Homeಮುಖಪುಟದಲಿತ ವ್ಯಕ್ತಿಯ ಹತ್ಯೆ: ಪ್ರಕರಣ ಹಿಂಪಡೆಯುವಂತೆ ಕುಟುಂಬಕ್ಕೆ ಒತ್ತಡ

ದಲಿತ ವ್ಯಕ್ತಿಯ ಹತ್ಯೆ: ಪ್ರಕರಣ ಹಿಂಪಡೆಯುವಂತೆ ಕುಟುಂಬಕ್ಕೆ ಒತ್ತಡ

- Advertisement -
- Advertisement -

ತಮಿಳುನಾಡಿನ ಉದುಮಲ್‌ಪೇಟ್ ಜಿಲ್ಲೆಯಲ್ಲಿ ದಲಿತ ವ್ಯಕ್ತಿಯೋರ್ವನ ಕೊಲೆ ಪ್ರಕರಣದ ಆರೋಪಿಗಳು ಸಂತ್ರಸ್ತನ ಕುಟುಂಬಕ್ಕೆ ಪ್ರಕರಣವನ್ನು ಕೈಬಿಡುವಂತೆ ಹಣದ ಆಮಿಷ ಮತ್ತು ಬೆದರಿಕೆಯನ್ನು ಹಾಕಿದ್ದಾರೆ. ಈ ಕುರಿತು ಸಂತ್ರಸ್ತನ ಕುಟುಂಬವೇ ಹೇಳಿಕೆಯನ್ನು ನೀಡಿದ್ದು, ಪ್ರಕರಣದಲ್ಲಿ ಪೊಲೀಸರ ಹಸ್ತಕ್ಷೇಪದ ಆರೋಪವನ್ನು ಮಾಡಿದ್ದಾರೆ.

2023ರ ನ.27ರಂದು ಪರಿಶಿಷ್ಟ ಪಂಗಡದ ನರಿಕುರವರ್ ಸಮುದಾಯಕ್ಕೆ ಸೇರಿದ ಸೆಂಕೋಟ್ಟೈ (55) ಅವರನ್ನು ಉದುಮಲಪೇಟೆಯ ತಾಂಥೋಣಿಯಲ್ಲಿ ಥಳಿಸಿ ಹತ್ಯೆ ಮಾಡಲಾಗಿತ್ತು. ಉದುಮಲಪೇಟೆ ಪೊಲೀಸರು ದುಷ್ಕರ್ಮಿಗಳ ಪರವಾಗಿ ನಿಂತಿದ್ದಾರೆ ಮತ್ತು ವೀಡಿಯೊ ಸಾಕ್ಷ್ಯವನ್ನು ನಾಶಪಡಿಸಿದ್ದಾರೆ ಎಂದು ಬುಡಕಟ್ಟು ಹಕ್ಕುಗಳ ಕಾರ್ಯಕರ್ತ ಆರ್ ಥಾನರಾಜ್ ಆರೋಪಿಸಿದ್ದಾರೆ.

ಏನಿದು ಘಟನೆ?

