Homeಮುಖಪುಟದಲಿತ ವ್ಯಕ್ತಿಯ ಹತ್ಯೆ: ಪ್ರಕರಣ ಹಿಂಪಡೆಯುವಂತೆ ಕುಟುಂಬಕ್ಕೆ ಒತ್ತಡ

ದಲಿತ ವ್ಯಕ್ತಿಯ ಹತ್ಯೆ: ಪ್ರಕರಣ ಹಿಂಪಡೆಯುವಂತೆ ಕುಟುಂಬಕ್ಕೆ ಒತ್ತಡ

- Advertisement -
- Advertisement -

ತಮಿಳುನಾಡಿನ ಉದುಮಲ್‌ಪೇಟ್ ಜಿಲ್ಲೆಯಲ್ಲಿ ದಲಿತ ವ್ಯಕ್ತಿಯೋರ್ವನ ಕೊಲೆ ಪ್ರಕರಣದ ಆರೋಪಿಗಳು ಸಂತ್ರಸ್ತನ ಕುಟುಂಬಕ್ಕೆ ಪ್ರಕರಣವನ್ನು ಕೈಬಿಡುವಂತೆ ಹಣದ ಆಮಿಷ ಮತ್ತು ಬೆದರಿಕೆಯನ್ನು ಹಾಕಿದ್ದಾರೆ. ಈ ಕುರಿತು ಸಂತ್ರಸ್ತನ ಕುಟುಂಬವೇ ಹೇಳಿಕೆಯನ್ನು ನೀಡಿದ್ದು, ಪ್ರಕರಣದಲ್ಲಿ ಪೊಲೀಸರ ಹಸ್ತಕ್ಷೇಪದ ಆರೋಪವನ್ನು ಮಾಡಿದ್ದಾರೆ.

2023ರ ನ.27ರಂದು ಪರಿಶಿಷ್ಟ ಪಂಗಡದ ನರಿಕುರವರ್ ಸಮುದಾಯಕ್ಕೆ ಸೇರಿದ ಸೆಂಕೋಟ್ಟೈ (55) ಅವರನ್ನು ಉದುಮಲಪೇಟೆಯ ತಾಂಥೋಣಿಯಲ್ಲಿ ಥಳಿಸಿ ಹತ್ಯೆ ಮಾಡಲಾಗಿತ್ತು. ಉದುಮಲಪೇಟೆ ಪೊಲೀಸರು ದುಷ್ಕರ್ಮಿಗಳ ಪರವಾಗಿ ನಿಂತಿದ್ದಾರೆ ಮತ್ತು ವೀಡಿಯೊ ಸಾಕ್ಷ್ಯವನ್ನು ನಾಶಪಡಿಸಿದ್ದಾರೆ ಎಂದು ಬುಡಕಟ್ಟು ಹಕ್ಕುಗಳ ಕಾರ್ಯಕರ್ತ ಆರ್ ಥಾನರಾಜ್ ಆರೋಪಿಸಿದ್ದಾರೆ.

ಏನಿದು ಘಟನೆ?

