Homeಮುಖಪುಟಕುಟುಂಬದಿಂದಲೇ ಅತ್ಯಾಚಾರ ಸಂತ್ರಸ್ತೆಯ ಹತ್ಯೆ : ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿ ವಿರುದ್ದ ದೂರು

ಕುಟುಂಬದಿಂದಲೇ ಅತ್ಯಾಚಾರ ಸಂತ್ರಸ್ತೆಯ ಹತ್ಯೆ : ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿ ವಿರುದ್ದ ದೂರು

ಹೆತ್ತ ತಾಯಿಯೇ ಮುಂದೆ ನಿಂತು ಕೊಲೆ ಮಾಡಿಸಿದ್ದಾರೆ ಎಂದ ಪೊಲೀಸರು!

- Advertisement -
- Advertisement -

ಉತ್ತರ ಪ್ರದೇಶದ ಸಂಭಾಲ್‌ ಜಿಲ್ಲೆಯಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದ ಅತ್ಯಾಚಾರ ಆರೋಪಿ ಅಪ್ರಾಪ್ತ ಸಂತ್ರಸ್ತೆಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ ಎಂದು ಕಳೆದ ವಾರ ವರದಿಯಾಗಿತ್ತು. ಆದರೆ, ಈಗ ಈ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ.

ಪೊಲೀಸರು ಪ್ರಕರಣದ ಕುರಿತು ಅಳವಾದ ತನಿಖೆ ನಡೆಸಿದಾಗ, ಕುಟುಂಬಸ್ಥರೇ (ಹೆತ್ತ ತಾಯಿಯೇ) ಸಂತ್ರಸ್ತ ಬಾಕಿಯನ್ನು ಹತ್ಯೆ ಮಾಡಿರುವುದು ಬಯಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ತಾಯಿ, ಇಬ್ಬರು ಸಹೋದರರು ಮತ್ತು ಮಾವ ಸಂಚು ರೂಪಿಸಿ ಗುಂಡಿಕ್ಕಿ ಬಾಲಕಿಯನ್ನು ಹತ್ಯೆ ಮಾಡಿದ್ದಾರೆ ಎಂದು ವರದಿ ತಿಳಿಸಿದೆ.

ಕಳೆದ ವಾರ ಬಾಲಕಿಯ ಕೊಲೆ ನಡೆದ ಸಂದರ್ಭ, ಆಕೆಯ ತಾಯಿ ಮತ್ತು ಸಹೋದರ ಜೊತೆಗಿದ್ದರು. ಆದರೆ, ಅವರಿಗೆ ಯಾವುದೇ ಗಾಯಗಳಾಗಿರಲಿಲ್ಲ. ಕೊಲೆಗಾರ ಬಾಲಕಿಯನ್ನೇ ಗುರಿಯಾಗಿಸಿದ್ದ ಎಂದು ವರದಿಗಳು ಹೇಳಿತ್ತು. ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಪೊಲೀಸರು ತನಿಖೆ ನಡೆಸುವುದಾಗಿ ತಿಳಿಸಿದ್ದರು. ಇದೀಗ ತನಿಖೆಯಿಂದ ಸತ್ಯ ಬಯಲಾಗಿದೆ.

ಬಾಲಕಿಯ ಅತ್ಯಾಚಾರ ಆರೋಪಿ ರಿಂಕು ಕುಮಾರ್ ಎಂಬಾತ ಹತ್ಯೆ ಮಾಡಿದ್ದ ಎಂದು ಆರಂಭದಲ್ಲಿ ಹೇಳಲಾಗಿತ್ತು. ಆದರೆ, ಕೊಲೆ ನಡೆದಾಗ ಆತ ಆಸ್ಪತ್ರೆಯಲ್ಲಿರುವ ತನ್ನ ತಂದೆಯ ಜೊತೆಗಿದ್ದ ಸಿಸಿಟಿವಿ ವಿಡಿಯೋಗಳು ಹರಿದಾಡಿದ್ದವು. ಇದು ತನಿಖೆಯ ದಿಕ್ಕನ್ನೇ ಬದಲಿಸಿತ್ತು.

