Homeಮುಖಪುಟದಲಿತ ವ್ಯಕ್ತಿಯ ಹತ್ಯೆ: ಪ್ರಕರಣ ಹಿಂಪಡೆಯುವಂತೆ ಕುಟುಂಬಕ್ಕೆ ಒತ್ತಡ

ದಲಿತ ವ್ಯಕ್ತಿಯ ಹತ್ಯೆ: ಪ್ರಕರಣ ಹಿಂಪಡೆಯುವಂತೆ ಕುಟುಂಬಕ್ಕೆ ಒತ್ತಡ

- Advertisement -
- Advertisement -

ತಮಿಳುನಾಡಿನ ಉದುಮಲ್‌ಪೇಟ್ ಜಿಲ್ಲೆಯಲ್ಲಿ ದಲಿತ ವ್ಯಕ್ತಿಯೋರ್ವನ ಕೊಲೆ ಪ್ರಕರಣದ ಆರೋಪಿಗಳು ಸಂತ್ರಸ್ತನ ಕುಟುಂಬಕ್ಕೆ ಪ್ರಕರಣವನ್ನು ಕೈಬಿಡುವಂತೆ ಹಣದ ಆಮಿಷ ಮತ್ತು ಬೆದರಿಕೆಯನ್ನು ಹಾಕಿದ್ದಾರೆ. ಈ ಕುರಿತು ಸಂತ್ರಸ್ತನ ಕುಟುಂಬವೇ ಹೇಳಿಕೆಯನ್ನು ನೀಡಿದ್ದು, ಪ್ರಕರಣದಲ್ಲಿ ಪೊಲೀಸರ ಹಸ್ತಕ್ಷೇಪದ ಆರೋಪವನ್ನು ಮಾಡಿದ್ದಾರೆ.

2023ರ ನ.27ರಂದು ಪರಿಶಿಷ್ಟ ಪಂಗಡದ ನರಿಕುರವರ್ ಸಮುದಾಯಕ್ಕೆ ಸೇರಿದ ಸೆಂಕೋಟ್ಟೈ (55) ಅವರನ್ನು ಉದುಮಲಪೇಟೆಯ ತಾಂಥೋಣಿಯಲ್ಲಿ ಥಳಿಸಿ ಹತ್ಯೆ ಮಾಡಲಾಗಿತ್ತು. ಉದುಮಲಪೇಟೆ ಪೊಲೀಸರು ದುಷ್ಕರ್ಮಿಗಳ ಪರವಾಗಿ ನಿಂತಿದ್ದಾರೆ ಮತ್ತು ವೀಡಿಯೊ ಸಾಕ್ಷ್ಯವನ್ನು ನಾಶಪಡಿಸಿದ್ದಾರೆ ಎಂದು ಬುಡಕಟ್ಟು ಹಕ್ಕುಗಳ ಕಾರ್ಯಕರ್ತ ಆರ್ ಥಾನರಾಜ್ ಆರೋಪಿಸಿದ್ದಾರೆ.

ಏನಿದು ಘಟನೆ?

