Homeಕರೋನಾ ತಲ್ಲಣಕೊರೊನಾ ಭಯ:15 ತಿಂಗಳಿಂದ ಗುಡಿಸಿಲಿನಲ್ಲೇ ಸ್ವಯಂ ಕ್ವಾರಂಟೈನ್ ಆದ ಕುಟುಂಬ!

ಕೊರೊನಾ ಭಯ:15 ತಿಂಗಳಿಂದ ಗುಡಿಸಿಲಿನಲ್ಲೇ ಸ್ವಯಂ ಕ್ವಾರಂಟೈನ್ ಆದ ಕುಟುಂಬ!

- Advertisement -
- Advertisement -

ಐದು ಸದಸ್ಯರ ಕುಟುಂಬವೊಂದು ತಮಗೆ ಕೊರೊನಾ ಸೋಂಕು ಬರಬಹುದು ಎಂಬ ಭಯದಿಂದ 15 ತಿಂಗಳುಗಳಿಂದ ಗುಡಿಸಿಲಿನಲ್ಲೇ ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದ ಘಟನೆ ಆಂಧ್ರಪ್ರದೇಶದ ಕಡಾಲಿ ಗ್ರಾಮದಲ್ಲಿ ನಡೆದಿದೆ.

ಕಡಾಲಿ ಗ್ರಾಮದಲ್ಲಿ 15 ತಿಂಗಳ ಹಿಂದೆ ಒಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದರು. ಹೀಗಾಗಿ ಭಯಗೊಂಡ ಐದು ಸದಸ್ಯರ ಕುಟಂಬದ ಮೂವರು ಮಹಿಳೆಯರು ಅಂದಿನಿಂದಲೂ ಸ್ವಯಂ ಪ್ರೇರಿತರಾಗಿ ತಮ್ಮನ್ನು ಗೃಹಬಂಧನಕ್ಕೆ ಒಳಪಡಿಸಿಕೊಂಡಿದ್ದರು ಎಂದು ತಿಳಿದು ಬಂದಿದೆ.

ಕುಟುಂಬದ ಇಬ್ಬರು ಪುರುಷರು ಕೆಲವೊಮ್ಮೆ ಕೆಲಸಕ್ಕಾಗಿ ಗುಡಿಸಲಿನಿಂದ ಹೊರ ಬಂದಿದ್ದಾರೆ. ಆದರೆ ಮೂವರು ಮಹಿಳೆಯರು ಮಾತ್ರ ಕಳೆದ 15 ತಿಂಗಳುಗಳಿಂದ ಹೊರ ಬಂದಿಲ್ಲ. ಕೇವಲ ಗುಡಿಸಲಿಗೆ ಸೀಮಿತರಾಗಿದ್ದರು ಎಂದು ಮಾಹಿತಿ ದೊರೆತಿದೆ.

ಇದನ್ನೂ ಓದಿ: ಹುತಾತ್ಮರ ದಿನಾಚರಣೆ: ಬಂಡಾಯದ ನೆಲ ನರಗುಂದದಲ್ಲಿ ಹೋರಾಟದ ಕಿಚ್ಚು ಹೆಚ್ಚಿಸಿದ ರೈತರು

ಕಡಾಲಿ ಗ್ರಾಮದಲ್ಲಿ ವಾಸಿಸುತ್ತಿರುವ ಈ ಕುಟುಂಬದಲ್ಲಿ 50 ವರ್ಷದ ಜಾನ್ ಬೆನ್ನಿ ಮತ್ತು ಅವರ 29 ವರ್ಷದ ಮಗ ಚೀನಾಬಾಬು ಹಳ್ಳಿಯಲ್ಲಿ ಸೈಕಲ್ ದುರಸ್ತಿ ಅಂಗಡಿಯೊಂದನ್ನು ನಡೆಸುತ್ತಿದ್ದಾರೆ. ಬೆನ್ನಿಯ ಪತ್ನಿ ಋಥಮ್ಮ (45), ಮತ್ತು ಇಬ್ಬರು ಹೆಣ್ಣುಮಕ್ಕಳು, 30 ವರ್ಷದ ಕಾಂತಮಣಿ, ಮತ್ತು 32 ವರ್ಷದ ರಾಣಿ ಇದ್ದಾರೆ. ಜಾನ್ ಬೆನ್ನಿನ ಮತ್ತು ಮಗ ಚೀನಾಬಾಬು ಕೆಲವೊಮ್ಮೆ ಹೊರಗಡೆ ಹೋಗಿದ್ದಾರೆ. ಆದರೆ ಮೂವರು ಮಹಿಳೆಯರು ಗುಡಿಸಿಲಿನಲ್ಲೇ ಬಂಧಿಯಾಗಿದ್ದಾರೆ.

