Homeಮುಖಪುಟಕುಟುಂಬದಿಂದಲೇ ಅತ್ಯಾಚಾರ ಸಂತ್ರಸ್ತೆಯ ಹತ್ಯೆ : ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿ ವಿರುದ್ದ ದೂರು

ಕುಟುಂಬದಿಂದಲೇ ಅತ್ಯಾಚಾರ ಸಂತ್ರಸ್ತೆಯ ಹತ್ಯೆ : ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿ ವಿರುದ್ದ ದೂರು

ಹೆತ್ತ ತಾಯಿಯೇ ಮುಂದೆ ನಿಂತು ಕೊಲೆ ಮಾಡಿಸಿದ್ದಾರೆ ಎಂದ ಪೊಲೀಸರು!

- Advertisement -
- Advertisement -

ಉತ್ತರ ಪ್ರದೇಶದ ಸಂಭಾಲ್‌ ಜಿಲ್ಲೆಯಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದ ಅತ್ಯಾಚಾರ ಆರೋಪಿ ಅಪ್ರಾಪ್ತ ಸಂತ್ರಸ್ತೆಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ ಎಂದು ಕಳೆದ ವಾರ ವರದಿಯಾಗಿತ್ತು. ಆದರೆ, ಈಗ ಈ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ.

ಪೊಲೀಸರು ಪ್ರಕರಣದ ಕುರಿತು ಅಳವಾದ ತನಿಖೆ ನಡೆಸಿದಾಗ, ಕುಟುಂಬಸ್ಥರೇ (ಹೆತ್ತ ತಾಯಿಯೇ) ಸಂತ್ರಸ್ತ ಬಾಕಿಯನ್ನು ಹತ್ಯೆ ಮಾಡಿರುವುದು ಬಯಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ತಾಯಿ, ಇಬ್ಬರು ಸಹೋದರರು ಮತ್ತು ಮಾವ ಸಂಚು ರೂಪಿಸಿ ಗುಂಡಿಕ್ಕಿ ಬಾಲಕಿಯನ್ನು ಹತ್ಯೆ ಮಾಡಿದ್ದಾರೆ ಎಂದು ವರದಿ ತಿಳಿಸಿದೆ.

ಕಳೆದ ವಾರ ಬಾಲಕಿಯ ಕೊಲೆ ನಡೆದ ಸಂದರ್ಭ, ಆಕೆಯ ತಾಯಿ ಮತ್ತು ಸಹೋದರ ಜೊತೆಗಿದ್ದರು. ಆದರೆ, ಅವರಿಗೆ ಯಾವುದೇ ಗಾಯಗಳಾಗಿರಲಿಲ್ಲ. ಕೊಲೆಗಾರ ಬಾಲಕಿಯನ್ನೇ ಗುರಿಯಾಗಿಸಿದ್ದ ಎಂದು ವರದಿಗಳು ಹೇಳಿತ್ತು. ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಪೊಲೀಸರು ತನಿಖೆ ನಡೆಸುವುದಾಗಿ ತಿಳಿಸಿದ್ದರು. ಇದೀಗ ತನಿಖೆಯಿಂದ ಸತ್ಯ ಬಯಲಾಗಿದೆ.

ಬಾಲಕಿಯ ಅತ್ಯಾಚಾರ ಆರೋಪಿ ರಿಂಕು ಕುಮಾರ್ ಎಂಬಾತ ಹತ್ಯೆ ಮಾಡಿದ್ದ ಎಂದು ಆರಂಭದಲ್ಲಿ ಹೇಳಲಾಗಿತ್ತು. ಆದರೆ, ಕೊಲೆ ನಡೆದಾಗ ಆತ ಆಸ್ಪತ್ರೆಯಲ್ಲಿರುವ ತನ್ನ ತಂದೆಯ ಜೊತೆಗಿದ್ದ ಸಿಸಿಟಿವಿ ವಿಡಿಯೋಗಳು ಹರಿದಾಡಿದ್ದವು. ಇದು ತನಿಖೆಯ ದಿಕ್ಕನ್ನೇ ಬದಲಿಸಿತ್ತು.

