Homeಮುಖಪುಟಕುಟುಂಬದಿಂದಲೇ ಅತ್ಯಾಚಾರ ಸಂತ್ರಸ್ತೆಯ ಹತ್ಯೆ : ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿ ವಿರುದ್ದ ದೂರು

ಕುಟುಂಬದಿಂದಲೇ ಅತ್ಯಾಚಾರ ಸಂತ್ರಸ್ತೆಯ ಹತ್ಯೆ : ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿ ವಿರುದ್ದ ದೂರು

ಹೆತ್ತ ತಾಯಿಯೇ ಮುಂದೆ ನಿಂತು ಕೊಲೆ ಮಾಡಿಸಿದ್ದಾರೆ ಎಂದ ಪೊಲೀಸರು!

- Advertisement -
- Advertisement -

ಉತ್ತರ ಪ್ರದೇಶದ ಸಂಭಾಲ್‌ ಜಿಲ್ಲೆಯಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದ ಅತ್ಯಾಚಾರ ಆರೋಪಿ ಅಪ್ರಾಪ್ತ ಸಂತ್ರಸ್ತೆಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ ಎಂದು ಕಳೆದ ವಾರ ವರದಿಯಾಗಿತ್ತು. ಆದರೆ, ಈಗ ಈ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ.

ಪೊಲೀಸರು ಪ್ರಕರಣದ ಕುರಿತು ಅಳವಾದ ತನಿಖೆ ನಡೆಸಿದಾಗ, ಕುಟುಂಬಸ್ಥರೇ (ಹೆತ್ತ ತಾಯಿಯೇ) ಸಂತ್ರಸ್ತ ಬಾಕಿಯನ್ನು ಹತ್ಯೆ ಮಾಡಿರುವುದು ಬಯಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ತಾಯಿ, ಇಬ್ಬರು ಸಹೋದರರು ಮತ್ತು ಮಾವ ಸಂಚು ರೂಪಿಸಿ ಗುಂಡಿಕ್ಕಿ ಬಾಲಕಿಯನ್ನು ಹತ್ಯೆ ಮಾಡಿದ್ದಾರೆ ಎಂದು ವರದಿ ತಿಳಿಸಿದೆ.

ಕಳೆದ ವಾರ ಬಾಲಕಿಯ ಕೊಲೆ ನಡೆದ ಸಂದರ್ಭ, ಆಕೆಯ ತಾಯಿ ಮತ್ತು ಸಹೋದರ ಜೊತೆಗಿದ್ದರು. ಆದರೆ, ಅವರಿಗೆ ಯಾವುದೇ ಗಾಯಗಳಾಗಿರಲಿಲ್ಲ. ಕೊಲೆಗಾರ ಬಾಲಕಿಯನ್ನೇ ಗುರಿಯಾಗಿಸಿದ್ದ ಎಂದು ವರದಿಗಳು ಹೇಳಿತ್ತು. ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಪೊಲೀಸರು ತನಿಖೆ ನಡೆಸುವುದಾಗಿ ತಿಳಿಸಿದ್ದರು. ಇದೀಗ ತನಿಖೆಯಿಂದ ಸತ್ಯ ಬಯಲಾಗಿದೆ.

ಬಾಲಕಿಯ ಅತ್ಯಾಚಾರ ಆರೋಪಿ ರಿಂಕು ಕುಮಾರ್ ಎಂಬಾತ ಹತ್ಯೆ ಮಾಡಿದ್ದ ಎಂದು ಆರಂಭದಲ್ಲಿ ಹೇಳಲಾಗಿತ್ತು. ಆದರೆ, ಕೊಲೆ ನಡೆದಾಗ ಆತ ಆಸ್ಪತ್ರೆಯಲ್ಲಿರುವ ತನ್ನ ತಂದೆಯ ಜೊತೆಗಿದ್ದ ಸಿಸಿಟಿವಿ ವಿಡಿಯೋಗಳು ಹರಿದಾಡಿದ್ದವು. ಇದು ತನಿಖೆಯ ದಿಕ್ಕನ್ನೇ ಬದಲಿಸಿತ್ತು.

ತನಿಖೆ ಮುಂದುವರೆಸಿದ ಪೊಲೀಸರು, ಸಂತ್ರಸ್ತೆಯ ಕುಟುಂಬದವರನ್ನೇ ವಿಚಾರಣೆಗೆ ಒಳಪಡಿಸಿದ್ದರು. ಆಗ ತಾಯಿಯೇ ಮಗಳ ಹತ್ಯೆಗೆ ಸಂಚು ರೂಪಿಸಿದ ವಿಷಯ ಬೆಳಕಿಗೆ ಬಂದಿದೆ. ಈ ಮೊದಲು ರಿಂಕು ಜೊತೆ ಮಗಳು ತೆರಳಿದ್ದಳು, ಹಾಗಾಗಿ, ಆಕೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಆತನ ವಿರುದ್ಧ ಸಾಕ್ಷ್ಯ ಹೇಳಲಾರಳಲು ಎಂಬ ಭೀತಿಯಿಂದ ಈ ಕೃತ್ಯ ಎಸಗಿದ್ದಾಗಿ ವಿಚಾರಣೆಯಿಂದ ಗೊತ್ತಾಗಿದೆ.

