Homeಮುಖಪುಟಕುಟುಂಬದಿಂದಲೇ ಅತ್ಯಾಚಾರ ಸಂತ್ರಸ್ತೆಯ ಹತ್ಯೆ : ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿ ವಿರುದ್ದ ದೂರು

ಕುಟುಂಬದಿಂದಲೇ ಅತ್ಯಾಚಾರ ಸಂತ್ರಸ್ತೆಯ ಹತ್ಯೆ : ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿ ವಿರುದ್ದ ದೂರು

ಹೆತ್ತ ತಾಯಿಯೇ ಮುಂದೆ ನಿಂತು ಕೊಲೆ ಮಾಡಿಸಿದ್ದಾರೆ ಎಂದ ಪೊಲೀಸರು!

- Advertisement -
- Advertisement -

ಉತ್ತರ ಪ್ರದೇಶದ ಸಂಭಾಲ್‌ ಜಿಲ್ಲೆಯಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದ ಅತ್ಯಾಚಾರ ಆರೋಪಿ ಅಪ್ರಾಪ್ತ ಸಂತ್ರಸ್ತೆಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ ಎಂದು ಕಳೆದ ವಾರ ವರದಿಯಾಗಿತ್ತು. ಆದರೆ, ಈಗ ಈ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ.

ಪೊಲೀಸರು ಪ್ರಕರಣದ ಕುರಿತು ಅಳವಾದ ತನಿಖೆ ನಡೆಸಿದಾಗ, ಕುಟುಂಬಸ್ಥರೇ (ಹೆತ್ತ ತಾಯಿಯೇ) ಸಂತ್ರಸ್ತ ಬಾಕಿಯನ್ನು ಹತ್ಯೆ ಮಾಡಿರುವುದು ಬಯಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ತಾಯಿ, ಇಬ್ಬರು ಸಹೋದರರು ಮತ್ತು ಮಾವ ಸಂಚು ರೂಪಿಸಿ ಗುಂಡಿಕ್ಕಿ ಬಾಲಕಿಯನ್ನು ಹತ್ಯೆ ಮಾಡಿದ್ದಾರೆ ಎಂದು ವರದಿ ತಿಳಿಸಿದೆ.

ಕಳೆದ ವಾರ ಬಾಲಕಿಯ ಕೊಲೆ ನಡೆದ ಸಂದರ್ಭ, ಆಕೆಯ ತಾಯಿ ಮತ್ತು ಸಹೋದರ ಜೊತೆಗಿದ್ದರು. ಆದರೆ, ಅವರಿಗೆ ಯಾವುದೇ ಗಾಯಗಳಾಗಿರಲಿಲ್ಲ. ಕೊಲೆಗಾರ ಬಾಲಕಿಯನ್ನೇ ಗುರಿಯಾಗಿಸಿದ್ದ ಎಂದು ವರದಿಗಳು ಹೇಳಿತ್ತು. ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಪೊಲೀಸರು ತನಿಖೆ ನಡೆಸುವುದಾಗಿ ತಿಳಿಸಿದ್ದರು. ಇದೀಗ ತನಿಖೆಯಿಂದ ಸತ್ಯ ಬಯಲಾಗಿದೆ.

ಬಾಲಕಿಯ ಅತ್ಯಾಚಾರ ಆರೋಪಿ ರಿಂಕು ಕುಮಾರ್ ಎಂಬಾತ ಹತ್ಯೆ ಮಾಡಿದ್ದ ಎಂದು ಆರಂಭದಲ್ಲಿ ಹೇಳಲಾಗಿತ್ತು. ಆದರೆ, ಕೊಲೆ ನಡೆದಾಗ ಆತ ಆಸ್ಪತ್ರೆಯಲ್ಲಿರುವ ತನ್ನ ತಂದೆಯ ಜೊತೆಗಿದ್ದ ಸಿಸಿಟಿವಿ ವಿಡಿಯೋಗಳು ಹರಿದಾಡಿದ್ದವು. ಇದು ತನಿಖೆಯ ದಿಕ್ಕನ್ನೇ ಬದಲಿಸಿತ್ತು.

ತನಿಖೆ ಮುಂದುವರೆಸಿದ ಪೊಲೀಸರು, ಸಂತ್ರಸ್ತೆಯ ಕುಟುಂಬದವರನ್ನೇ ವಿಚಾರಣೆಗೆ ಒಳಪಡಿಸಿದ್ದರು. ಆಗ ತಾಯಿಯೇ ಮಗಳ ಹತ್ಯೆಗೆ ಸಂಚು ರೂಪಿಸಿದ ವಿಷಯ ಬೆಳಕಿಗೆ ಬಂದಿದೆ. ಈ ಮೊದಲು ರಿಂಕು ಜೊತೆ ಮಗಳು ತೆರಳಿದ್ದಳು, ಹಾಗಾಗಿ, ಆಕೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಆತನ ವಿರುದ್ಧ ಸಾಕ್ಷ್ಯ ಹೇಳಲಾರಳಲು ಎಂಬ ಭೀತಿಯಿಂದ ಈ ಕೃತ್ಯ ಎಸಗಿದ್ದಾಗಿ ವಿಚಾರಣೆಯಿಂದ ಗೊತ್ತಾಗಿದೆ.