ತನಿಖೆ ಮುಂದುವರೆಸಿದ ಪೊಲೀಸರು, ಸಂತ್ರಸ್ತೆಯ ಕುಟುಂಬದವರನ್ನೇ ವಿಚಾರಣೆಗೆ ಒಳಪಡಿಸಿದ್ದರು. ಆಗ ತಾಯಿಯೇ ಮಗಳ ಹತ್ಯೆಗೆ ಸಂಚು ರೂಪಿಸಿದ ವಿಷಯ ಬೆಳಕಿಗೆ ಬಂದಿದೆ. ಈ ಮೊದಲು ರಿಂಕು ಜೊತೆ ಮಗಳು ತೆರಳಿದ್ದಳು, ಹಾಗಾಗಿ, ಆಕೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಆತನ ವಿರುದ್ಧ ಸಾಕ್ಷ್ಯ ಹೇಳಲಾರಳಲು ಎಂಬ ಭೀತಿಯಿಂದ ಈ ಕೃತ್ಯ ಎಸಗಿದ್ದಾಗಿ ವಿಚಾರಣೆಯಿಂದ ಗೊತ್ತಾಗಿದೆ.

ತಾಯಿ ತನ್ನ ಮಗಳನ್ನು ಇತ್ತೀಚೆಗೆ ಗಾಝಿಯಾಬಾದ್‌ನಿಂದ ಕರೆ ತಂದಿದ್ದಳು. ಸಂಭಾಲ್‌ನ ಮನೆಗೆ ವಾಪಸ್ಸಾದಾಗ, ಸಂಬಂಧಿಕರ ಮನೆಗೆ ಹೋಗುವಂತೆ ಮನವೊಲಿಸಿ ಸಹೋದರನ ಜೊತೆ ಬೈಕ್‌ನಲ್ಲಿ ಕರೆದೊಯ್ದಿದ್ದಳು. ಮಾವ ದಾರಿಯಲ್ಲಿ ಬಂದೂಕು ಹಿಡಿದು ನಿಂತಿದ್ದಾನೆ ಎನ್ನುವ ಅರಿವು ಇಲ್ಲದೇ ಹೋಗುತ್ತಿದ್ದ ಬಾಲಕಿಯ ಮೇಲೆ ಮೂರು ಸುತ್ತು ಗುಂಡು ಹಾರಿಸಿದ ಚಿಕ್ಕಪ್ಪ, ಸಾಯಿಸಿದ್ದ ಎನ್ನುವುದು ತನಿಖೆಯಿಂದ ದೃಢಪಟ್ಟಿದೆ ಎಂದು ಪೊಲೀಸರು ವಿವರಿಸಿದ್ದಾರೆ.

ಮಗಳು ಕುಟುಂಬಕ್ಕೆ ಅವಮಾನ ತರಬಹುದು ಎಂದು ಹೆತ್ತ ತಾಯಿಯೇ ಮುಂದೆ ನಿಂತು ಕೊಲೆ ಮಾಡಿಸಿದ್ದಾರೆ. ದುಷ್ಕೃತ್ಯಕ್ಕೆ ಆಕೆಯ ಮಾವ ಮತ್ತು ಇಬ್ಬರು ಸಹೋದರರು ಸಹಕರಿಸಿದ್ದಾರೆ ಎಂದು ಸಂಭಾಲ್ ಎಸ್ಪಿ ಕ್ರಿಶನ್ ಕುಮಾರ್ ಹೇಳಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ಹೇಳಿದೆ.

ಬಾಲಕಿಯ ಕೊಲೆ ನಡೆದ ಕೆಲವೇ ದಿನಗಳಲ್ಲಿ, ಆಕೆಯ ಅತ್ಯಾಚಾರ ಆರೋಪಿ ರಿಂಕು ಕುಮಾರ್‌ನ ತಂದೆ ಸಾವನ್ನಪ್ಪಿದ್ದಾರೆ. ನಾವು ಆಸ್ಪತ್ರೆಯ ಸಿಸಿಟಿವಿ ಪರಿಶೀಲಿಸಿದಾಗ, ಕೊಲೆ ನಡೆದ ಸಂದರ್ಭ ರಿಂಕು ಕುಮಾರ್ ತಂದೆಯ ಜೊತೆಗಿದ್ದ. ಇದು ನಮ್ಮ ತನಿಖೆಯ ದಿಕ್ಕನ್ನು ಬದಲಿಸಿತು. ಕುಟುಂಬದ ಗೌರವಕ್ಕಾಗಿ ಬಾಲಕಿಯನ್ನು ಕೊಲೆ ಮಾಡಿರುವುದಾಗಿ ಆರೋಪಿಗಳು ಹೇಳಿದ್ದಾರೆ. ಬಂಧನದ ಬಳಿಕ ಅವರಲ್ಲಿ ಕೊಲೆ ಬಗ್ಗೆ ಯಾವುದೇ ಪಶ್ಚಾತಾಪ ಕಂಡು ಬಂದಿಲ್ಲ ಎಂದು ಎಸ್ಪಿ ಕ್ರಿಶನ್ ಕುಮಾರ್ ತಿಳಿಸಿದ್ದಾರೆ ಎಂದು ವರದಿ ವಿವರಿಸಿದೆ.