ತಾಯಿ ತನ್ನ ಮಗಳನ್ನು ಇತ್ತೀಚೆಗೆ ಗಾಝಿಯಾಬಾದ್‌ನಿಂದ ಕರೆ ತಂದಿದ್ದಳು. ಸಂಭಾಲ್‌ನ ಮನೆಗೆ ವಾಪಸ್ಸಾದಾಗ, ಸಂಬಂಧಿಕರ ಮನೆಗೆ ಹೋಗುವಂತೆ ಮನವೊಲಿಸಿ ಸಹೋದರನ ಜೊತೆ ಬೈಕ್‌ನಲ್ಲಿ ಕರೆದೊಯ್ದಿದ್ದಳು. ಮಾವ ದಾರಿಯಲ್ಲಿ ಬಂದೂಕು ಹಿಡಿದು ನಿಂತಿದ್ದಾನೆ ಎನ್ನುವ ಅರಿವು ಇಲ್ಲದೇ ಹೋಗುತ್ತಿದ್ದ ಬಾಲಕಿಯ ಮೇಲೆ ಮೂರು ಸುತ್ತು ಗುಂಡು ಹಾರಿಸಿದ ಚಿಕ್ಕಪ್ಪ, ಸಾಯಿಸಿದ್ದ ಎನ್ನುವುದು ತನಿಖೆಯಿಂದ ದೃಢಪಟ್ಟಿದೆ ಎಂದು ಪೊಲೀಸರು ವಿವರಿಸಿದ್ದಾರೆ.

ಮಗಳು ಕುಟುಂಬಕ್ಕೆ ಅವಮಾನ ತರಬಹುದು ಎಂದು ಹೆತ್ತ ತಾಯಿಯೇ ಮುಂದೆ ನಿಂತು ಕೊಲೆ ಮಾಡಿಸಿದ್ದಾರೆ. ದುಷ್ಕೃತ್ಯಕ್ಕೆ ಆಕೆಯ ಮಾವ ಮತ್ತು ಇಬ್ಬರು ಸಹೋದರರು ಸಹಕರಿಸಿದ್ದಾರೆ ಎಂದು ಸಂಭಾಲ್ ಎಸ್ಪಿ ಕ್ರಿಶನ್ ಕುಮಾರ್ ಹೇಳಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ಹೇಳಿದೆ.

ಬಾಲಕಿಯ ಕೊಲೆ ನಡೆದ ಕೆಲವೇ ದಿನಗಳಲ್ಲಿ, ಆಕೆಯ ಅತ್ಯಾಚಾರ ಆರೋಪಿ ರಿಂಕು ಕುಮಾರ್‌ನ ತಂದೆ ಸಾವನ್ನಪ್ಪಿದ್ದಾರೆ. ನಾವು ಆಸ್ಪತ್ರೆಯ ಸಿಸಿಟಿವಿ ಪರಿಶೀಲಿಸಿದಾಗ, ಕೊಲೆ ನಡೆದ ಸಂದರ್ಭ ರಿಂಕು ಕುಮಾರ್ ತಂದೆಯ ಜೊತೆಗಿದ್ದ. ಇದು ನಮ್ಮ ತನಿಖೆಯ ದಿಕ್ಕನ್ನು ಬದಲಿಸಿತು. ಕುಟುಂಬದ ಗೌರವಕ್ಕಾಗಿ ಬಾಲಕಿಯನ್ನು ಕೊಲೆ ಮಾಡಿರುವುದಾಗಿ ಆರೋಪಿಗಳು ಹೇಳಿದ್ದಾರೆ. ಬಂಧನದ ಬಳಿಕ ಅವರಲ್ಲಿ ಕೊಲೆ ಬಗ್ಗೆ ಯಾವುದೇ ಪಶ್ಚಾತಾಪ ಕಂಡು ಬಂದಿಲ್ಲ ಎಂದು ಎಸ್ಪಿ ಕ್ರಿಶನ್ ಕುಮಾರ್ ತಿಳಿಸಿದ್ದಾರೆ ಎಂದು ವರದಿ ವಿವರಿಸಿದೆ.

ಬಾಲಕಿಯ ಹತ್ಯೆಯ ಕುರಿತ ವರದಿ ಕೆಳಗಿದೆ 

ಜಾಮೀನಿನ ಮೇಲೆ ಹೊರ ಬಂದಿದ್ದ ಅತ್ಯಾಚಾರ ಆರೋಪಿಯಿಂದ ಸಂತ್ರಸ್ತೆಯ ಗುಂಡಿಕ್ಕಿ ಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...