Homeಮುಖಪುಟನಕ್ಸಲ್ ಬಸವರಾಜು ಮೃತದೇಹದ ಅಂತ್ಯಕ್ರಿಯೆ: ಪೊಲೀಸರ ವಿರುದ್ಧ ಕುಟುಂಬಸ್ಥರಿಂದ ನ್ಯಾಯಾಂಗ ನಿಂದನೆ ಅರ್ಜಿ

ನಕ್ಸಲ್ ಬಸವರಾಜು ಮೃತದೇಹದ ಅಂತ್ಯಕ್ರಿಯೆ: ಪೊಲೀಸರ ವಿರುದ್ಧ ಕುಟುಂಬಸ್ಥರಿಂದ ನ್ಯಾಯಾಂಗ ನಿಂದನೆ ಅರ್ಜಿ

- Advertisement -
- Advertisement -

ಆಂಧ್ರ ಪ್ರದೇಶ ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ (ಮಾವೋವಾದಿ) ಪ್ರಧಾನ ಕಾರ್ಯದರ್ಶಿ ನಂಬಲ ಕೇಶವ ರಾವ್ ಅಲಿಯಾಸ್ ಬಸವರಾಜು ಅವರ ಮೃತದೇಹದ ಅಂತ್ಯಕ್ರಿಯೆ ನೆರವೇರಿಸಿದ ಪೊಲೀಸರ ವಿರುದ್ದ ಕುಟುಂಬಸ್ಥರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.

ಪೊಲೀಸರು ಉದ್ದೇಶಪೂರ್ವಕವಾಗಿ ಅವಿಧೇಯತೆ ತೋರಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಮೇ 21ರಂದು ಛತ್ತೀಸ್‌ಗಢದ ನಾರಾಯಣಪುರ ಪ್ರದೇಶದ ಅಬುಜ್ಮರ್ ಅರಣ್ಯದಲ್ಲಿ ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ) ನಡೆಸಿದ ಎನ್‌ಕೌಂಟರ್‌ನಲ್ಲಿ ಬಲಿಯಾದವರಲ್ಲಿ ಬಸವರಾಜು ಕೂಡ ಒಬ್ಬರು.

ಶವ ಪರೀಕ್ಷೆ ಪೂರ್ಣಗೊಳಿಸಿದ ನಂತರ ಬಸವರಾಜು ಸೇರಿದಂತೆ ಏಳು ಮಾವೋವಾದಿ ನಾಯಕರ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸುವಂತೆ ಮೇ 24ರಂದು ಆಂಧ್ರ ಪ್ರದೇಶ ಹೈಕೋರ್ಟ್ ಪೊಲೀಸರಿಗೆ ನಿರ್ದೇಶಿಸಿತ್ತು. ತೆಲಂಗಾಣ ಮತ್ತು ಆಂಧ್ರ ಪ್ರದೇಶದ ಮೃತರ ಕುಟುಂಬಸ್ದರು ಮೇ 22ರಿಂದ ನಾರಾಯಣಪುರ ಜಿಲ್ಲಾಸ್ಪತ್ರೆಯ ಹೊರಗೆ ಬೀಡು ಬಿಟ್ಟಿದ್ದರು. ಆದರೂ, ಮೃತದೇಹಗಳನ್ನು ಹಸ್ತಾಂತರಿಸದೆ ಮೇ 26ರಂದು ಪೊಲೀಸರು ಅಂತ್ಯಕ್ರಿಯೆ ನಡೆಸಿದ್ದಾರೆ.