ಬಾಲಕಿಯ ಹತ್ಯೆಯ ಕುರಿತ ವರದಿ ಕೆಳಗಿದೆ 

ಜಾಮೀನಿನ ಮೇಲೆ ಹೊರ ಬಂದಿದ್ದ ಅತ್ಯಾಚಾರ ಆರೋಪಿಯಿಂದ ಸಂತ್ರಸ್ತೆಯ ಗುಂಡಿಕ್ಕಿ ಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ವ್ಯಾಪಾರ ಒಪ್ಪಂದದ ಹೆಸರಿನಲ್ಲಿ ಭಾರತದ ರೈತರಿಗೆ ದ್ರೋಹ : ರಾಹುಲ್ ಗಾಂಧಿ

ಭಾರತ–ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ, ಭಾರತೀಯ ರೈತರಿಗೆ ದ್ರೋಹ ಬಗೆಯಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಭಾನುವಾರ (ಫೆ.15) ಪೋಸ್ಟ್ ಹಾಕಿರುವ...

ಬಂಗಾಳ: ಎಸ್‌ಐಆರ್ ವಿಚಾರಣೆಗೆಂದು ಕರೆ ಮಾಡಿ ವ್ಯಕ್ತಿಯನ್ನು ಕೊಂದು, ಕತ್ತರಿಸಿ, ಮೂರು ಚೀಲಗಳಲ್ಲಿ ಕಾಲುವೆಗೆ ಎಸೆದ ಬಿಎಲ್‌ಒ ಬಂಧನ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ 36 ವರ್ಷದ ವ್ಯಕ್ತಿಯೊಬ್ಬರ ಭೀಕರ ಕೊಲೆ ಮತ್ತು ಛಿದ್ರಛೇದನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ...

ಫೆ.17ರಂದು ತಾರಿಖ್ ರೆಹಮಾನ್ ಪ್ರಮಾಣವಚನ : ಪ್ರಧಾನಿ ಮೋದಿಗೆ ಆಹ್ವಾನ

ವಿದ್ಯಾರ್ಥಿ ದಂಗೆ, ಆಡಳಿತ ಅಸ್ಥಿರತೆಯ ಬಳಿಕ ಬಾಂಗ್ಲಾದೇಶದಲ್ಲಿ ಹೊಸ ಸರ್ಕಾರ ರಚನೆಗೆ ಸಿದ್ದತೆಗಳು ನಡೆದಿದ್ದು, ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಮುಖ್ಯಸ್ಥ ತಾರಿಖ್ ರೆಹಮಾನ್ ನೂತನ ಪ್ರಧಾನಿಯಾಗಿ ಮಂಗಳವಾರ (ಫೆ.17) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೊಸ...

ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಮಾರ್ಚ್ 9ರಂದು ಚರ್ಚೆ : ಸಚಿವ ಕಿರಣ್ ರಿಜಿಜು

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ಮತ್ತು ಮತ ಚಲಾವಣೆ ಮಾರ್ಚ್ 9ರಂದು ನಡೆಯಲಿದೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಭಾನುವಾರ...

ಭಯೋತ್ಪಾದಕರ ಸಂಪರ್ಕ ಶಂಕೆ: ಮಹಾರಾಷ್ಟ್ರದ 21 ಸ್ಥಳಗಳಲ್ಲಿ ದಾಳಿ ನಡೆಸಿದ ಎಟಿಎಸ್

ಮುಂಬೈ: ಉಗ್ರಗಾಮಿ ಚಟುವಟಿಕೆಗಳ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ನಂತರ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಭಾನುವಾರ ಬೆಳಿಗ್ಗೆ ಸುಮಾರು 21 ಸ್ಥಳಗಳಲ್ಲಿ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಯಾವತ್ಮಲ್ ಮತ್ತು ಅಹಲ್ಯಾನಗರ...