ತನಿಖೆ ಮುಂದುವರೆಸಿದ ಪೊಲೀಸರು, ಸಂತ್ರಸ್ತೆಯ ಕುಟುಂಬದವರನ್ನೇ ವಿಚಾರಣೆಗೆ ಒಳಪಡಿಸಿದ್ದರು. ಆಗ ತಾಯಿಯೇ ಮಗಳ ಹತ್ಯೆಗೆ ಸಂಚು ರೂಪಿಸಿದ ವಿಷಯ ಬೆಳಕಿಗೆ ಬಂದಿದೆ. ಈ ಮೊದಲು ರಿಂಕು ಜೊತೆ ಮಗಳು ತೆರಳಿದ್ದಳು, ಹಾಗಾಗಿ, ಆಕೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಆತನ ವಿರುದ್ಧ ಸಾಕ್ಷ್ಯ ಹೇಳಲಾರಳಲು ಎಂಬ ಭೀತಿಯಿಂದ ಈ ಕೃತ್ಯ ಎಸಗಿದ್ದಾಗಿ ವಿಚಾರಣೆಯಿಂದ ಗೊತ್ತಾಗಿದೆ.

ತಾಯಿ ತನ್ನ ಮಗಳನ್ನು ಇತ್ತೀಚೆಗೆ ಗಾಝಿಯಾಬಾದ್‌ನಿಂದ ಕರೆ ತಂದಿದ್ದಳು. ಸಂಭಾಲ್‌ನ ಮನೆಗೆ ವಾಪಸ್ಸಾದಾಗ, ಸಂಬಂಧಿಕರ ಮನೆಗೆ ಹೋಗುವಂತೆ ಮನವೊಲಿಸಿ ಸಹೋದರನ ಜೊತೆ ಬೈಕ್‌ನಲ್ಲಿ ಕರೆದೊಯ್ದಿದ್ದಳು. ಮಾವ ದಾರಿಯಲ್ಲಿ ಬಂದೂಕು ಹಿಡಿದು ನಿಂತಿದ್ದಾನೆ ಎನ್ನುವ ಅರಿವು ಇಲ್ಲದೇ ಹೋಗುತ್ತಿದ್ದ ಬಾಲಕಿಯ ಮೇಲೆ ಮೂರು ಸುತ್ತು ಗುಂಡು ಹಾರಿಸಿದ ಚಿಕ್ಕಪ್ಪ, ಸಾಯಿಸಿದ್ದ ಎನ್ನುವುದು ತನಿಖೆಯಿಂದ ದೃಢಪಟ್ಟಿದೆ ಎಂದು ಪೊಲೀಸರು ವಿವರಿಸಿದ್ದಾರೆ.

ಮಗಳು ಕುಟುಂಬಕ್ಕೆ ಅವಮಾನ ತರಬಹುದು ಎಂದು ಹೆತ್ತ ತಾಯಿಯೇ ಮುಂದೆ ನಿಂತು ಕೊಲೆ ಮಾಡಿಸಿದ್ದಾರೆ. ದುಷ್ಕೃತ್ಯಕ್ಕೆ ಆಕೆಯ ಮಾವ ಮತ್ತು ಇಬ್ಬರು ಸಹೋದರರು ಸಹಕರಿಸಿದ್ದಾರೆ ಎಂದು ಸಂಭಾಲ್ ಎಸ್ಪಿ ಕ್ರಿಶನ್ ಕುಮಾರ್ ಹೇಳಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ಹೇಳಿದೆ.

