Homeಕರೋನಾ ತಲ್ಲಣಕೊರೊನಾ ಭಯ:15 ತಿಂಗಳಿಂದ ಗುಡಿಸಿಲಿನಲ್ಲೇ ಸ್ವಯಂ ಕ್ವಾರಂಟೈನ್ ಆದ ಕುಟುಂಬ!

ಕೊರೊನಾ ಭಯ:15 ತಿಂಗಳಿಂದ ಗುಡಿಸಿಲಿನಲ್ಲೇ ಸ್ವಯಂ ಕ್ವಾರಂಟೈನ್ ಆದ ಕುಟುಂಬ!

- Advertisement -
- Advertisement -

ಐದು ಸದಸ್ಯರ ಕುಟುಂಬವೊಂದು ತಮಗೆ ಕೊರೊನಾ ಸೋಂಕು ಬರಬಹುದು ಎಂಬ ಭಯದಿಂದ 15 ತಿಂಗಳುಗಳಿಂದ ಗುಡಿಸಿಲಿನಲ್ಲೇ ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದ ಘಟನೆ ಆಂಧ್ರಪ್ರದೇಶದ ಕಡಾಲಿ ಗ್ರಾಮದಲ್ಲಿ ನಡೆದಿದೆ.

ಕಡಾಲಿ ಗ್ರಾಮದಲ್ಲಿ 15 ತಿಂಗಳ ಹಿಂದೆ ಒಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದರು. ಹೀಗಾಗಿ ಭಯಗೊಂಡ ಐದು ಸದಸ್ಯರ ಕುಟಂಬದ ಮೂವರು ಮಹಿಳೆಯರು ಅಂದಿನಿಂದಲೂ ಸ್ವಯಂ ಪ್ರೇರಿತರಾಗಿ ತಮ್ಮನ್ನು ಗೃಹಬಂಧನಕ್ಕೆ ಒಳಪಡಿಸಿಕೊಂಡಿದ್ದರು ಎಂದು ತಿಳಿದು ಬಂದಿದೆ.

ಕುಟುಂಬದ ಇಬ್ಬರು ಪುರುಷರು ಕೆಲವೊಮ್ಮೆ ಕೆಲಸಕ್ಕಾಗಿ ಗುಡಿಸಲಿನಿಂದ ಹೊರ ಬಂದಿದ್ದಾರೆ. ಆದರೆ ಮೂವರು ಮಹಿಳೆಯರು ಮಾತ್ರ ಕಳೆದ 15 ತಿಂಗಳುಗಳಿಂದ ಹೊರ ಬಂದಿಲ್ಲ. ಕೇವಲ ಗುಡಿಸಲಿಗೆ ಸೀಮಿತರಾಗಿದ್ದರು ಎಂದು ಮಾಹಿತಿ ದೊರೆತಿದೆ.

ಇದನ್ನೂ ಓದಿ: ಹುತಾತ್ಮರ ದಿನಾಚರಣೆ: ಬಂಡಾಯದ ನೆಲ ನರಗುಂದದಲ್ಲಿ ಹೋರಾಟದ ಕಿಚ್ಚು ಹೆಚ್ಚಿಸಿದ ರೈತರು

ಕಡಾಲಿ ಗ್ರಾಮದಲ್ಲಿ ವಾಸಿಸುತ್ತಿರುವ ಈ ಕುಟುಂಬದಲ್ಲಿ 50 ವರ್ಷದ ಜಾನ್ ಬೆನ್ನಿ ಮತ್ತು ಅವರ 29 ವರ್ಷದ ಮಗ ಚೀನಾಬಾಬು ಹಳ್ಳಿಯಲ್ಲಿ ಸೈಕಲ್ ದುರಸ್ತಿ ಅಂಗಡಿಯೊಂದನ್ನು ನಡೆಸುತ್ತಿದ್ದಾರೆ. ಬೆನ್ನಿಯ ಪತ್ನಿ ಋಥಮ್ಮ (45), ಮತ್ತು ಇಬ್ಬರು ಹೆಣ್ಣುಮಕ್ಕಳು, 30 ವರ್ಷದ ಕಾಂತಮಣಿ, ಮತ್ತು 32 ವರ್ಷದ ರಾಣಿ ಇದ್ದಾರೆ. ಜಾನ್ ಬೆನ್ನಿನ ಮತ್ತು ಮಗ ಚೀನಾಬಾಬು ಕೆಲವೊಮ್ಮೆ ಹೊರಗಡೆ ಹೋಗಿದ್ದಾರೆ. ಆದರೆ ಮೂವರು ಮಹಿಳೆಯರು ಗುಡಿಸಿಲಿನಲ್ಲೇ ಬಂಧಿಯಾಗಿದ್ದಾರೆ.