2023ರ ನ.27ರಂದು ಸೆಂಕೋಟ್ಟೈ ತನ್ನ ಸೋದರಳಿಯ ಕುಮಾರ್ (25) ಜೊತೆಗೆ ತಾಂಥೋನಿಯಲ್ಲಿ  ಪಕ್ಷಿಗಳನ್ನು ಬೇಟೆಯಾಡುತ್ತಿದ್ದರು ಎನ್ನಲಾಗಿದೆ. ಎಫ್‌ಐಆರ್‌ನಲ್ಲಿ ಕುಮಾರ್ ಉಲ್ಲೇಖದ ಪ್ರಕಾರ, ಅವರು ಬೇಟೆಯಾಡಲು ಬಳಸಿದ ಕಲ್ಲು ಸೆಲ್ವಕುಮಾರ್ ಎಂಬವರ ಮನೆಯ ಮೇಲ್ಛಾವಣಿಗೆ ಬಿದ್ದಿದೆ. ಇದೇ ಕಾರಣಕ್ಕೆ  ಆರೋಪಿಗಳು ಆತನ ವಿರುದ್ಧ ಕೋಳಿ ಕಳ್ಳತನಕ್ಕೆ ಯತ್ನಿಸಿದ್ದಾನೆಂದು ನಿಂದಿಸುತ್ತಾರೆ. ಬಳಿಕ ಇತರರನ್ನು ಗುಂಪು ಸೇರಿಸಿ ಕುಮಾರ್ ಮತ್ತು ಸೆಂಕೋಟ್ಟೈ ಅವರನ್ನು ಎರಡು ಮರಗಳಿಗೆ ಕಟ್ಟಿಹಾಕಿ ಥಳಿಸಿದ್ದಾರೆ. ಈ ವೇಳೆ ಪ್ರಜ್ಞೆ ತಪ್ಪಿ ಬಿದ್ದ ಸೆಂಕೋಟ್ಟೈ ಅವರನ್ನು ಉದುಮಲ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿತ್ತು, ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಹಲ್ಲೆಯಿಂದ ಕುಮಾರ್‌ಗೆ ತೀವ್ರ ಗಾಯಗಳಾಗಿದ್ದವು. ಕುಮಾರ್ ಅದೇ ದಿನ ಪೊಲೀಸ್ ದೂರು ನೀಡಿದ್ದಾರೆ ಮತ್ತು ಸೆಲ್ವಕುಮಾರ್ ಮತ್ತು ಇತರ ಮೂವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಪ್ರಕಾರಣವನ್ನು ಕೈಬಿಡಲು ಆಮಿಷ

ಇದೀಗ ಸೆಂಕೋಟ್ಟೈ ಅವರ ಕುಟುಂಬ ಪ್ರಕಾರಣವನ್ನು ಕೈಬಿಡಲು ನಮಗೆ ಆರೋಪಿಗಳು ಹಣದ ಆಮಿಷ ನೀಡುತ್ತಿದ್ದಾರೆ, ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಬುಡಕಟ್ಟು ಹಕ್ಕುಗಳ ಕಾರ್ಯಕರ್ತ ಆರ್ ಥಾನರಾಜ್, ದುಷ್ಕರ್ಮಿಗಳ ಬಳಿ ಇರುವ ವಿಡಿಯೋ ಸಾಕ್ಷ್ಯವನ್ನು ಸಂಗ್ರಹಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ಸಂತ್ರಸ್ತ ಕುಟುಂಬ ಆರೋಪಿಸಿದೆ. ಇಬ್ಬರು ವ್ಯಕ್ತಿಗಳು ಕುಮಾರ್ ಮತ್ತು ಸೆಂಕೋಟ್ಟೈ ದೈಹಿಕವಾಗಿ ಹಲ್ಲೆ ಮಾಡಿದ ವೀಡಿಯೊಗಳನ್ನು ರೆಕಾರ್ಡ್ ಮಾಡಿದ್ದಾರೆ. ಆ ವೀಡಿಯೊಗಳನ್ನು ಅಳಿಸಲು ಪೊಲೀಸರು ಅವರನ್ನು ಕೇಳಿದ್ದಾರೆ ಎಂದು ನಾವು ಅನುಮಾನಿಸುತ್ತೇವೆ. ಗ್ರಾಮದಲ್ಲಿ ಪ್ರಬಲ ಬಹುಸಂಖ್ಯಾತರಾಗಿರುವ ಗೌಂಡರ್ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಪೊಲೀಸರು ಅವರ ಪರ ನಿಂತಿದ್ದಾರೆ ಎಂದು ಥಾನರಾಜ್ ಅವರು ಹೇಳಿದ್ದಾರೆ.