ಬಾಲಕಿಯ ಕೊಲೆ ನಡೆದ ಕೆಲವೇ ದಿನಗಳಲ್ಲಿ, ಆಕೆಯ ಅತ್ಯಾಚಾರ ಆರೋಪಿ ರಿಂಕು ಕುಮಾರ್‌ನ ತಂದೆ ಸಾವನ್ನಪ್ಪಿದ್ದಾರೆ. ನಾವು ಆಸ್ಪತ್ರೆಯ ಸಿಸಿಟಿವಿ ಪರಿಶೀಲಿಸಿದಾಗ, ಕೊಲೆ ನಡೆದ ಸಂದರ್ಭ ರಿಂಕು ಕುಮಾರ್ ತಂದೆಯ ಜೊತೆಗಿದ್ದ. ಇದು ನಮ್ಮ ತನಿಖೆಯ ದಿಕ್ಕನ್ನು ಬದಲಿಸಿತು. ಕುಟುಂಬದ ಗೌರವಕ್ಕಾಗಿ ಬಾಲಕಿಯನ್ನು ಕೊಲೆ ಮಾಡಿರುವುದಾಗಿ ಆರೋಪಿಗಳು ಹೇಳಿದ್ದಾರೆ. ಬಂಧನದ ಬಳಿಕ ಅವರಲ್ಲಿ ಕೊಲೆ ಬಗ್ಗೆ ಯಾವುದೇ ಪಶ್ಚಾತಾಪ ಕಂಡು ಬಂದಿಲ್ಲ ಎಂದು ಎಸ್ಪಿ ಕ್ರಿಶನ್ ಕುಮಾರ್ ತಿಳಿಸಿದ್ದಾರೆ ಎಂದು ವರದಿ ವಿವರಿಸಿದೆ.

ಬಾಲಕಿಯ ಹತ್ಯೆಯ ಕುರಿತ ವರದಿ ಕೆಳಗಿದೆ 

ಜಾಮೀನಿನ ಮೇಲೆ ಹೊರ ಬಂದಿದ್ದ ಅತ್ಯಾಚಾರ ಆರೋಪಿಯಿಂದ ಸಂತ್ರಸ್ತೆಯ ಗುಂಡಿಕ್ಕಿ ಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನರೇಗಾ ಹೆಸರು ಬದಲಾವಣೆಯು ರಾಜ್ಯಗಳ ಸ್ವಾಯತ್ತತೆ, ಅಂಚಿನ ಸಮುದಾಯಗಳ ಹಕ್ಕಿನ ಮೇಲೆ ನೇರ ದಾಳಿ: ರಾಹುಲ್

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಹೆಸರು ಬದಲಾವಣೆಯು ರಾಜ್ಯಗಳ ಹಕ್ಕುಗಳನ್ನು ದುರ್ಬಲಗೊಳಿಸುತ್ತಿದೆ. ಅಂಚಿನ ಸಮುದಾಯಗಳ ಹಕ್ಕಿನ ಮೇಲೆ ನೇರವಾಗಿ ದಾಳಿ ಮಾಡಲಾಗುತ್ತಿದೆ ಎಂದು ಲೋಕಸಭೆ ವಿರೋಧ ಪಕ್ಷದ...

‘2025ರಲ್ಲಿ ಗಾಜಾ ಪತ್ರಕರ್ತರಿಗೆ ವಿಶ್ವದ ಅತ್ಯಂತ ಅಪಾಯಕಾರಿ ಸ್ಥಳವಾಯಿತು’: ಪ್ಯಾಲೆಸ್ಟೀನಿಯನ್ ಪತ್ರಕರ್ತರ ಒಕ್ಕೂಟ

ಪ್ಯಾಲೆಸ್ಟೀನಿಯನ್ ಪತ್ರಕರ್ತರ ವಿರುದ್ಧ ಇಸ್ರೇಲ್‌ನ ವ್ಯವಸ್ಥಿತ ಹಿಂಸಾಚಾರ ಅಭಿಯಾನವು ಅಕ್ಟೋಬರ್ 2023 ರಿಂದ ನಡೆಯುತ್ತಿದೆ, ಇದು 2025 ರಲ್ಲಿ ಅತ್ಯಂತ ಮಾರಕ ಸ್ಥಿತಿಗೆ ತಲುಪಿತು. ಡಜನ್‌ಗಟ್ಟಲೆ ಮಾಧ್ಯಮ ಕಾರ್ಯಕರ್ತರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ದಾಳಿ...