2023ರ ನ.27ರಂದು ಸೆಂಕೋಟ್ಟೈ ತನ್ನ ಸೋದರಳಿಯ ಕುಮಾರ್ (25) ಜೊತೆಗೆ ತಾಂಥೋನಿಯಲ್ಲಿ  ಪಕ್ಷಿಗಳನ್ನು ಬೇಟೆಯಾಡುತ್ತಿದ್ದರು ಎನ್ನಲಾಗಿದೆ. ಎಫ್‌ಐಆರ್‌ನಲ್ಲಿ ಕುಮಾರ್ ಉಲ್ಲೇಖದ ಪ್ರಕಾರ, ಅವರು ಬೇಟೆಯಾಡಲು ಬಳಸಿದ ಕಲ್ಲು ಸೆಲ್ವಕುಮಾರ್ ಎಂಬವರ ಮನೆಯ ಮೇಲ್ಛಾವಣಿಗೆ ಬಿದ್ದಿದೆ. ಇದೇ ಕಾರಣಕ್ಕೆ  ಆರೋಪಿಗಳು ಆತನ ವಿರುದ್ಧ ಕೋಳಿ ಕಳ್ಳತನಕ್ಕೆ ಯತ್ನಿಸಿದ್ದಾನೆಂದು ನಿಂದಿಸುತ್ತಾರೆ. ಬಳಿಕ ಇತರರನ್ನು ಗುಂಪು ಸೇರಿಸಿ ಕುಮಾರ್ ಮತ್ತು ಸೆಂಕೋಟ್ಟೈ ಅವರನ್ನು ಎರಡು ಮರಗಳಿಗೆ ಕಟ್ಟಿಹಾಕಿ ಥಳಿಸಿದ್ದಾರೆ. ಈ ವೇಳೆ ಪ್ರಜ್ಞೆ ತಪ್ಪಿ ಬಿದ್ದ ಸೆಂಕೋಟ್ಟೈ ಅವರನ್ನು ಉದುಮಲ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿತ್ತು, ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಹಲ್ಲೆಯಿಂದ ಕುಮಾರ್‌ಗೆ ತೀವ್ರ ಗಾಯಗಳಾಗಿದ್ದವು. ಕುಮಾರ್ ಅದೇ ದಿನ ಪೊಲೀಸ್ ದೂರು ನೀಡಿದ್ದಾರೆ ಮತ್ತು ಸೆಲ್ವಕುಮಾರ್ ಮತ್ತು ಇತರ ಮೂವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಪ್ರಕಾರಣವನ್ನು ಕೈಬಿಡಲು ಆಮಿಷ

ಇದೀಗ ಸೆಂಕೋಟ್ಟೈ ಅವರ ಕುಟುಂಬ ಪ್ರಕಾರಣವನ್ನು ಕೈಬಿಡಲು ನಮಗೆ ಆರೋಪಿಗಳು ಹಣದ ಆಮಿಷ ನೀಡುತ್ತಿದ್ದಾರೆ, ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಬುಡಕಟ್ಟು ಹಕ್ಕುಗಳ ಕಾರ್ಯಕರ್ತ ಆರ್ ಥಾನರಾಜ್, ದುಷ್ಕರ್ಮಿಗಳ ಬಳಿ ಇರುವ ವಿಡಿಯೋ ಸಾಕ್ಷ್ಯವನ್ನು ಸಂಗ್ರಹಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ಸಂತ್ರಸ್ತ ಕುಟುಂಬ ಆರೋಪಿಸಿದೆ. ಇಬ್ಬರು ವ್ಯಕ್ತಿಗಳು ಕುಮಾರ್ ಮತ್ತು ಸೆಂಕೋಟ್ಟೈ ದೈಹಿಕವಾಗಿ ಹಲ್ಲೆ ಮಾಡಿದ ವೀಡಿಯೊಗಳನ್ನು ರೆಕಾರ್ಡ್ ಮಾಡಿದ್ದಾರೆ. ಆ ವೀಡಿಯೊಗಳನ್ನು ಅಳಿಸಲು ಪೊಲೀಸರು ಅವರನ್ನು ಕೇಳಿದ್ದಾರೆ ಎಂದು ನಾವು ಅನುಮಾನಿಸುತ್ತೇವೆ. ಗ್ರಾಮದಲ್ಲಿ ಪ್ರಬಲ ಬಹುಸಂಖ್ಯಾತರಾಗಿರುವ ಗೌಂಡರ್ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಪೊಲೀಸರು ಅವರ ಪರ ನಿಂತಿದ್ದಾರೆ ಎಂದು ಥಾನರಾಜ್ ಅವರು ಹೇಳಿದ್ದಾರೆ.