ಈ ಕುಟುಂಬಕ್ಕೆ ಸರ್ಕಾರಿ ಯೋಜನೆಯಡಿಯಲ್ಲಿ ವಸತಿಗಾಗಿ ಜಮೀನು ಮಂಜೂರು ಮಾಡಲಾಗಿತ್ತು. ಅದಕ್ಕಾಗಿ ಹಳ್ಳಿಯ ಸ್ವಯಂಸೇವಕರೊಬ್ಬರು ಅವರ ಹೆಬ್ಬೆಟ್ಟು (ಸಹಿ) ತೆಗೆದುಕೊಳ್ಳು ಹೋಗಿದ್ದ ಸಂದರ್ಭದಲ್ಲಿ ಅವರು ಸ್ವಯಂ ಗೃಹಬಂಧಿಯಾಗಿರುವುದು ಗೊತ್ತಾಗಿದೆ ಎಂದು ಗ್ರಾಮದ ಸರಪಂಚ್‌ ತಿಳಿಸಿದ್ದಾರೆ.

ವಿಷಯ ತಿಳಿದ ಬಳಿಕ ನಾವು ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ಆ ಕುಟುಂಬದ ಆರೋಗ್ಯ ಸ್ಥಿತಿಹದಗೆಟ್ಟಿದೆ. ಅವರು ಹಲವಾರು ದಿನಗಳಿಂದ ಸ್ಥಾನವನ್ನೂ ಮಾಡಿಲ್ಲ. ಅವರು ಸಾಯುವ ಪರಿಸ್ಥಿತಿಗೆ ತಲುಪಿದ್ದರು. ಗ್ರಾಮಕ್ಕೆ ಬಂದ ಪೊಲೀಸರ ತಂಡವು ಅವರನ್ನು ರಕ್ಷಿಸಿದೆ. ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸರಪಂಚ್‌ ತಿಳಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಯ ಅಧೀಕ್ಷಕ ಡಾ.ಪ್ರಭಾಕರ್ ರಾವ್ ಅವರು ಮಹಿಳೆಯರು ಅಪೌಷ್ಠಿಕತೆಯಿಂದ ಬಳಲುತ್ತಿದ್ದರು, ಅವರಿಗೆ ವಿಟಮಿನ್ ಕೊರತೆಯಿದೆ ಎಂದು ಹೇಳಿದ್ದಾರೆ.

ಮುಖ್ಯವಾಗಿ ವಿಟಮಿನ್ ಡಿ (ಸೂರ್ಯನ ಬಿಸಿಲಿಗೆ ಬಾರದ ಕಾರಣ) ಮತ್ತು ಬಿ-ಕಾಂಪ್ಲೆಕ್ಸ್ ಕಡಿಮೆಯಿದೆ. ಮಹಿಳೆಯರ ಹಿಮೋಗ್ಲೋಬಿನ್ ಮಟ್ಟವು 4 ಗ್ರಾಂಗಳಷ್ಟಾಗಿತ್ತು(ಮಹಿಳೆಯರಲ್ಲಿ 12.3-15.3 ಗ್ರಾಂ ಅನ್ನು ಸಾಮಾನ್ಯವೆಂದು ಪರಿಗಣಿಸಲಾಗುತ್ತದೆ). ಅವರು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು ಎಂದು ಡಾ.ಪ್ರಭಾಕರ್ ರಾವ್ ಹೇಳಿದ್ದಾರೆ.


ಇದನ್ನೂ ಓದಿ: ದಲಿತ ಮಹಿಳೆಯ ಲಾಕಪ್‌ ಡೆತ್: ಮೂವರು ಪೊಲೀಸರು ಸೇವೆಯಿಂದ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...