್ತು ಅವರ ಸ್ನೇಹಿತರು ನಾವು ಹಣವನ್ನು ಸಂಗ್ರಹಿಸುತ್ತಿದ್ದೇವೆ ಮತ್ತು ಅದು ದೆಹಲಿಗೆ ಹೋಗುತ್ತದೆ ಎಂದು ಹೇಳುತ್ತಿದ್ದರು. ಪಕ್ಷದ ಕುರಿತು ಕೆಟ್ಟ ಪ್ರಚಾರವೂ ನಡೆಯುತ್ತಿದೆ ಎಂದು ಅರುಣ್‌ ಸಿಂಗ್‌ರವರ ಬಳಿ ಹೇಳಿದ್ದಾರೆ ಅವರು ತಿಳಿಸಿದ್ದಾರೆ.

ನೀರಾವರಿ ಇಲಾಖೆಯಲ್ಲಿ, ನೀರಾವರಿ ಮಂಡಳಿಯ ಅನುಮತಿ ಅಥವಾ ನಿರ್ಣಯವಿಲ್ಲದೆ 20,000 ಕೋಟಿ ರೂ.ಗಳ ಟೆಂಡರ್ ನಿಗದಿಪಡಿಸಲಾಗಿದೆ ಎಂದು ಸಹ ಎಚ್ ವಿಶ್ವನಾಥ್ ಆರೋಪಿಸಿದ್ದಾರೆ.

ಒಟ್ಟಿನಲ್ಲಿ ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ದಿನೇ ದಿನೇ ಋಜುವಾತಾಗುತ್ತಿದೆ. ಇನ್ನು ಎಚ್ ವಿಶ್ವನಾಥ್‌ರವರು ಯಡಿಯೂರಪ್ಪನವರ ಮಗ ಹಣ ಸಂಗ್ರಹಿಸಿ ಹೈಕಮಾಂಡ್‌ಗೆ ಕೊಡುತ್ತಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೇ ನೀರಾವರಿ ಇಲಾಖೆಯಲ್ಲಿ ಭ್ರಷ್ಟಾಚಾರದ ಪ್ರಸ್ತಾಪ ಮಾಡಿದ್ದಾರೆ. ಪಕ್ಷದ ಶಾಸಕರೆ ಸರ್ಕಾರದ ವಿರುದ್ಧ ಈ ಆರೋಪಗಳನ್ನು ಮಾಡುತ್ತಿರುವುದು ಗಂಭೀರ ವಿಷಯವಾಗಿದೆ. ಆದರೆ ಈ ಬಗ್ಗೆ ತನಿಖೆ ನಡೆಯುತ್ತದೆಯೇ ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ.


ಇದನ್ನೂ ಓದಿ; ಕೇರಳ ಬಿಜೆಪಿ ರಾಜ್ಯಾಧ್ಯಕ್ಷನ ಮೇಲೆ ಲಂಚ ಪ್ರಕರಣ ದಾಖಲಿಸಲು ಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...