ತಾಯಿ ತನ್ನ ಮಗಳನ್ನು ಇತ್ತೀಚೆಗೆ ಗಾಝಿಯಾಬಾದ್‌ನಿಂದ ಕರೆ ತಂದಿದ್ದಳು. ಸಂಭಾಲ್‌ನ ಮನೆಗೆ ವಾಪಸ್ಸಾದಾಗ, ಸಂಬಂಧಿಕರ ಮನೆಗೆ ಹೋಗುವಂತೆ ಮನವೊಲಿಸಿ ಸಹೋದರನ ಜೊತೆ ಬೈಕ್‌ನಲ್ಲಿ ಕರೆದೊಯ್ದಿದ್ದಳು. ಮಾವ ದಾರಿಯಲ್ಲಿ ಬಂದೂಕು ಹಿಡಿದು ನಿಂತಿದ್ದಾನೆ ಎನ್ನುವ ಅರಿವು ಇಲ್ಲದೇ ಹೋಗುತ್ತಿದ್ದ ಬಾಲಕಿಯ ಮೇಲೆ ಮೂರು ಸುತ್ತು ಗುಂಡು ಹಾರಿಸಿದ ಚಿಕ್ಕಪ್ಪ, ಸಾಯಿಸಿದ್ದ ಎನ್ನುವುದು ತನಿಖೆಯಿಂದ ದೃಢಪಟ್ಟಿದೆ ಎಂದು ಪೊಲೀಸರು ವಿವರಿಸಿದ್ದಾರೆ.

ಮಗಳು ಕುಟುಂಬಕ್ಕೆ ಅವಮಾನ ತರಬಹುದು ಎಂದು ಹೆತ್ತ ತಾಯಿಯೇ ಮುಂದೆ ನಿಂತು ಕೊಲೆ ಮಾಡಿಸಿದ್ದಾರೆ. ದುಷ್ಕೃತ್ಯಕ್ಕೆ ಆಕೆಯ ಮಾವ ಮತ್ತು ಇಬ್ಬರು ಸಹೋದರರು ಸಹಕರಿಸಿದ್ದಾರೆ ಎಂದು ಸಂಭಾಲ್ ಎಸ್ಪಿ ಕ್ರಿಶನ್ ಕುಮಾರ್ ಹೇಳಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ಹೇಳಿದೆ.

ಬಾಲಕಿಯ ಕೊಲೆ ನಡೆದ ಕೆಲವೇ ದಿನಗಳಲ್ಲಿ, ಆಕೆಯ ಅತ್ಯಾಚಾರ ಆರೋಪಿ ರಿಂಕು ಕುಮಾರ್‌ನ ತಂದೆ ಸಾವನ್ನಪ್ಪಿದ್ದಾರೆ. ನಾವು ಆಸ್ಪತ್ರೆಯ ಸಿಸಿಟಿವಿ ಪರಿಶೀಲಿಸಿದಾಗ, ಕೊಲೆ ನಡೆದ ಸಂದರ್ಭ ರಿಂಕು ಕುಮಾರ್ ತಂದೆಯ ಜೊತೆಗಿದ್ದ. ಇದು ನಮ್ಮ ತನಿಖೆಯ ದಿಕ್ಕನ್ನು ಬದಲಿಸಿತು. ಕುಟುಂಬದ ಗೌರವಕ್ಕಾಗಿ ಬಾಲಕಿಯನ್ನು ಕೊಲೆ ಮಾಡಿರುವುದಾಗಿ ಆರೋಪಿಗಳು ಹೇಳಿದ್ದಾರೆ. ಬಂಧನದ ಬಳಿಕ ಅವರಲ್ಲಿ ಕೊಲೆ ಬಗ್ಗೆ ಯಾವುದೇ ಪಶ್ಚಾತಾಪ ಕಂಡು ಬಂದಿಲ್ಲ ಎಂದು ಎಸ್ಪಿ ಕ್ರಿಶನ್ ಕುಮಾರ್ ತಿಳಿಸಿದ್ದಾರೆ ಎಂದು ವರದಿ ವಿವರಿಸಿದೆ.

ಬಾಲಕಿಯ ಹತ್ಯೆಯ ಕುರಿತ ವರದಿ ಕೆಳಗಿದೆ 

ಜಾಮೀನಿನ ಮೇಲೆ ಹೊರ ಬಂದಿದ್ದ ಅತ್ಯಾಚಾರ ಆರೋಪಿಯಿಂದ ಸಂತ್ರಸ್ತೆಯ ಗುಂಡಿಕ್ಕಿ ಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...