ಈ ಕುಟುಂಬಕ್ಕೆ ಸರ್ಕಾರಿ ಯೋಜನೆಯಡಿಯಲ್ಲಿ ವಸತಿಗಾಗಿ ಜಮೀನು ಮಂಜೂರು ಮಾಡಲಾಗಿತ್ತು. ಅದಕ್ಕಾಗಿ ಹಳ್ಳಿಯ ಸ್ವಯಂಸೇವಕರೊಬ್ಬರು ಅವರ ಹೆಬ್ಬೆಟ್ಟು (ಸಹಿ) ತೆಗೆದುಕೊಳ್ಳು ಹೋಗಿದ್ದ ಸಂದರ್ಭದಲ್ಲಿ ಅವರು ಸ್ವಯಂ ಗೃಹಬಂಧಿಯಾಗಿರುವುದು ಗೊತ್ತಾಗಿದೆ ಎಂದು ಗ್ರಾಮದ ಸರಪಂಚ್‌ ತಿಳಿಸಿದ್ದಾರೆ.

ವಿಷಯ ತಿಳಿದ ಬಳಿಕ ನಾವು ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ಆ ಕುಟುಂಬದ ಆರೋಗ್ಯ ಸ್ಥಿತಿಹದಗೆಟ್ಟಿದೆ. ಅವರು ಹಲವಾರು ದಿನಗಳಿಂದ ಸ್ಥಾನವನ್ನೂ ಮಾಡಿಲ್ಲ. ಅವರು ಸಾಯುವ ಪರಿಸ್ಥಿತಿಗೆ ತಲುಪಿದ್ದರು. ಗ್ರಾಮಕ್ಕೆ ಬಂದ ಪೊಲೀಸರ ತಂಡವು ಅವರನ್ನು ರಕ್ಷಿಸಿದೆ. ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸರಪಂಚ್‌ ತಿಳಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಯ ಅಧೀಕ್ಷಕ ಡಾ.ಪ್ರಭಾಕರ್ ರಾವ್ ಅವರು ಮಹಿಳೆಯರು ಅಪೌಷ್ಠಿಕತೆಯಿಂದ ಬಳಲುತ್ತಿದ್ದರು, ಅವರಿಗೆ ವಿಟಮಿನ್ ಕೊರತೆಯಿದೆ ಎಂದು ಹೇಳಿದ್ದಾರೆ.

ಮುಖ್ಯವಾಗಿ ವಿಟಮಿನ್ ಡಿ (ಸೂರ್ಯನ ಬಿಸಿಲಿಗೆ ಬಾರದ ಕಾರಣ) ಮತ್ತು ಬಿ-ಕಾಂಪ್ಲೆಕ್ಸ್ ಕಡಿಮೆಯಿದೆ. ಮಹಿಳೆಯರ ಹಿಮೋಗ್ಲೋಬಿನ್ ಮಟ್ಟವು 4 ಗ್ರಾಂಗಳಷ್ಟಾಗಿತ್ತು(ಮಹಿಳೆಯರಲ್ಲಿ 12.3-15.3 ಗ್ರಾಂ ಅನ್ನು ಸಾಮಾನ್ಯವೆಂದು ಪರಿಗಣಿಸಲಾಗುತ್ತದೆ). ಅವರು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು ಎಂದು ಡಾ.ಪ್ರಭಾಕರ್ ರಾವ್ ಹೇಳಿದ್ದಾರೆ.


ಇದನ್ನೂ ಓದಿ: ದಲಿತ ಮಹಿಳೆಯ ಲಾಕಪ್‌ ಡೆತ್: ಮೂವರು ಪೊಲೀಸರು ಸೇವೆಯಿಂದ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...