2023ರ ನ.27ರಂದು ಸೆಂಕೋಟ್ಟೈ ತನ್ನ ಸೋದರಳಿಯ ಕುಮಾರ್ (25) ಜೊತೆಗೆ ತಾಂಥೋನಿಯಲ್ಲಿ  ಪಕ್ಷಿಗಳನ್ನು ಬೇಟೆಯಾಡುತ್ತಿದ್ದರು ಎನ್ನಲಾಗಿದೆ. ಎಫ್‌ಐಆರ್‌ನಲ್ಲಿ ಕುಮಾರ್ ಉಲ್ಲೇಖದ ಪ್ರಕಾರ, ಅವರು ಬೇಟೆಯಾಡಲು ಬಳಸಿದ ಕಲ್ಲು ಸೆಲ್ವಕುಮಾರ್ ಎಂಬವರ ಮನೆಯ ಮೇಲ್ಛಾವಣಿಗೆ ಬಿದ್ದಿದೆ. ಇದೇ ಕಾರಣಕ್ಕೆ  ಆರೋಪಿಗಳು ಆತನ ವಿರುದ್ಧ ಕೋಳಿ ಕಳ್ಳತನಕ್ಕೆ ಯತ್ನಿಸಿದ್ದಾನೆಂದು ನಿಂದಿಸುತ್ತಾರೆ. ಬಳಿಕ ಇತರರನ್ನು ಗುಂಪು ಸೇರಿಸಿ ಕುಮಾರ್ ಮತ್ತು ಸೆಂಕೋಟ್ಟೈ ಅವರನ್ನು ಎರಡು ಮರಗಳಿಗೆ ಕಟ್ಟಿಹಾಕಿ ಥಳಿಸಿದ್ದಾರೆ. ಈ ವೇಳೆ ಪ್ರಜ್ಞೆ ತಪ್ಪಿ ಬಿದ್ದ ಸೆಂಕೋಟ್ಟೈ ಅವರನ್ನು ಉದುಮಲ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿತ್ತು, ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಹಲ್ಲೆಯಿಂದ ಕುಮಾರ್‌ಗೆ ತೀವ್ರ ಗಾಯಗಳಾಗಿದ್ದವು. ಕುಮಾರ್ ಅದೇ ದಿನ ಪೊಲೀಸ್ ದೂರು ನೀಡಿದ್ದಾರೆ ಮತ್ತು ಸೆಲ್ವಕುಮಾರ್ ಮತ್ತು ಇತರ ಮೂವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಪ್ರಕಾರಣವನ್ನು ಕೈಬಿಡಲು ಆಮಿಷ

ಇದೀಗ ಸೆಂಕೋಟ್ಟೈ ಅವರ ಕುಟುಂಬ ಪ್ರಕಾರಣವನ್ನು ಕೈಬಿಡಲು ನಮಗೆ ಆರೋಪಿಗಳು ಹಣದ ಆಮಿಷ ನೀಡುತ್ತಿದ್ದಾರೆ, ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಬುಡಕಟ್ಟು ಹಕ್ಕುಗಳ ಕಾರ್ಯಕರ್ತ ಆರ್ ಥಾನರಾಜ್, ದುಷ್ಕರ್ಮಿಗಳ ಬಳಿ ಇರುವ ವಿಡಿಯೋ ಸಾಕ್ಷ್ಯವನ್ನು ಸಂಗ್ರಹಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ಸಂತ್ರಸ್ತ ಕುಟುಂಬ ಆರೋಪಿಸಿದೆ. ಇಬ್ಬರು ವ್ಯಕ್ತಿಗಳು ಕುಮಾರ್ ಮತ್ತು ಸೆಂಕೋಟ್ಟೈ ದೈಹಿಕವಾಗಿ ಹಲ್ಲೆ ಮಾಡಿದ ವೀಡಿಯೊಗಳನ್ನು ರೆಕಾರ್ಡ್ ಮಾಡಿದ್ದಾರೆ. ಆ ವೀಡಿಯೊಗಳನ್ನು ಅಳಿಸಲು ಪೊಲೀಸರು ಅವರನ್ನು ಕೇಳಿದ್ದಾರೆ ಎಂದು ನಾವು ಅನುಮಾನಿಸುತ್ತೇವೆ. ಗ್ರಾಮದಲ್ಲಿ ಪ್ರಬಲ ಬಹುಸಂಖ್ಯಾತರಾಗಿರುವ ಗೌಂಡರ್ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಪೊಲೀಸರು ಅವರ ಪರ ನಿಂತಿದ್ದಾರೆ ಎಂದು ಥಾನರಾಜ್ ಅವರು ಹೇಳಿದ್ದಾರೆ.