ತಮಿಳುನಾಡು ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗವು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ವಿಚಾರಣೆ ನಡೆಸಬೇಕು. ಆರೋಪಿಗಳಿಗೆ ಶಿಕ್ಷಿಯನ್ನು ಕೊಡಿಸಿದರೆ ಅದು ಬುಡಕಟ್ಟು ಸಮುದಾಯಕ್ಕೆ ಭಯ ಮುಕ್ತವಾಗಿ ಬದುಕಲು ಸಹಾಯ ಮಾಡುತ್ತದೆ. ಸೆಂಕೋಟ್ಟೈ ಅವರ ಕುಟುಂಬಕ್ಕೆ ಪರಿಹಾರ ನೀಡಬೇಕು ಮತ್ತು ಅವರ ಮಕ್ಕಳಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಥಾನರಾಜ್ ಆಗ್ರಹಿಸಿದ್ದಾರೆ.

ಈ ಬಗ್ಗೆ ಪೊಲೀಸ್‌ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಅವರು ಸಾಕ್ಷ್ಯಗಳನ್ನು ನಾಶಪಡಿಸಿದ್ದಾರೆ ಅಥವಾ ಆರೋಪಿ ಸೆಲ್ವಕುಮಾರ್ ಪರ ನಿಂತಿದ್ದಾರೆ ಎಂಬ ಆರೋಪವನ್ನು ನಿರಾಕರಿಸಿದ್ದು, ನಮಗೆ ತಿಳಿದಿರುವಂತೆ ಯಾವುದೇ ವೀಡಿಯೊಗಳಿಲ್ಲ ಮತ್ತು ಪ್ರಕರಣದಲ್ಲಿ ಹೆಸರಿಸಲಾದವರ ಆರೋಪಿಗಳ ಫೋನ್‌ಗಳನ್ನು ನಾವು ಪರಿಶೀಲಿಸಿದ್ದೇವೆ ಎಂದು ಹೇಳಿದ್ದಾರೆ.

ಎಫ್‌ಐಆರ್‌ನಲ್ಲಿ ಸೆಲ್ವಕುಮಾರ್ ಸೇರಿದಂತೆ ನಾಲ್ವರನ್ನು ಮಾತ್ರ ಕುಮಾರ್ ಉಲ್ಲೇಖಿಸಿದ್ದರು. ಅವರಿಗೆ ಇತರ ಆರೋಪಿಗಳ ಹೆಸರುಗಳು ತಿಳಿದಿರಲಿಲ್ಲ. ನಾವು ತನಿಖೆಯ ವೇಳೆ ಹೆಚ್ಚಿನ ವ್ಯಕ್ತಿಗಳು ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ಕಂಡುಕೊಂಡಿದ್ದೇವೆ. ಈವರೆಗೆ ಆರು ಮಂದಿಯನ್ನು ರಿಮಾಂಡ್ ಮಾಡಿದ್ದೇವೆ. ಉದುಮಲ್‌ಪೇಟೆಯ ಉಪ ಪೊಲೀಸ್ ಆಯುಕ್ತ ಜೆ ಸುಕುಮಾರನ್ ಅವರು ತನಿಖೆಯ ನೇತೃತ್ವವನ್ನು ವಹಿಸಿಕೊಂಡಿದ್ದಾರೆ. ಪೊಲೀಸ್ ತನಿಖೆಯ ವೇಳೆ ಹೆಚ್ಚಿನ ಆರೋಪಿಗಳು ಶಾಮೀಲಾಗಿರುವುದು ಕಂಡು ಬಂದರೆ ಹೆಚ್ಚಿನ ಜನರನ್ನು ಬಂಧಿಸಲಾಗುವುದು ಎಂದು ಪೊಲೀಸ್‌ ಅಧಿಕಾರಿಯೋರ್ವರು ಹೇಳಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 294 (b), 342, 324, 506, 302 ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3ರಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನು ಓದಿ: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್‌ ಸರಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂಕೋರ್ಟ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...