ಗಡಿ ಘರ್ಷಣೆ ಕೊನೆಗೊಳಿಸಿದ ಥೈಲ್ಯಾಂಡ್ ಮತ್ತು ಕಾಂಬೋಡಿಯಾ: ತಕ್ಷಣದ ಕದನ ವಿರಾಮಕ್ಕೆ ಎರಡು ದೇಶಗಳ ಒಪ್ಪಿಗೆ

ಥೈಲ್ಯಾಂಡ್ ಮತ್ತು ಕಾಂಬೋಡಿಯಾಗಳು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ, ಇದು ಇತ್ತೀಚಿನ ಗಡಿ ಘರ್ಷಣೆಗಳ ನಂತರದ ಉದ್ವಿಗ್ನತೆಯನ್ನು ಕಡಿಮೆ ಮಾಡುವತ್ತ ಒಂದು ಪ್ರಮುಖ ಹೆಜ್ಜೆಯಾಗಿದೆ.  ಶನಿವಾರ ಎರಡೂ ದೇಶಗಳ ರಕ್ಷಣಾ ಸಚಿವರು ಸಹಿ ಮಾಡಿದ...

‘ಬಡವರ ಹೊಟ್ಟೆಗೆ ಒದ್ದ ನಂತರ, ಮೋದಿ ಸರ್ಕಾರ ಅವರ ಬೆನ್ನಿಗೆ ಚೂರಿ ಹಾಕಿದೆ’: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಯುಪಿಎಯ ದೂರದೃಷ್ಟಿಯ ಕಾರ್ಯಕ್ರಮವಾದ ಎಂಜಿಎನ್‌ಆರ್‌ಇಜಿಎಯನ್ನು ರದ್ದುಗೊಳಿಸುವ ಮೂಲಕ ಅವರು "ಬಡವರ ಹೊಟ್ಟೆಗೆ...

ಕರ್ನಾಟಕದ ವಿಚಾರದಲ್ಲಿ ಪಿಣರಾಯಿ ವಿಜಯನ್ ಹಸ್ತಕ್ಷೇಪ ಮಾಡಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್

"ಕೋಗಿಲು ಬಡಾವಣೆಯಲ್ಲಿ ಅಕ್ರಮ ಒತ್ತುವರಿ ಪ್ರದೇಶ ನೆಲಸಮಗೊಳಿಸಿರುವ ಪ್ರಕರಣದಲ್ಲಿ ಸತ್ಯಾಸತ್ಯತೆ ಅರಿಯದೇ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಕರ್ನಾಟಕ ವಿಚಾರದಲ್ಲಿ ಹಸ್ತಕ್ಷೇಪ ಮಾಡಬಾರದು" ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು...

ಮಧ್ಯಪ್ರದೇಶ| ಬಿಜೆಪಿ ನಾಯಕಿ ಮಗನ ಮೇಲೆ ಅತ್ಯಾಚಾರ ಆರೋಪ; ವಿಷ ಸೇವಿಸಿದ ಸಂತ್ರಸ್ತೆ ಸ್ಥಿತಿ ಗಂಭೀರ

ಮಧ್ಯಪ್ರದೇಶದ ಶಿವಪುರಿ ನಗರ ಸಭೆಯ ಅಧ್ಯಕ್ಷೆ ಮತ್ತು ಬಿಜೆಪಿ ನಾಯಕಿ ಗಾಯತ್ರಿ ಶರ್ಮಾ ಅವರ ಪುತ್ರ ರಜತ್ ಶರ್ಮಾ ವಿರುದ್ಧ ಏಪ್ರಿಲ್ 30 ರಂದು ಎಫ್‌ಐಆರ್ ದಾಖಲಿಸಿದ್ದ ಮಹಿಳೆಯ ಆರೋಗ್ಯ ಹದಗೆಟ್ಟ ನಂತರ...