ತಮಿಳುನಾಡು ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗವು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ವಿಚಾರಣೆ ನಡೆಸಬೇಕು. ಆರೋಪಿಗಳಿಗೆ ಶಿಕ್ಷಿಯನ್ನು ಕೊಡಿಸಿದರೆ ಅದು ಬುಡಕಟ್ಟು ಸಮುದಾಯಕ್ಕೆ ಭಯ ಮುಕ್ತವಾಗಿ ಬದುಕಲು ಸಹಾಯ ಮಾಡುತ್ತದೆ. ಸೆಂಕೋಟ್ಟೈ ಅವರ ಕುಟುಂಬಕ್ಕೆ ಪರಿಹಾರ ನೀಡಬೇಕು ಮತ್ತು ಅವರ ಮಕ್ಕಳಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಥಾನರಾಜ್ ಆಗ್ರಹಿಸಿದ್ದಾರೆ.

ಈ ಬಗ್ಗೆ ಪೊಲೀಸ್‌ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಅವರು ಸಾಕ್ಷ್ಯಗಳನ್ನು ನಾಶಪಡಿಸಿದ್ದಾರೆ ಅಥವಾ ಆರೋಪಿ ಸೆಲ್ವಕುಮಾರ್ ಪರ ನಿಂತಿದ್ದಾರೆ ಎಂಬ ಆರೋಪವನ್ನು ನಿರಾಕರಿಸಿದ್ದು, ನಮಗೆ ತಿಳಿದಿರುವಂತೆ ಯಾವುದೇ ವೀಡಿಯೊಗಳಿಲ್ಲ ಮತ್ತು ಪ್ರಕರಣದಲ್ಲಿ ಹೆಸರಿಸಲಾದವರ ಆರೋಪಿಗಳ ಫೋನ್‌ಗಳನ್ನು ನಾವು ಪರಿಶೀಲಿಸಿದ್ದೇವೆ ಎಂದು ಹೇಳಿದ್ದಾರೆ.

ಎಫ್‌ಐಆರ್‌ನಲ್ಲಿ ಸೆಲ್ವಕುಮಾರ್ ಸೇರಿದಂತೆ ನಾಲ್ವರನ್ನು ಮಾತ್ರ ಕುಮಾರ್ ಉಲ್ಲೇಖಿಸಿದ್ದರು. ಅವರಿಗೆ ಇತರ ಆರೋಪಿಗಳ ಹೆಸರುಗಳು ತಿಳಿದಿರಲಿಲ್ಲ. ನಾವು ತನಿಖೆಯ ವೇಳೆ ಹೆಚ್ಚಿನ ವ್ಯಕ್ತಿಗಳು ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ಕಂಡುಕೊಂಡಿದ್ದೇವೆ. ಈವರೆಗೆ ಆರು ಮಂದಿಯನ್ನು ರಿಮಾಂಡ್ ಮಾಡಿದ್ದೇವೆ. ಉದುಮಲ್‌ಪೇಟೆಯ ಉಪ ಪೊಲೀಸ್ ಆಯುಕ್ತ ಜೆ ಸುಕುಮಾರನ್ ಅವರು ತನಿಖೆಯ ನೇತೃತ್ವವನ್ನು ವಹಿಸಿಕೊಂಡಿದ್ದಾರೆ. ಪೊಲೀಸ್ ತನಿಖೆಯ ವೇಳೆ ಹೆಚ್ಚಿನ ಆರೋಪಿಗಳು ಶಾಮೀಲಾಗಿರುವುದು ಕಂಡು ಬಂದರೆ ಹೆಚ್ಚಿನ ಜನರನ್ನು ಬಂಧಿಸಲಾಗುವುದು ಎಂದು ಪೊಲೀಸ್‌ ಅಧಿಕಾರಿಯೋರ್ವರು ಹೇಳಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 294 (b), 342, 324, 506, 302 ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3ರಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನು ಓದಿ: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್‌ ಸರಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂಕೋರ್ಟ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...