ತಮಿಳುನಾಡು ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗವು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ವಿಚಾರಣೆ ನಡೆಸಬೇಕು. ಆರೋಪಿಗಳಿಗೆ ಶಿಕ್ಷಿಯನ್ನು ಕೊಡಿಸಿದರೆ ಅದು ಬುಡಕಟ್ಟು ಸಮುದಾಯಕ್ಕೆ ಭಯ ಮುಕ್ತವಾಗಿ ಬದುಕಲು ಸಹಾಯ ಮಾಡುತ್ತದೆ. ಸೆಂಕೋಟ್ಟೈ ಅವರ ಕುಟುಂಬಕ್ಕೆ ಪರಿಹಾರ ನೀಡಬೇಕು ಮತ್ತು ಅವರ ಮಕ್ಕಳಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಥಾನರಾಜ್ ಆಗ್ರಹಿಸಿದ್ದಾರೆ.

ಈ ಬಗ್ಗೆ ಪೊಲೀಸ್‌ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಅವರು ಸಾಕ್ಷ್ಯಗಳನ್ನು ನಾಶಪಡಿಸಿದ್ದಾರೆ ಅಥವಾ ಆರೋಪಿ ಸೆಲ್ವಕುಮಾರ್ ಪರ ನಿಂತಿದ್ದಾರೆ ಎಂಬ ಆರೋಪವನ್ನು ನಿರಾಕರಿಸಿದ್ದು, ನಮಗೆ ತಿಳಿದಿರುವಂತೆ ಯಾವುದೇ ವೀಡಿಯೊಗಳಿಲ್ಲ ಮತ್ತು ಪ್ರಕರಣದಲ್ಲಿ ಹೆಸರಿಸಲಾದವರ ಆರೋಪಿಗಳ ಫೋನ್‌ಗಳನ್ನು ನಾವು ಪರಿಶೀಲಿಸಿದ್ದೇವೆ ಎಂದು ಹೇಳಿದ್ದಾರೆ.

ಎಫ್‌ಐಆರ್‌ನಲ್ಲಿ ಸೆಲ್ವಕುಮಾರ್ ಸೇರಿದಂತೆ ನಾಲ್ವರನ್ನು ಮಾತ್ರ ಕುಮಾರ್ ಉಲ್ಲೇಖಿಸಿದ್ದರು. ಅವರಿಗೆ ಇತರ ಆರೋಪಿಗಳ ಹೆಸರುಗಳು ತಿಳಿದಿರಲಿಲ್ಲ. ನಾವು ತನಿಖೆಯ ವೇಳೆ ಹೆಚ್ಚಿನ ವ್ಯಕ್ತಿಗಳು ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ಕಂಡುಕೊಂಡಿದ್ದೇವೆ. ಈವರೆಗೆ ಆರು ಮಂದಿಯನ್ನು ರಿಮಾಂಡ್ ಮಾಡಿದ್ದೇವೆ. ಉದುಮಲ್‌ಪೇಟೆಯ ಉಪ ಪೊಲೀಸ್ ಆಯುಕ್ತ ಜೆ ಸುಕುಮಾರನ್ ಅವರು ತನಿಖೆಯ ನೇತೃತ್ವವನ್ನು ವಹಿಸಿಕೊಂಡಿದ್ದಾರೆ. ಪೊಲೀಸ್ ತನಿಖೆಯ ವೇಳೆ ಹೆಚ್ಚಿನ ಆರೋಪಿಗಳು ಶಾಮೀಲಾಗಿರುವುದು ಕಂಡು ಬಂದರೆ ಹೆಚ್ಚಿನ ಜನರನ್ನು ಬಂಧಿಸಲಾಗುವುದು ಎಂದು ಪೊಲೀಸ್‌ ಅಧಿಕಾರಿಯೋರ್ವರು ಹೇಳಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 294 (b), 342, 324, 506, 302 ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3ರಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನು ಓದಿ: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್‌ ಸರಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂಕೋರ್ಟ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...