ದೆಹಲಿಯಲ್ಲಿ ಹೊಸ ವರ್ಷಕ್ಕೂ ಮುನ್ನ ಬೃಹತ್ ಕಾರ್ಯಾಚರಣೆ: 285 ಜನರ ಬಂಧನ, ಶಸ್ತ್ರಾಸ್ತ್ರಗಳು ಮತ್ತು ಮಾದಕ ವಸ್ತುಗಳ ವಶ

ದೆಹಲಿ ಹೊಸ ವರ್ಷಾಚರಣೆಗೆ ಸಜ್ಜಾಗುತ್ತಿದ್ದಂತೆ, ಹಬ್ಬದ ದಟ್ಟಣೆಯಲ್ಲಿ ಅಪರಾಧಗಳನ್ನು ತಡೆಗಟ್ಟುವ ಪ್ರಯತ್ನದಲ್ಲಿ, ಪೊಲೀಸರು ರಾಷ್ಟ್ರ ರಾಜಧಾನಿಯಾದ್ಯಂತ ರಾತ್ರಿಯಿಡೀ ವಿಸ್ತೃತ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ನೂರಾರು ಆರೋಪಿಗಳನ್ನು ಬಂಧಿಸಿದ್ದು, ಅಕ್ರಮ ಶಸ್ತ್ರಾಸ್ತ್ರಗಳು, ಮಾದಕ...

ಅತ್ಯಾಚಾರಿ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತು; ದೆಹಲಿ ಹೈಕೋರ್ಟ್ ಮುಂದೆ ಸಂತ್ರಸ್ತೆ ತಾಯಿ ಪ್ರತಿಭಟನೆ

ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ನ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ದೆಹಲಿ ಹೈಕೋರ್ಟ್ ಹೊರಗೆ ಶುಕ್ರವಾರ (ಡಿ.26) ಪ್ರತಿಭಟನೆ ನಡೆಸಲಾಯಿತು. ಸೆಂಗಾರ್‌ಗೆ ನಿಡುರವ ಜಾಮೀನು ತಿರಸ್ಕರಿಸಬೇಕೆಂದು...

‘ಉತ್ತರ ಪ್ರದೇಶದ ಗಾಳಿ ಕರ್ನಾಟಕಕ್ಕೂ ಬೀಸಿದೆ, ಬುಲ್ಡೋಜರ್ ನೀತಿ ಇಲ್ಲೂ ಜಾರಿ ಮಾಡುವ ಕೆಲಸ ನಡೆಯುತ್ತಿದೆ: ಪಿಣರಾಯಿ ವಿಜಯನ್ ಟೀಕೆ

ಬೆಂಗಳೂರು: ಕರ್ನಾಟಕ ಸರ್ಕಾರಕ್ಕೂ ಉತ್ತರ ಪ್ರದೇಶ ಸರ್ಕಾರದ ಗಾಳಿ ಬಿಸಿದೆ. ಅಲ್ಲಿನ ಬುಲ್ಡೋಜರ್ ನೀತಿಯನ್ನು ಇಲ್ಲೂ ತರುವ ಕೆಲಸ ನಡೆಯುತ್ತಿದೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕರ್ನಾಟಕದ ಕಾಂಗ್ರೆಸ್​​​ ಸರ್ಕಾರದ ವಿರುದ್ಧ...

ಡೆಹ್ರಾಡೂನ್‌ನಲ್ಲಿ ಜನಾಂಗೀಯ ದಾಳಿ; ಚಾಕು ಇರಿತಕ್ಕೆ ಒಳಗಾಗಿದ್ದ ತ್ರಿಪುರ ವಿದ್ಯಾರ್ಥಿ ಸಾವು

ಜನಾಂಗೀಯ ನಿಂದನೆಯಿಂದ ಪ್ರಾರಂಭವಾಯಿತು ಎನ್ನಲಾದ ಜಗಳವು ಹಿಂಸಾತ್ಮಕ ಪ್ರತಿಭಟನೆಗೆ ತಿರುಗಿದ್ದು, ಚಾಕು ಇರಿತದ ನಂತರ ತ್ರಿಪುರದ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಉತ್ತರಾಖಂಡ್ ಆಸ್ಪತ್ರೆಯಲ್ಲಿ ಎರಡು ವಾರಗಳಿಗೂ ಹೆಚ್ಚು ಕಾಲ ಚಿಕಿತ್ಸೆ ಪಡೆಯುತ್ತಿದ್ದ...