ಮೃತದೇಹಗಳನ್ನು ತಮ್ಮ ಊರಿಗೆ ತೆಗೆದುಕೊಂಡು ಹೋಗಿ ಧಾರ್ಮಿಕ ಪದ್ಧತಿಗಳ ಪ್ರಕಾರ ಅಂತಿಮ ವಿಧಿವಿಧಾನಗಳನ್ನು ನಡೆಸಲು ಮೃತರ ಕುಟುಂಬಸ್ಥರು ಬಯಸಿದ್ದರು. ಆದರೆ, ಏಳು ಶವಗಳಿಗೆ “ಯಾವುದೇ ಕಾನೂನುಬದ್ಧ ಹಕ್ಕುದಾರರು” ಇರಲಿಲ್ಲ ಎಂದು ಹೇಳಿ ಪೊಲೀಸರು ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ ಎಂದು ಆರೋಪಿಸಲಾಗಿದೆ.

“ಉನ್ನತ ಶ್ರೇಣಿಯ ನಕ್ಸಲ್ ಕೇಡರ್ ಸಿಪಿಐ ಮಾವೋವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ಬಸವರಾಜು ಅವರದ್ದು ಸೇರಿದಂತೆ 7 ನಕ್ಸಲರ ಮೃತದೇಹಗಳಿಗೆ ಸ್ಪಷ್ಟ ಕಾನೂನು ಹಕ್ಕುದಾರರು ಇರಲಿಲ್ಲ. ಹಾಗಾಗಿ, ಎಕ್ಸಿಕ್ಯೂಟಿವ್ ಮ್ಯಾಜಿಸ್ಟ್ರೇಟ್ ಅವರ ಸೂಕ್ತ ಆದೇಶದೊಂದಿಗೆ ಕಾನೂನು ಕಾರ್ಯವಿಧಾನದ ಪ್ರಕಾರ ನಾರಾಯಣಪುರದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ. ಮಾವೋವಾದಿ ಕೇಡರ್ ಕೋಸಿ ಅಲಿಯಾಸ್ ಹಂಗಿ ಅವರ ಮೃತದೇಹದ ಅಂತ್ಯಕ್ರಿಯೆಯನ್ನು ಕೂಡ ಅವರ ಕುಟುಂಬ ಸದಸ್ಯರು ನಾರಾಯಣಪುರದಲ್ಲಿ ನೆರವೇರಿಸಿದ್ದಾರೆ” ಎಂದು ಪೊಲೀಸ್ ಹೇಳಿಕೆ ತಿಳಿಸಿದೆ.

“ಹಕ್ಕುದಾರರು ಇಲ್ಲದಿದ್ದ ನಕ್ಸಲರ ಮೃತ ದೇಹಗಳನ್ನು ಸೂಕ್ತ ಕಾನೂನು ವಿಧಾನಗಳನ್ನು ಅನುಸರಿಸಿ ಅಂತ್ಯಕ್ರಿಯೆ ನಡೆಸುವಾಗ ಎಲ್ಲಾ ರೀತಿಯ ಮೂಲಭೂತ ಮತ್ತು ಮಾನವೀಯ ಗೌರವವನ್ನು ನೀಡಲಾಗಿದೆ” ಎಂದು ಪೊಲೀಸರು ಹೇಳಿದ್ದಾರೆ.

ನಾವು ನಿಜವಾದ ಕುಟುಂಬ ಸದಸ್ಯರು ಎಂದು ದೃಢೀಕರಿಸಲು ಪ್ರಮಾಣಪತ್ರ ಕೊಡಬೇಕಾಗಿತ್ತು. ಅದಕ್ಕಾಗಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮತ್ತು ಆಸ್ಪತ್ರೆ ನಡುವೆ ಅಲೆದಾಟ ಮಡಬೇಕಾಯಿತು ಎಂದು ಕುಟುಂಬಸ್ಥರು ಹೇಳಿಕೊಂಡಿದ್ದಾಗಿ ವರದಿಯಾಗಿದೆ.

ನಕ್ಸಲ್ ಬಸವರಾಜ್ ಮೃತದೇಹವನ್ನು ಕುಟುಂಬಕ್ಕೆ ನೀಡದೆ ಬಲತ್ಕಾರವಾಗಿ ತಾವೇ ಅಂತ್ಯಕ್ರಿಯೆ ನಡೆಸಿದ ಛತ್ತೀಸ್‌ಗಢ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...