ಮೋದಿ ನೀತಿಗಳನ್ನು ಟೀಕಿಸಿದ್ದ ನನ್ನ ಭಾಷಣದ ಭಾಗಗಳನ್ನು ರಾಜ್ಯಸಭೆ ಕಡತದಿಂದ ತೆಗೆಯಲಾಗಿದೆ : ಮಲ್ಲಿಕಾರ್ಜುನ ಖರ್ಗೆ

ಫೆಬ್ರವರಿ 4ರಂದು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ಸಂದರ್ಭದಲ್ಲಿ ತಾನು ಮಾಡಿದ್ದ ಭಾಷಣದ ಬಹುಪಾಲು ಅಂಶಗಳನ್ನು ಯಾವುದೇ ಸಮರ್ಪಕ ಕಾರಣ ನೀಡದೆ ರಾಜ್ಯಸಭೆಯ ಅಧಿಕೃತ ದಾಖಲೆಗಳಿಂದ ತೆಗೆದುಹಾಕಲಾಗಿದೆ ಎಂದು ವಿರೋಧ...

ಬೌದ್ಧಿಕ ದಾರಿದ್ರ್ಯ ಮತ್ತು ಸಾಂಸ್ಥಿಕ ಹತ್ಯೆಗಳು: ಡಾ.ಪಿ. ನಂದಕುಮಾರ 

                                                      ಸಂವಿಧಾನ ವಿರೋಧಿ ಹಾಗೂ ದಲಿತ, ಹಿಂದುಳಿದ, ಮಹಿಳೆಯರ ಹಕ್ಕುಗಳ ಅಂದಿನ ಮನುವಾದಿ  ಆರ್ಯಪಳೆಯುಳಿಕೆಗಳೆ ಇಂದೂ ಯುಜಿಸಿ- 2026ರ ಕರಡು ವಿರುದ್ಧ ಷಂಡ್ಯಂತ್ರ ರೂಪಿಸುತ್ತಿರುವುದು. ಕೇವಲ 3% ಜನಾಭಿಪ್ರಾಯವೇ ಭಾರತೀಯ ಒಟ್ಟು ಬಹುಸಮುದಾಯಗಳ ಅಭಿಪ್ರಾಯವೆಂಬಂತೆ...

ಬಾಗಲಕೋಟೆ : ಇಳಕಲ್ ಬಳಿಯ ಇಟ್ಟಿಗೆ ಭಟ್ಟಿಯಿಂದ 34 ಜೀತದಾಳುಗಳ ರಕ್ಷಣೆ

ಬಾಗಲಕೋಟೆ ಜಿಲ್ಲೆ ಇಳಕಲ್ ತಾಲೂಕಿನ ಸಂಕ್ಲಾಪೂರ ಗ್ರಾಮದ ಇಟ್ಟಿಗೆ ಗೂಡುಗಳಲ್ಲಿ ಜೀತಕ್ಕಿದ್ದ ಐವರು ಮಕ್ಕಳು ಸೇರಿದಂತೆ 34 ಮಂದಿ ಒಡಿಶಾ ಮೂಲದ ಕಾರ್ಮಿಕರನ್ನು ಮಂಗಳವಾರ (ಫೆ.10,2026) ರಕ್ಷಿಸಲಾಗಿದೆ. ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿ.ಮೀ...

ಅಮೆರಿಕದ ಕ್ಯಾಲಿಫೋರ್ನಿಯದಲ್ಲಿ ಕಾಣೆಯಾಗಿದ್ದ ಕರ್ನಾಟಕ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಮೃತದೇಹ ಪತ್ತೆ

ನವದೆಹಲಿ: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಮೃತದೇಹ ಪತ್ತೆಯಾಗಿದೆ ಎಂದು ಭಾರತದ ಕಾನ್ಸುಲೇಟ್ ಅಧಿಕಾರಿಗಳು ತಿಳಿಸಿದ್ದಾರೆ.   ಈ ಕುರಿತು ಭಾರತದ ಕಾನ್ಸುಲೇಟ್ ಜನರಲ್ ಪ್ರಕಟಣೆ ಹೊರಡಿಸಿದ್ದು, ಸ್ಥಳೀಯ ಪೊಲೀಸರು...

ಬೆಂಗಳೂರು | ಡಿವೈಡರ್ ಹಾರಿ ಬಸ್‌ಗೆ ಡಿಕ್ಕಿ ಹೊಡೆದ ಕಾರು : ಐವರು ಸಾವು

ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಎದುರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಯುವಕರು ಸಾವಿಗೀಡಾದ ಘಟನೆ ಬೆಂಗಳೂರಿನ ನೆಲಮಂಗಲದ ಜಿಂದಾಲ್‌ ಸಂಸ್ಥೆಯ ಬಳಿ...